Homeಮುಖಪುಟಗೋಧ್ರಾ ಹತ್ಯಾಕಾಂಡ: ನರೇಂದ್ರ ಮೋದಿ ಕಾರಣ ಎಂದ ಬಿಬಿಸಿ ಸಾಕ್ಷ್ಯಚಿತ್ರ

ಗೋಧ್ರಾ ಹತ್ಯಾಕಾಂಡ: ನರೇಂದ್ರ ಮೋದಿ ಕಾರಣ ಎಂದ ಬಿಬಿಸಿ ಸಾಕ್ಷ್ಯಚಿತ್ರ

- Advertisement -
- Advertisement -

2002ರ ಗುಜರಾತ್ ಗಲಭೆಯ ವಿಚಾರಣೆಗೆ ಬ್ರಿಟನ್ ಸರ್ಕಾರ ಕಳುಹಿಸಿದ ತಂಡವೊಂದು, “ಹಿಂಸಾಚಾರಕ್ಕೆ ಕಾರಣ ಅವತ್ತಿನ ಅಲ್ಲಿಯ ಭಯದ ವಾತಾವರಣ ಹಾಗಾಗಿ ಆ ಪರಿಸ್ಥಿತಿಗೆ ರಾಜ್ಯದ ಅವತ್ತಿನ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯವರೇ ನೇರ ಹೊಣೆ” ಎಂದು ಉಲ್ಲೇಖಿಸಿರುಬ ಬಿಬಿಸಿ ಸಾಕ್ಷ್ಯಚಿತ್ರ ಮಂಗಳವಾರ ಬಿಡುಗಡೆಯಾಗಿದೆ. ಆದರೆ ‘ಮೋದಿ ಪ್ರಶ್ನೆ’ ಎಂಬ ಶೀರ್ಷಿಕೆಯ ಈ ಸಾಕ್ಷ್ಯಚಿತ್ರವನ್ನು ಯೂಟ್ಯೂಬ್‌ನಿಂದ ಬುಧವಾರ ತೆಗೆದುಹಾಕಲಾಗಿದೆ.

ಗುಜರಾತ್ ನ ಗೋಧ್ರಾದಲ್ಲಿ 2002ರ ಫೆಬ್ರವರಿ ಮತ್ತು ಮಾರ್ಚ್‌ ಸಮಯದಲ್ಲಿ ಹಿಂದೂ ಯಾತ್ರಾರ್ಥಿಗಳು ತುಂಬಿದ್ದ ಪ್ಯಾಸೆಂಜರ್ ರೈಲಿನ ಕೋಚ್‌ಗೆ ಬೆಂಕಿ ಹಚ್ಚಿದ ನಂತರ ಗುಜರಾತ್‌ನಲ್ಲಿ ದೊಡ್ಡ ಪ್ರಮಾಣದ ಕೋಮುಗಲಭೆ ಭುಗಿಲೆದ್ದಿತ್ತು. ಗಲಭೆಯಲ್ಲಿ 790 ಮುಸ್ಲಿಮರು ಮತ್ತು 254 ಹಿಂದೂಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ದಾಖಲೆಗಳು ತೋರಿಸುತ್ತವೆ. ಈ ಗಲಭೆಯನ್ನು ತಡೆಯಲು ಸರ್ಕಾರ ಪ್ರಯತ್ನ ಮಾಡಿಲ್ಲ ಎಂಬ ಆರೋಪವನ್ನು ಮೋದಿ ಅಲ್ಲಗಳೆದಿದ್ದಾರೆ.

ಮುಸ್ಲಿಮರನ್ನು ಗುರಿಯಾಗಿಸಿಕೊಂಡು ನಡೆದ ಈ ಹಿಂಸಾಚಾರವನ್ನು ತಡೆಯಲು ಗುಜರಾತ್ ಪೊಲೀಸರಿಗೆ ಕಾರ್ಯನಿರ್ವಹಿಸದಂತೆ ಮೋದಿ ತಡೆದಿದ್ದಾರೆ ಎಂದು ಬ್ರಿಟಿಷ್ ತನಿಖಾ ತಂಡ ಆರೋಪಿಸಿದೆ ಎಂದು ಬಿಬಿಸಿ ಸಾಕ್ಷ್ಯಚಿತ್ರದಲ್ಲಿ ಹೇಳಿಕೊಂಡಿದೆ.

