HomeUncategorizedಒಂದೇ ಚಾನೆಲ್, ಒಬ್ಬನೇ ಸಂದರ್ಶಕ. ಮೋದಿಗೆ ಕುಶಲ ಪ್ರಶ್ನೆ ರಾಹುಲ್‍ಗೆ ಕಠಿಣ ಪ್ರಶ್ನೆ. ವಿಡಿಯೋ ನೋಡಿ

ಒಂದೇ ಚಾನೆಲ್, ಒಬ್ಬನೇ ಸಂದರ್ಶಕ. ಮೋದಿಗೆ ಕುಶಲ ಪ್ರಶ್ನೆ ರಾಹುಲ್‍ಗೆ ಕಠಿಣ ಪ್ರಶ್ನೆ. ವಿಡಿಯೋ ನೋಡಿ

- Advertisement -
- Advertisement -

ಚುನಾವಣಾ ನಿಮಿತ್ತ ನ್ಯೂಷ್ ನೇಷನ್ ಎಂಬ ಟಿವಿ ಚಾನೆಲ್ ಒಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಅಧ್ಯಕ್ಷರಾದ ರಾಹುಲ್ ಗಾಂಧಿಯವರನ್ನು ಸಂದರ್ಶನ ನಡೆಸಿತ್ತು. ಚೌರಾಸಿಯ ಎಂಬ ಸಂದರ್ಶಕ ಇಬ್ಬರನ್ನು ಸಂದರ್ಶಿಸಿದ್ದರೂ, ರಾಹುಲ್ ಗಾಂಧಿಗೆ ರಾಬರ್ಟ್ ವಾದ್ರರ ಭ್ರಷ್ಟಾಚಾರ ಪ್ರಕರಣ, 1984ರ ಸಿಖ್ ಹತ್ಯಾಕಾಂಡದಂತಹ ಕಠಿಣ ಪ್ರಶ್ನೆಗಳನ್ನು ಕೇಳಿದರು. ಇದು ಸರಿಯಾದುದ್ದೆ. ಆದರೆ ಮೋದಿಯವರಿಗೆ ಮಾತ್ರ ಯಾವ ತಿಂಡಿ ಇಷ್ಟ, ಯಾವ ಬಟ್ಟೆ ಹಾಕ್ತಿರಿ? ರೋಟಿ ಮಾಡೋಕೆ ಬರುತ್ತಾ, ಕವನ ಬರಿತೀರಾ ಎಂಬಂಥ ಸಿಲ್ಲಿ ಪ್ರಶ್ನೆಗಳನ್ನು ಕೇಳಿದ್ದಾರೆ. ವಿಡಿಯೋ ನೋಡಿ, ಅವರು ಕೇಳಿದ ಪ್ರಶ್ನೆಗಳನ್ನು ತಿಳಿಯಲು ಕೆಳಗೆ ಓದಿ.

ವಿಡಿಯೋ ನೊಡಿ

ಸಂದರ್ಶಕ – ಮೋದಿಗೆ: ತಾವು ಏನು ಊಟ-ತಿಂಡಿ ಇಷ್ಟಪಡುತ್ತೀರಿ ಹಾಗೂ ದಿನಕ್ಕೆ ಎಷ್ಟು ಸಲ ಊಟ ಮಾಡುತ್ತೀರಿ?

ರಾಹುಲ್‍ಗೆ: ‘ನ್ಯಾಯ್’ ಯೋಜನೆಯ ಕುರಿತು ನ್ಯೂಸ್ ನೇಶನ್ ಸಂದರ್ಶನದಲ್ಲಿ ಮೋದಿಯವರನ್ನು ಕೇಳಲಾಯಿತು – ‘ರಾಹುಲ್‍ಜೀ ‘ನ್ಯಾಯ್’ ಯೋಜನೆ ಮುಂದಿಟ್ಟಿದ್ದಾರೆ; ಅದರ ಪ್ರಕಾರ ಬಡವರಿಗೆ ವರ್ಷಕ್ಕೆ 72 ಸಾವಿರ ರೂಪಾಯಿಗಳನ್ನು ನೀಡಲಾಗುತ್ತದೆ’ ಎಂದು ಕೇಳಿದ್ದಕ್ಕೆ ಮೋದಿಯವರು, “ನನ್ನ ಬಳಿ ಟ್ರಾಕ್ ರಿಕಾರ್ಡ್ ಇದೆ, ರಾಹುಲ್‍ಜೀ ಬಳಿ ಟೇಪ್ ರೆಕಾರ್ಡರ್ ಇದೆ” ಎಂದರು.

