Homeಕರ್ನಾಟಕಗೋಡ್ಸೆಗೆ ಮಹಾತ್ಮ ಗಾಂಧಿಯ ಮೌಲ್ಯ ಕೊಲ್ಲಲು ಅಸಾಧ್ಯ - ಸಿಎಂ ಸಿದ್ದರಾಮಯ್ಯ

ಗೋಡ್ಸೆಗೆ ಮಹಾತ್ಮ ಗಾಂಧಿಯ ಮೌಲ್ಯ ಕೊಲ್ಲಲು ಅಸಾಧ್ಯ – ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಮತಾಂಧ ನಾಥೂರಾಮ್ ಗೋಡ್ಸೆ ಮಹಾತ್ಮ ಗಾಂಧಿಯವರನ್ನು ಗುಂಡಿಟ್ಟು ಕೊಂದು, ಅವರು ಇಹಲೋಕ ತ್ಯಜಿಸಿರಬಹುದು. ಆದರೆ ಗಾಂಧೀಜಿಯವರ ಮೌಲ್ಯಗಳನ್ನು ಕೊಲ್ಲಲು ಗೋಡ್ಸೆಯಾಗಲಿ ಅಥವಾ ಇನ್ಯಾರಿಂದಾಗಲಿ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ. ಗೋಡ್ಸೆಗೆ

ಮಹಾತ್ಮ ಗಾಂಧಿ ಅವರ ಹತ್ಯೆ ದಿನದ ಅಂಗವಾಗಿ ವಿಧಾನಸೌಧದಲ್ಲಿ ಮಹಾತ್ಮ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದಿಗೂ ಮಹಾತ್ಮಾ ಗಾಂಧಿ ಅವರ ವಿಚಾರಧಾರೆಗಳು, ಮೌಲ್ಯಗಳು ಭಾರತದಲ್ಲಿ ಮಾತ್ರವಲ್ಲ ಜಗತ್ತಿನಲ್ಲಿಯೇ ಪ್ರಸ್ತುತವಾಗಿವೆ ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಜನವರಿ 30, 1948 ರಂದು ಮಹಾತ್ಮ ಗಾಂಧೀಜಿಯವರನ್ನು ಹಂತಕ ಗೋಡ್ಸೆ ಹತ್ಯೆ ಮಾಡಿದ ದಿನ. ಗಾಂಧೀಜಿಯವರು ನನ್ನ ಜೀವನವೇ ನನ್ನ ಸಂದೇಶ ಎಂದು ಹೇಳಿದ್ದರು. ಅವರ ಹೋರಾಟದ ಬದುಕು, ಅಹಿಂಸೆ, ಸತ್ಯಾಗ್ರಹ ಇವು ನಮಗೆ ಪ್ರೇರಣೆ. ಜಗತ್ತಿನಲ್ಲಿ ಸತ್ಯ, ಅಹಿಂಸೆ, ಸತ್ಯಾಗ್ರಹದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದು ಜಗತ್ತಿನ ಬೇರೆಲ್ಲೂ ಕಾಣಲು ಸಾಧ್ಯವಿಲ್ಲ” ಎಂದು ಸಿಎಂ ಹೇಳಿದ್ದಾರೆ.

“ದೇಶದಲ್ಲಿ ಬಹಳ ದೀರ್ಘ ಕಾಲ ನಡೆದ ಹೋರಾಟದ ನಾಯಕತ್ವವನ್ನು ಗಾಂಧೀಜಿ ವಹಿಸಿದ್ದರು. 1915 ರಲ್ಲಿ ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಬಂದು ಮೊದಲು ದೇಶ, ದೇಶದ ಜನ, ಸಮಾಜ, ಬದುಕನ್ನು ಅರ್ಥಆಡಿಕೊಳ್ಳುವ ಪ್ರಯತ್ನ ಮಾಡಿ, ನಂತರ ಹೋರಾಟವನ್ನು ಪ್ರಾರಂಭಿಸಿದರು. ಸತ್ಯ ಅಹಿಂಸೆಗಳಿಂದ ಕೂಡಿದ್ದ ಹೋರಾಟದಲ್ಲಿ ಸಾವಿರಾರು ಜನ ಪಾಲ್ಗೊಂಡರು. ಅವರ ಹೋರಾಟದ ಫಲವಾಗಿ ನಮಗೆ ಸ್ವಾತಂತ್ರ್ಯ ದೊರೆತು, ಬ್ರಿಟಿಷರ ದಾಸ್ಯದಿಂದ ಬಿಡುಗಡೆಯಾದೆವು.” ಎಂದು ಹೇಳಿದ್ದಾರೆ. ಗೋಡ್ಸೆಗೆ

