HomeUncategorizedಒಂದೇ ಚಾನೆಲ್, ಒಬ್ಬನೇ ಸಂದರ್ಶಕ. ಮೋದಿಗೆ ಕುಶಲ ಪ್ರಶ್ನೆ ರಾಹುಲ್‍ಗೆ ಕಠಿಣ ಪ್ರಶ್ನೆ. ವಿಡಿಯೋ ನೋಡಿ

ಒಂದೇ ಚಾನೆಲ್, ಒಬ್ಬನೇ ಸಂದರ್ಶಕ. ಮೋದಿಗೆ ಕುಶಲ ಪ್ರಶ್ನೆ ರಾಹುಲ್‍ಗೆ ಕಠಿಣ ಪ್ರಶ್ನೆ. ವಿಡಿಯೋ ನೋಡಿ

- Advertisement -
- Advertisement -

ಚುನಾವಣಾ ನಿಮಿತ್ತ ನ್ಯೂಷ್ ನೇಷನ್ ಎಂಬ ಟಿವಿ ಚಾನೆಲ್ ಒಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಅಧ್ಯಕ್ಷರಾದ ರಾಹುಲ್ ಗಾಂಧಿಯವರನ್ನು ಸಂದರ್ಶನ ನಡೆಸಿತ್ತು. ಚೌರಾಸಿಯ ಎಂಬ ಸಂದರ್ಶಕ ಇಬ್ಬರನ್ನು ಸಂದರ್ಶಿಸಿದ್ದರೂ, ರಾಹುಲ್ ಗಾಂಧಿಗೆ ರಾಬರ್ಟ್ ವಾದ್ರರ ಭ್ರಷ್ಟಾಚಾರ ಪ್ರಕರಣ, 1984ರ ಸಿಖ್ ಹತ್ಯಾಕಾಂಡದಂತಹ ಕಠಿಣ ಪ್ರಶ್ನೆಗಳನ್ನು ಕೇಳಿದರು. ಇದು ಸರಿಯಾದುದ್ದೆ. ಆದರೆ ಮೋದಿಯವರಿಗೆ ಮಾತ್ರ ಯಾವ ತಿಂಡಿ ಇಷ್ಟ, ಯಾವ ಬಟ್ಟೆ ಹಾಕ್ತಿರಿ? ರೋಟಿ ಮಾಡೋಕೆ ಬರುತ್ತಾ, ಕವನ ಬರಿತೀರಾ ಎಂಬಂಥ ಸಿಲ್ಲಿ ಪ್ರಶ್ನೆಗಳನ್ನು ಕೇಳಿದ್ದಾರೆ. ವಿಡಿಯೋ ನೋಡಿ, ಅವರು ಕೇಳಿದ ಪ್ರಶ್ನೆಗಳನ್ನು ತಿಳಿಯಲು ಕೆಳಗೆ ಓದಿ.

ವಿಡಿಯೋ ನೊಡಿ

ಸಂದರ್ಶಕ – ಮೋದಿಗೆ: ತಾವು ಏನು ಊಟ-ತಿಂಡಿ ಇಷ್ಟಪಡುತ್ತೀರಿ ಹಾಗೂ ದಿನಕ್ಕೆ ಎಷ್ಟು ಸಲ ಊಟ ಮಾಡುತ್ತೀರಿ?

