Homeಮುಖಪುಟನಾಲ್ವರು ಮಹಿಳೆಯರ ಮೇಲೆ ಅತ್ಯಾಚಾರ ಆರೋಪ: ಸ್ವಯಂಘೋಷಿತ ದೇವಮಾನವನ ಬಂಧನ

ನಾಲ್ವರು ಮಹಿಳೆಯರ ಮೇಲೆ ಅತ್ಯಾಚಾರ ಆರೋಪ: ಸ್ವಯಂಘೋಷಿತ ದೇವಮಾನವನ ಬಂಧನ

- Advertisement -
- Advertisement -

ಒಂದೇ ಕುಟುಂಬದ ಮೂವರು ಮಹಿಳೆಯರು ಮತ್ತು ಮತ್ತೊಬ್ಬ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ್ದ ಆರೋಪದಲ್ಲಿ ಸ್ವಯಂಘೋಷಿತ ದೇವಮಾನವ ಯೋಗೇಂದ್ರ ಮೆಹ್ತಾ ಎಂಬಾತನನ್ನು ಜೈಪುರ ಪೊಲಿಸರು ಬಂಧಿಸಿದ್ದಾರೆ.

ಆರೋಪಿ ಯೋಗೇಂದ್ರ ಮೆಹ್ತಾ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ ಸುಮಾರು ಮೂರು ವಾರಗಳ ನಂತರ ಪೊಲೀಸರು ಆರೋಪಿಯನ್ನು ಮಂಳವಾರ ಬಂಧಿಸಿದ್ದಾರೆ. ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಈ ಸ್ವಯಂಘೋಷಿತ ದೇವಮಾನವ ಮೆಹ್ತಾ (56) ವಿಸ್ತಾರವಾದ ಆಶ್ರಮವನ್ನು ಹೊಂದಿದ್ದಾರೆ.

2005 ಮತ್ತು 2017 ರ ಸಮಯದಲ್ಲಿ ತನ್ನ ಆಶ್ರಮದಲ್ಲಿ ತಮ್ಮ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ಮುಖ್ಯ ದೂರುದಾರರು ಮತ್ತು ಆಕೆಯ ಇಬ್ಬರು ಅತ್ತಿಗೆ ಮೇ 4 ರಂದು ಎಫ್‌ಐಆರ್ ದಾಖಲಿಸಿದ್ದಾರೆ. ಎಫ್‌ಐಆರ್ ದಾಖಲಾದ ಒಂದು ದಿನದ ನಂತರ ಮತ್ತೊಬ್ಬ ಮಹಿಳೆ ಕೂಡ ಮುಂದೆ ಬಂದು ಅತ್ಯಾಚಾರದ ದೂರು ನೀಡಿದ್ದಾರೆ.

ಇದನ್ನೂ ಓದಿ:ಕೊರೊನಾ ವೈಫಲ್ಯ: ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಹಲವು ನಾಯಕರ ತಲೆದಂಡ?

