Homeಮುಖಪುಟ`ಗಾಂಧಿ ಕೊಂದ ಗೋಡ್ಸೆ ದೇಶಭಕ್ತ’ – ಬಿಜೆಪಿ ನಾಯಕಿ ಪ್ರಗ್ಯಾ ಸಿಂಗ್ ವಿವಾದಿತ ಹೇಳಿಕೆ

`ಗಾಂಧಿ ಕೊಂದ ಗೋಡ್ಸೆ ದೇಶಭಕ್ತ’ – ಬಿಜೆಪಿ ನಾಯಕಿ ಪ್ರಗ್ಯಾ ಸಿಂಗ್ ವಿವಾದಿತ ಹೇಳಿಕೆ

- Advertisement -
- Advertisement -

ರಾಷ್ಟ್ರಪಿತ ಮಹಾತ್ಮ ಗಾಂಧಿಯನ್ನು ಕೊಂದ `ನಾಥೂರಾಮ್ ಗೂಡ್ಸೆ ನಿಜವಾದ ದೇಶಭಕ್ತ’ ಎಂದು ಹೇಳುವ ಮೂಲಕ ಬಿಜೆಪಿಯ ಭೂಪಾಲ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಗ್ಯಾ ಸಿಂಗ್ ಠಾಕೂರ್ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಇತ್ತೀಚೆಗಷ್ಟೆ ದಕ್ಷಿಣ ಭಾರತದ ಖ್ಯಾತ ನಟ ಕಮಲ್ ಹಸನ್ ಅವರು ಹೇಳಿದ್ದ “ಸ್ವತಂತ್ರ ಭಾರತದ ಪ್ರಥಮ ಭಯೋತ್ಪಾದಕ ಹಿಂದೂ ಆಗಿದ್ದ, ಆತ ಗೋಡ್ಸೆ” ಹೇಳಿಕೆಗೆ ಪ್ರತಿಯಾಗಿ `ಸಾಧ್ವಿ’ ಇಂಥಾ ಯಡವಟ್ಟು ಹೇಳಿಕೆ ನೀಡಿದ್ದಾರೆ.

2008ರ ಮಲೆಗಾಂವ್ ಬಾಂಬ್ ಸ್ಫೋಟದ ಪ್ರಧಾನ ಆರೋಪಿಯಾಗಿರುವ ಪ್ರಗ್ಯಾಸಿಂಗ್ ಹಿಂದೂ ಭಯೋತ್ಪಾದಕಿ ಎಂಬ ಹಣೆಪಟ್ಟಿ ಕಟ್ಟಿಕೊಂಡಿದ್ದರು. ಆ ಸ್ಪೋಟದಿಂದ ಆರು ಜನ ಪ್ರಾಣ ಕಳೆದುಕೊಂಡಿದ್ದರೆ, ನೂರಕ್ಕು ಹೆಚ್ಚು ಜನ ಗಾಯಗೊಂಡಿದ್ದರು. ಸದ್ಯ ನ್ಯಾಯಾಲಯದಡಿ ವಿಚಾರಣೆ ನಡೆಯುತ್ತಿರುವ ಆ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದು ಮಧ್ಯಪ್ರದೇಶದ ಭೂಪಾಲ್ ಕ್ಷೇತ್ರದಲ್ಲಿ ಕಾಂಗ್ರೆಸಿನ ದಿಗ್ವಿಜಯ್ ಸಿಂಗ್ ಎದುರು ಸ್ಪರ್ಧಿಸಿದ್ದಾರೆ.

ಕಮಲ್ ಹಸನ್ ಹೇಳಿಕೆಯನ್ನು ಉಲ್ಲೇಖಿಸಿ, ಸ್ವತಃ ತಾವೇ ಹಿಂದೂ ಭಯೋತ್ಪಾದನೆಯ ಆರೋಪಕ್ಕೆ ತುತ್ತಾಗಿರುವುದನ್ನು ಲಿಂಕ್ ಮಾಡಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರ ನೀಡುತ್ತಾ “ನಾಥೂರಾಂ ಗೂಡ್ಸೆ ದೇಶಭಕ್ತರಾಗಿದ್ದರು, ದೇಶಭಕ್ತರಾಗಿದ್ದಾರೆ ಮತ್ತು ದೇಶಭಕ್ತರಾಗಿಯೇ ಇರುತ್ತಾರೆ. ಅವರನ್ನು ಭಯೋತ್ಪಾದಕ ಎಂದು ಕರೆಯುವವರು ಮೊದಲು ತಮ್ಮನ್ನು ತಾವು ನೋಡಿಕೊಳ್ಳಲಿ. ಇಂಥಾ ಜನರಿಗೆ ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಾಗುವುದು” ಎಂದು ಉತ್ತರ ನೀಡಿದ್ದಾರೆ. 1948ರಲ್ಲಿ ಮಹಾತ್ಮಾ ಗಾಂಧಿಯವರನ್ನು ಗುಂಡಿಕ್ಕಿ ಕೊಂದ ನಾಥೂರಾಂ ಗೋಡ್ಸೆ ಹಿಂದೂ ಮಹಾಸಭಾದ ಸದಸ್ಯರಾಗಿದ್ದರು.