ರಾಹುಲ್‍ಗೆ: ‘ನ್ಯಾಯ್’ ಯೋಜನೆಯ ಕುರಿತು ನ್ಯೂಸ್ ನೇಶನ್ ಸಂದರ್ಶನದಲ್ಲಿ ಮೋದಿಯವರನ್ನು ಕೇಳಲಾಯಿತು – ‘ರಾಹುಲ್‍ಜೀ ‘ನ್ಯಾಯ್’ ಯೋಜನೆ ಮುಂದಿಟ್ಟಿದ್ದಾರೆ; ಅದರ ಪ್ರಕಾರ ಬಡವರಿಗೆ ವರ್ಷಕ್ಕೆ 72 ಸಾವಿರ ರೂಪಾಯಿಗಳನ್ನು ನೀಡಲಾಗುತ್ತದೆ’ ಎಂದು ಕೇಳಿದ್ದಕ್ಕೆ ಮೋದಿಯವರು, “ನನ್ನ ಬಳಿ ಟ್ರಾಕ್ ರಿಕಾರ್ಡ್ ಇದೆ, ರಾಹುಲ್‍ಜೀ ಬಳಿ ಟೇಪ್ ರೆಕಾರ್ಡರ್ ಇದೆ” ಎಂದರು.

ಮೋದಿಗೆ: ತಾವು ಕ್ಯಾಲರಿ-ಕಾನ್ಶಸ್ ಆಗಿದೀರಾ – ದಿನಕ್ಕೆ ಇಷ್ಟು ಕ್ಯಾಲರಿ ತಿನ್ನಬೇಕು, ಈಗ ಇಷ್ಟು ಕ್ಯಾಲರಿ ತಿಂದುಬಿಟ್ಟಿದೀನಿ, ಸ್ವಲ್ಪ ತಿನ್ನಬೇಕು … ಇತ್ಯಾದಿ?

ರಾಹುಲ್‍ಗೆ: ಒಂದು ವೇಳೆ ತಾವು ಅಧಿಕಾರಕ್ಕೆ ಬಂದರೆ ಅಥವಾ ಬಿಜೆಪಿಯ ಹೊರತಾಗಿ ಇನ್ಯಾವುದಾದರೂ ಪಕ್ಷ ಅಧಿಕಾರಕ್ಕೆ ಬಂದರೆ ರಫೇಲ್‍ನ ಕಂಟ್ರಾಕ್ಟನ್ನು ಮರು ಪರಿಶೀಲನೆ (ರೀ-ನೆಗೋಶಿಯೇಟ್) ನಡೆಸಲಾಗುವುದಾ?

ಮೋದಿಗೆ: ತಾವು ಏನೇನು ಅಡಿಗೆ ತಯಾರಿಸುತ್ತೀರಿ?
ಮೋದಿ: ಎಲ್ಲವನ್ನೂ ತಯಾರಿಸ್ತೀನಿ …
ಸಂ: ರೊಟ್ಟಿಯನ್ನು ಕೂಡಾ …?
ಮೋ: ಓಹೋ, ಎಲ್ಲವನ್ನೂ ತಯಾರಿಸ್ತೀನಿ.

ಸಂ – ರಾಹುಲ್‍ಗೆ: ಒಂದುವೇಳೆ ಅದರಲ್ಲಿ ರಫೇಲ್‍ನ ಕಂಟ್ರಾಕ್ಟ್‍ನಲ್ಲಿ ತಪ್ಪಾಗಿದೆ ಎಂದಾದಲ್ಲಿ ‘ಅದನ್ನು ರದ್ದುಪಡಿಸಲಾಗುವುದು’ ಅಥವಾ ‘ರೀ-ನೆಗೋಶಿಯೇಟ್ ಮಾಡಲಾಗುವುದು’ ಎಂದು ತಾವೇಕೆ ಓಪನ್ನಾಗಿ ಹೇಳುವುದಿಲ್ಲ? ಯಾಕೆಂದರೆ ಈ ಡೀಲ್‍ನಿಂದ ಬೊಕ್ಕಸಕ್ಕೆ ನಷ್ಟವಾಗಿದೆ ಎಂದು ನೀವು ತಿಳಿಯುತ್ತೀರಲ್ಲ…

ಮೋದಿಗೆ: ಕಳೆದ ಐದು ವರ್ಷಗಳಲ್ಲಿ ಎಂದಾದರೂ ನೀವು ಅಡಿಗೆಮನೆಗೆ ಹೋಗಲು ಸಾಧ್ಯವಾಗಿದೆಯಾ?
ರಾಹುಲ್‍ಗೆ: ಈ ವಿಚಾರ ಸುಪ್ರೀಂ ಕೋರ್ಟಿನಲ್ಲಿರುವಾಗ ತನಿಖೆ ಹೇಗೆ ನಡೆಯಲು ಸಾಧ್ಯ ಎಂಬ ಪ್ರಶ್ನೆ ಏಳುತ್ತದಲ್ಲವೆ?

