Homeಮುಖಪುಟನಾಲ್ವರು ಮಹಿಳೆಯರ ಮೇಲೆ ಅತ್ಯಾಚಾರ ಆರೋಪ: ಸ್ವಯಂಘೋಷಿತ ದೇವಮಾನವನ ಬಂಧನ

ನಾಲ್ವರು ಮಹಿಳೆಯರ ಮೇಲೆ ಅತ್ಯಾಚಾರ ಆರೋಪ: ಸ್ವಯಂಘೋಷಿತ ದೇವಮಾನವನ ಬಂಧನ

- Advertisement -
- Advertisement -

ಒಂದೇ ಕುಟುಂಬದ ಮೂವರು ಮಹಿಳೆಯರು ಮತ್ತು ಮತ್ತೊಬ್ಬ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ್ದ ಆರೋಪದಲ್ಲಿ ಸ್ವಯಂಘೋಷಿತ ದೇವಮಾನವ ಯೋಗೇಂದ್ರ ಮೆಹ್ತಾ ಎಂಬಾತನನ್ನು ಜೈಪುರ ಪೊಲಿಸರು ಬಂಧಿಸಿದ್ದಾರೆ.

ಆರೋಪಿ ಯೋಗೇಂದ್ರ ಮೆಹ್ತಾ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ ಸುಮಾರು ಮೂರು ವಾರಗಳ ನಂತರ ಪೊಲೀಸರು ಆರೋಪಿಯನ್ನು ಮಂಳವಾರ ಬಂಧಿಸಿದ್ದಾರೆ. ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಈ ಸ್ವಯಂಘೋಷಿತ ದೇವಮಾನವ ಮೆಹ್ತಾ (56) ವಿಸ್ತಾರವಾದ ಆಶ್ರಮವನ್ನು ಹೊಂದಿದ್ದಾರೆ.

2005 ಮತ್ತು 2017 ರ ಸಮಯದಲ್ಲಿ ತನ್ನ ಆಶ್ರಮದಲ್ಲಿ ತಮ್ಮ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ಮುಖ್ಯ ದೂರುದಾರರು ಮತ್ತು ಆಕೆಯ ಇಬ್ಬರು ಅತ್ತಿಗೆ ಮೇ 4 ರಂದು ಎಫ್‌ಐಆರ್ ದಾಖಲಿಸಿದ್ದಾರೆ. ಎಫ್‌ಐಆರ್ ದಾಖಲಾದ ಒಂದು ದಿನದ ನಂತರ ಮತ್ತೊಬ್ಬ ಮಹಿಳೆ ಕೂಡ ಮುಂದೆ ಬಂದು ಅತ್ಯಾಚಾರದ ದೂರು ನೀಡಿದ್ದಾರೆ.

ಇದನ್ನೂ ಓದಿ:ಕೊರೊನಾ ವೈಫಲ್ಯ: ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಹಲವು ನಾಯಕರ ತಲೆದಂಡ?

