Homeಮುಖಪುಟಗೋಡ್ಸೆ ಭಕ್ತರು ಪ್ರಧಾನಿ ಕಾರ್ಯಾಲಯದಲ್ಲಿದ್ದಾರೆ, ಅವರೆ ನನ್ನ ಬಂಧನಕ್ಕೆ ನೇರ ಕಾರಣ: ಜಿಗ್ನೇಶ್ ಮೇವಾನಿ

ಗೋಡ್ಸೆ ಭಕ್ತರು ಪ್ರಧಾನಿ ಕಾರ್ಯಾಲಯದಲ್ಲಿದ್ದಾರೆ, ಅವರೆ ನನ್ನ ಬಂಧನಕ್ಕೆ ನೇರ ಕಾರಣ: ಜಿಗ್ನೇಶ್ ಮೇವಾನಿ

ನಾನು 56 ಇಂಚಿನ ವ್ಯಕ್ತಿಯನ್ನು ಹೇಡಿ ಎಂದು ಕರೆಯುತ್ತೇನೆ. ಮಹಿಳೆಯೊಬ್ಬರನ್ನು ಬಳಸಿಕೊಂಡು ನನ್ನ ವಿರುದ್ಧ ಸುಳ್ಳು ಪ್ರಕರಣ ಹಾಕಲಾಗಿದೆ.

- Advertisement -
- Advertisement -

ಅಸ್ಸಾಂ ಜೈಲಿನಿಂದ ಬಿಡುಗಡೆಯಾಗಿರುವ ದಲಿತ ಹೋರಾಟಗಾರ, ಶಾಸಕ ಜಿಗ್ನೇಶ್ ಮೇವಾನಿ, ನನ್ನ ಬಂಧನದ ಹಿಂದೆ ಗುಜರಾತ್-ಅಸ್ಸಾಂ ಸರ್ಕಾರಗಳ ಪಿತೂರಿಯಿದೆ ಎಂದು ಕಿಡಿಕಾರಿದ್ದಾರೆ.

ದೆಹಲಿಯ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ಗುಜರಾತ್‌ ವಿಧಾನಸಭೆ ಚುನಾವಣೆಗೆ ಮುನ್ನ ನನ್ನ ವ್ಯಕ್ತಿತ್ವ ನಾಶಪಡಿಸಲು ಮತ್ತು ಮಾನಹಾನಿ ಮಾಡುವ ಉದ್ದೇಶದಿಂದ ಪೂರ್ವ ಯೋಜಿತ ಪಿತೂರಿ ನಡೆಸಲಾಗಿದೆ. ಅದಕ್ಕಾಗಿ ಪೊಲೀಸರು ನನ್ನನ್ನು ಬಂಧಿಸಲು ಒಂದೇ ದಿನ 2500 ಕಿ,ಮೀ ಕ್ರಮಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ನಾನು 56 ಇಂಚಿನ ವ್ಯಕ್ತಿಯನ್ನು ಹೇಡಿ ಎಂದು ಕರೆಯುತ್ತೇನೆ. ಮಹಿಳೆಯೊಬ್ಬರನ್ನು ಬಳಸಿಕೊಂಡು ನನ್ನ ವಿರುದ್ಧ ಸುಳ್ಳು ಪ್ರಕರಣ ಹಾಕಲಾಗಿದೆ. ಕೆಲ ಗೋಡ್ಸೆ ಭಕ್ತರು ಪ್ರಧಾನಿ ಕಾರ್ಯಾಲಯದಲ್ಲಿದ್ದಾರೆ, ಅವರೆ ನನ್ನ ಬಂಧನಕ್ಕೆ ನೇರ ಕಾರಣ ಎಂದು ಮೇವಾನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನನ್ನ ಮತ್ತು ನನ್ನ ತಂಡದ ಸದಸ್ಯರಿಂದ ವಶಪಡಿಸಿಕೊಂಡಿರುವ ಮೊಬೈಲ್ ಫೋನ್‌ಗಳು ಮತ್ತು ಲ್ಯಾಪ್‌ಟಾಪ್‌ಗಳಿಗೆ ಸರ್ಕಾರವು “ಏನನ್ನಾದರೂ ತೂರಿಸಿರುವ” ಎಲ್ಲ ಅವಕಾಶಗಳಿವೆ. ಆದರೆ ನಾನು ಫ್ಲವರ್, ಫಯರ್ ಆಗಿದ್ದು ಸರ್ಕಾರದ ಎದುರು ತಗ್ಗುವ ಮಾತೆ ಇಲ್ಲ ಎಂದು ಪುಷ್ಪ ಸಿನಿಮಾದ ಸಂಭಾಷಣೆಯನ್ನು ಅನುಕರಿಸಿದ್ದಾರೆ.