ಮೋದಿಗೆ: ಪ್ರಧಾನ ಮಂತ್ರಿಗಳೆ, ಒಂದು ಬಹಳ ಮಹತ್ವಪೂರ್ಣ ವಿಚಾರ ಏನೆಂದರೆ, ನಿಮ್ಮ ವೇಷಭೂಷಣ ನಿಮಗೆ ಬಹಳ ಒಪ್ಪುತ್ತದೆ (ಸ್ಯೂಟ್ ಆಗುತ್ತದೆ).
ರಾಹುಲ್‍ಗೆ: ರಾಹುಲ್‍ಜೀ, ನಾವು ಪಂಜಾಬಿನಲ್ಲಿದೀವಿ. ಈಚೆಗಷ್ಟೇ ಒಂದು ವಿಚಾರ ಚರ್ಚೆಗೆ ಬಂದಿತ್ತು – 1984ರಲ್ಲಿ ನಡೆದಿದ್ದ ಸಿಖ್ ಗಲಭೆ(ರಯಟ್ಸ್)ಗಳಿಗೆ ಸಂಬಂಧಪಟ್ಟಂತೆ ಸ್ಯಾಮ್ ಪಿತ್ರೋದಾ ಅವರು “ಏನು ಆಗಿದೆಯೋ ಆಗಿದೆ” ಎಂದು ಹೇಳಿದ್ದರು …

ಮೋದಿಗೆ: ಅಂದರೆ ತಾವು ಫ್ಯಾಶನ್ ಬಗ್ಗೆ, ಬಟ್ಟೆಬರೆ ಬಗ್ಗೆಯೂ ಅಷ್ಟೊಂದು ಆಸಕ್ತಿ ಹೊಂದಿದೀರಾ? ಅದರ ಬಗ್ಗೆ ಏನಾದರೂ ಓದುತ್ತೀರಾ? ಯಾವ ಅಕೇಶನ್‍ಗೆ ಎಂತಹ ಉಡುಗೆ ತೊಡಬೇಕು ಎಂಬುದನ್ನು ಹೇಗೆ ನಿರ್ಧರಿಸುತ್ತೀರಿ?
ರಾಹುಲ್‍ಗೆ: … ಅವು ಸಂಘಟಿತವಾದ ಗಲಭೆಗಳಾಗಿದ್ದವು, ಅವುಗಳಿಗೆ ಕಾಂಗ್ರೆಸ್ ಪಕ್ಷವೇ ಜವಾಬ್ದಾರ ಎಂದು ಬಿಜೆಪಿಯ ಆರೋಪ…

ಮೋದಿಗೆ: ತಾವು ಜೇಬಿನಲ್ಲಿ ಪರ್ಸ್ ಇಟ್ಕೊಳ್ತೀರಾ?
ರಾಹುಲ್‍ಗೆ: … ಅವರು ಹೇಳಿದರು – ಗುಜರಾತಿನಲ್ಲಿ ಕಾಂಗ್ರೆಸ್ಸು ಜಿಎಸ್‍ಟಿಯನ್ನು ಕೇಂದ್ರವಾಗಿಟ್ಟುಕೊಂಡು ಚುನಾವಣೆ ಎದುರಿಸಿತು, ಸೂರತ್‍ನಲ್ಲಿ ಅದರ ಬಗ್ಗೆ ಬಹಳ ಪ್ರಚಾರ ಕೂಡ ನಡೆಯಿತು. ಆದರೆ ಸೂರತ್‍ನ ಎಲ್ಲ ಸೀಟುಗಳನ್ನೂ ನಾವೇ ಗೆದ್ದೆವು … ಈಗ ಐದು ವರ್ಷಗಳ ಕೆಲಸಕಾರ್ಯಗಳ ಮೇಲೆ ಚುನಾವಣೆ ನಡೆಯುತ್ತಿದೆ – ಎಂದು.

