Homeಮುಖಪುಟಹತ್ರಾಸ್ ಕಾಲ್ತುಳಿತ ಪ್ರಕರಣ| ಸ್ವಯಂಘೋಷಿತ ದೇವಮಾನವ 'ಭೋಲೆ ಬಾಬಾ'ಗೆ ಕ್ಲೀನ್ ಚಿಟ್‌ ಕೊಟ್ಟ ಎಸ್‌ಐಟಿ: ವರದಿ

ಹತ್ರಾಸ್ ಕಾಲ್ತುಳಿತ ಪ್ರಕರಣ| ಸ್ವಯಂಘೋಷಿತ ದೇವಮಾನವ ‘ಭೋಲೆ ಬಾಬಾ’ಗೆ ಕ್ಲೀನ್ ಚಿಟ್‌ ಕೊಟ್ಟ ಎಸ್‌ಐಟಿ: ವರದಿ

- Advertisement -
- Advertisement -

ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಸಿಕಂದ್ರ ರಾವು ಪ್ರದೇಶದಲ್ಲಿ ಜುಲೈ 2ರಂದು ನಡೆದ ಕಾಲ್ತುಳಿತ ಅವಘಡಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆರು ಮಂದಿ ಅಧಿಕಾರಿಗಳನ್ನು ಅಮಾನತುಗೊಳಿಸಿದೆ. ಆದರೆ, ಸ್ವಯಂಘೋಷಿತ ದೇವಮಾನವನ ಮೇಲೆ ಯಾವುದೇ ಆರೋಪ ಹೊರಿಸಿಲ್ಲ ಎಂದು ವರದಿಯಾಗಿದೆ.

ಧಾರ್ಮಿಕ ಕಾರ್ಯಕ್ರಮದಲ್ಲಿ ಕಾಲ್ತುಳಿತ ಸಂಭವಿಸಿ 121 ಜನರು ಸಾವನ್ನಪ್ಪಿದ್ದರು. ಈ ಕುರಿತು ತನಿಖೆ ನಡೆಸಲು ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ಎಸ್‌ಐಟಿ ರಚಿಸಿತ್ತು. ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಒಪ್ಪಿಸಿರುವ ಎಸ್‌ಐಟಿ,
‘ಜನಸಂದಣಿಯೇ ಅವಘಡಕ್ಕೆ ಮುಖ್ಯ ಕಾರಣ’ ಎಂದಿದೆ. ಅಲ್ಲದೆ, ಅಧಿಕಾರಿಗಳು, ಪೊಲೀಸರು ಮತ್ತು ಕಾರ್ಯಕ್ರಮದ ಸಂಘಟಕರ ವಿರುದ್ದ ನಿರ್ಲಕ್ಷ್ಯದ ಆರೋಪ ಹೊರಿಸಿದೆ.

ವರದಿಗಳ ಪ್ರಕಾರ, ಕಾರ್ಯಕ್ರಮದ ಮುಖ್ಯ ಆಯೋಜಕ ಅಥವಾ ಕೇಂದ್ರ ಬಿಂದು ಸ್ವಯಂಘೋಷಿತ ದೇವಮಾನವ ಸೂರಜ್‌ಪಾಲ್ ಸಿಂಗ್ ಅಲಿಯಾಸ್ ‘ಭೋಲೆ ಬಾಬಾ’ ಗೆ ಎಸ್‌ಐಟಿ ಕ್ಲೀನ್ ಚಿಟ್‌ ನೀಡಿದೆ.

ಹೆಚ್ಚಾಗಿ ಸ್ವಯಂ ಸೇವಕರನ್ನು ಬಂಧಿಸಲಾಗಿದೆ. “ಎಸ್‌ಐಟಿ ಸಂದರ್ಶಿಸಿರುವ ಹಲವಾರು ಜನರು ಭೋಲೆ ಬಾಬಾ ಅವರನ್ನು ದೂಷಿಸಿದ್ದಾರೆ. ಆದರೆ, ಅವರನ್ನು ಎಫ್‌ಐಆರ್ ಅಥವಾ ಎಸ್‌ಐಟಿ ವರದಿಯಲ್ಲಿ ಆರೋಪಿ ಎಂದು ಹೆಸರಿಸಲಾಗಿಲ್ಲ” ಎಂದು ಅಮಾನತುಗೊಂಡ ಅಧಿಕಾರಿಯೊಬ್ಬರು ಹೇಳಿರುವುದಾಗಿ ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

