Homeಮುಖಪುಟ`ಗಾಂಧಿ ಕೊಂದ ಗೋಡ್ಸೆ ದೇಶಭಕ್ತ’ – ಬಿಜೆಪಿ ನಾಯಕಿ ಪ್ರಗ್ಯಾ ಸಿಂಗ್ ವಿವಾದಿತ ಹೇಳಿಕೆ

`ಗಾಂಧಿ ಕೊಂದ ಗೋಡ್ಸೆ ದೇಶಭಕ್ತ’ – ಬಿಜೆಪಿ ನಾಯಕಿ ಪ್ರಗ್ಯಾ ಸಿಂಗ್ ವಿವಾದಿತ ಹೇಳಿಕೆ

- Advertisement -
- Advertisement -

ರಾಷ್ಟ್ರಪಿತ ಮಹಾತ್ಮ ಗಾಂಧಿಯನ್ನು ಕೊಂದ `ನಾಥೂರಾಮ್ ಗೂಡ್ಸೆ ನಿಜವಾದ ದೇಶಭಕ್ತ’ ಎಂದು ಹೇಳುವ ಮೂಲಕ ಬಿಜೆಪಿಯ ಭೂಪಾಲ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಗ್ಯಾ ಸಿಂಗ್ ಠಾಕೂರ್ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಇತ್ತೀಚೆಗಷ್ಟೆ ದಕ್ಷಿಣ ಭಾರತದ ಖ್ಯಾತ ನಟ ಕಮಲ್ ಹಸನ್ ಅವರು ಹೇಳಿದ್ದ “ಸ್ವತಂತ್ರ ಭಾರತದ ಪ್ರಥಮ ಭಯೋತ್ಪಾದಕ ಹಿಂದೂ ಆಗಿದ್ದ, ಆತ ಗೋಡ್ಸೆ” ಹೇಳಿಕೆಗೆ ಪ್ರತಿಯಾಗಿ `ಸಾಧ್ವಿ’ ಇಂಥಾ ಯಡವಟ್ಟು ಹೇಳಿಕೆ ನೀಡಿದ್ದಾರೆ.

2008ರ ಮಲೆಗಾಂವ್ ಬಾಂಬ್ ಸ್ಫೋಟದ ಪ್ರಧಾನ ಆರೋಪಿಯಾಗಿರುವ ಪ್ರಗ್ಯಾಸಿಂಗ್ ಹಿಂದೂ ಭಯೋತ್ಪಾದಕಿ ಎಂಬ ಹಣೆಪಟ್ಟಿ ಕಟ್ಟಿಕೊಂಡಿದ್ದರು. ಆ ಸ್ಪೋಟದಿಂದ ಆರು ಜನ ಪ್ರಾಣ ಕಳೆದುಕೊಂಡಿದ್ದರೆ, ನೂರಕ್ಕು ಹೆಚ್ಚು ಜನ ಗಾಯಗೊಂಡಿದ್ದರು. ಸದ್ಯ ನ್ಯಾಯಾಲಯದಡಿ ವಿಚಾರಣೆ ನಡೆಯುತ್ತಿರುವ ಆ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದು ಮಧ್ಯಪ್ರದೇಶದ ಭೂಪಾಲ್ ಕ್ಷೇತ್ರದಲ್ಲಿ ಕಾಂಗ್ರೆಸಿನ ದಿಗ್ವಿಜಯ್ ಸಿಂಗ್ ಎದುರು ಸ್ಪರ್ಧಿಸಿದ್ದಾರೆ.

ಕಮಲ್ ಹಸನ್ ಹೇಳಿಕೆಯನ್ನು ಉಲ್ಲೇಖಿಸಿ, ಸ್ವತಃ ತಾವೇ ಹಿಂದೂ ಭಯೋತ್ಪಾದನೆಯ ಆರೋಪಕ್ಕೆ ತುತ್ತಾಗಿರುವುದನ್ನು ಲಿಂಕ್ ಮಾಡಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರ ನೀಡುತ್ತಾ “ನಾಥೂರಾಂ ಗೂಡ್ಸೆ ದೇಶಭಕ್ತರಾಗಿದ್ದರು, ದೇಶಭಕ್ತರಾಗಿದ್ದಾರೆ ಮತ್ತು ದೇಶಭಕ್ತರಾಗಿಯೇ ಇರುತ್ತಾರೆ. ಅವರನ್ನು ಭಯೋತ್ಪಾದಕ ಎಂದು ಕರೆಯುವವರು ಮೊದಲು ತಮ್ಮನ್ನು ತಾವು ನೋಡಿಕೊಳ್ಳಲಿ. ಇಂಥಾ ಜನರಿಗೆ ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಾಗುವುದು” ಎಂದು ಉತ್ತರ ನೀಡಿದ್ದಾರೆ. 1948ರಲ್ಲಿ ಮಹಾತ್ಮಾ ಗಾಂಧಿಯವರನ್ನು ಗುಂಡಿಕ್ಕಿ ಕೊಂದ ನಾಥೂರಾಂ ಗೋಡ್ಸೆ ಹಿಂದೂ ಮಹಾಸಭಾದ ಸದಸ್ಯರಾಗಿದ್ದರು.

