Homeಮುಖಪುಟಹತ್ರಾಸ್ ಕಾಲ್ತುಳಿತ ಪ್ರಕರಣ| ಸ್ವಯಂಘೋಷಿತ ದೇವಮಾನವ 'ಭೋಲೆ ಬಾಬಾ'ಗೆ ಕ್ಲೀನ್ ಚಿಟ್‌ ಕೊಟ್ಟ ಎಸ್‌ಐಟಿ: ವರದಿ

ಹತ್ರಾಸ್ ಕಾಲ್ತುಳಿತ ಪ್ರಕರಣ| ಸ್ವಯಂಘೋಷಿತ ದೇವಮಾನವ ‘ಭೋಲೆ ಬಾಬಾ’ಗೆ ಕ್ಲೀನ್ ಚಿಟ್‌ ಕೊಟ್ಟ ಎಸ್‌ಐಟಿ: ವರದಿ

- Advertisement -
- Advertisement -

ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಸಿಕಂದ್ರ ರಾವು ಪ್ರದೇಶದಲ್ಲಿ ಜುಲೈ 2ರಂದು ನಡೆದ ಕಾಲ್ತುಳಿತ ಅವಘಡಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆರು ಮಂದಿ ಅಧಿಕಾರಿಗಳನ್ನು ಅಮಾನತುಗೊಳಿಸಿದೆ. ಆದರೆ, ಸ್ವಯಂಘೋಷಿತ ದೇವಮಾನವನ ಮೇಲೆ ಯಾವುದೇ ಆರೋಪ ಹೊರಿಸಿಲ್ಲ ಎಂದು ವರದಿಯಾಗಿದೆ.

ಧಾರ್ಮಿಕ ಕಾರ್ಯಕ್ರಮದಲ್ಲಿ ಕಾಲ್ತುಳಿತ ಸಂಭವಿಸಿ 121 ಜನರು ಸಾವನ್ನಪ್ಪಿದ್ದರು. ಈ ಕುರಿತು ತನಿಖೆ ನಡೆಸಲು ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ಎಸ್‌ಐಟಿ ರಚಿಸಿತ್ತು. ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಒಪ್ಪಿಸಿರುವ ಎಸ್‌ಐಟಿ,
‘ಜನಸಂದಣಿಯೇ ಅವಘಡಕ್ಕೆ ಮುಖ್ಯ ಕಾರಣ’ ಎಂದಿದೆ. ಅಲ್ಲದೆ, ಅಧಿಕಾರಿಗಳು, ಪೊಲೀಸರು ಮತ್ತು ಕಾರ್ಯಕ್ರಮದ ಸಂಘಟಕರ ವಿರುದ್ದ ನಿರ್ಲಕ್ಷ್ಯದ ಆರೋಪ ಹೊರಿಸಿದೆ.

ವರದಿಗಳ ಪ್ರಕಾರ, ಕಾರ್ಯಕ್ರಮದ ಮುಖ್ಯ ಆಯೋಜಕ ಅಥವಾ ಕೇಂದ್ರ ಬಿಂದು ಸ್ವಯಂಘೋಷಿತ ದೇವಮಾನವ ಸೂರಜ್‌ಪಾಲ್ ಸಿಂಗ್ ಅಲಿಯಾಸ್ ‘ಭೋಲೆ ಬಾಬಾ’ ಗೆ ಎಸ್‌ಐಟಿ ಕ್ಲೀನ್ ಚಿಟ್‌ ನೀಡಿದೆ.

ಹೆಚ್ಚಾಗಿ ಸ್ವಯಂ ಸೇವಕರನ್ನು ಬಂಧಿಸಲಾಗಿದೆ. “ಎಸ್‌ಐಟಿ ಸಂದರ್ಶಿಸಿರುವ ಹಲವಾರು ಜನರು ಭೋಲೆ ಬಾಬಾ ಅವರನ್ನು ದೂಷಿಸಿದ್ದಾರೆ. ಆದರೆ, ಅವರನ್ನು ಎಫ್‌ಐಆರ್ ಅಥವಾ ಎಸ್‌ಐಟಿ ವರದಿಯಲ್ಲಿ ಆರೋಪಿ ಎಂದು ಹೆಸರಿಸಲಾಗಿಲ್ಲ” ಎಂದು ಅಮಾನತುಗೊಂಡ ಅಧಿಕಾರಿಯೊಬ್ಬರು ಹೇಳಿರುವುದಾಗಿ ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