ಮೋದಿಗೆ: ತಾವು ಕ್ಯಾಲರಿ-ಕಾನ್ಶಸ್ ಆಗಿದೀರಾ – ದಿನಕ್ಕೆ ಇಷ್ಟು ಕ್ಯಾಲರಿ ತಿನ್ನಬೇಕು, ಈಗ ಇಷ್ಟು ಕ್ಯಾಲರಿ ತಿಂದುಬಿಟ್ಟಿದೀನಿ, ಸ್ವಲ್ಪ ತಿನ್ನಬೇಕು … ಇತ್ಯಾದಿ?

ರಾಹುಲ್‍ಗೆ: ಒಂದು ವೇಳೆ ತಾವು ಅಧಿಕಾರಕ್ಕೆ ಬಂದರೆ ಅಥವಾ ಬಿಜೆಪಿಯ ಹೊರತಾಗಿ ಇನ್ಯಾವುದಾದರೂ ಪಕ್ಷ ಅಧಿಕಾರಕ್ಕೆ ಬಂದರೆ ರಫೇಲ್‍ನ ಕಂಟ್ರಾಕ್ಟನ್ನು ಮರು ಪರಿಶೀಲನೆ (ರೀ-ನೆಗೋಶಿಯೇಟ್) ನಡೆಸಲಾಗುವುದಾ?

ಮೋದಿಗೆ: ತಾವು ಏನೇನು ಅಡಿಗೆ ತಯಾರಿಸುತ್ತೀರಿ?
ಮೋದಿ: ಎಲ್ಲವನ್ನೂ ತಯಾರಿಸ್ತೀನಿ …
ಸಂ: ರೊಟ್ಟಿಯನ್ನು ಕೂಡಾ …?
ಮೋ: ಓಹೋ, ಎಲ್ಲವನ್ನೂ ತಯಾರಿಸ್ತೀನಿ.

ಸಂ – ರಾಹುಲ್‍ಗೆ: ಒಂದುವೇಳೆ ಅದರಲ್ಲಿ ರಫೇಲ್‍ನ ಕಂಟ್ರಾಕ್ಟ್‍ನಲ್ಲಿ ತಪ್ಪಾಗಿದೆ ಎಂದಾದಲ್ಲಿ ‘ಅದನ್ನು ರದ್ದುಪಡಿಸಲಾಗುವುದು’ ಅಥವಾ ‘ರೀ-ನೆಗೋಶಿಯೇಟ್ ಮಾಡಲಾಗುವುದು’ ಎಂದು ತಾವೇಕೆ ಓಪನ್ನಾಗಿ ಹೇಳುವುದಿಲ್ಲ? ಯಾಕೆಂದರೆ ಈ ಡೀಲ್‍ನಿಂದ ಬೊಕ್ಕಸಕ್ಕೆ ನಷ್ಟವಾಗಿದೆ ಎಂದು ನೀವು ತಿಳಿಯುತ್ತೀರಲ್ಲ…

ಮೋದಿಗೆ: ಕಳೆದ ಐದು ವರ್ಷಗಳಲ್ಲಿ ಎಂದಾದರೂ ನೀವು ಅಡಿಗೆಮನೆಗೆ ಹೋಗಲು ಸಾಧ್ಯವಾಗಿದೆಯಾ?
ರಾಹುಲ್‍ಗೆ: ಈ ವಿಚಾರ ಸುಪ್ರೀಂ ಕೋರ್ಟಿನಲ್ಲಿರುವಾಗ ತನಿಖೆ ಹೇಗೆ ನಡೆಯಲು ಸಾಧ್ಯ ಎಂಬ ಪ್ರಶ್ನೆ ಏಳುತ್ತದಲ್ಲವೆ?