49 ವಯೋಮಾನದ ಪ್ರಗ್ಯಾಸಿಂಗ್ ಚುನಾವಣೆಗೆ ಇಳಿಯುವ ನಿರ್ಧಾರ ಪ್ರಕಟಿಸಿದಾಗಿನಿಂದ ಒಂದಿಲ್ಲೊಂದು ವಿವಾದಿತ ಹೇಳಿಕೆ ನೀಡಿ ವಿವಾದಕ್ಕೆ ಈಡಾಗುತ್ತಿದ್ದಾರೆ. 26/11 ಮುಂಬೈ ಉಗ್ರರ ದಾಳಿಯ ಸಂದರ್ಭದಲ್ಲಿ ಕಾದಾಡುತ್ತಾ ಉಗ್ರರ ಗುಂಡೇಟಿಗೆ ಬಲಿಯಾದ ನಿಷ್ಠಾವಂತ ಅಧಿಕಾರಿ ‘ಹೇಮಂತ್ ಕರ್ಕರೆಯವರಿಗೆ ನಾನು ಶಾಪ ಕೊಟ್ಟಿದ್ದರಿಂದಲೇ ಆ ಗತಿ ಉಂಟಾಯ್ತು’ (ಮಲೆಗಾಂವ್ ಬಾಂಬ್ ಸ್ಫೋಟದ ಪ್ರಕರಣದಲ್ಲಿ ಪ್ರಗ್ಯಾಸಿಂಗ್, ಕರ್ನಲ್ ಪುರೋಹಿತ್ ಮೊದಲಾದ ಆರೋಪಿಗಳ ಕೈವಾಡವನ್ನು ಪತ್ತೆ ಹಚ್ಚಿ ಬಂಧಿಸಿದ್ದ ತಂಡದಲ್ಲಿ ಈ ಅಧಿಕಾರಿ ಪ್ರಮುಖರಾಗಿದ್ದರು) ಎಂದಿದ್ದ ಪ್ರಗ್ಯಾ ಠಾಕೂರ್ ಆನಂತರ ಬಾಬ್ರಿ ಮಸೀದಿ ಧ್ವಂಸದಲ್ಲಿ ಭಾಗಿಯಾಗಿದ್ದಕ್ಕೆ ನನಗೆ ಹೆಮ್ಮೆ ಇದೆ ಎಂಬ ಹೇಳಿಕೆ ಕೊಟ್ಟಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

ಈಗಾಗಲೇ ಇಂಥಾ ಹಲವು ವಿವಾದಗಳಿಂದ ಹೈರಾಣಾಗಿರುವ ಬಿಜೆಪಿ ಪ್ರಗ್ಯಾರ ಈ ಹೊಸ ಹೇಳಿಕೆಯಿಂದ ಮತ್ತಷ್ಟು ಮುಜುಗರಕ್ಕೆ ತುತ್ತಾಗಿದ್ದು, ಪಕ್ಷದ ವಕ್ತಾರ ಜಿವಿಎಲ್ ನರಸಿಂಹರಾವ್, “ನಾಥೂರಾಂ ಗೋಡ್ಸೆ ಕುರಿತು ಪ್ರಗ್ಯಾ ಸಿಂಗರ ಹೇಳಿಕೆಯನ್ನು ಬಿಜೆಪಿ ಪಕ್ಷ ಖಂಡಿಸುತ್ತದೆ. ಅದಕ್ಕಾಗಿ ಪಕ್ಷ ಅವರಿಂದ ಸ್ಪಷ್ಟೀಕರಣವನ್ನೂ ಕೇಳಲಿದೆ. ಅವರು ಈ ಕೂಡಲೇ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...