Homeಮುಖಪುಟನಾಲ್ವರು ಮಹಿಳೆಯರ ಮೇಲೆ ಅತ್ಯಾಚಾರ ಆರೋಪ: ಸ್ವಯಂಘೋಷಿತ ದೇವಮಾನವನ ಬಂಧನ

ನಾಲ್ವರು ಮಹಿಳೆಯರ ಮೇಲೆ ಅತ್ಯಾಚಾರ ಆರೋಪ: ಸ್ವಯಂಘೋಷಿತ ದೇವಮಾನವನ ಬಂಧನ

- Advertisement -
- Advertisement -

ಒಂದೇ ಕುಟುಂಬದ ಮೂವರು ಮಹಿಳೆಯರು ಮತ್ತು ಮತ್ತೊಬ್ಬ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ್ದ ಆರೋಪದಲ್ಲಿ ಸ್ವಯಂಘೋಷಿತ ದೇವಮಾನವ ಯೋಗೇಂದ್ರ ಮೆಹ್ತಾ ಎಂಬಾತನನ್ನು ಜೈಪುರ ಪೊಲಿಸರು ಬಂಧಿಸಿದ್ದಾರೆ.

ಆರೋಪಿ ಯೋಗೇಂದ್ರ ಮೆಹ್ತಾ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ ಸುಮಾರು ಮೂರು ವಾರಗಳ ನಂತರ ಪೊಲೀಸರು ಆರೋಪಿಯನ್ನು ಮಂಳವಾರ ಬಂಧಿಸಿದ್ದಾರೆ. ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಈ ಸ್ವಯಂಘೋಷಿತ ದೇವಮಾನವ ಮೆಹ್ತಾ (56) ವಿಸ್ತಾರವಾದ ಆಶ್ರಮವನ್ನು ಹೊಂದಿದ್ದಾರೆ.

2005 ಮತ್ತು 2017 ರ ಸಮಯದಲ್ಲಿ ತನ್ನ ಆಶ್ರಮದಲ್ಲಿ ತಮ್ಮ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ಮುಖ್ಯ ದೂರುದಾರರು ಮತ್ತು ಆಕೆಯ ಇಬ್ಬರು ಅತ್ತಿಗೆ ಮೇ 4 ರಂದು ಎಫ್‌ಐಆರ್ ದಾಖಲಿಸಿದ್ದಾರೆ. ಎಫ್‌ಐಆರ್ ದಾಖಲಾದ ಒಂದು ದಿನದ ನಂತರ ಮತ್ತೊಬ್ಬ ಮಹಿಳೆ ಕೂಡ ಮುಂದೆ ಬಂದು ಅತ್ಯಾಚಾರದ ದೂರು ನೀಡಿದ್ದಾರೆ.

ಇದನ್ನೂ ಓದಿ:ಕೊರೊನಾ ವೈಫಲ್ಯ: ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಹಲವು ನಾಯಕರ ತಲೆದಂಡ?