ಮೋದಿಗೆ: ಪ್ರಧಾನ ಮಂತ್ರಿಗಳೆ, ಒಂದು ಬಹಳ ಮಹತ್ವಪೂರ್ಣ ವಿಚಾರ ಏನೆಂದರೆ, ನಿಮ್ಮ ವೇಷಭೂಷಣ ನಿಮಗೆ ಬಹಳ ಒಪ್ಪುತ್ತದೆ (ಸ್ಯೂಟ್ ಆಗುತ್ತದೆ).
ರಾಹುಲ್‍ಗೆ: ರಾಹುಲ್‍ಜೀ, ನಾವು ಪಂಜಾಬಿನಲ್ಲಿದೀವಿ. ಈಚೆಗಷ್ಟೇ ಒಂದು ವಿಚಾರ ಚರ್ಚೆಗೆ ಬಂದಿತ್ತು – 1984ರಲ್ಲಿ ನಡೆದಿದ್ದ ಸಿಖ್ ಗಲಭೆ(ರಯಟ್ಸ್)ಗಳಿಗೆ ಸಂಬಂಧಪಟ್ಟಂತೆ ಸ್ಯಾಮ್ ಪಿತ್ರೋದಾ ಅವರು “ಏನು ಆಗಿದೆಯೋ ಆಗಿದೆ” ಎಂದು ಹೇಳಿದ್ದರು …

ಮೋದಿಗೆ: ಅಂದರೆ ತಾವು ಫ್ಯಾಶನ್ ಬಗ್ಗೆ, ಬಟ್ಟೆಬರೆ ಬಗ್ಗೆಯೂ ಅಷ್ಟೊಂದು ಆಸಕ್ತಿ ಹೊಂದಿದೀರಾ? ಅದರ ಬಗ್ಗೆ ಏನಾದರೂ ಓದುತ್ತೀರಾ? ಯಾವ ಅಕೇಶನ್‍ಗೆ ಎಂತಹ ಉಡುಗೆ ತೊಡಬೇಕು ಎಂಬುದನ್ನು ಹೇಗೆ ನಿರ್ಧರಿಸುತ್ತೀರಿ?
ರಾಹುಲ್‍ಗೆ: … ಅವು ಸಂಘಟಿತವಾದ ಗಲಭೆಗಳಾಗಿದ್ದವು, ಅವುಗಳಿಗೆ ಕಾಂಗ್ರೆಸ್ ಪಕ್ಷವೇ ಜವಾಬ್ದಾರ ಎಂದು ಬಿಜೆಪಿಯ ಆರೋಪ…

ಮೋದಿಗೆ: ತಾವು ಜೇಬಿನಲ್ಲಿ ಪರ್ಸ್ ಇಟ್ಕೊಳ್ತೀರಾ?
ರಾಹುಲ್‍ಗೆ: … ಅವರು ಹೇಳಿದರು – ಗುಜರಾತಿನಲ್ಲಿ ಕಾಂಗ್ರೆಸ್ಸು ಜಿಎಸ್‍ಟಿಯನ್ನು ಕೇಂದ್ರವಾಗಿಟ್ಟುಕೊಂಡು ಚುನಾವಣೆ ಎದುರಿಸಿತು, ಸೂರತ್‍ನಲ್ಲಿ ಅದರ ಬಗ್ಗೆ ಬಹಳ ಪ್ರಚಾರ ಕೂಡ ನಡೆಯಿತು. ಆದರೆ ಸೂರತ್‍ನ ಎಲ್ಲ ಸೀಟುಗಳನ್ನೂ ನಾವೇ ಗೆದ್ದೆವು … ಈಗ ಐದು ವರ್ಷಗಳ ಕೆಲಸಕಾರ್ಯಗಳ ಮೇಲೆ ಚುನಾವಣೆ ನಡೆಯುತ್ತಿದೆ – ಎಂದು.

