Homeಮುಖಪುಟಗೋಧ್ರಾ ಹತ್ಯಾಕಾಂಡ: ನರೇಂದ್ರ ಮೋದಿ ಕಾರಣ ಎಂದ ಬಿಬಿಸಿ ಸಾಕ್ಷ್ಯಚಿತ್ರ

ಗೋಧ್ರಾ ಹತ್ಯಾಕಾಂಡ: ನರೇಂದ್ರ ಮೋದಿ ಕಾರಣ ಎಂದ ಬಿಬಿಸಿ ಸಾಕ್ಷ್ಯಚಿತ್ರ

- Advertisement -
- Advertisement -

2002ರ ಗುಜರಾತ್ ಗಲಭೆಯ ವಿಚಾರಣೆಗೆ ಬ್ರಿಟನ್ ಸರ್ಕಾರ ಕಳುಹಿಸಿದ ತಂಡವೊಂದು, “ಹಿಂಸಾಚಾರಕ್ಕೆ ಕಾರಣ ಅವತ್ತಿನ ಅಲ್ಲಿಯ ಭಯದ ವಾತಾವರಣ ಹಾಗಾಗಿ ಆ ಪರಿಸ್ಥಿತಿಗೆ ರಾಜ್ಯದ ಅವತ್ತಿನ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯವರೇ ನೇರ ಹೊಣೆ” ಎಂದು ಉಲ್ಲೇಖಿಸಿರುಬ ಬಿಬಿಸಿ ಸಾಕ್ಷ್ಯಚಿತ್ರ ಮಂಗಳವಾರ ಬಿಡುಗಡೆಯಾಗಿದೆ. ಆದರೆ ‘ಮೋದಿ ಪ್ರಶ್ನೆ’ ಎಂಬ ಶೀರ್ಷಿಕೆಯ ಈ ಸಾಕ್ಷ್ಯಚಿತ್ರವನ್ನು ಯೂಟ್ಯೂಬ್‌ನಿಂದ ಬುಧವಾರ ತೆಗೆದುಹಾಕಲಾಗಿದೆ.

ಗುಜರಾತ್ ನ ಗೋಧ್ರಾದಲ್ಲಿ 2002ರ ಫೆಬ್ರವರಿ ಮತ್ತು ಮಾರ್ಚ್‌ ಸಮಯದಲ್ಲಿ ಹಿಂದೂ ಯಾತ್ರಾರ್ಥಿಗಳು ತುಂಬಿದ್ದ ಪ್ಯಾಸೆಂಜರ್ ರೈಲಿನ ಕೋಚ್‌ಗೆ ಬೆಂಕಿ ಹಚ್ಚಿದ ನಂತರ ಗುಜರಾತ್‌ನಲ್ಲಿ ದೊಡ್ಡ ಪ್ರಮಾಣದ ಕೋಮುಗಲಭೆ ಭುಗಿಲೆದ್ದಿತ್ತು. ಗಲಭೆಯಲ್ಲಿ 790 ಮುಸ್ಲಿಮರು ಮತ್ತು 254 ಹಿಂದೂಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ದಾಖಲೆಗಳು ತೋರಿಸುತ್ತವೆ. ಈ ಗಲಭೆಯನ್ನು ತಡೆಯಲು ಸರ್ಕಾರ ಪ್ರಯತ್ನ ಮಾಡಿಲ್ಲ ಎಂಬ ಆರೋಪವನ್ನು ಮೋದಿ ಅಲ್ಲಗಳೆದಿದ್ದಾರೆ.

ಮುಸ್ಲಿಮರನ್ನು ಗುರಿಯಾಗಿಸಿಕೊಂಡು ನಡೆದ ಈ ಹಿಂಸಾಚಾರವನ್ನು ತಡೆಯಲು ಗುಜರಾತ್ ಪೊಲೀಸರಿಗೆ ಕಾರ್ಯನಿರ್ವಹಿಸದಂತೆ ಮೋದಿ ತಡೆದಿದ್ದಾರೆ ಎಂದು ಬ್ರಿಟಿಷ್ ತನಿಖಾ ತಂಡ ಆರೋಪಿಸಿದೆ ಎಂದು ಬಿಬಿಸಿ ಸಾಕ್ಷ್ಯಚಿತ್ರದಲ್ಲಿ ಹೇಳಿಕೊಂಡಿದೆ.

