Homeಕರ್ನಾಟಕ‘ದೇವರೆ ಶಿಕ್ಷೆ ಕೊಡುವ ಕಾಲ‌ ಬರುತ್ತದೆ’: ಯಡಿಯೂರಪ್ಪ ವಿರುದ್ದ ರೇವಣ್ಣ ಕಿಡಿ

‘ದೇವರೆ ಶಿಕ್ಷೆ ಕೊಡುವ ಕಾಲ‌ ಬರುತ್ತದೆ’: ಯಡಿಯೂರಪ್ಪ ವಿರುದ್ದ ರೇವಣ್ಣ ಕಿಡಿ

- Advertisement -
- Advertisement -

“ಜಿಲ್ಲೆಯ ಅಭಿವೃದ್ಧಿ ಸಂಪೂರ್ಣವಾಗಿದ್ದ ನಿಂತಿದ್ದು, ದ್ವೇಷದ ರಾಜಕಾರಣ ‌ಎಷ್ಟು ದಿನ ಮಾಡುತ್ತೀರಿ ಮಾಡಿ. ನಾವೇನು ಹೆದರಿ ಓಡುವುದಿಲ್ಲ. ಯಡಿಯೂರಪ್ಪ ಶಾಶ್ವತವಾಗಿ ಇರ್ತಾನಾ? ದೇವರೇ ಶಿಕ್ಷೆ ಕೊಡುವ ಕಾಲ‌ ಬರುತ್ತದೆ” ಎಂದು ಹಾಸನ ಜಿಲ್ಲೆಯ ಅಭಿವೃದ್ದಿ ಕುರಿತು ಮಾಜಿ ಸಚಿವ, ಜೆಡಿಎಸ್‌ ಮುಖಂಡ ಎಚ್‌‌‌ಡಿ ರೇವಣ್ಣ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ದ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.

“ಯಡಿಯೂರಪ್ಪ ಒಬ್ಬ ಡಿನೋಟಿಫಿಕೇಷನ್ ಮುಖ್ಯಮಂತ್ರಿ. ಹಾಸನದಲ್ಲಿ ಭೂಸ್ವಾಧೀನವಾಗಿದ್ದ ಜಮೀನನ್ನು ಭೂ ಮಾಲೀಕರ ಜೊತೆ ಶಾಮೀಲಾಗಿ ವಾಪಾಸ್ ಕೊಟ್ಟರು. ನನ್ನ 21 ವರ್ಷದ ರಾಜಕಾರಣದಲ್ಲಿ ಸುಳ್ಳು ಹೇಳುವ, ದ್ವೇಷದ ರಾಜಕಾರಣ ಮಾಡುವ ನಂ.1 ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ” ಎಂದು ರೇವಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೊರೊನಾ 3ನೇ ಅಲೆಯ ಆತಂಕ ಹೆಚ್ಚಿಸಿದ ಯುರೋ ಕಪ್ ಫುಟ್ಬಾಲ್ ಟೂರ್ನಿ

“ಮುಂದಿನ ಚುನಾವಣೆಯಲ್ಲಿ ಬಿಜೆಪಿ 130, ಕಾಂಗ್ರೆಸ್ 150 ಗೆಲ್ಲುತ್ತೆ ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ. ಒಟ್ಟು 280 ಸೀಟ್ ಆಗುತ್ತೆ, ಹಾಗಾದರೆ ಬಾಕಿಯವರು ಯಾರು ಇಲ್ಲವೇ ಇಲ್ವಾ? 2023ರಲ್ಲಿ ಬಿಜೆಪಿ ಎಷ್ಟು ಸ್ಥಾನ ಪಡೆಯುತ್ತೆ ನಾನು ನೋಡುತ್ತೇನೆ” ಎಂದು ಸವಾಲೆಸೆದಿದ್ದಾರೆ.

“ಹಾಸನ ವಿಮಾನ ನಿಲ್ದಾಣ ಕಾಮಗಾರಿಯನ್ನು ಮೂಲಭೂತ ಅಭಿವೃದ್ಧಿ ಇಲಾಖೆಯಿಂದ ಮಾಡಲು ಇಂಜಿನಿಯರ್‌ಗಳಿಲ್ಲ. ಪಿಡಬ್ಲ್ಯೂಡಿ ಇಲಾಖೆಯಿಂದ ಮಾಡುವುದಾದರೆ ಮಾಡಿ. ಇಲ್ಲವಾದರೆ ದೇವರು ಶಕ್ತಿ ಕೊಟ್ಟಾಗ ಮಾಡುತ್ತೇವೆ. ವಿಮಾನ ನಿಲ್ದಾಣಕ್ಕೆ 761 ಎಕರೆ ಭೂಮಿ ಅವಶ್ಯಕವಿದೆ. 536 ಎಕರೆ ಭೂ ಸ್ವಾಧೀನ ಮಾಡಲಾಗಿದೆ” ಎಂದು ಹೇಳಿದ್ದಾರೆ.

“ಶಿವಮೊಗ್ಗ, ಬಿಜಾಪುರ, ಕಲಬುರಗಿಯ ಏರ್‌ಪೋರ್ಟ್‌ ಅನ್ನು ಪಿಡಬ್ಲ್ಯೂಡಿಗೆ ಕೊಡಬಹುದು. ಆದರೆ ಹಾಸನದ ಏರ್‌ಫೋರ್ಟ್ ಅನ್ನು ಯಾಕೆ ಪಿಡಬ್ಲ್ಯೂಡಿಗೆ ಕೊಡಬಾರದು. ಶಿವಮೊಗ್ಗ ಮಾದರಿಯಲ್ಲಿ ಕಾಮಗಾರಿ ಮಾಡುವುದಾದರೆ ಮಾಡಲಿ ಇಲ್ಲಾ, ಕಾಮಗಾರಿ ತಡೆ ಹಿಡಿಯುತ್ತೇವೆ. ಇದರಲ್ಲಿ ರಾಜಕೀಯ ಬೆರಸುವುದು ಬೇಡ, ನಾಟಕವಾಡುವುದು ಬೇಡ. ನಾಮಕವಸ್ತೆಗೆ ಮಾಡಿ ವಿಮಾನ ‌ನಿಲ್ದಾಣ ಮಾಡಿದ್ದೆವು ಎನ್ನುವುದು ಬೇಡ. ಮಾನ-ಮಾರ್ಯದೆ ಇದ್ದರೆ, ಗೌರವ ಇದ್ದರೆ ಪಿಡಬ್ಲ್ಯೂಡಿಗೆ ಮೂಲಕ‌ ಮಾಡಲಿ” ಎಂದು ರೇವಣ್ಣ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಸಾರ್ವಜನಿಕ ಶೌಚಾಲಯಗಳ ಕೊರತೆ: 1000 ಜನರಿಗೆ ಒಂದರಂತೆ ಶೌಚಾಲಯವೂ ಇಲ್ಲ ಎಂದ ವರದಿ

ಇದನ್ನೂ ಓದಿ: ವಿಜಯೇಂದ್ರ, ಸಚಿವರ ಹೆಸರಿನಲ್ಲಿ ವಂಚನೆ: ಶ್ರೀರಾಮುಲು ಆಪ್ತ ಸಹಾಯಕ ರಾಜಣ್ಣ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...