ಇದಕ್ಕೆ ರಾಹುಲ್ ಕೊಟ್ಟ ಉತ್ತರ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅದೆಂದರೆ, ಪ್ರಧಾನ ಮಂತ್ರಿಯ ಈ ಉತ್ತರ ಇತ್ತಲ್ಲ, ಅದೂ ಸಹ ಅವರಿಗೆ ಕೊಡಲಾಗಿದ್ದ ನೋಟ್‍ಶೀಟ್‍ನಲ್ಲಿತ್ತಾ? ಅವರ ಮುಂದೊಂದು ಕಾಗದ ಇಟ್ಟಿದ್ದಿರಲ್ಲ, ಅದರಲ್ಲಿ ಈ ಉತ್ತರವನ್ನೂ ಬರೆಯಲಾಗಿತ್ತಾ ಅಥವಾ ಬರೆದಿರಲಿಲ್ಲವಾ? ಎಂದು ಹೇಳಿದ್ದಲ್ಲದೇ ನೀವು ಬೇಕಾದರೆ ಇದನ್ನು ಎಡಿಟ್ ಮಾಡಿಕೊಳ್ಳಿ ಎಂದು ಹೇಳಿ ನಗೆ ಹುಟ್ಟಿಸಿದ್ದರು.

ಈ ರೀತಿಯಾಗಿ ಇಂದು ಮೀಡಿಯಾಗಳು ಸಂಪೂರ್ಣ ಮೋದಿಮಯವಾಗಿರುವುದು ಪ್ರಜಾತಂತ್ರದ ದೃಷ್ಟಿಯಿಂದ ಬಲು ಅಪಾಯಕಾರಿ. ಇದು ಮಾಧ್ಯಮಗಳ ದಿವಾಳಿತನ, ಮೋದಿಯವರಿಗೆ ಮಾಧ್ಯಮಗಳ ಮೇಲಿರುವ ಭಯವನ್ನು ಸಹ ತೋರಿಸುತ್ತದೆ. ಮೊದಲೇ ಇಂತಹದೇ ಪ್ರಶ್ನೆಗಳನ್ನು ಕೇಳಬೇಕು ಎಂದು ಸ್ಕ್ರಿಪ್ಟ್ ಪ್ರಶ್ನೆಗಳನ್ನು ಬರೆದುಕೊಟ್ಟು ಸಂದರ್ಶನ ನಡೆಸಬೇಕಾದ ದುರ್ಗತಿಗೆ ಇಂತಹ ಚಾನೆಲ್‍ಗಳು ಇಳಿದಿವೆ.
ಕೊನೆಯಲ್ಲಿ ಒಂದು ಮಾತು: ಮೋದಿಯ ಸಂದರ್ಶನಕ್ಕೆ ಜೊತೆಯಲ್ಲಿ ಒಬ್ಬ ‘ಮಾಡ್’ ಮಹಿಳೆಯನ್ನು ಕರೆದೊಯ್ದಿದ್ದ ಚೌರಾಸಿಯ, ರಾಹುಲ್ ಸಂದರ್ಶನಕ್ಕೆ ಜೊತೆಗೊಬ್ಬ ಪುರುಷನನ್ನು ಕರೆದುಕೊಂಡು ಹೋಗಿದ್ದರು. ಇಲ್ಲಿಯೂ ಅಸಮಾನತೆ ಮಾಡಿದ್ದಾರೆ ನೋಡಿ.

ಇದನ್ನು ಓದಿ: ನ್ಯೂಸ್ ನೇಷನ್ ಸಂದರ್ಶನದಲ್ಲಿ ಮೋದಿಗೆ ಪ್ರಶ್ನೆಗಳು ಮೊದಲೇ ಗೊತ್ತಿತ್ತಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...