Homeಮುಖಪುಟಗೋಡ್ಸೆ ಭಕ್ತರು ಪ್ರಧಾನಿ ಕಾರ್ಯಾಲಯದಲ್ಲಿದ್ದಾರೆ, ಅವರೆ ನನ್ನ ಬಂಧನಕ್ಕೆ ನೇರ ಕಾರಣ: ಜಿಗ್ನೇಶ್ ಮೇವಾನಿ

ಗೋಡ್ಸೆ ಭಕ್ತರು ಪ್ರಧಾನಿ ಕಾರ್ಯಾಲಯದಲ್ಲಿದ್ದಾರೆ, ಅವರೆ ನನ್ನ ಬಂಧನಕ್ಕೆ ನೇರ ಕಾರಣ: ಜಿಗ್ನೇಶ್ ಮೇವಾನಿ

ನಾನು 56 ಇಂಚಿನ ವ್ಯಕ್ತಿಯನ್ನು ಹೇಡಿ ಎಂದು ಕರೆಯುತ್ತೇನೆ. ಮಹಿಳೆಯೊಬ್ಬರನ್ನು ಬಳಸಿಕೊಂಡು ನನ್ನ ವಿರುದ್ಧ ಸುಳ್ಳು ಪ್ರಕರಣ ಹಾಕಲಾಗಿದೆ.

- Advertisement -
- Advertisement -

ಅಸ್ಸಾಂ ಜೈಲಿನಿಂದ ಬಿಡುಗಡೆಯಾಗಿರುವ ದಲಿತ ಹೋರಾಟಗಾರ, ಶಾಸಕ ಜಿಗ್ನೇಶ್ ಮೇವಾನಿ, ನನ್ನ ಬಂಧನದ ಹಿಂದೆ ಗುಜರಾತ್-ಅಸ್ಸಾಂ ಸರ್ಕಾರಗಳ ಪಿತೂರಿಯಿದೆ ಎಂದು ಕಿಡಿಕಾರಿದ್ದಾರೆ.

ದೆಹಲಿಯ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ಗುಜರಾತ್‌ ವಿಧಾನಸಭೆ ಚುನಾವಣೆಗೆ ಮುನ್ನ ನನ್ನ ವ್ಯಕ್ತಿತ್ವ ನಾಶಪಡಿಸಲು ಮತ್ತು ಮಾನಹಾನಿ ಮಾಡುವ ಉದ್ದೇಶದಿಂದ ಪೂರ್ವ ಯೋಜಿತ ಪಿತೂರಿ ನಡೆಸಲಾಗಿದೆ. ಅದಕ್ಕಾಗಿ ಪೊಲೀಸರು ನನ್ನನ್ನು ಬಂಧಿಸಲು ಒಂದೇ ದಿನ 2500 ಕಿ,ಮೀ ಕ್ರಮಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ನಾನು 56 ಇಂಚಿನ ವ್ಯಕ್ತಿಯನ್ನು ಹೇಡಿ ಎಂದು ಕರೆಯುತ್ತೇನೆ. ಮಹಿಳೆಯೊಬ್ಬರನ್ನು ಬಳಸಿಕೊಂಡು ನನ್ನ ವಿರುದ್ಧ ಸುಳ್ಳು ಪ್ರಕರಣ ಹಾಕಲಾಗಿದೆ. ಕೆಲ ಗೋಡ್ಸೆ ಭಕ್ತರು ಪ್ರಧಾನಿ ಕಾರ್ಯಾಲಯದಲ್ಲಿದ್ದಾರೆ, ಅವರೆ ನನ್ನ ಬಂಧನಕ್ಕೆ ನೇರ ಕಾರಣ ಎಂದು ಮೇವಾನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನನ್ನ ಮತ್ತು ನನ್ನ ತಂಡದ ಸದಸ್ಯರಿಂದ ವಶಪಡಿಸಿಕೊಂಡಿರುವ ಮೊಬೈಲ್ ಫೋನ್‌ಗಳು ಮತ್ತು ಲ್ಯಾಪ್‌ಟಾಪ್‌ಗಳಿಗೆ ಸರ್ಕಾರವು “ಏನನ್ನಾದರೂ ತೂರಿಸಿರುವ” ಎಲ್ಲ ಅವಕಾಶಗಳಿವೆ. ಆದರೆ ನಾನು ಫ್ಲವರ್, ಫಯರ್ ಆಗಿದ್ದು ಸರ್ಕಾರದ ಎದುರು ತಗ್ಗುವ ಮಾತೆ ಇಲ್ಲ ಎಂದು ಪುಷ್ಪ ಸಿನಿಮಾದ ಸಂಭಾಷಣೆಯನ್ನು ಅನುಕರಿಸಿದ್ದಾರೆ.

