HomeUncategorizedಒಂದೇ ಚಾನೆಲ್, ಒಬ್ಬನೇ ಸಂದರ್ಶಕ. ಮೋದಿಗೆ ಕುಶಲ ಪ್ರಶ್ನೆ ರಾಹುಲ್‍ಗೆ ಕಠಿಣ ಪ್ರಶ್ನೆ. ವಿಡಿಯೋ ನೋಡಿ

ಒಂದೇ ಚಾನೆಲ್, ಒಬ್ಬನೇ ಸಂದರ್ಶಕ. ಮೋದಿಗೆ ಕುಶಲ ಪ್ರಶ್ನೆ ರಾಹುಲ್‍ಗೆ ಕಠಿಣ ಪ್ರಶ್ನೆ. ವಿಡಿಯೋ ನೋಡಿ

- Advertisement -
- Advertisement -

ಚುನಾವಣಾ ನಿಮಿತ್ತ ನ್ಯೂಷ್ ನೇಷನ್ ಎಂಬ ಟಿವಿ ಚಾನೆಲ್ ಒಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಅಧ್ಯಕ್ಷರಾದ ರಾಹುಲ್ ಗಾಂಧಿಯವರನ್ನು ಸಂದರ್ಶನ ನಡೆಸಿತ್ತು. ಚೌರಾಸಿಯ ಎಂಬ ಸಂದರ್ಶಕ ಇಬ್ಬರನ್ನು ಸಂದರ್ಶಿಸಿದ್ದರೂ, ರಾಹುಲ್ ಗಾಂಧಿಗೆ ರಾಬರ್ಟ್ ವಾದ್ರರ ಭ್ರಷ್ಟಾಚಾರ ಪ್ರಕರಣ, 1984ರ ಸಿಖ್ ಹತ್ಯಾಕಾಂಡದಂತಹ ಕಠಿಣ ಪ್ರಶ್ನೆಗಳನ್ನು ಕೇಳಿದರು. ಇದು ಸರಿಯಾದುದ್ದೆ. ಆದರೆ ಮೋದಿಯವರಿಗೆ ಮಾತ್ರ ಯಾವ ತಿಂಡಿ ಇಷ್ಟ, ಯಾವ ಬಟ್ಟೆ ಹಾಕ್ತಿರಿ? ರೋಟಿ ಮಾಡೋಕೆ ಬರುತ್ತಾ, ಕವನ ಬರಿತೀರಾ ಎಂಬಂಥ ಸಿಲ್ಲಿ ಪ್ರಶ್ನೆಗಳನ್ನು ಕೇಳಿದ್ದಾರೆ. ವಿಡಿಯೋ ನೋಡಿ, ಅವರು ಕೇಳಿದ ಪ್ರಶ್ನೆಗಳನ್ನು ತಿಳಿಯಲು ಕೆಳಗೆ ಓದಿ.

ವಿಡಿಯೋ ನೊಡಿ

ಸಂದರ್ಶಕ – ಮೋದಿಗೆ: ತಾವು ಏನು ಊಟ-ತಿಂಡಿ ಇಷ್ಟಪಡುತ್ತೀರಿ ಹಾಗೂ ದಿನಕ್ಕೆ ಎಷ್ಟು ಸಲ ಊಟ ಮಾಡುತ್ತೀರಿ?

ರಾಹುಲ್‍ಗೆ: ‘ನ್ಯಾಯ್’ ಯೋಜನೆಯ ಕುರಿತು ನ್ಯೂಸ್ ನೇಶನ್ ಸಂದರ್ಶನದಲ್ಲಿ ಮೋದಿಯವರನ್ನು ಕೇಳಲಾಯಿತು – ‘ರಾಹುಲ್‍ಜೀ ‘ನ್ಯಾಯ್’ ಯೋಜನೆ ಮುಂದಿಟ್ಟಿದ್ದಾರೆ; ಅದರ ಪ್ರಕಾರ ಬಡವರಿಗೆ ವರ್ಷಕ್ಕೆ 72 ಸಾವಿರ ರೂಪಾಯಿಗಳನ್ನು ನೀಡಲಾಗುತ್ತದೆ’ ಎಂದು ಕೇಳಿದ್ದಕ್ಕೆ ಮೋದಿಯವರು, “ನನ್ನ ಬಳಿ ಟ್ರಾಕ್ ರಿಕಾರ್ಡ್ ಇದೆ, ರಾಹುಲ್‍ಜೀ ಬಳಿ ಟೇಪ್ ರೆಕಾರ್ಡರ್ ಇದೆ” ಎಂದರು.