ಇದಕ್ಕೆ ರಾಹುಲ್ ಕೊಟ್ಟ ಉತ್ತರ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅದೆಂದರೆ, ಪ್ರಧಾನ ಮಂತ್ರಿಯ ಈ ಉತ್ತರ ಇತ್ತಲ್ಲ, ಅದೂ ಸಹ ಅವರಿಗೆ ಕೊಡಲಾಗಿದ್ದ ನೋಟ್‍ಶೀಟ್‍ನಲ್ಲಿತ್ತಾ? ಅವರ ಮುಂದೊಂದು ಕಾಗದ ಇಟ್ಟಿದ್ದಿರಲ್ಲ, ಅದರಲ್ಲಿ ಈ ಉತ್ತರವನ್ನೂ ಬರೆಯಲಾಗಿತ್ತಾ ಅಥವಾ ಬರೆದಿರಲಿಲ್ಲವಾ? ಎಂದು ಹೇಳಿದ್ದಲ್ಲದೇ ನೀವು ಬೇಕಾದರೆ ಇದನ್ನು ಎಡಿಟ್ ಮಾಡಿಕೊಳ್ಳಿ ಎಂದು ಹೇಳಿ ನಗೆ ಹುಟ್ಟಿಸಿದ್ದರು.

ಈ ರೀತಿಯಾಗಿ ಇಂದು ಮೀಡಿಯಾಗಳು ಸಂಪೂರ್ಣ ಮೋದಿಮಯವಾಗಿರುವುದು ಪ್ರಜಾತಂತ್ರದ ದೃಷ್ಟಿಯಿಂದ ಬಲು ಅಪಾಯಕಾರಿ. ಇದು ಮಾಧ್ಯಮಗಳ ದಿವಾಳಿತನ, ಮೋದಿಯವರಿಗೆ ಮಾಧ್ಯಮಗಳ ಮೇಲಿರುವ ಭಯವನ್ನು ಸಹ ತೋರಿಸುತ್ತದೆ. ಮೊದಲೇ ಇಂತಹದೇ ಪ್ರಶ್ನೆಗಳನ್ನು ಕೇಳಬೇಕು ಎಂದು ಸ್ಕ್ರಿಪ್ಟ್ ಪ್ರಶ್ನೆಗಳನ್ನು ಬರೆದುಕೊಟ್ಟು ಸಂದರ್ಶನ ನಡೆಸಬೇಕಾದ ದುರ್ಗತಿಗೆ ಇಂತಹ ಚಾನೆಲ್‍ಗಳು ಇಳಿದಿವೆ.
ಕೊನೆಯಲ್ಲಿ ಒಂದು ಮಾತು: ಮೋದಿಯ ಸಂದರ್ಶನಕ್ಕೆ ಜೊತೆಯಲ್ಲಿ ಒಬ್ಬ ‘ಮಾಡ್’ ಮಹಿಳೆಯನ್ನು ಕರೆದೊಯ್ದಿದ್ದ ಚೌರಾಸಿಯ, ರಾಹುಲ್ ಸಂದರ್ಶನಕ್ಕೆ ಜೊತೆಗೊಬ್ಬ ಪುರುಷನನ್ನು ಕರೆದುಕೊಂಡು ಹೋಗಿದ್ದರು. ಇಲ್ಲಿಯೂ ಅಸಮಾನತೆ ಮಾಡಿದ್ದಾರೆ ನೋಡಿ.

