HomeUncategorizedಒಂದೇ ಚಾನೆಲ್, ಒಬ್ಬನೇ ಸಂದರ್ಶಕ. ಮೋದಿಗೆ ಕುಶಲ ಪ್ರಶ್ನೆ ರಾಹುಲ್‍ಗೆ ಕಠಿಣ ಪ್ರಶ್ನೆ. ವಿಡಿಯೋ ನೋಡಿ

ಒಂದೇ ಚಾನೆಲ್, ಒಬ್ಬನೇ ಸಂದರ್ಶಕ. ಮೋದಿಗೆ ಕುಶಲ ಪ್ರಶ್ನೆ ರಾಹುಲ್‍ಗೆ ಕಠಿಣ ಪ್ರಶ್ನೆ. ವಿಡಿಯೋ ನೋಡಿ

- Advertisement -
- Advertisement -

ಚುನಾವಣಾ ನಿಮಿತ್ತ ನ್ಯೂಷ್ ನೇಷನ್ ಎಂಬ ಟಿವಿ ಚಾನೆಲ್ ಒಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಅಧ್ಯಕ್ಷರಾದ ರಾಹುಲ್ ಗಾಂಧಿಯವರನ್ನು ಸಂದರ್ಶನ ನಡೆಸಿತ್ತು. ಚೌರಾಸಿಯ ಎಂಬ ಸಂದರ್ಶಕ ಇಬ್ಬರನ್ನು ಸಂದರ್ಶಿಸಿದ್ದರೂ, ರಾಹುಲ್ ಗಾಂಧಿಗೆ ರಾಬರ್ಟ್ ವಾದ್ರರ ಭ್ರಷ್ಟಾಚಾರ ಪ್ರಕರಣ, 1984ರ ಸಿಖ್ ಹತ್ಯಾಕಾಂಡದಂತಹ ಕಠಿಣ ಪ್ರಶ್ನೆಗಳನ್ನು ಕೇಳಿದರು. ಇದು ಸರಿಯಾದುದ್ದೆ. ಆದರೆ ಮೋದಿಯವರಿಗೆ ಮಾತ್ರ ಯಾವ ತಿಂಡಿ ಇಷ್ಟ, ಯಾವ ಬಟ್ಟೆ ಹಾಕ್ತಿರಿ? ರೋಟಿ ಮಾಡೋಕೆ ಬರುತ್ತಾ, ಕವನ ಬರಿತೀರಾ ಎಂಬಂಥ ಸಿಲ್ಲಿ ಪ್ರಶ್ನೆಗಳನ್ನು ಕೇಳಿದ್ದಾರೆ. ವಿಡಿಯೋ ನೋಡಿ, ಅವರು ಕೇಳಿದ ಪ್ರಶ್ನೆಗಳನ್ನು ತಿಳಿಯಲು ಕೆಳಗೆ ಓದಿ.

ವಿಡಿಯೋ ನೊಡಿ

ಸಂದರ್ಶಕ – ಮೋದಿಗೆ: ತಾವು ಏನು ಊಟ-ತಿಂಡಿ ಇಷ್ಟಪಡುತ್ತೀರಿ ಹಾಗೂ ದಿನಕ್ಕೆ ಎಷ್ಟು ಸಲ ಊಟ ಮಾಡುತ್ತೀರಿ?

ರಾಹುಲ್‍ಗೆ: ‘ನ್ಯಾಯ್’ ಯೋಜನೆಯ ಕುರಿತು ನ್ಯೂಸ್ ನೇಶನ್ ಸಂದರ್ಶನದಲ್ಲಿ ಮೋದಿಯವರನ್ನು ಕೇಳಲಾಯಿತು – ‘ರಾಹುಲ್‍ಜೀ ‘ನ್ಯಾಯ್’ ಯೋಜನೆ ಮುಂದಿಟ್ಟಿದ್ದಾರೆ; ಅದರ ಪ್ರಕಾರ ಬಡವರಿಗೆ ವರ್ಷಕ್ಕೆ 72 ಸಾವಿರ ರೂಪಾಯಿಗಳನ್ನು ನೀಡಲಾಗುತ್ತದೆ’ ಎಂದು ಕೇಳಿದ್ದಕ್ಕೆ ಮೋದಿಯವರು, “ನನ್ನ ಬಳಿ ಟ್ರಾಕ್ ರಿಕಾರ್ಡ್ ಇದೆ, ರಾಹುಲ್‍ಜೀ ಬಳಿ ಟೇಪ್ ರೆಕಾರ್ಡರ್ ಇದೆ” ಎಂದರು.

