Homeಕರ್ನಾಟಕಗೋಡ್ಸೆಗೆ ಮಹಾತ್ಮ ಗಾಂಧಿಯ ಮೌಲ್ಯ ಕೊಲ್ಲಲು ಅಸಾಧ್ಯ - ಸಿಎಂ ಸಿದ್ದರಾಮಯ್ಯ

ಗೋಡ್ಸೆಗೆ ಮಹಾತ್ಮ ಗಾಂಧಿಯ ಮೌಲ್ಯ ಕೊಲ್ಲಲು ಅಸಾಧ್ಯ – ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಮತಾಂಧ ನಾಥೂರಾಮ್ ಗೋಡ್ಸೆ ಮಹಾತ್ಮ ಗಾಂಧಿಯವರನ್ನು ಗುಂಡಿಟ್ಟು ಕೊಂದು, ಅವರು ಇಹಲೋಕ ತ್ಯಜಿಸಿರಬಹುದು. ಆದರೆ ಗಾಂಧೀಜಿಯವರ ಮೌಲ್ಯಗಳನ್ನು ಕೊಲ್ಲಲು ಗೋಡ್ಸೆಯಾಗಲಿ ಅಥವಾ ಇನ್ಯಾರಿಂದಾಗಲಿ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ. ಗೋಡ್ಸೆಗೆ

ಮಹಾತ್ಮ ಗಾಂಧಿ ಅವರ ಹತ್ಯೆ ದಿನದ ಅಂಗವಾಗಿ ವಿಧಾನಸೌಧದಲ್ಲಿ ಮಹಾತ್ಮ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದಿಗೂ ಮಹಾತ್ಮಾ ಗಾಂಧಿ ಅವರ ವಿಚಾರಧಾರೆಗಳು, ಮೌಲ್ಯಗಳು ಭಾರತದಲ್ಲಿ ಮಾತ್ರವಲ್ಲ ಜಗತ್ತಿನಲ್ಲಿಯೇ ಪ್ರಸ್ತುತವಾಗಿವೆ ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಜನವರಿ 30, 1948 ರಂದು ಮಹಾತ್ಮ ಗಾಂಧೀಜಿಯವರನ್ನು ಹಂತಕ ಗೋಡ್ಸೆ ಹತ್ಯೆ ಮಾಡಿದ ದಿನ. ಗಾಂಧೀಜಿಯವರು ನನ್ನ ಜೀವನವೇ ನನ್ನ ಸಂದೇಶ ಎಂದು ಹೇಳಿದ್ದರು. ಅವರ ಹೋರಾಟದ ಬದುಕು, ಅಹಿಂಸೆ, ಸತ್ಯಾಗ್ರಹ ಇವು ನಮಗೆ ಪ್ರೇರಣೆ. ಜಗತ್ತಿನಲ್ಲಿ ಸತ್ಯ, ಅಹಿಂಸೆ, ಸತ್ಯಾಗ್ರಹದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದು ಜಗತ್ತಿನ ಬೇರೆಲ್ಲೂ ಕಾಣಲು ಸಾಧ್ಯವಿಲ್ಲ” ಎಂದು ಸಿಎಂ ಹೇಳಿದ್ದಾರೆ.

“ದೇಶದಲ್ಲಿ ಬಹಳ ದೀರ್ಘ ಕಾಲ ನಡೆದ ಹೋರಾಟದ ನಾಯಕತ್ವವನ್ನು ಗಾಂಧೀಜಿ ವಹಿಸಿದ್ದರು. 1915 ರಲ್ಲಿ ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಬಂದು ಮೊದಲು ದೇಶ, ದೇಶದ ಜನ, ಸಮಾಜ, ಬದುಕನ್ನು ಅರ್ಥಆಡಿಕೊಳ್ಳುವ ಪ್ರಯತ್ನ ಮಾಡಿ, ನಂತರ ಹೋರಾಟವನ್ನು ಪ್ರಾರಂಭಿಸಿದರು. ಸತ್ಯ ಅಹಿಂಸೆಗಳಿಂದ ಕೂಡಿದ್ದ ಹೋರಾಟದಲ್ಲಿ ಸಾವಿರಾರು ಜನ ಪಾಲ್ಗೊಂಡರು. ಅವರ ಹೋರಾಟದ ಫಲವಾಗಿ ನಮಗೆ ಸ್ವಾತಂತ್ರ್ಯ ದೊರೆತು, ಬ್ರಿಟಿಷರ ದಾಸ್ಯದಿಂದ ಬಿಡುಗಡೆಯಾದೆವು.” ಎಂದು ಹೇಳಿದ್ದಾರೆ. ಗೋಡ್ಸೆಗೆ