ಇದನ್ನು ಓದಿ: ನ್ಯೂಸ್ ನೇಷನ್ ಸಂದರ್ಶನದಲ್ಲಿ ಮೋದಿಗೆ ಪ್ರಶ್ನೆಗಳು ಮೊದಲೇ ಗೊತ್ತಿತ್ತಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯುದ್ಧ ಮುಂದುವರಿಸಲು ಸಾಧ್ಯವಾಗದೆ ಅಮೆರಿಕ ಬಲವಂತವಾಗಿ ಕದನ ವಿರಾಮ ಘೋಷಿಸಿತು’: ಭಾರತದಲ್ಲಿ ಇರಾನ್ ಸುಪ್ರೀಂ ಲೀಡರ್ ಪ್ರತಿನಿಧಿ

ನವದೆಹಲಿ: ಸಂಘರ್ಷವನ್ನು ಮುುಂದುವರಿಸಲು ವಿಫಲವಾದ ನಂತರ ಅಮೆರಿಕವು ಇರಾನ್ ಜೊತೆ ಕದನ ವಿರಾಮ ಘೋಷಿಸಲು ಒತ್ತಾಯಿಸಲ್ಪಟ್ಟಿತು ಮತ್ತು ನಿರಂತರ ಹಗೆತನವು ವಾಷಿಂಗ್ಟನ್‌ಗೆ ಮತ್ತಷ್ಟು ಹಿನ್ನಡೆಗೆ ಕಾರಣವಾಗುತ್ತಿತ್ತು ಎಂದು ಇರಾನ್‌ನ ಸರ್ವೋಚ್ಚ ನಾಯಕನ ಭಾರತದಲ್ಲಿನ...

ಶಾರದಾ ಚಿಟ್ ಫಂಡ್ ಹಗರಣ: 13 ವರ್ಷಗಳ ನಂತರ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಜಾಮೀನು ಮಂಜೂರು ಮಾಡಿದ ಕೊಲ್ಕತ್ತಾ ಹೈಕೋರ್ಟ್

ಕೊಲ್ಕತ್ತಾ ಹೈಕೋರ್ಟ್ ಬುಧವಾರ ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣದ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, 13 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾಗಲು ದಾರಿ ಸುಗಮವಾಗಿದೆ. ಪಶ್ಚಿಮ...

ಇಂದೋರ್: ಪೊಲೀಸರಿಂದ ಹಣಕ್ಕಾಗಿ ಬೇಡಿಕೆ, ಹಲ್ಲೆ ಆರೋಪ; 25 ವರ್ಷದ ಟ್ಯಾಕ್ಸಿ ಚಾಲಕ ಆತ್ಮಹತ್ಯೆ: ಪೊಲೀಸ್ ಅಮಾನತು

ಇಂದೋರ್: ಪೊಲೀಸರ ಹಲ್ಲೆ ಮತ್ತು ಭ್ರಷ್ಟಾಚಾರವನ್ನು ಆರೋಪಿಸಿ ವೀಡಿಯೊ ರೆಕಾರ್ಡ್ ಮಾಡಿದ ನಂತರ 25 ವರ್ಷದ ಟ್ಯಾಕ್ಸಿ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಅಧಿಕಾರಿಗಳು ಸಬ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಅಭಿಷೇಕ್...

ಅಮೆರಿಕ ಕೋರ್ಟ್ ಮೆಟ್ಟಿಲೇರಿದ ಅದಾನಿ : ಎಸ್‌ಇಸಿ ವಂಚನೆ ಪ್ರಕರಣ ವಜಾಗೊಳಿಸುವಂತೆ ಮನವಿ

ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಸೋದರಸಂಬಂಧಿ ಸಾಗರ್ ಅದಾನಿ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಮೆರಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್...

ಜಮ್ಮು-ಕಾಶ್ಮೀರ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಆರೋಪ; ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ ಮನೋಜ್ ಸಿನ್ಹಾ

ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ್ದಾರೆ ಎಂದು...

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...