Homeಕರ್ನಾಟಕ‘ದೇವರೆ ಶಿಕ್ಷೆ ಕೊಡುವ ಕಾಲ‌ ಬರುತ್ತದೆ’: ಯಡಿಯೂರಪ್ಪ ವಿರುದ್ದ ರೇವಣ್ಣ ಕಿಡಿ

‘ದೇವರೆ ಶಿಕ್ಷೆ ಕೊಡುವ ಕಾಲ‌ ಬರುತ್ತದೆ’: ಯಡಿಯೂರಪ್ಪ ವಿರುದ್ದ ರೇವಣ್ಣ ಕಿಡಿ

- Advertisement -
- Advertisement -

“ಜಿಲ್ಲೆಯ ಅಭಿವೃದ್ಧಿ ಸಂಪೂರ್ಣವಾಗಿದ್ದ ನಿಂತಿದ್ದು, ದ್ವೇಷದ ರಾಜಕಾರಣ ‌ಎಷ್ಟು ದಿನ ಮಾಡುತ್ತೀರಿ ಮಾಡಿ. ನಾವೇನು ಹೆದರಿ ಓಡುವುದಿಲ್ಲ. ಯಡಿಯೂರಪ್ಪ ಶಾಶ್ವತವಾಗಿ ಇರ್ತಾನಾ? ದೇವರೇ ಶಿಕ್ಷೆ ಕೊಡುವ ಕಾಲ‌ ಬರುತ್ತದೆ” ಎಂದು ಹಾಸನ ಜಿಲ್ಲೆಯ ಅಭಿವೃದ್ದಿ ಕುರಿತು ಮಾಜಿ ಸಚಿವ, ಜೆಡಿಎಸ್‌ ಮುಖಂಡ ಎಚ್‌‌‌ಡಿ ರೇವಣ್ಣ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ದ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.

“ಯಡಿಯೂರಪ್ಪ ಒಬ್ಬ ಡಿನೋಟಿಫಿಕೇಷನ್ ಮುಖ್ಯಮಂತ್ರಿ. ಹಾಸನದಲ್ಲಿ ಭೂಸ್ವಾಧೀನವಾಗಿದ್ದ ಜಮೀನನ್ನು ಭೂ ಮಾಲೀಕರ ಜೊತೆ ಶಾಮೀಲಾಗಿ ವಾಪಾಸ್ ಕೊಟ್ಟರು. ನನ್ನ 21 ವರ್ಷದ ರಾಜಕಾರಣದಲ್ಲಿ ಸುಳ್ಳು ಹೇಳುವ, ದ್ವೇಷದ ರಾಜಕಾರಣ ಮಾಡುವ ನಂ.1 ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ” ಎಂದು ರೇವಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೊರೊನಾ 3ನೇ ಅಲೆಯ ಆತಂಕ ಹೆಚ್ಚಿಸಿದ ಯುರೋ ಕಪ್ ಫುಟ್ಬಾಲ್ ಟೂರ್ನಿ

“ಮುಂದಿನ ಚುನಾವಣೆಯಲ್ಲಿ ಬಿಜೆಪಿ 130, ಕಾಂಗ್ರೆಸ್ 150 ಗೆಲ್ಲುತ್ತೆ ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ. ಒಟ್ಟು 280 ಸೀಟ್ ಆಗುತ್ತೆ, ಹಾಗಾದರೆ ಬಾಕಿಯವರು ಯಾರು ಇಲ್ಲವೇ ಇಲ್ವಾ? 2023ರಲ್ಲಿ ಬಿಜೆಪಿ ಎಷ್ಟು ಸ್ಥಾನ ಪಡೆಯುತ್ತೆ ನಾನು ನೋಡುತ್ತೇನೆ” ಎಂದು ಸವಾಲೆಸೆದಿದ್ದಾರೆ.

“ಹಾಸನ ವಿಮಾನ ನಿಲ್ದಾಣ ಕಾಮಗಾರಿಯನ್ನು ಮೂಲಭೂತ ಅಭಿವೃದ್ಧಿ ಇಲಾಖೆಯಿಂದ ಮಾಡಲು ಇಂಜಿನಿಯರ್‌ಗಳಿಲ್ಲ. ಪಿಡಬ್ಲ್ಯೂಡಿ ಇಲಾಖೆಯಿಂದ ಮಾಡುವುದಾದರೆ ಮಾಡಿ. ಇಲ್ಲವಾದರೆ ದೇವರು ಶಕ್ತಿ ಕೊಟ್ಟಾಗ ಮಾಡುತ್ತೇವೆ. ವಿಮಾನ ನಿಲ್ದಾಣಕ್ಕೆ 761 ಎಕರೆ ಭೂಮಿ ಅವಶ್ಯಕವಿದೆ. 536 ಎಕರೆ ಭೂ ಸ್ವಾಧೀನ ಮಾಡಲಾಗಿದೆ” ಎಂದು ಹೇಳಿದ್ದಾರೆ.

“ಶಿವಮೊಗ್ಗ, ಬಿಜಾಪುರ, ಕಲಬುರಗಿಯ ಏರ್‌ಪೋರ್ಟ್‌ ಅನ್ನು ಪಿಡಬ್ಲ್ಯೂಡಿಗೆ ಕೊಡಬಹುದು. ಆದರೆ ಹಾಸನದ ಏರ್‌ಫೋರ್ಟ್ ಅನ್ನು ಯಾಕೆ ಪಿಡಬ್ಲ್ಯೂಡಿಗೆ ಕೊಡಬಾರದು. ಶಿವಮೊಗ್ಗ ಮಾದರಿಯಲ್ಲಿ ಕಾಮಗಾರಿ ಮಾಡುವುದಾದರೆ ಮಾಡಲಿ ಇಲ್ಲಾ, ಕಾಮಗಾರಿ ತಡೆ ಹಿಡಿಯುತ್ತೇವೆ. ಇದರಲ್ಲಿ ರಾಜಕೀಯ ಬೆರಸುವುದು ಬೇಡ, ನಾಟಕವಾಡುವುದು ಬೇಡ. ನಾಮಕವಸ್ತೆಗೆ ಮಾಡಿ ವಿಮಾನ ‌ನಿಲ್ದಾಣ ಮಾಡಿದ್ದೆವು ಎನ್ನುವುದು ಬೇಡ. ಮಾನ-ಮಾರ್ಯದೆ ಇದ್ದರೆ, ಗೌರವ ಇದ್ದರೆ ಪಿಡಬ್ಲ್ಯೂಡಿಗೆ ಮೂಲಕ‌ ಮಾಡಲಿ” ಎಂದು ರೇವಣ್ಣ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಸಾರ್ವಜನಿಕ ಶೌಚಾಲಯಗಳ ಕೊರತೆ: 1000 ಜನರಿಗೆ ಒಂದರಂತೆ ಶೌಚಾಲಯವೂ ಇಲ್ಲ ಎಂದ ವರದಿ

ಇದನ್ನೂ ಓದಿ: ವಿಜಯೇಂದ್ರ, ಸಚಿವರ ಹೆಸರಿನಲ್ಲಿ ವಂಚನೆ: ಶ್ರೀರಾಮುಲು ಆಪ್ತ ಸಹಾಯಕ ರಾಜಣ್ಣ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...