“ನನ್ನ ಪತಿ 1998 ರಿಂದ ಆಶ್ರಮಕ್ಕೆ ನಿಯಮಿತವಾಗಿ ಭೇಟಿ ನೀಡುತ್ತಿದ್ದರು. ಯೋಗೇಂದ್ರ ಮೆಹ್ತಾ ಒಂದು ದಿನ ನನ್ನ ಗಂಡನನ್ನು ಅವರ ಇಡೀ ಕುಟುಂಬದೊಂದಿಗೆ ಬರಲು ಹೇಳಿದ್ದರು. ಹೀಗಾಗಿ 2005 ರಲ್ಲಿ ನಾನು ಆಶ್ರಮಕ್ಕೆ ಮೊದಲ ಬಾರಿ ಹೋಗಿದ್ದೆ. ನಂತರ ನಾನು ನಿಯಮಿತವಾಗಿ ಆಶ್ರಮಕ್ಕೆ ಭೇಟಿ ನೀಡಲು ಪ್ರಾರಂಭಿಸಿದೆ. ಆರಂಭದಲ್ಲಿ, ಎಲ್ಲವೂ ಸರಿಯಾಗಿತ್ತು. ನಾನು ಪ್ರತಿ ಆರು ತಿಂಗಳಿಗೊಮ್ಮೆ ಮೂರು-ನಾಲ್ಕು ದಿನಗಳ ಕಾಲ ಆಶ್ರಮದಲ್ಲಿಯೇ ಇರುತ್ತಿದ್ದೆ. 2005 ರಲ್ಲಿ ಅಲ್ಲಿ ತಂಗಿದ್ದ ಸಮಯದಲ್ಲಿ, ನನ್ನನ್ನು ಆರೋಪಿಗಳ ಸಹಾಯಕರು ಅವರ ಕೋಣೆಗೆ ಕರಕೊಂಡು ಹೋದರರು. ನನಗೆ ಸ್ವಲ್ಪ ಕುಡಿಯಲು ಪಾನೀಯ ನೀಡಿ, ಅತ್ಯಾಚಾರ ಮಾಡಲಾಯಿತು. 2017 ರವರೆಗೆ ಆಶ್ರಮದಲ್ಲಿ ಮೆಹ್ತಾ ಪದೇ ಪದೇ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ”ಎಂದು ಮುಖ್ಯ ದೂರುದಾರರು ತಮ್ಮ ದೂರಿನಲ್ಲಿ ತಿಳಿಸಿದ್ದಾರ. ಆಕೆಯ ಅತ್ತಿಗೆಯರು ಕೂಡ ಇದೇ ರೀತಿ ಶೋಷಣೆಗೆ ಒಳಗಾಗಿದ್ದಾರೆ ಎಂದು ತಿಳಿಸಿದ್ದಾರೆ.

“ನಾನು ಆಕ್ಷೇಪಿಸಿದ ಪ್ರತಿ ಬಾರಿಯೂ, ಇದು ಒಂದು ಆಶೀರ್ವಾದ ಎಂದು ಮೆಹ್ತಾ ಹೇಳಿದ್ದರು. ಅವರು ಮಾಡುತ್ತಿದ್ದ ಲೈಂಗಿಕ ದುರುಪಯೋಗದ ಬಗ್ಗೆ ನಾನು ಯಾರಿಗಾದರೂ ಹೇಳಿದರೆ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದರು” ಎಂದು ದೂರಿನಲ್ಲಿ ತಿಳಿಸಿದ್ದಾರೆ. ಮತ್ತೊಬ್ಬ ಮಹಿಳೆ ಕೂಡ ಇದೇ ಅವಧಿಯಲ್ಲಿ ತಾನು ಅತ್ಯಾಚಾರಕ್ಕೆ ಒಳಗಾಗಿದ್ದೇನೆ ಎಂದಿದ್ದಾರೆ.

ಸ್ವಯಂಘೋಷಿತ ದೇವಮಾನವ ಎಂದು ಹೇಳಿಕೊಂಡಿದ್ದ ಯೋಗೇಂದ್ರ ಮೆಹ್ತಾ ಬಮಧನ ಅಷ್ಟು ಸುಲಭದ್ದಾಗಿರಲಿಲ್ಲ. ರಾಜಕಾರಣಿಗಳು ಮತ್ತು ಪ್ರಭಾವಿ ವ್ಯಕ್ತಿಗಳು ಆಶ್ರಮಕ್ಕೆ ಭೇಟಿ ನೀಡುತ್ತಿದ್ದರು ಇವರ ಒತ್ತಡದ ಕಾರಣ ತುಂಬಾ ಕಷ್ಟದ್ದಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.


ಇದನ್ನೂ ಓದಿ: ಖಾಸಗಿ ಆಸ್ಪತ್ರೆಯಲ್ಲಿ ಹಣ ನೀಡಿ ಲಸಿಕೆ ಹಾಕಿಸಿಕೊಳ್ಳಿ ಎಂದು ತೇಜಸ್ವಿ ಸೂರ್ಯ ಪ್ರಚಾರ: ತರಾಟೆ ತೆಗೆದುಕೊಂಡ ಜನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....