Homeಮುಖಪುಟಹತ್ರಾಸ್ ಕಾಲ್ತುಳಿತ ಪ್ರಕರಣ| ಸ್ವಯಂಘೋಷಿತ ದೇವಮಾನವ 'ಭೋಲೆ ಬಾಬಾ'ಗೆ ಕ್ಲೀನ್ ಚಿಟ್‌ ಕೊಟ್ಟ ಎಸ್‌ಐಟಿ: ವರದಿ

ಹತ್ರಾಸ್ ಕಾಲ್ತುಳಿತ ಪ್ರಕರಣ| ಸ್ವಯಂಘೋಷಿತ ದೇವಮಾನವ ‘ಭೋಲೆ ಬಾಬಾ’ಗೆ ಕ್ಲೀನ್ ಚಿಟ್‌ ಕೊಟ್ಟ ಎಸ್‌ಐಟಿ: ವರದಿ

- Advertisement -
- Advertisement -

ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಸಿಕಂದ್ರ ರಾವು ಪ್ರದೇಶದಲ್ಲಿ ಜುಲೈ 2ರಂದು ನಡೆದ ಕಾಲ್ತುಳಿತ ಅವಘಡಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆರು ಮಂದಿ ಅಧಿಕಾರಿಗಳನ್ನು ಅಮಾನತುಗೊಳಿಸಿದೆ. ಆದರೆ, ಸ್ವಯಂಘೋಷಿತ ದೇವಮಾನವನ ಮೇಲೆ ಯಾವುದೇ ಆರೋಪ ಹೊರಿಸಿಲ್ಲ ಎಂದು ವರದಿಯಾಗಿದೆ.

ಧಾರ್ಮಿಕ ಕಾರ್ಯಕ್ರಮದಲ್ಲಿ ಕಾಲ್ತುಳಿತ ಸಂಭವಿಸಿ 121 ಜನರು ಸಾವನ್ನಪ್ಪಿದ್ದರು. ಈ ಕುರಿತು ತನಿಖೆ ನಡೆಸಲು ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ಎಸ್‌ಐಟಿ ರಚಿಸಿತ್ತು. ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಒಪ್ಪಿಸಿರುವ ಎಸ್‌ಐಟಿ,
‘ಜನಸಂದಣಿಯೇ ಅವಘಡಕ್ಕೆ ಮುಖ್ಯ ಕಾರಣ’ ಎಂದಿದೆ. ಅಲ್ಲದೆ, ಅಧಿಕಾರಿಗಳು, ಪೊಲೀಸರು ಮತ್ತು ಕಾರ್ಯಕ್ರಮದ ಸಂಘಟಕರ ವಿರುದ್ದ ನಿರ್ಲಕ್ಷ್ಯದ ಆರೋಪ ಹೊರಿಸಿದೆ.

ವರದಿಗಳ ಪ್ರಕಾರ, ಕಾರ್ಯಕ್ರಮದ ಮುಖ್ಯ ಆಯೋಜಕ ಅಥವಾ ಕೇಂದ್ರ ಬಿಂದು ಸ್ವಯಂಘೋಷಿತ ದೇವಮಾನವ ಸೂರಜ್‌ಪಾಲ್ ಸಿಂಗ್ ಅಲಿಯಾಸ್ ‘ಭೋಲೆ ಬಾಬಾ’ ಗೆ ಎಸ್‌ಐಟಿ ಕ್ಲೀನ್ ಚಿಟ್‌ ನೀಡಿದೆ.

ಹೆಚ್ಚಾಗಿ ಸ್ವಯಂ ಸೇವಕರನ್ನು ಬಂಧಿಸಲಾಗಿದೆ. “ಎಸ್‌ಐಟಿ ಸಂದರ್ಶಿಸಿರುವ ಹಲವಾರು ಜನರು ಭೋಲೆ ಬಾಬಾ ಅವರನ್ನು ದೂಷಿಸಿದ್ದಾರೆ. ಆದರೆ, ಅವರನ್ನು ಎಫ್‌ಐಆರ್ ಅಥವಾ ಎಸ್‌ಐಟಿ ವರದಿಯಲ್ಲಿ ಆರೋಪಿ ಎಂದು ಹೆಸರಿಸಲಾಗಿಲ್ಲ” ಎಂದು ಅಮಾನತುಗೊಂಡ ಅಧಿಕಾರಿಯೊಬ್ಬರು ಹೇಳಿರುವುದಾಗಿ ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

