Homeಕರ್ನಾಟಕ‘ದೇವರೆ ಶಿಕ್ಷೆ ಕೊಡುವ ಕಾಲ‌ ಬರುತ್ತದೆ’: ಯಡಿಯೂರಪ್ಪ ವಿರುದ್ದ ರೇವಣ್ಣ ಕಿಡಿ

‘ದೇವರೆ ಶಿಕ್ಷೆ ಕೊಡುವ ಕಾಲ‌ ಬರುತ್ತದೆ’: ಯಡಿಯೂರಪ್ಪ ವಿರುದ್ದ ರೇವಣ್ಣ ಕಿಡಿ

- Advertisement -
- Advertisement -

“ಜಿಲ್ಲೆಯ ಅಭಿವೃದ್ಧಿ ಸಂಪೂರ್ಣವಾಗಿದ್ದ ನಿಂತಿದ್ದು, ದ್ವೇಷದ ರಾಜಕಾರಣ ‌ಎಷ್ಟು ದಿನ ಮಾಡುತ್ತೀರಿ ಮಾಡಿ. ನಾವೇನು ಹೆದರಿ ಓಡುವುದಿಲ್ಲ. ಯಡಿಯೂರಪ್ಪ ಶಾಶ್ವತವಾಗಿ ಇರ್ತಾನಾ? ದೇವರೇ ಶಿಕ್ಷೆ ಕೊಡುವ ಕಾಲ‌ ಬರುತ್ತದೆ” ಎಂದು ಹಾಸನ ಜಿಲ್ಲೆಯ ಅಭಿವೃದ್ದಿ ಕುರಿತು ಮಾಜಿ ಸಚಿವ, ಜೆಡಿಎಸ್‌ ಮುಖಂಡ ಎಚ್‌‌‌ಡಿ ರೇವಣ್ಣ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ದ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.

“ಯಡಿಯೂರಪ್ಪ ಒಬ್ಬ ಡಿನೋಟಿಫಿಕೇಷನ್ ಮುಖ್ಯಮಂತ್ರಿ. ಹಾಸನದಲ್ಲಿ ಭೂಸ್ವಾಧೀನವಾಗಿದ್ದ ಜಮೀನನ್ನು ಭೂ ಮಾಲೀಕರ ಜೊತೆ ಶಾಮೀಲಾಗಿ ವಾಪಾಸ್ ಕೊಟ್ಟರು. ನನ್ನ 21 ವರ್ಷದ ರಾಜಕಾರಣದಲ್ಲಿ ಸುಳ್ಳು ಹೇಳುವ, ದ್ವೇಷದ ರಾಜಕಾರಣ ಮಾಡುವ ನಂ.1 ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ” ಎಂದು ರೇವಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೊರೊನಾ 3ನೇ ಅಲೆಯ ಆತಂಕ ಹೆಚ್ಚಿಸಿದ ಯುರೋ ಕಪ್ ಫುಟ್ಬಾಲ್ ಟೂರ್ನಿ

“ಮುಂದಿನ ಚುನಾವಣೆಯಲ್ಲಿ ಬಿಜೆಪಿ 130, ಕಾಂಗ್ರೆಸ್ 150 ಗೆಲ್ಲುತ್ತೆ ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ. ಒಟ್ಟು 280 ಸೀಟ್ ಆಗುತ್ತೆ, ಹಾಗಾದರೆ ಬಾಕಿಯವರು ಯಾರು ಇಲ್ಲವೇ ಇಲ್ವಾ? 2023ರಲ್ಲಿ ಬಿಜೆಪಿ ಎಷ್ಟು ಸ್ಥಾನ ಪಡೆಯುತ್ತೆ ನಾನು ನೋಡುತ್ತೇನೆ” ಎಂದು ಸವಾಲೆಸೆದಿದ್ದಾರೆ.

“ಹಾಸನ ವಿಮಾನ ನಿಲ್ದಾಣ ಕಾಮಗಾರಿಯನ್ನು ಮೂಲಭೂತ ಅಭಿವೃದ್ಧಿ ಇಲಾಖೆಯಿಂದ ಮಾಡಲು ಇಂಜಿನಿಯರ್‌ಗಳಿಲ್ಲ. ಪಿಡಬ್ಲ್ಯೂಡಿ ಇಲಾಖೆಯಿಂದ ಮಾಡುವುದಾದರೆ ಮಾಡಿ. ಇಲ್ಲವಾದರೆ ದೇವರು ಶಕ್ತಿ ಕೊಟ್ಟಾಗ ಮಾಡುತ್ತೇವೆ. ವಿಮಾನ ನಿಲ್ದಾಣಕ್ಕೆ 761 ಎಕರೆ ಭೂಮಿ ಅವಶ್ಯಕವಿದೆ. 536 ಎಕರೆ ಭೂ ಸ್ವಾಧೀನ ಮಾಡಲಾಗಿದೆ” ಎಂದು ಹೇಳಿದ್ದಾರೆ.

“ಶಿವಮೊಗ್ಗ, ಬಿಜಾಪುರ, ಕಲಬುರಗಿಯ ಏರ್‌ಪೋರ್ಟ್‌ ಅನ್ನು ಪಿಡಬ್ಲ್ಯೂಡಿಗೆ ಕೊಡಬಹುದು. ಆದರೆ ಹಾಸನದ ಏರ್‌ಫೋರ್ಟ್ ಅನ್ನು ಯಾಕೆ ಪಿಡಬ್ಲ್ಯೂಡಿಗೆ ಕೊಡಬಾರದು. ಶಿವಮೊಗ್ಗ ಮಾದರಿಯಲ್ಲಿ ಕಾಮಗಾರಿ ಮಾಡುವುದಾದರೆ ಮಾಡಲಿ ಇಲ್ಲಾ, ಕಾಮಗಾರಿ ತಡೆ ಹಿಡಿಯುತ್ತೇವೆ. ಇದರಲ್ಲಿ ರಾಜಕೀಯ ಬೆರಸುವುದು ಬೇಡ, ನಾಟಕವಾಡುವುದು ಬೇಡ. ನಾಮಕವಸ್ತೆಗೆ ಮಾಡಿ ವಿಮಾನ ‌ನಿಲ್ದಾಣ ಮಾಡಿದ್ದೆವು ಎನ್ನುವುದು ಬೇಡ. ಮಾನ-ಮಾರ್ಯದೆ ಇದ್ದರೆ, ಗೌರವ ಇದ್ದರೆ ಪಿಡಬ್ಲ್ಯೂಡಿಗೆ ಮೂಲಕ‌ ಮಾಡಲಿ” ಎಂದು ರೇವಣ್ಣ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಸಾರ್ವಜನಿಕ ಶೌಚಾಲಯಗಳ ಕೊರತೆ: 1000 ಜನರಿಗೆ ಒಂದರಂತೆ ಶೌಚಾಲಯವೂ ಇಲ್ಲ ಎಂದ ವರದಿ

ಇದನ್ನೂ ಓದಿ: ವಿಜಯೇಂದ್ರ, ಸಚಿವರ ಹೆಸರಿನಲ್ಲಿ ವಂಚನೆ: ಶ್ರೀರಾಮುಲು ಆಪ್ತ ಸಹಾಯಕ ರಾಜಣ್ಣ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...