Homeಮುಖಪುಟಗೋಡ್ಸೆ ಆರಾಧನೆ, ಹಿಂದೂ ರಾಷ್ಟ್ರಕ್ಕೆ ಕರೆ; ವಿವಾದಿತ ಶಾಸಕ ರಾಜಾಸಿಂಗ್ ವಿರುದ್ಧ ಸರಣಿ ಪ್ರಕರಣ ದಾಖಲು

ಗೋಡ್ಸೆ ಆರಾಧನೆ, ಹಿಂದೂ ರಾಷ್ಟ್ರಕ್ಕೆ ಕರೆ; ವಿವಾದಿತ ಶಾಸಕ ರಾಜಾಸಿಂಗ್ ವಿರುದ್ಧ ಸರಣಿ ಪ್ರಕರಣ ದಾಖಲು

- Advertisement -
- Advertisement -

ಉಚ್ಚಾಟಿತ ಬಿಜೆಪಿ ಶಾಸಕ ರಾಜಾ ಸಿಂಗ್ ವಿರುದ್ಧ ಒಂದರ ಹಿಂದೆ ಒಂದರಂತೆ ಪ್ರಕರಣಗಳನ್ನು ಕಳೆದ ಮೂರು ದಿನಗಳಿಂದ ಹೈದರಾಬಾದ್ ನಗರ ಪೊಲೀಸರು ದಾಖಲಿಸಿದ್ದಾರೆ.

ಮಹಾತ್ಮ ಗಾಂಧಿಯವರ ಹಂತಕ ನಾಥೂರಾಂ ಗೋಡ್ಸೆಯ ಭಾವಚಿತ್ರ ಪ್ರದರ್ಶನ ಮತ್ತು ಅಖಂಡ ಭಾರತ ನಿರ್ಮಾಣಕ್ಕೆ ಕರೆ ನೀಡಿದ ಹಿನ್ನೆಲೆಯಲ್ಲಿ ಗೋಶಾಮಹಲ್ ಶಾಸಕನ ವಿರುದ್ಧ ಇತ್ತೀಚಿನ ಪ್ರಕರಣ ದಾಖಲಾಗಿದೆ.

ಅಫ್ಘಾನಿಸ್ತಾನ, ಬಾಂಗ್ಲಾದೇಶ, ಭೂತಾನ್, ಭಾರತ, ಮಾಲ್ಡೀವ್ಸ್, ಮ್ಯಾನ್ಮಾರ್, ನೇಪಾಳ, ಪಾಕಿಸ್ತಾನ, ಶ್ರೀಲಂಕಾ ಮತ್ತು ಟಿಬೆಟ್ ಎಲ್ಲವೂ ‘ಅಖಂಡಾ ಭಾರತ’ದ ಭಾಗವೆಂದು ಬಲಪಂಥೀಯ ಗುಂಪುಗಳು ಮೊದಲಿನಿಂದಲೂ ಪ್ರತಿಪಾದಿಸುತ್ತಾ ಬರುತ್ತಿವೆ.

ಇದರ ನಡುವೆ ಮಾರ್ಚ್ 30 ರ ಗುರುವಾರದ ರಾಮನವಮಿ ಮೆರವಣಿಗೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಕ್ಕಾಗಿ ರಾಜಾ ಸಿಂಗ್‌ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

“ರ್‍ಯಾಲಿಯಲ್ಲಿ ನಾಥೂರಾಮ್ ಗೋಡ್ಸೆ‌ಯ ಚಿತ್ರವನ್ನು ಪ್ರದರ್ಶಿಸಿದ್ದಕ್ಕಾಗಿ ಮತ್ತು ಅಖಂಡ ಭಾರತದ ಬಗ್ಗೆ ಮಾತನಾಡಿದ ಬಿಜೆಪಿ ಶಾಸಕ ರಾಜಾ ಸಿಂಗ್ ವಿರುದ್ಧ ನಾವು ಪ್ರಕರಣ ದಾಖಲಿಸಿದ್ದೇವೆ. ಬೇಗಂ ಬಜಾರ್ ಚತ್ರಿ ಪ್ರದೇಶದಲ್ಲಿ (ಶಾಹ್ ಇನಾಯತ್ ಗುಂಜ್‌ನ ನೆರೆಹೊರೆ) ರಾಜಾ ಸಿಂಗ್ ಭಾಷಣ ಮಾಡಿದ್ದಾರೆ” ಎಂದು ಡಿಸಿಪಿ (ನೈಋತ್ಯ ವಲಯ-ಹೈದರಾಬಾದ್) ಕಿರಣ್ ಖರೆ ತಿಳಿಸಿರುವುದಾಗಿ ‘ಸೌತ್ ಫಸ್ಟ್’ ಜಾಲತಾಣ ವರದಿ ಮಾಡಿದೆ.