“ಮಹಾತ್ಮಾ ಗಾಂಧೀಜಿಯವರು ಕೇವಲ ಸ್ವಾತಂತ್ರ್ಯ ಹೋರಾಟ ಮಾಡಲಿಲ್ಲ, ಈ ದೇಶಕ್ಕೆ ಸ್ವಾತಂತ್ರ್ಯ ದೊರೆತ ಮೇಲೆ ದೇಶ ಹೇಗಿರಬೇಕೆಂದು ಪರಿಹಾರಗಳನ್ನು ನೀಡಿದ್ದರು. ಭಾರತ ದೇಶ ಗ್ರಾಮಗಳ ದೇಶ. ಗ್ರಾಮಗಳ ಅಭಿವೃದ್ಧಿಯಾಗದೆ ದೇಶ ಅಭಿವೃದ್ಧಿ ಆಗುವುದಿಲ್ಲ ಎಂದು ಹೇಳಿದ್ದರು. ಅದಕ್ಕಾಗಿಯೇ ಗ್ರಾಮ ಸ್ವರಾಜ್ಯ ಎಂಬ ಪರಿಕಲ್ಪನೆಯನ್ನು ಪ್ರತಿಪಾದಿಸಿದ್ದರು. ಗ್ರಾಮಗಳು ಸ್ವಾವಲಂಬಿಗಳಾಗಬೇಕು. ಆಗ ಮಾತ್ರ ಜನ, ದೇಶ ಸ್ವಾವಲಂಬಿಗಳಾಗಲು ಸಾಧ್ಯ.” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

“ಭಾರತದಲ್ಲಿ ಗುಡಿ ಕೈಗಾರಿಕೆಗಳು, ಅತಿ ಸಣ್ಣ ಕೈಗಾರಿಕೆಗಳು ಆರ್ಥಿಕತೆಯ ತಳಹದಿ. ಅದಕ್ಕೆ ಉತ್ತೇಜನ ನೀಡಬೇಕು ಎಂದು ಕರೆ ನೀಡಿದ್ದರು. ಗಾಂಧಿ ಭಾರತ ಕಟ್ಟುವ ಪ್ರಯತ್ನವನ್ನು ಪ್ರಾಮಾಣಿಕವಾಗಿ ಮಾಡಬೇಕು. ಅವರ ಮೌಲ್ಯಗಳನ್ನು ರೂಢಿಸಿಕೊಂಡು ಅದರಂತೆ ನಡೆಯುವ ಪ್ರಯತ್ನ ಮಾಡಬೇಕು.” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಇದನ್ನೂಓದಿ:  ಮಣಿಪುರವನ್ನು ವಿಭಜಿಸಲು ಬಯಸುವವರೊಂದಿಗೆ ಕೆಲವು ರಾಜಕಾರಣಿಗಳು ಕೈಜೋಡಿಸಿದ್ದಾರೆ: ಸಿಎಂ ಬಿರೇನ್ ಸಿಂಗ್

ಮಣಿಪುರವನ್ನು ವಿಭಜಿಸಲು ಬಯಸುವವರೊಂದಿಗೆ ಕೆಲವು ರಾಜಕಾರಣಿಗಳು ಕೈಜೋಡಿಸಿದ್ದಾರೆ: ಸಿಎಂ ಬಿರೇನ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...