ಮೋದಿಗೆ: ತಾವು ಕ್ಯಾಲರಿ-ಕಾನ್ಶಸ್ ಆಗಿದೀರಾ – ದಿನಕ್ಕೆ ಇಷ್ಟು ಕ್ಯಾಲರಿ ತಿನ್ನಬೇಕು, ಈಗ ಇಷ್ಟು ಕ್ಯಾಲರಿ ತಿಂದುಬಿಟ್ಟಿದೀನಿ, ಸ್ವಲ್ಪ ತಿನ್ನಬೇಕು … ಇತ್ಯಾದಿ?

ರಾಹುಲ್‍ಗೆ: ಒಂದು ವೇಳೆ ತಾವು ಅಧಿಕಾರಕ್ಕೆ ಬಂದರೆ ಅಥವಾ ಬಿಜೆಪಿಯ ಹೊರತಾಗಿ ಇನ್ಯಾವುದಾದರೂ ಪಕ್ಷ ಅಧಿಕಾರಕ್ಕೆ ಬಂದರೆ ರಫೇಲ್‍ನ ಕಂಟ್ರಾಕ್ಟನ್ನು ಮರು ಪರಿಶೀಲನೆ (ರೀ-ನೆಗೋಶಿಯೇಟ್) ನಡೆಸಲಾಗುವುದಾ?

ಮೋದಿಗೆ: ತಾವು ಏನೇನು ಅಡಿಗೆ ತಯಾರಿಸುತ್ತೀರಿ?
ಮೋದಿ: ಎಲ್ಲವನ್ನೂ ತಯಾರಿಸ್ತೀನಿ …
ಸಂ: ರೊಟ್ಟಿಯನ್ನು ಕೂಡಾ …?
ಮೋ: ಓಹೋ, ಎಲ್ಲವನ್ನೂ ತಯಾರಿಸ್ತೀನಿ.

ಸಂ – ರಾಹುಲ್‍ಗೆ: ಒಂದುವೇಳೆ ಅದರಲ್ಲಿ ರಫೇಲ್‍ನ ಕಂಟ್ರಾಕ್ಟ್‍ನಲ್ಲಿ ತಪ್ಪಾಗಿದೆ ಎಂದಾದಲ್ಲಿ ‘ಅದನ್ನು ರದ್ದುಪಡಿಸಲಾಗುವುದು’ ಅಥವಾ ‘ರೀ-ನೆಗೋಶಿಯೇಟ್ ಮಾಡಲಾಗುವುದು’ ಎಂದು ತಾವೇಕೆ ಓಪನ್ನಾಗಿ ಹೇಳುವುದಿಲ್ಲ? ಯಾಕೆಂದರೆ ಈ ಡೀಲ್‍ನಿಂದ ಬೊಕ್ಕಸಕ್ಕೆ ನಷ್ಟವಾಗಿದೆ ಎಂದು ನೀವು ತಿಳಿಯುತ್ತೀರಲ್ಲ…

ಮೋದಿಗೆ: ಕಳೆದ ಐದು ವರ್ಷಗಳಲ್ಲಿ ಎಂದಾದರೂ ನೀವು ಅಡಿಗೆಮನೆಗೆ ಹೋಗಲು ಸಾಧ್ಯವಾಗಿದೆಯಾ?
ರಾಹುಲ್‍ಗೆ: ಈ ವಿಚಾರ ಸುಪ್ರೀಂ ಕೋರ್ಟಿನಲ್ಲಿರುವಾಗ ತನಿಖೆ ಹೇಗೆ ನಡೆಯಲು ಸಾಧ್ಯ ಎಂಬ ಪ್ರಶ್ನೆ ಏಳುತ್ತದಲ್ಲವೆ?