ಮತ್ತೊಬ್ಬ ಹಿರಿಯ ಅಧಿಕಾರಿ, “ದಲಿತ ಸಮುದಾಯದಲ್ಲಿ ಭೋಲೆ ಬಾಬಾ ಭಾರೀ ಪ್ರಭಾವ ಹೊಂದಿದ್ದಾರೆ.. ಅವರ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಆತಂಕವಿರಬಹುದು. ಅಲ್ಲದೆ, ಬಾಬಾ ವಿರುದ್ಧದ ಕ್ರಮವು ಅಶಾಂತಿಯನ್ನು ಉಂಟು ಮಾಡಬಹುದು. ಹಾಗಾಗಿ, ಅವರ ವಿರುದ್ದ ಕ್ರಮ ಕೈಗೊಂಡಿಲ್ಲ ಎಂದು ತೋರುತ್ತದೆ” ಎಂಬುದಾಗಿ ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

“ಬಾಬಾ ತನ್ನ ಪಾದದಡಿಯ ದೂಳನ್ನು ಸಂಗ್ರಹಿಸಲು ಜನರಿಗೆ ಕರೆ ನೀಡಿದರು. ಈ ವೇಳೆ ಜನರು ಒಮ್ಮೆಲೆ ಧಾವಿಸಿದ್ದು ಇದರಿಂದ ಕಾಲ್ತುಳಿತ ಸಂಭವಿಸಿದೆ. ಅವಘಡ ನಡೆದಾಗ ಬಾಬಾ ಮೈಕ್‌ ಮೂಲಕ ತನ್ನ ಭಕ್ತರನ್ನು ಶಾಂತರಾಗಿಸಬಹುದಿತ್ತು. ಆದರೆ, ಅವರು ಕಾರು ಹತ್ತಿ ಸ್ಥಳದಿಂದ ಹೊರಟು ಹೋದರು” ಎಂದು ಮೂವರು ಸದಸ್ಯರ ನ್ಯಾಯಾಂಗ ಸಮಿತಿಯು ಸಂದರ್ಶಿಸಿದ ಕೆಲವು ಪ್ರತ್ಯಕ್ಷದರ್ಶಿಗಳು ಹೇಳಿರುವುದಾಗಿ ವರದಿಯಾಗಿದೆ.

ಭೋಲೆ ಬಾಬಾ ಪರ ವಕೀಲ ಎ ಪಿ ಸಿಂಗ್, ಬಾಬಾ ಪೊಲೀಸರಿಂದ ತಪ್ಪಿಸಿಕೊಳ್ಳುತ್ತಿದ್ದಾರೆ ಎಂಬ ಆರೋಪಗಳನ್ನು ನಿರಾಕರಿಸಿದ್ದು, “ಅವರು ತಲೆಮರೆಸಿಕೊಂಡಿಲ್ಲ. ಕಾನೂನಿನ ಮೇಲೆ ನಂಬಿಕೆ ಮತ್ತು ಗೌರವ ಅವರಿಗಿದೆ. ಪೊಲೀಸರ ನಿರ್ದೇಶನಗಳನ್ನು ಅನುಸರಿಸುತ್ತಿದ್ದಾರೆ. ಧಾರ್ಮಿಕ ಕಾರ್ಯಕ್ರಮದ ಜನಸಂದಣಿಯಲ್ಲಿದ್ದ ಸಮಾಜ ವಿರೋಧಿಗಳು ಕಾಲ್ತುಳಿತಕ್ಕೆ ಕಾರಣರಾದರು. ಮೃತರ ಶವ ಪರೀಕ್ಷೆ ವರದಿಗಳು ಉಸಿರುಗಟ್ಟಿರುವುದನ್ನು ತೋರಿಸಿದೆ. 10-12 ದುಷ್ಕರ್ಮಿಗಳ ಗುಂಪು ಜನಸಂದಣಿಯನ್ನು ವಿಷಪೂರಿತಗೊಳಿಸಿದೆ. ಜನರ ಸಾವಿಗೆ ಇದೇ ಕಾರಣ ಎಂದು ಪ್ರಾಥಮಿಕವಾಗಿ ತಿಳಿದು ಬಂದಿದೆ” ಎಂದಿದ್ದಾರೆ.

ಇದನ್ನೂ ಓದಿ : ಹತ್ರಾಸ್ ಕಾಲ್ತುಳಿತ ಪ್ರಕರಣ: ‘ಜನಸಂದಣಿಯೇ ಅವಘಡಕ್ಕೆ ಪ್ರಮುಖ ಕಾರಣ..’ ಎಂದು ಎಸ್‌ಐಟಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...