ಆದಾಗ್ಯೂ, ಹಿಂಸಾಚಾರದ ಬಗ್ಗೆ ಭಾರತದ ಸುಪ್ರೀಂ ಕೋರ್ಟ್ ನೇಮಿಸಿದ ವಿಶೇಷ ತನಿಖಾ ತಂಡ ವಿಚಾರಣೆ ನಡೆಸಿ ಅಂತಿಮ ವರದಿ ನೀಡಿದೆ. ಈ ವರದಿಯು, 2012ರ ಫೆಬ್ರವರಿ ನಲ್ಲಿ ಮೋದಿ ಮತ್ತು ಇತರ 63 ಜನರ ವಿರುದ್ಧ ವಿಚಾರಣೆ ಮಾಡಬಹುದಾದ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಹೇಳಿದೆ. 2013 ರಲ್ಲಿ ತಂಡದ ವರದಿಯನ್ನು ಮ್ಯಾಜಿಸ್ಟ್ರೇಟ್ ಒಪ್ಪಿಕೊಂಡರು.

ಇದನ್ನೂ ಓದಿ: ಮೋದಿ ಸರ್ಕಾರ ಭಾರತದ ಬಹುತ್ವವನ್ನು ಧ್ವಂಸಗೊಳಿಸುತ್ತಿದೆ: ಅಮರ್ತ್ಯ ಸೇನ್

ಕಳೆದ ವರ್ಷ ಜೂನ್ 24 ರಂದು, ಎಸ್‌ಐಟಿ ವರದಿಯನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ಎಹ್ಸಾನ್ ಜಾಫ್ರಿ ಅವರ ಪತ್ನಿ ಜಾಕಿಯಾ ಜಾಫ್ರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು. ಫೆಬ್ರವರಿ 28, 2002 ರಂದು ಅಹಮದಾಬಾದ್‌ನ ಗುಲ್ಬರ್ಗ್ ಸೊಸೈಟಿಯಲ್ಲಿ ಗುಂಪೊಂದು ಕಲ್ಲು ತೂರಾಟ ಮತ್ತು ಮನೆಗಳಿಗೆ ಬೆಂಕಿ ಹಚ್ಚಿದಾಗ 69 ಜನರು ಸಾವಿಗೀಡಾದರು ಆದರಲ್ಲಿ ಎಹ್ಸಾನ್ ಜಾಫ್ರಿ ಕೂಡ ಒಬ್ಬರಾಗಿದ್ದಾರೆ.

ಮಂಗಳವಾರ ಬಿಡುಗಡೆಯಾದ BBC ಸಾಕ್ಷ್ಯಚಿತ್ರವು ಮಾಜಿ ಹಿರಿಯ ರಾಜತಾಂತ್ರಿಕ ಸಂದರ್ಶನವನ್ನು ಒಳಗೊಂಡಿದೆ. ಯುನೈಟೆಡ್ ಕಿಂಗ್‌ಡಮ್ ಸರ್ಕಾರ ಕಳುಹಿಸಿದ ತನಿಖಾಧಿಕಾರಿಗಳಲ್ಲಿ ಒಬ್ಬರು, “ಹಿಂಸಾಚಾರವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಂಗಸಂಸ್ಥೆಯಾದ ವಿಶ್ವ ಹಿಂದೂ ಪರಿಷತ್ತು ಯೋಜಿಸಿದೆ” ಎಂದು ಹೇಳಿದ್ದಾರೆ.

“ವಿಎಚ್‌ಪಿ ಮತ್ತು ಅದರ ಮಿತ್ರಪಕ್ಷಗಳು, ರಾಜ್ಯ ಸರ್ಕಾರವು ಸೃಷ್ಟಿಸಿದ ಭಯದ ವಾತಾವರಣವಿಲ್ಲದೆ ಇಷ್ಟು ಹಾನಿಯನ್ನುಂಟುಮಾಡಲು ಸಾಧ್ಯವಿಲ್ಲ” ಎಂದು ಬ್ರಿಟಿಷ್ ಸರ್ಕಾರದ ತನಿಖಾ ತಂಡದ ವರದಿಯು ಹೇಳಿತ್ತು.

ಫೆಬ್ರವರಿ 27, 2002 ರಂದು ಮೋದಿ ಅವರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಭೇಟಿಯಾಗಿ ಗಲಭೆಯಲ್ಲಿ ಮಧ್ಯಪ್ರವೇಶಿಸದಂತೆ ಅವರಿಗೆ ಆದೇಶಿಸಿದ್ದಾರೆ ಎಂದು “ವಿಶ್ವಾಸಾರ್ಹ ಸಂಪರ್ಕಗಳನ್ನು” ತಂಡವು ಉಲ್ಲೇಖಿಸಿದೆ ಎಂದು ಸಾಕ್ಷ್ಯಚಿತ್ರವು ಹೇಳಿಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...