ಗುಜರಾತ್‌ನಲ್ಲಿ 22 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ನಡೆದಿವೆ. ಆದರೆ ಇದುವರೆಗೂ ಯಾವುದೇ ಪ್ರಕರಣ ದಾಖಲಾಗಿಲ್ಲ, ಯಾವುದೇ ಬಂಧನವಾಗಿಲ್ಲ ಅಥವಾ ಯಾವುದೇ ತನಿಖೆ ನಡೆಸಲಾಗಿಲ್ಲ. ಅದೇ ರೀತಿ ಮುಂದ್ರಾ ಬಂದರಿನಲ್ಲಿ ಸಿಕ್ಕಿದ ಬೃಹತ್ ಮಾದಕ ದ್ರವ್ಯ ಸಾಗಣೆಯ ಪ್ರಕರಣದ ಬಗ್ಗೆ ಯಾವುದೇ ತನಿಖೆಯಾಗಲಿಲ್ಲ. ದಲಿತ ಮಹಿಳೆಯೊಬ್ಬರು ಗುಜರಾತ್ ಸಚಿವರ ವಿರುದ್ಧ ಅತ್ಯಾಚಾರದ ಆರೋಪ ಮಾಡಿದರೂ ಅದರ ಬಗ್ಗೆ ತನಿಖೆಗಳು ಅಥವಾ ಬಂಧನಗಳು ನಡೆದಿಲ್ಲ. ಧರಮ್ ಸಂಸದ್‌ನಲ್ಲಿ ನಿರ್ದಿಷ್ಟ ಸಮುದಾಯದ ನರಮೇಧಕ್ಕೆ ಕರೆ ನೀಡಲಾಯಿತು ಆದರೆ ಯಾವುದೇ ಕ್ರಮ ಕೈಗೊಂಡಿಲ್ಲ. ಆದರೆ ನನ್ನನ್ನು ಮಾತ್ರ ಏಕೆ ಬಂಧಿಸಲಾಯಿತು ಎಂದು ಜಿಗ್ನೇಶ್ ಕಿಡಿಕಾರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನನ್ನ ಟ್ವೀಟ್ ಸರಳವಾಗಿತ್ತು. ಶಾಂತಿ ಮತ್ತು ಸೌಹಾರ್ದತೆಗಾಗಿ ಮನವಿ ಮಾಡುವಂತೆ ನಾನು ಪ್ರಧಾನಿಯನ್ನು ಕೇಳಿದ್ದೆ. ಅದಕ್ಕಾಗಿ ಅವರು ನನ್ನನ್ನು ಬಂಧಿಸಿದರು. ಇದು ಏನನ್ನು ತೋರಿಸುತ್ತದೆ? ಇದು ನನ್ನನ್ನು ನಾಶಮಾಡಲು ಪೂರ್ವ ಯೋಜಿತ ಸಂಚು ಅಲ್ಲವೇ? ನನಗೆ ಎಫ್‌ಐಆರ್‌ನ ಪ್ರತಿಯನ್ನು ನೀಡಲಾಗಿಲ್ಲ. ನನ್ನ ವಿರುದ್ಧದ ಸೆಕ್ಷನ್‌ಗಳನ್ನು ನನಗೆ ತಿಳಿಸಿಲ್ಲ. ನನ್ನ ವಕೀಲರೊಂದಿಗೆ ಮಾತನಾಡಲು ನನಗೆ ಅವಕಾಶ ನೀಡಲಿಲ್ಲ. ಶಾಸಕನಾಗಿ ನನ್ನ ವಿಶೇಷತೆಯನ್ನು ಕಡೆಗಣಿಸಲಾಗಿದೆ. ನನ್ನ ಬಂಧನದ ಬಗ್ಗೆ ಗುಜರಾತ್ ಅಸೆಂಬ್ಲಿಯ ಸ್ಪೀಕರ್‌ಗೆ ಮಾಹಿತಿ ಇರಲಿಲ್ಲ. ಬಹುಶಃ ನನ್ನನ್ನು ಅಸ್ಸಾಂಗೆ ಕರೆದೊಯ್ದ ನಂತರ ಅವರಿಗೆ ತಿಳಿಸಲಾಗಿದೆ. ಇದು ಗುಜರಾತ್‌ನ ಹೆಮ್ಮೆಗೆ ಧಕ್ಕೆ ತಂದಿದೆ. ಗುಜರಾತ್ ಸರ್ಕಾರಕ್ಕೂ ನಾಚಿಕೆಯಾಗಬೇಕು ಎದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಪೊಲೀಸ್‌ ರಾಜ್ಯ’ ಮಾಡುತ್ತಿರುವುದನ್ನು ಸರಳವಾಗಿ ಯೋಚಿಸಲು ಸಾಧ್ಯವಿಲ್ಲ: ಜಿಗ್ನೇಶ್‌ಗೆ ಜಾಮೀನು ನೀಡಿದ ಅಸ್ಸಾಂ ಜಿಲ್ಲಾ ನ್ಯಾಯಾಲಯ

ಜಿಗ್ನೇಶ್ ಮೇವಾನಿಯವರಿಗೆ ಜಾಮೀನು ನೀಡುವಾಗ ನ್ಯಾಯಾಲಯ, “ಪ್ರಕರಣದಲ್ಲಿ ಅಸ್ಸಾಂ ಪೊಲೀಸರು ‘ಸುಳ್ಳು ಎಫ್‌ಐಆರ್’ ದಾಖಲಿಸಿದ್ದು, ‘ನ್ಯಾಯಾಲಯ ಮತ್ತು ಕಾನೂನಿನ ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ’. “ಕಷ್ಟಪಟ್ಟು ಗಳಿಸಿದ ಪ್ರಜಾಪ್ರಭುತ್ವವನ್ನು ಪೊಲೀಸ್ ರಾಜ್ಯವನ್ನಾಗಿ ಪರಿವರ್ತಿಸುವುದರ” ವಿರುದ್ಧ ಪೊಲೀಸರಿಗೆ ಅದು ಎಚ್ಚರಿಕೆ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರಧಾನಿಯೇ ಗೋಡ್ಸೆ ಭಕ್ತ. ದ್ವೇಷ ಹರಡುವುದರಲ್ಲಿ ಗೋಡ್ಸೆಯನ್ನೂ ಮೀರಿಸಿದಾತ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...