ಆದಾಗ್ಯೂ, ಹಿಂಸಾಚಾರದ ಬಗ್ಗೆ ಭಾರತದ ಸುಪ್ರೀಂ ಕೋರ್ಟ್ ನೇಮಿಸಿದ ವಿಶೇಷ ತನಿಖಾ ತಂಡ ವಿಚಾರಣೆ ನಡೆಸಿ ಅಂತಿಮ ವರದಿ ನೀಡಿದೆ. ಈ ವರದಿಯು, 2012ರ ಫೆಬ್ರವರಿ ನಲ್ಲಿ ಮೋದಿ ಮತ್ತು ಇತರ 63 ಜನರ ವಿರುದ್ಧ ವಿಚಾರಣೆ ಮಾಡಬಹುದಾದ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಹೇಳಿದೆ. 2013 ರಲ್ಲಿ ತಂಡದ ವರದಿಯನ್ನು ಮ್ಯಾಜಿಸ್ಟ್ರೇಟ್ ಒಪ್ಪಿಕೊಂಡರು.

ಇದನ್ನೂ ಓದಿ: ಮೋದಿ ಸರ್ಕಾರ ಭಾರತದ ಬಹುತ್ವವನ್ನು ಧ್ವಂಸಗೊಳಿಸುತ್ತಿದೆ: ಅಮರ್ತ್ಯ ಸೇನ್

ಕಳೆದ ವರ್ಷ ಜೂನ್ 24 ರಂದು, ಎಸ್‌ಐಟಿ ವರದಿಯನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ಎಹ್ಸಾನ್ ಜಾಫ್ರಿ ಅವರ ಪತ್ನಿ ಜಾಕಿಯಾ ಜಾಫ್ರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು. ಫೆಬ್ರವರಿ 28, 2002 ರಂದು ಅಹಮದಾಬಾದ್‌ನ ಗುಲ್ಬರ್ಗ್ ಸೊಸೈಟಿಯಲ್ಲಿ ಗುಂಪೊಂದು ಕಲ್ಲು ತೂರಾಟ ಮತ್ತು ಮನೆಗಳಿಗೆ ಬೆಂಕಿ ಹಚ್ಚಿದಾಗ 69 ಜನರು ಸಾವಿಗೀಡಾದರು ಆದರಲ್ಲಿ ಎಹ್ಸಾನ್ ಜಾಫ್ರಿ ಕೂಡ ಒಬ್ಬರಾಗಿದ್ದಾರೆ.

ಮಂಗಳವಾರ ಬಿಡುಗಡೆಯಾದ BBC ಸಾಕ್ಷ್ಯಚಿತ್ರವು ಮಾಜಿ ಹಿರಿಯ ರಾಜತಾಂತ್ರಿಕ ಸಂದರ್ಶನವನ್ನು ಒಳಗೊಂಡಿದೆ. ಯುನೈಟೆಡ್ ಕಿಂಗ್‌ಡಮ್ ಸರ್ಕಾರ ಕಳುಹಿಸಿದ ತನಿಖಾಧಿಕಾರಿಗಳಲ್ಲಿ ಒಬ್ಬರು, “ಹಿಂಸಾಚಾರವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಂಗಸಂಸ್ಥೆಯಾದ ವಿಶ್ವ ಹಿಂದೂ ಪರಿಷತ್ತು ಯೋಜಿಸಿದೆ” ಎಂದು ಹೇಳಿದ್ದಾರೆ.

“ವಿಎಚ್‌ಪಿ ಮತ್ತು ಅದರ ಮಿತ್ರಪಕ್ಷಗಳು, ರಾಜ್ಯ ಸರ್ಕಾರವು ಸೃಷ್ಟಿಸಿದ ಭಯದ ವಾತಾವರಣವಿಲ್ಲದೆ ಇಷ್ಟು ಹಾನಿಯನ್ನುಂಟುಮಾಡಲು ಸಾಧ್ಯವಿಲ್ಲ” ಎಂದು ಬ್ರಿಟಿಷ್ ಸರ್ಕಾರದ ತನಿಖಾ ತಂಡದ ವರದಿಯು ಹೇಳಿತ್ತು.

ಫೆಬ್ರವರಿ 27, 2002 ರಂದು ಮೋದಿ ಅವರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಭೇಟಿಯಾಗಿ ಗಲಭೆಯಲ್ಲಿ ಮಧ್ಯಪ್ರವೇಶಿಸದಂತೆ ಅವರಿಗೆ ಆದೇಶಿಸಿದ್ದಾರೆ ಎಂದು “ವಿಶ್ವಾಸಾರ್ಹ ಸಂಪರ್ಕಗಳನ್ನು” ತಂಡವು ಉಲ್ಲೇಖಿಸಿದೆ ಎಂದು ಸಾಕ್ಷ್ಯಚಿತ್ರವು ಹೇಳಿಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...