ಮೋದಿಗೆ: ತಾವು ಕ್ಯಾಲರಿ-ಕಾನ್ಶಸ್ ಆಗಿದೀರಾ – ದಿನಕ್ಕೆ ಇಷ್ಟು ಕ್ಯಾಲರಿ ತಿನ್ನಬೇಕು, ಈಗ ಇಷ್ಟು ಕ್ಯಾಲರಿ ತಿಂದುಬಿಟ್ಟಿದೀನಿ, ಸ್ವಲ್ಪ ತಿನ್ನಬೇಕು … ಇತ್ಯಾದಿ?

ರಾಹುಲ್‍ಗೆ: ಒಂದು ವೇಳೆ ತಾವು ಅಧಿಕಾರಕ್ಕೆ ಬಂದರೆ ಅಥವಾ ಬಿಜೆಪಿಯ ಹೊರತಾಗಿ ಇನ್ಯಾವುದಾದರೂ ಪಕ್ಷ ಅಧಿಕಾರಕ್ಕೆ ಬಂದರೆ ರಫೇಲ್‍ನ ಕಂಟ್ರಾಕ್ಟನ್ನು ಮರು ಪರಿಶೀಲನೆ (ರೀ-ನೆಗೋಶಿಯೇಟ್) ನಡೆಸಲಾಗುವುದಾ?

ಮೋದಿಗೆ: ತಾವು ಏನೇನು ಅಡಿಗೆ ತಯಾರಿಸುತ್ತೀರಿ?
ಮೋದಿ: ಎಲ್ಲವನ್ನೂ ತಯಾರಿಸ್ತೀನಿ …
ಸಂ: ರೊಟ್ಟಿಯನ್ನು ಕೂಡಾ …?
ಮೋ: ಓಹೋ, ಎಲ್ಲವನ್ನೂ ತಯಾರಿಸ್ತೀನಿ.

ಸಂ – ರಾಹುಲ್‍ಗೆ: ಒಂದುವೇಳೆ ಅದರಲ್ಲಿ ರಫೇಲ್‍ನ ಕಂಟ್ರಾಕ್ಟ್‍ನಲ್ಲಿ ತಪ್ಪಾಗಿದೆ ಎಂದಾದಲ್ಲಿ ‘ಅದನ್ನು ರದ್ದುಪಡಿಸಲಾಗುವುದು’ ಅಥವಾ ‘ರೀ-ನೆಗೋಶಿಯೇಟ್ ಮಾಡಲಾಗುವುದು’ ಎಂದು ತಾವೇಕೆ ಓಪನ್ನಾಗಿ ಹೇಳುವುದಿಲ್ಲ? ಯಾಕೆಂದರೆ ಈ ಡೀಲ್‍ನಿಂದ ಬೊಕ್ಕಸಕ್ಕೆ ನಷ್ಟವಾಗಿದೆ ಎಂದು ನೀವು ತಿಳಿಯುತ್ತೀರಲ್ಲ…

ಮೋದಿಗೆ: ಕಳೆದ ಐದು ವರ್ಷಗಳಲ್ಲಿ ಎಂದಾದರೂ ನೀವು ಅಡಿಗೆಮನೆಗೆ ಹೋಗಲು ಸಾಧ್ಯವಾಗಿದೆಯಾ?
ರಾಹುಲ್‍ಗೆ: ಈ ವಿಚಾರ ಸುಪ್ರೀಂ ಕೋರ್ಟಿನಲ್ಲಿರುವಾಗ ತನಿಖೆ ಹೇಗೆ ನಡೆಯಲು ಸಾಧ್ಯ ಎಂಬ ಪ್ರಶ್ನೆ ಏಳುತ್ತದಲ್ಲವೆ?