49 ವಯೋಮಾನದ ಪ್ರಗ್ಯಾಸಿಂಗ್ ಚುನಾವಣೆಗೆ ಇಳಿಯುವ ನಿರ್ಧಾರ ಪ್ರಕಟಿಸಿದಾಗಿನಿಂದ ಒಂದಿಲ್ಲೊಂದು ವಿವಾದಿತ ಹೇಳಿಕೆ ನೀಡಿ ವಿವಾದಕ್ಕೆ ಈಡಾಗುತ್ತಿದ್ದಾರೆ. 26/11 ಮುಂಬೈ ಉಗ್ರರ ದಾಳಿಯ ಸಂದರ್ಭದಲ್ಲಿ ಕಾದಾಡುತ್ತಾ ಉಗ್ರರ ಗುಂಡೇಟಿಗೆ ಬಲಿಯಾದ ನಿಷ್ಠಾವಂತ ಅಧಿಕಾರಿ ‘ಹೇಮಂತ್ ಕರ್ಕರೆಯವರಿಗೆ ನಾನು ಶಾಪ ಕೊಟ್ಟಿದ್ದರಿಂದಲೇ ಆ ಗತಿ ಉಂಟಾಯ್ತು’ (ಮಲೆಗಾಂವ್ ಬಾಂಬ್ ಸ್ಫೋಟದ ಪ್ರಕರಣದಲ್ಲಿ ಪ್ರಗ್ಯಾಸಿಂಗ್, ಕರ್ನಲ್ ಪುರೋಹಿತ್ ಮೊದಲಾದ ಆರೋಪಿಗಳ ಕೈವಾಡವನ್ನು ಪತ್ತೆ ಹಚ್ಚಿ ಬಂಧಿಸಿದ್ದ ತಂಡದಲ್ಲಿ ಈ ಅಧಿಕಾರಿ ಪ್ರಮುಖರಾಗಿದ್ದರು) ಎಂದಿದ್ದ ಪ್ರಗ್ಯಾ ಠಾಕೂರ್ ಆನಂತರ ಬಾಬ್ರಿ ಮಸೀದಿ ಧ್ವಂಸದಲ್ಲಿ ಭಾಗಿಯಾಗಿದ್ದಕ್ಕೆ ನನಗೆ ಹೆಮ್ಮೆ ಇದೆ ಎಂಬ ಹೇಳಿಕೆ ಕೊಟ್ಟಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

ಈಗಾಗಲೇ ಇಂಥಾ ಹಲವು ವಿವಾದಗಳಿಂದ ಹೈರಾಣಾಗಿರುವ ಬಿಜೆಪಿ ಪ್ರಗ್ಯಾರ ಈ ಹೊಸ ಹೇಳಿಕೆಯಿಂದ ಮತ್ತಷ್ಟು ಮುಜುಗರಕ್ಕೆ ತುತ್ತಾಗಿದ್ದು, ಪಕ್ಷದ ವಕ್ತಾರ ಜಿವಿಎಲ್ ನರಸಿಂಹರಾವ್, “ನಾಥೂರಾಂ ಗೋಡ್ಸೆ ಕುರಿತು ಪ್ರಗ್ಯಾ ಸಿಂಗರ ಹೇಳಿಕೆಯನ್ನು ಬಿಜೆಪಿ ಪಕ್ಷ ಖಂಡಿಸುತ್ತದೆ. ಅದಕ್ಕಾಗಿ ಪಕ್ಷ ಅವರಿಂದ ಸ್ಪಷ್ಟೀಕರಣವನ್ನೂ ಕೇಳಲಿದೆ. ಅವರು ಈ ಕೂಡಲೇ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...