ಮತ್ತೊಬ್ಬ ಹಿರಿಯ ಅಧಿಕಾರಿ, “ದಲಿತ ಸಮುದಾಯದಲ್ಲಿ ಭೋಲೆ ಬಾಬಾ ಭಾರೀ ಪ್ರಭಾವ ಹೊಂದಿದ್ದಾರೆ.. ಅವರ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಆತಂಕವಿರಬಹುದು. ಅಲ್ಲದೆ, ಬಾಬಾ ವಿರುದ್ಧದ ಕ್ರಮವು ಅಶಾಂತಿಯನ್ನು ಉಂಟು ಮಾಡಬಹುದು. ಹಾಗಾಗಿ, ಅವರ ವಿರುದ್ದ ಕ್ರಮ ಕೈಗೊಂಡಿಲ್ಲ ಎಂದು ತೋರುತ್ತದೆ” ಎಂಬುದಾಗಿ ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

“ಬಾಬಾ ತನ್ನ ಪಾದದಡಿಯ ದೂಳನ್ನು ಸಂಗ್ರಹಿಸಲು ಜನರಿಗೆ ಕರೆ ನೀಡಿದರು. ಈ ವೇಳೆ ಜನರು ಒಮ್ಮೆಲೆ ಧಾವಿಸಿದ್ದು ಇದರಿಂದ ಕಾಲ್ತುಳಿತ ಸಂಭವಿಸಿದೆ. ಅವಘಡ ನಡೆದಾಗ ಬಾಬಾ ಮೈಕ್‌ ಮೂಲಕ ತನ್ನ ಭಕ್ತರನ್ನು ಶಾಂತರಾಗಿಸಬಹುದಿತ್ತು. ಆದರೆ, ಅವರು ಕಾರು ಹತ್ತಿ ಸ್ಥಳದಿಂದ ಹೊರಟು ಹೋದರು” ಎಂದು ಮೂವರು ಸದಸ್ಯರ ನ್ಯಾಯಾಂಗ ಸಮಿತಿಯು ಸಂದರ್ಶಿಸಿದ ಕೆಲವು ಪ್ರತ್ಯಕ್ಷದರ್ಶಿಗಳು ಹೇಳಿರುವುದಾಗಿ ವರದಿಯಾಗಿದೆ.

ಭೋಲೆ ಬಾಬಾ ಪರ ವಕೀಲ ಎ ಪಿ ಸಿಂಗ್, ಬಾಬಾ ಪೊಲೀಸರಿಂದ ತಪ್ಪಿಸಿಕೊಳ್ಳುತ್ತಿದ್ದಾರೆ ಎಂಬ ಆರೋಪಗಳನ್ನು ನಿರಾಕರಿಸಿದ್ದು, “ಅವರು ತಲೆಮರೆಸಿಕೊಂಡಿಲ್ಲ. ಕಾನೂನಿನ ಮೇಲೆ ನಂಬಿಕೆ ಮತ್ತು ಗೌರವ ಅವರಿಗಿದೆ. ಪೊಲೀಸರ ನಿರ್ದೇಶನಗಳನ್ನು ಅನುಸರಿಸುತ್ತಿದ್ದಾರೆ. ಧಾರ್ಮಿಕ ಕಾರ್ಯಕ್ರಮದ ಜನಸಂದಣಿಯಲ್ಲಿದ್ದ ಸಮಾಜ ವಿರೋಧಿಗಳು ಕಾಲ್ತುಳಿತಕ್ಕೆ ಕಾರಣರಾದರು. ಮೃತರ ಶವ ಪರೀಕ್ಷೆ ವರದಿಗಳು ಉಸಿರುಗಟ್ಟಿರುವುದನ್ನು ತೋರಿಸಿದೆ. 10-12 ದುಷ್ಕರ್ಮಿಗಳ ಗುಂಪು ಜನಸಂದಣಿಯನ್ನು ವಿಷಪೂರಿತಗೊಳಿಸಿದೆ. ಜನರ ಸಾವಿಗೆ ಇದೇ ಕಾರಣ ಎಂದು ಪ್ರಾಥಮಿಕವಾಗಿ ತಿಳಿದು ಬಂದಿದೆ” ಎಂದಿದ್ದಾರೆ.

ಇದನ್ನೂ ಓದಿ : ಹತ್ರಾಸ್ ಕಾಲ್ತುಳಿತ ಪ್ರಕರಣ: ‘ಜನಸಂದಣಿಯೇ ಅವಘಡಕ್ಕೆ ಪ್ರಮುಖ ಕಾರಣ..’ ಎಂದು ಎಸ್‌ಐಟಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...