ಮೋದಿಗೆ: ಪ್ರಧಾನ ಮಂತ್ರಿಗಳೆ, ಒಂದು ಬಹಳ ಮಹತ್ವಪೂರ್ಣ ವಿಚಾರ ಏನೆಂದರೆ, ನಿಮ್ಮ ವೇಷಭೂಷಣ ನಿಮಗೆ ಬಹಳ ಒಪ್ಪುತ್ತದೆ (ಸ್ಯೂಟ್ ಆಗುತ್ತದೆ).
ರಾಹುಲ್‍ಗೆ: ರಾಹುಲ್‍ಜೀ, ನಾವು ಪಂಜಾಬಿನಲ್ಲಿದೀವಿ. ಈಚೆಗಷ್ಟೇ ಒಂದು ವಿಚಾರ ಚರ್ಚೆಗೆ ಬಂದಿತ್ತು – 1984ರಲ್ಲಿ ನಡೆದಿದ್ದ ಸಿಖ್ ಗಲಭೆ(ರಯಟ್ಸ್)ಗಳಿಗೆ ಸಂಬಂಧಪಟ್ಟಂತೆ ಸ್ಯಾಮ್ ಪಿತ್ರೋದಾ ಅವರು “ಏನು ಆಗಿದೆಯೋ ಆಗಿದೆ” ಎಂದು ಹೇಳಿದ್ದರು …

ಮೋದಿಗೆ: ಅಂದರೆ ತಾವು ಫ್ಯಾಶನ್ ಬಗ್ಗೆ, ಬಟ್ಟೆಬರೆ ಬಗ್ಗೆಯೂ ಅಷ್ಟೊಂದು ಆಸಕ್ತಿ ಹೊಂದಿದೀರಾ? ಅದರ ಬಗ್ಗೆ ಏನಾದರೂ ಓದುತ್ತೀರಾ? ಯಾವ ಅಕೇಶನ್‍ಗೆ ಎಂತಹ ಉಡುಗೆ ತೊಡಬೇಕು ಎಂಬುದನ್ನು ಹೇಗೆ ನಿರ್ಧರಿಸುತ್ತೀರಿ?
ರಾಹುಲ್‍ಗೆ: … ಅವು ಸಂಘಟಿತವಾದ ಗಲಭೆಗಳಾಗಿದ್ದವು, ಅವುಗಳಿಗೆ ಕಾಂಗ್ರೆಸ್ ಪಕ್ಷವೇ ಜವಾಬ್ದಾರ ಎಂದು ಬಿಜೆಪಿಯ ಆರೋಪ…

ಮೋದಿಗೆ: ತಾವು ಜೇಬಿನಲ್ಲಿ ಪರ್ಸ್ ಇಟ್ಕೊಳ್ತೀರಾ?
ರಾಹುಲ್‍ಗೆ: … ಅವರು ಹೇಳಿದರು – ಗುಜರಾತಿನಲ್ಲಿ ಕಾಂಗ್ರೆಸ್ಸು ಜಿಎಸ್‍ಟಿಯನ್ನು ಕೇಂದ್ರವಾಗಿಟ್ಟುಕೊಂಡು ಚುನಾವಣೆ ಎದುರಿಸಿತು, ಸೂರತ್‍ನಲ್ಲಿ ಅದರ ಬಗ್ಗೆ ಬಹಳ ಪ್ರಚಾರ ಕೂಡ ನಡೆಯಿತು. ಆದರೆ ಸೂರತ್‍ನ ಎಲ್ಲ ಸೀಟುಗಳನ್ನೂ ನಾವೇ ಗೆದ್ದೆವು … ಈಗ ಐದು ವರ್ಷಗಳ ಕೆಲಸಕಾರ್ಯಗಳ ಮೇಲೆ ಚುನಾವಣೆ ನಡೆಯುತ್ತಿದೆ – ಎಂದು.