“ನನ್ನ ಪತಿ 1998 ರಿಂದ ಆಶ್ರಮಕ್ಕೆ ನಿಯಮಿತವಾಗಿ ಭೇಟಿ ನೀಡುತ್ತಿದ್ದರು. ಯೋಗೇಂದ್ರ ಮೆಹ್ತಾ ಒಂದು ದಿನ ನನ್ನ ಗಂಡನನ್ನು ಅವರ ಇಡೀ ಕುಟುಂಬದೊಂದಿಗೆ ಬರಲು ಹೇಳಿದ್ದರು. ಹೀಗಾಗಿ 2005 ರಲ್ಲಿ ನಾನು ಆಶ್ರಮಕ್ಕೆ ಮೊದಲ ಬಾರಿ ಹೋಗಿದ್ದೆ. ನಂತರ ನಾನು ನಿಯಮಿತವಾಗಿ ಆಶ್ರಮಕ್ಕೆ ಭೇಟಿ ನೀಡಲು ಪ್ರಾರಂಭಿಸಿದೆ. ಆರಂಭದಲ್ಲಿ, ಎಲ್ಲವೂ ಸರಿಯಾಗಿತ್ತು. ನಾನು ಪ್ರತಿ ಆರು ತಿಂಗಳಿಗೊಮ್ಮೆ ಮೂರು-ನಾಲ್ಕು ದಿನಗಳ ಕಾಲ ಆಶ್ರಮದಲ್ಲಿಯೇ ಇರುತ್ತಿದ್ದೆ. 2005 ರಲ್ಲಿ ಅಲ್ಲಿ ತಂಗಿದ್ದ ಸಮಯದಲ್ಲಿ, ನನ್ನನ್ನು ಆರೋಪಿಗಳ ಸಹಾಯಕರು ಅವರ ಕೋಣೆಗೆ ಕರಕೊಂಡು ಹೋದರರು. ನನಗೆ ಸ್ವಲ್ಪ ಕುಡಿಯಲು ಪಾನೀಯ ನೀಡಿ, ಅತ್ಯಾಚಾರ ಮಾಡಲಾಯಿತು. 2017 ರವರೆಗೆ ಆಶ್ರಮದಲ್ಲಿ ಮೆಹ್ತಾ ಪದೇ ಪದೇ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ”ಎಂದು ಮುಖ್ಯ ದೂರುದಾರರು ತಮ್ಮ ದೂರಿನಲ್ಲಿ ತಿಳಿಸಿದ್ದಾರ. ಆಕೆಯ ಅತ್ತಿಗೆಯರು ಕೂಡ ಇದೇ ರೀತಿ ಶೋಷಣೆಗೆ ಒಳಗಾಗಿದ್ದಾರೆ ಎಂದು ತಿಳಿಸಿದ್ದಾರೆ.

“ನಾನು ಆಕ್ಷೇಪಿಸಿದ ಪ್ರತಿ ಬಾರಿಯೂ, ಇದು ಒಂದು ಆಶೀರ್ವಾದ ಎಂದು ಮೆಹ್ತಾ ಹೇಳಿದ್ದರು. ಅವರು ಮಾಡುತ್ತಿದ್ದ ಲೈಂಗಿಕ ದುರುಪಯೋಗದ ಬಗ್ಗೆ ನಾನು ಯಾರಿಗಾದರೂ ಹೇಳಿದರೆ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದರು” ಎಂದು ದೂರಿನಲ್ಲಿ ತಿಳಿಸಿದ್ದಾರೆ. ಮತ್ತೊಬ್ಬ ಮಹಿಳೆ ಕೂಡ ಇದೇ ಅವಧಿಯಲ್ಲಿ ತಾನು ಅತ್ಯಾಚಾರಕ್ಕೆ ಒಳಗಾಗಿದ್ದೇನೆ ಎಂದಿದ್ದಾರೆ.

ಸ್ವಯಂಘೋಷಿತ ದೇವಮಾನವ ಎಂದು ಹೇಳಿಕೊಂಡಿದ್ದ ಯೋಗೇಂದ್ರ ಮೆಹ್ತಾ ಬಮಧನ ಅಷ್ಟು ಸುಲಭದ್ದಾಗಿರಲಿಲ್ಲ. ರಾಜಕಾರಣಿಗಳು ಮತ್ತು ಪ್ರಭಾವಿ ವ್ಯಕ್ತಿಗಳು ಆಶ್ರಮಕ್ಕೆ ಭೇಟಿ ನೀಡುತ್ತಿದ್ದರು ಇವರ ಒತ್ತಡದ ಕಾರಣ ತುಂಬಾ ಕಷ್ಟದ್ದಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.


ಇದನ್ನೂ ಓದಿ: ಖಾಸಗಿ ಆಸ್ಪತ್ರೆಯಲ್ಲಿ ಹಣ ನೀಡಿ ಲಸಿಕೆ ಹಾಕಿಸಿಕೊಳ್ಳಿ ಎಂದು ತೇಜಸ್ವಿ ಸೂರ್ಯ ಪ್ರಚಾರ: ತರಾಟೆ ತೆಗೆದುಕೊಂಡ ಜನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...