“ನನ್ನ ಪತಿ 1998 ರಿಂದ ಆಶ್ರಮಕ್ಕೆ ನಿಯಮಿತವಾಗಿ ಭೇಟಿ ನೀಡುತ್ತಿದ್ದರು. ಯೋಗೇಂದ್ರ ಮೆಹ್ತಾ ಒಂದು ದಿನ ನನ್ನ ಗಂಡನನ್ನು ಅವರ ಇಡೀ ಕುಟುಂಬದೊಂದಿಗೆ ಬರಲು ಹೇಳಿದ್ದರು. ಹೀಗಾಗಿ 2005 ರಲ್ಲಿ ನಾನು ಆಶ್ರಮಕ್ಕೆ ಮೊದಲ ಬಾರಿ ಹೋಗಿದ್ದೆ. ನಂತರ ನಾನು ನಿಯಮಿತವಾಗಿ ಆಶ್ರಮಕ್ಕೆ ಭೇಟಿ ನೀಡಲು ಪ್ರಾರಂಭಿಸಿದೆ. ಆರಂಭದಲ್ಲಿ, ಎಲ್ಲವೂ ಸರಿಯಾಗಿತ್ತು. ನಾನು ಪ್ರತಿ ಆರು ತಿಂಗಳಿಗೊಮ್ಮೆ ಮೂರು-ನಾಲ್ಕು ದಿನಗಳ ಕಾಲ ಆಶ್ರಮದಲ್ಲಿಯೇ ಇರುತ್ತಿದ್ದೆ. 2005 ರಲ್ಲಿ ಅಲ್ಲಿ ತಂಗಿದ್ದ ಸಮಯದಲ್ಲಿ, ನನ್ನನ್ನು ಆರೋಪಿಗಳ ಸಹಾಯಕರು ಅವರ ಕೋಣೆಗೆ ಕರಕೊಂಡು ಹೋದರರು. ನನಗೆ ಸ್ವಲ್ಪ ಕುಡಿಯಲು ಪಾನೀಯ ನೀಡಿ, ಅತ್ಯಾಚಾರ ಮಾಡಲಾಯಿತು. 2017 ರವರೆಗೆ ಆಶ್ರಮದಲ್ಲಿ ಮೆಹ್ತಾ ಪದೇ ಪದೇ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ”ಎಂದು ಮುಖ್ಯ ದೂರುದಾರರು ತಮ್ಮ ದೂರಿನಲ್ಲಿ ತಿಳಿಸಿದ್ದಾರ. ಆಕೆಯ ಅತ್ತಿಗೆಯರು ಕೂಡ ಇದೇ ರೀತಿ ಶೋಷಣೆಗೆ ಒಳಗಾಗಿದ್ದಾರೆ ಎಂದು ತಿಳಿಸಿದ್ದಾರೆ.

“ನಾನು ಆಕ್ಷೇಪಿಸಿದ ಪ್ರತಿ ಬಾರಿಯೂ, ಇದು ಒಂದು ಆಶೀರ್ವಾದ ಎಂದು ಮೆಹ್ತಾ ಹೇಳಿದ್ದರು. ಅವರು ಮಾಡುತ್ತಿದ್ದ ಲೈಂಗಿಕ ದುರುಪಯೋಗದ ಬಗ್ಗೆ ನಾನು ಯಾರಿಗಾದರೂ ಹೇಳಿದರೆ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದರು” ಎಂದು ದೂರಿನಲ್ಲಿ ತಿಳಿಸಿದ್ದಾರೆ. ಮತ್ತೊಬ್ಬ ಮಹಿಳೆ ಕೂಡ ಇದೇ ಅವಧಿಯಲ್ಲಿ ತಾನು ಅತ್ಯಾಚಾರಕ್ಕೆ ಒಳಗಾಗಿದ್ದೇನೆ ಎಂದಿದ್ದಾರೆ.

ಸ್ವಯಂಘೋಷಿತ ದೇವಮಾನವ ಎಂದು ಹೇಳಿಕೊಂಡಿದ್ದ ಯೋಗೇಂದ್ರ ಮೆಹ್ತಾ ಬಮಧನ ಅಷ್ಟು ಸುಲಭದ್ದಾಗಿರಲಿಲ್ಲ. ರಾಜಕಾರಣಿಗಳು ಮತ್ತು ಪ್ರಭಾವಿ ವ್ಯಕ್ತಿಗಳು ಆಶ್ರಮಕ್ಕೆ ಭೇಟಿ ನೀಡುತ್ತಿದ್ದರು ಇವರ ಒತ್ತಡದ ಕಾರಣ ತುಂಬಾ ಕಷ್ಟದ್ದಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.


ಇದನ್ನೂ ಓದಿ: ಖಾಸಗಿ ಆಸ್ಪತ್ರೆಯಲ್ಲಿ ಹಣ ನೀಡಿ ಲಸಿಕೆ ಹಾಕಿಸಿಕೊಳ್ಳಿ ಎಂದು ತೇಜಸ್ವಿ ಸೂರ್ಯ ಪ್ರಚಾರ: ತರಾಟೆ ತೆಗೆದುಕೊಂಡ ಜನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...