ಮೋದಿಗೆ: ಪ್ರಧಾನ ಮಂತ್ರಿಗಳೆ, ಒಂದು ಬಹಳ ಮಹತ್ವಪೂರ್ಣ ವಿಚಾರ ಏನೆಂದರೆ, ನಿಮ್ಮ ವೇಷಭೂಷಣ ನಿಮಗೆ ಬಹಳ ಒಪ್ಪುತ್ತದೆ (ಸ್ಯೂಟ್ ಆಗುತ್ತದೆ).
ರಾಹುಲ್‍ಗೆ: ರಾಹುಲ್‍ಜೀ, ನಾವು ಪಂಜಾಬಿನಲ್ಲಿದೀವಿ. ಈಚೆಗಷ್ಟೇ ಒಂದು ವಿಚಾರ ಚರ್ಚೆಗೆ ಬಂದಿತ್ತು – 1984ರಲ್ಲಿ ನಡೆದಿದ್ದ ಸಿಖ್ ಗಲಭೆ(ರಯಟ್ಸ್)ಗಳಿಗೆ ಸಂಬಂಧಪಟ್ಟಂತೆ ಸ್ಯಾಮ್ ಪಿತ್ರೋದಾ ಅವರು “ಏನು ಆಗಿದೆಯೋ ಆಗಿದೆ” ಎಂದು ಹೇಳಿದ್ದರು …

ಮೋದಿಗೆ: ಅಂದರೆ ತಾವು ಫ್ಯಾಶನ್ ಬಗ್ಗೆ, ಬಟ್ಟೆಬರೆ ಬಗ್ಗೆಯೂ ಅಷ್ಟೊಂದು ಆಸಕ್ತಿ ಹೊಂದಿದೀರಾ? ಅದರ ಬಗ್ಗೆ ಏನಾದರೂ ಓದುತ್ತೀರಾ? ಯಾವ ಅಕೇಶನ್‍ಗೆ ಎಂತಹ ಉಡುಗೆ ತೊಡಬೇಕು ಎಂಬುದನ್ನು ಹೇಗೆ ನಿರ್ಧರಿಸುತ್ತೀರಿ?
ರಾಹುಲ್‍ಗೆ: … ಅವು ಸಂಘಟಿತವಾದ ಗಲಭೆಗಳಾಗಿದ್ದವು, ಅವುಗಳಿಗೆ ಕಾಂಗ್ರೆಸ್ ಪಕ್ಷವೇ ಜವಾಬ್ದಾರ ಎಂದು ಬಿಜೆಪಿಯ ಆರೋಪ…

ಮೋದಿಗೆ: ತಾವು ಜೇಬಿನಲ್ಲಿ ಪರ್ಸ್ ಇಟ್ಕೊಳ್ತೀರಾ?
ರಾಹುಲ್‍ಗೆ: … ಅವರು ಹೇಳಿದರು – ಗುಜರಾತಿನಲ್ಲಿ ಕಾಂಗ್ರೆಸ್ಸು ಜಿಎಸ್‍ಟಿಯನ್ನು ಕೇಂದ್ರವಾಗಿಟ್ಟುಕೊಂಡು ಚುನಾವಣೆ ಎದುರಿಸಿತು, ಸೂರತ್‍ನಲ್ಲಿ ಅದರ ಬಗ್ಗೆ ಬಹಳ ಪ್ರಚಾರ ಕೂಡ ನಡೆಯಿತು. ಆದರೆ ಸೂರತ್‍ನ ಎಲ್ಲ ಸೀಟುಗಳನ್ನೂ ನಾವೇ ಗೆದ್ದೆವು … ಈಗ ಐದು ವರ್ಷಗಳ ಕೆಲಸಕಾರ್ಯಗಳ ಮೇಲೆ ಚುನಾವಣೆ ನಡೆಯುತ್ತಿದೆ – ಎಂದು.