ಇದಕ್ಕೆ ರಾಹುಲ್ ಕೊಟ್ಟ ಉತ್ತರ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅದೆಂದರೆ, ಪ್ರಧಾನ ಮಂತ್ರಿಯ ಈ ಉತ್ತರ ಇತ್ತಲ್ಲ, ಅದೂ ಸಹ ಅವರಿಗೆ ಕೊಡಲಾಗಿದ್ದ ನೋಟ್‍ಶೀಟ್‍ನಲ್ಲಿತ್ತಾ? ಅವರ ಮುಂದೊಂದು ಕಾಗದ ಇಟ್ಟಿದ್ದಿರಲ್ಲ, ಅದರಲ್ಲಿ ಈ ಉತ್ತರವನ್ನೂ ಬರೆಯಲಾಗಿತ್ತಾ ಅಥವಾ ಬರೆದಿರಲಿಲ್ಲವಾ? ಎಂದು ಹೇಳಿದ್ದಲ್ಲದೇ ನೀವು ಬೇಕಾದರೆ ಇದನ್ನು ಎಡಿಟ್ ಮಾಡಿಕೊಳ್ಳಿ ಎಂದು ಹೇಳಿ ನಗೆ ಹುಟ್ಟಿಸಿದ್ದರು.

ಈ ರೀತಿಯಾಗಿ ಇಂದು ಮೀಡಿಯಾಗಳು ಸಂಪೂರ್ಣ ಮೋದಿಮಯವಾಗಿರುವುದು ಪ್ರಜಾತಂತ್ರದ ದೃಷ್ಟಿಯಿಂದ ಬಲು ಅಪಾಯಕಾರಿ. ಇದು ಮಾಧ್ಯಮಗಳ ದಿವಾಳಿತನ, ಮೋದಿಯವರಿಗೆ ಮಾಧ್ಯಮಗಳ ಮೇಲಿರುವ ಭಯವನ್ನು ಸಹ ತೋರಿಸುತ್ತದೆ. ಮೊದಲೇ ಇಂತಹದೇ ಪ್ರಶ್ನೆಗಳನ್ನು ಕೇಳಬೇಕು ಎಂದು ಸ್ಕ್ರಿಪ್ಟ್ ಪ್ರಶ್ನೆಗಳನ್ನು ಬರೆದುಕೊಟ್ಟು ಸಂದರ್ಶನ ನಡೆಸಬೇಕಾದ ದುರ್ಗತಿಗೆ ಇಂತಹ ಚಾನೆಲ್‍ಗಳು ಇಳಿದಿವೆ.
ಕೊನೆಯಲ್ಲಿ ಒಂದು ಮಾತು: ಮೋದಿಯ ಸಂದರ್ಶನಕ್ಕೆ ಜೊತೆಯಲ್ಲಿ ಒಬ್ಬ ‘ಮಾಡ್’ ಮಹಿಳೆಯನ್ನು ಕರೆದೊಯ್ದಿದ್ದ ಚೌರಾಸಿಯ, ರಾಹುಲ್ ಸಂದರ್ಶನಕ್ಕೆ ಜೊತೆಗೊಬ್ಬ ಪುರುಷನನ್ನು ಕರೆದುಕೊಂಡು ಹೋಗಿದ್ದರು. ಇಲ್ಲಿಯೂ ಅಸಮಾನತೆ ಮಾಡಿದ್ದಾರೆ ನೋಡಿ.

ಇದನ್ನು ಓದಿ: ನ್ಯೂಸ್ ನೇಷನ್ ಸಂದರ್ಶನದಲ್ಲಿ ಮೋದಿಗೆ ಪ್ರಶ್ನೆಗಳು ಮೊದಲೇ ಗೊತ್ತಿತ್ತಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

"ಒಳಮೀಸಲಾತಿ ಇಲ್ಲದೆ ಒಂದೇಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ" ಎಂದು ಆಹಾರ...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...