ಗುಜರಾತ್‌ನಲ್ಲಿ 22 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ನಡೆದಿವೆ. ಆದರೆ ಇದುವರೆಗೂ ಯಾವುದೇ ಪ್ರಕರಣ ದಾಖಲಾಗಿಲ್ಲ, ಯಾವುದೇ ಬಂಧನವಾಗಿಲ್ಲ ಅಥವಾ ಯಾವುದೇ ತನಿಖೆ ನಡೆಸಲಾಗಿಲ್ಲ. ಅದೇ ರೀತಿ ಮುಂದ್ರಾ ಬಂದರಿನಲ್ಲಿ ಸಿಕ್ಕಿದ ಬೃಹತ್ ಮಾದಕ ದ್ರವ್ಯ ಸಾಗಣೆಯ ಪ್ರಕರಣದ ಬಗ್ಗೆ ಯಾವುದೇ ತನಿಖೆಯಾಗಲಿಲ್ಲ. ದಲಿತ ಮಹಿಳೆಯೊಬ್ಬರು ಗುಜರಾತ್ ಸಚಿವರ ವಿರುದ್ಧ ಅತ್ಯಾಚಾರದ ಆರೋಪ ಮಾಡಿದರೂ ಅದರ ಬಗ್ಗೆ ತನಿಖೆಗಳು ಅಥವಾ ಬಂಧನಗಳು ನಡೆದಿಲ್ಲ. ಧರಮ್ ಸಂಸದ್‌ನಲ್ಲಿ ನಿರ್ದಿಷ್ಟ ಸಮುದಾಯದ ನರಮೇಧಕ್ಕೆ ಕರೆ ನೀಡಲಾಯಿತು ಆದರೆ ಯಾವುದೇ ಕ್ರಮ ಕೈಗೊಂಡಿಲ್ಲ. ಆದರೆ ನನ್ನನ್ನು ಮಾತ್ರ ಏಕೆ ಬಂಧಿಸಲಾಯಿತು ಎಂದು ಜಿಗ್ನೇಶ್ ಕಿಡಿಕಾರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನನ್ನ ಟ್ವೀಟ್ ಸರಳವಾಗಿತ್ತು. ಶಾಂತಿ ಮತ್ತು ಸೌಹಾರ್ದತೆಗಾಗಿ ಮನವಿ ಮಾಡುವಂತೆ ನಾನು ಪ್ರಧಾನಿಯನ್ನು ಕೇಳಿದ್ದೆ. ಅದಕ್ಕಾಗಿ ಅವರು ನನ್ನನ್ನು ಬಂಧಿಸಿದರು. ಇದು ಏನನ್ನು ತೋರಿಸುತ್ತದೆ? ಇದು ನನ್ನನ್ನು ನಾಶಮಾಡಲು ಪೂರ್ವ ಯೋಜಿತ ಸಂಚು ಅಲ್ಲವೇ? ನನಗೆ ಎಫ್‌ಐಆರ್‌ನ ಪ್ರತಿಯನ್ನು ನೀಡಲಾಗಿಲ್ಲ. ನನ್ನ ವಿರುದ್ಧದ ಸೆಕ್ಷನ್‌ಗಳನ್ನು ನನಗೆ ತಿಳಿಸಿಲ್ಲ. ನನ್ನ ವಕೀಲರೊಂದಿಗೆ ಮಾತನಾಡಲು ನನಗೆ ಅವಕಾಶ ನೀಡಲಿಲ್ಲ. ಶಾಸಕನಾಗಿ ನನ್ನ ವಿಶೇಷತೆಯನ್ನು ಕಡೆಗಣಿಸಲಾಗಿದೆ. ನನ್ನ ಬಂಧನದ ಬಗ್ಗೆ ಗುಜರಾತ್ ಅಸೆಂಬ್ಲಿಯ ಸ್ಪೀಕರ್‌ಗೆ ಮಾಹಿತಿ ಇರಲಿಲ್ಲ. ಬಹುಶಃ ನನ್ನನ್ನು ಅಸ್ಸಾಂಗೆ ಕರೆದೊಯ್ದ ನಂತರ ಅವರಿಗೆ ತಿಳಿಸಲಾಗಿದೆ. ಇದು ಗುಜರಾತ್‌ನ ಹೆಮ್ಮೆಗೆ ಧಕ್ಕೆ ತಂದಿದೆ. ಗುಜರಾತ್ ಸರ್ಕಾರಕ್ಕೂ ನಾಚಿಕೆಯಾಗಬೇಕು ಎದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಪೊಲೀಸ್‌ ರಾಜ್ಯ’ ಮಾಡುತ್ತಿರುವುದನ್ನು ಸರಳವಾಗಿ ಯೋಚಿಸಲು ಸಾಧ್ಯವಿಲ್ಲ: ಜಿಗ್ನೇಶ್‌ಗೆ ಜಾಮೀನು ನೀಡಿದ ಅಸ್ಸಾಂ ಜಿಲ್ಲಾ ನ್ಯಾಯಾಲಯ

ಜಿಗ್ನೇಶ್ ಮೇವಾನಿಯವರಿಗೆ ಜಾಮೀನು ನೀಡುವಾಗ ನ್ಯಾಯಾಲಯ, “ಪ್ರಕರಣದಲ್ಲಿ ಅಸ್ಸಾಂ ಪೊಲೀಸರು ‘ಸುಳ್ಳು ಎಫ್‌ಐಆರ್’ ದಾಖಲಿಸಿದ್ದು, ‘ನ್ಯಾಯಾಲಯ ಮತ್ತು ಕಾನೂನಿನ ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ’. “ಕಷ್ಟಪಟ್ಟು ಗಳಿಸಿದ ಪ್ರಜಾಪ್ರಭುತ್ವವನ್ನು ಪೊಲೀಸ್ ರಾಜ್ಯವನ್ನಾಗಿ ಪರಿವರ್ತಿಸುವುದರ” ವಿರುದ್ಧ ಪೊಲೀಸರಿಗೆ ಅದು ಎಚ್ಚರಿಕೆ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರಧಾನಿಯೇ ಗೋಡ್ಸೆ ಭಕ್ತ. ದ್ವೇಷ ಹರಡುವುದರಲ್ಲಿ ಗೋಡ್ಸೆಯನ್ನೂ ಮೀರಿಸಿದಾತ.

LEAVE A REPLY

Please enter your comment!
Please enter your name here

- Advertisment -

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...