“ಮಹಾತ್ಮಾ ಗಾಂಧೀಜಿಯವರು ಕೇವಲ ಸ್ವಾತಂತ್ರ್ಯ ಹೋರಾಟ ಮಾಡಲಿಲ್ಲ, ಈ ದೇಶಕ್ಕೆ ಸ್ವಾತಂತ್ರ್ಯ ದೊರೆತ ಮೇಲೆ ದೇಶ ಹೇಗಿರಬೇಕೆಂದು ಪರಿಹಾರಗಳನ್ನು ನೀಡಿದ್ದರು. ಭಾರತ ದೇಶ ಗ್ರಾಮಗಳ ದೇಶ. ಗ್ರಾಮಗಳ ಅಭಿವೃದ್ಧಿಯಾಗದೆ ದೇಶ ಅಭಿವೃದ್ಧಿ ಆಗುವುದಿಲ್ಲ ಎಂದು ಹೇಳಿದ್ದರು. ಅದಕ್ಕಾಗಿಯೇ ಗ್ರಾಮ ಸ್ವರಾಜ್ಯ ಎಂಬ ಪರಿಕಲ್ಪನೆಯನ್ನು ಪ್ರತಿಪಾದಿಸಿದ್ದರು. ಗ್ರಾಮಗಳು ಸ್ವಾವಲಂಬಿಗಳಾಗಬೇಕು. ಆಗ ಮಾತ್ರ ಜನ, ದೇಶ ಸ್ವಾವಲಂಬಿಗಳಾಗಲು ಸಾಧ್ಯ.” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

“ಭಾರತದಲ್ಲಿ ಗುಡಿ ಕೈಗಾರಿಕೆಗಳು, ಅತಿ ಸಣ್ಣ ಕೈಗಾರಿಕೆಗಳು ಆರ್ಥಿಕತೆಯ ತಳಹದಿ. ಅದಕ್ಕೆ ಉತ್ತೇಜನ ನೀಡಬೇಕು ಎಂದು ಕರೆ ನೀಡಿದ್ದರು. ಗಾಂಧಿ ಭಾರತ ಕಟ್ಟುವ ಪ್ರಯತ್ನವನ್ನು ಪ್ರಾಮಾಣಿಕವಾಗಿ ಮಾಡಬೇಕು. ಅವರ ಮೌಲ್ಯಗಳನ್ನು ರೂಢಿಸಿಕೊಂಡು ಅದರಂತೆ ನಡೆಯುವ ಪ್ರಯತ್ನ ಮಾಡಬೇಕು.” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಇದನ್ನೂಓದಿ:  ಮಣಿಪುರವನ್ನು ವಿಭಜಿಸಲು ಬಯಸುವವರೊಂದಿಗೆ ಕೆಲವು ರಾಜಕಾರಣಿಗಳು ಕೈಜೋಡಿಸಿದ್ದಾರೆ: ಸಿಎಂ ಬಿರೇನ್ ಸಿಂಗ್

ಮಣಿಪುರವನ್ನು ವಿಭಜಿಸಲು ಬಯಸುವವರೊಂದಿಗೆ ಕೆಲವು ರಾಜಕಾರಣಿಗಳು ಕೈಜೋಡಿಸಿದ್ದಾರೆ: ಸಿಎಂ ಬಿರೇನ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...