ಮತ್ತೊಬ್ಬ ಹಿರಿಯ ಅಧಿಕಾರಿ, “ದಲಿತ ಸಮುದಾಯದಲ್ಲಿ ಭೋಲೆ ಬಾಬಾ ಭಾರೀ ಪ್ರಭಾವ ಹೊಂದಿದ್ದಾರೆ.. ಅವರ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಆತಂಕವಿರಬಹುದು. ಅಲ್ಲದೆ, ಬಾಬಾ ವಿರುದ್ಧದ ಕ್ರಮವು ಅಶಾಂತಿಯನ್ನು ಉಂಟು ಮಾಡಬಹುದು. ಹಾಗಾಗಿ, ಅವರ ವಿರುದ್ದ ಕ್ರಮ ಕೈಗೊಂಡಿಲ್ಲ ಎಂದು ತೋರುತ್ತದೆ” ಎಂಬುದಾಗಿ ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

“ಬಾಬಾ ತನ್ನ ಪಾದದಡಿಯ ದೂಳನ್ನು ಸಂಗ್ರಹಿಸಲು ಜನರಿಗೆ ಕರೆ ನೀಡಿದರು. ಈ ವೇಳೆ ಜನರು ಒಮ್ಮೆಲೆ ಧಾವಿಸಿದ್ದು ಇದರಿಂದ ಕಾಲ್ತುಳಿತ ಸಂಭವಿಸಿದೆ. ಅವಘಡ ನಡೆದಾಗ ಬಾಬಾ ಮೈಕ್‌ ಮೂಲಕ ತನ್ನ ಭಕ್ತರನ್ನು ಶಾಂತರಾಗಿಸಬಹುದಿತ್ತು. ಆದರೆ, ಅವರು ಕಾರು ಹತ್ತಿ ಸ್ಥಳದಿಂದ ಹೊರಟು ಹೋದರು” ಎಂದು ಮೂವರು ಸದಸ್ಯರ ನ್ಯಾಯಾಂಗ ಸಮಿತಿಯು ಸಂದರ್ಶಿಸಿದ ಕೆಲವು ಪ್ರತ್ಯಕ್ಷದರ್ಶಿಗಳು ಹೇಳಿರುವುದಾಗಿ ವರದಿಯಾಗಿದೆ.

ಭೋಲೆ ಬಾಬಾ ಪರ ವಕೀಲ ಎ ಪಿ ಸಿಂಗ್, ಬಾಬಾ ಪೊಲೀಸರಿಂದ ತಪ್ಪಿಸಿಕೊಳ್ಳುತ್ತಿದ್ದಾರೆ ಎಂಬ ಆರೋಪಗಳನ್ನು ನಿರಾಕರಿಸಿದ್ದು, “ಅವರು ತಲೆಮರೆಸಿಕೊಂಡಿಲ್ಲ. ಕಾನೂನಿನ ಮೇಲೆ ನಂಬಿಕೆ ಮತ್ತು ಗೌರವ ಅವರಿಗಿದೆ. ಪೊಲೀಸರ ನಿರ್ದೇಶನಗಳನ್ನು ಅನುಸರಿಸುತ್ತಿದ್ದಾರೆ. ಧಾರ್ಮಿಕ ಕಾರ್ಯಕ್ರಮದ ಜನಸಂದಣಿಯಲ್ಲಿದ್ದ ಸಮಾಜ ವಿರೋಧಿಗಳು ಕಾಲ್ತುಳಿತಕ್ಕೆ ಕಾರಣರಾದರು. ಮೃತರ ಶವ ಪರೀಕ್ಷೆ ವರದಿಗಳು ಉಸಿರುಗಟ್ಟಿರುವುದನ್ನು ತೋರಿಸಿದೆ. 10-12 ದುಷ್ಕರ್ಮಿಗಳ ಗುಂಪು ಜನಸಂದಣಿಯನ್ನು ವಿಷಪೂರಿತಗೊಳಿಸಿದೆ. ಜನರ ಸಾವಿಗೆ ಇದೇ ಕಾರಣ ಎಂದು ಪ್ರಾಥಮಿಕವಾಗಿ ತಿಳಿದು ಬಂದಿದೆ” ಎಂದಿದ್ದಾರೆ.

ಇದನ್ನೂ ಓದಿ : ಹತ್ರಾಸ್ ಕಾಲ್ತುಳಿತ ಪ್ರಕರಣ: ‘ಜನಸಂದಣಿಯೇ ಅವಘಡಕ್ಕೆ ಪ್ರಮುಖ ಕಾರಣ..’ ಎಂದು ಎಸ್‌ಐಟಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...