ಇದಕ್ಕೆ ರಾಹುಲ್ ಕೊಟ್ಟ ಉತ್ತರ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅದೆಂದರೆ, ಪ್ರಧಾನ ಮಂತ್ರಿಯ ಈ ಉತ್ತರ ಇತ್ತಲ್ಲ, ಅದೂ ಸಹ ಅವರಿಗೆ ಕೊಡಲಾಗಿದ್ದ ನೋಟ್‍ಶೀಟ್‍ನಲ್ಲಿತ್ತಾ? ಅವರ ಮುಂದೊಂದು ಕಾಗದ ಇಟ್ಟಿದ್ದಿರಲ್ಲ, ಅದರಲ್ಲಿ ಈ ಉತ್ತರವನ್ನೂ ಬರೆಯಲಾಗಿತ್ತಾ ಅಥವಾ ಬರೆದಿರಲಿಲ್ಲವಾ? ಎಂದು ಹೇಳಿದ್ದಲ್ಲದೇ ನೀವು ಬೇಕಾದರೆ ಇದನ್ನು ಎಡಿಟ್ ಮಾಡಿಕೊಳ್ಳಿ ಎಂದು ಹೇಳಿ ನಗೆ ಹುಟ್ಟಿಸಿದ್ದರು.

ಈ ರೀತಿಯಾಗಿ ಇಂದು ಮೀಡಿಯಾಗಳು ಸಂಪೂರ್ಣ ಮೋದಿಮಯವಾಗಿರುವುದು ಪ್ರಜಾತಂತ್ರದ ದೃಷ್ಟಿಯಿಂದ ಬಲು ಅಪಾಯಕಾರಿ. ಇದು ಮಾಧ್ಯಮಗಳ ದಿವಾಳಿತನ, ಮೋದಿಯವರಿಗೆ ಮಾಧ್ಯಮಗಳ ಮೇಲಿರುವ ಭಯವನ್ನು ಸಹ ತೋರಿಸುತ್ತದೆ. ಮೊದಲೇ ಇಂತಹದೇ ಪ್ರಶ್ನೆಗಳನ್ನು ಕೇಳಬೇಕು ಎಂದು ಸ್ಕ್ರಿಪ್ಟ್ ಪ್ರಶ್ನೆಗಳನ್ನು ಬರೆದುಕೊಟ್ಟು ಸಂದರ್ಶನ ನಡೆಸಬೇಕಾದ ದುರ್ಗತಿಗೆ ಇಂತಹ ಚಾನೆಲ್‍ಗಳು ಇಳಿದಿವೆ.
ಕೊನೆಯಲ್ಲಿ ಒಂದು ಮಾತು: ಮೋದಿಯ ಸಂದರ್ಶನಕ್ಕೆ ಜೊತೆಯಲ್ಲಿ ಒಬ್ಬ ‘ಮಾಡ್’ ಮಹಿಳೆಯನ್ನು ಕರೆದೊಯ್ದಿದ್ದ ಚೌರಾಸಿಯ, ರಾಹುಲ್ ಸಂದರ್ಶನಕ್ಕೆ ಜೊತೆಗೊಬ್ಬ ಪುರುಷನನ್ನು ಕರೆದುಕೊಂಡು ಹೋಗಿದ್ದರು. ಇಲ್ಲಿಯೂ ಅಸಮಾನತೆ ಮಾಡಿದ್ದಾರೆ ನೋಡಿ.

ಇದನ್ನು ಓದಿ: ನ್ಯೂಸ್ ನೇಷನ್ ಸಂದರ್ಶನದಲ್ಲಿ ಮೋದಿಗೆ ಪ್ರಶ್ನೆಗಳು ಮೊದಲೇ ಗೊತ್ತಿತ್ತಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...