ರಾಜಾ ಸಿಂಗ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ, “ಪೊಲೀಸರು ಅನಗತ್ಯವಾಗಿ ನನ್ನನ್ನು ಪ್ರಕರಣದಲ್ಲಿ ಸಿಲುಕಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಕಳೆದ ವರ್ಷ ನವೆಂಬರ್‌ನಲ್ಲಿ ತೆಲಂಗಾಣ ಹೈಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ ನಂತರ ರಾಜಾ ಸಿಂಗ್‌ ವಿರುದ್ಧ ದಾಖಲಾದ 10ನೇ ಪ್ರಕರಣ ಇದಾಗಿದೆ.

ಗೋಶಾಮಹಲ್ ಶಾಸಕ ರಾಜಾ ಸಿಂಗ್ ಗುರುವಾರ ಹೈದರಾಬಾದ್‌ನಲ್ಲಿ ರಾಮನವಮಿ ಮೆರವಣಿಗೆಗೆ ಚಾಲನೆ ನೀಡಿದರು. ಭಾರತವನ್ನು ಹಿಂದೂ ರಾಷ್ಟ್ರ (ರಾಷ್ಟ್ರ) ಮಾಡುವುದಾಗಿ ತಮ್ಮ ಬೆಂಬಲಿಗರೊಂದಿಗೆ ಪ್ರತಿಜ್ಞೆ ಮಾಡಿದರು.

“ನಾನು, ರಾಜಾ ಸಿಂಗ್, ಭಾರತವನ್ನು ಅಖಂಡ ಹಿಂದೂ ರಾಷ್ಟ್ರವನ್ನಾಗಿ ಮಾಡಲು ಈ ಪ್ರಮಾಣ ಮಾಡುತ್ತಿದ್ದೇನೆ. ಭಾರತ ಹಿಂದೂ ರಾಷ್ಟ್ರ ಆಗುವವರೆಗೂ ನಾನು ಸುಮ್ಮನಿರುವುದಿಲ್ಲ” ಎಂದು ತಿಳಿಸಿದರು.

ನಂತರ ರಾಜಾ ಸಿಂಗ್ ಲವ್ ಜಿಹಾದ್ ಬಗ್ಗೆ ಮಾತನಾಡಿದರು. ಲವ್‌ ಜಿಹಾದ್ ಸಂಘಪರಿವಾರ ಕಲ್ಪಿತ ಪಿತೂರಿ ಸಿದ್ಧಾಂತವೆಂದೇ ಗುರುತಿಸಲ್ಪಟ್ಟಿದೆ.

“ನಾನು ಸಂತರನ್ನು ರಕ್ಷಿಸುತ್ತೇನೆ, ಲವ್ ಜಿಹಾದ್‌ಗೆ ಧೈರ್ಯದಿಂದ ಉತ್ತರಿಸುತ್ತೇನೆ, ಗೋಹತ್ಯೆ ನಡೆಯಲು ಬಿಡುವುದಿಲ್ಲ. ನಾನು ಹಿಂದೂ ರಾಷ್ಟ್ರಕ್ಕಾಗಿ ನನ್ನ ಪ್ರಾಣವನ್ನೇ ನೀಡುತ್ತೇನೆ. ಜಾತಿ ಮತ್ತು ರಾಜಕೀಯದ ಆಧಾರದ ಮೇಲೆ (ರಾಷ್ಟ್ರವನ್ನು) ವಿಭಜಿಸುವುದಿಲ್ಲ. ನನ್ನ ಕೊನೆಯ ಉಸಿರು ಇರುವವರೆಗೂ ನನಗೆ ಒಂದೇ ಒಂದು ಉದ್ದೇಶವಿದೆ: ಅದು ಹಿಂದೂ ರಾಷ್ಟ್ರ” ಎಂದು ಹೇಳಿದರು.

ಇದನ್ನೂ ಓದಿರಿ: ಮರುಕಳಿಸಿದ ದ್ವೇಷ ಭಾಷಣ: ಹೈಕೋರ್ಟ್ ಆದೇಶ ಉಲ್ಲಂಘಿಸಿ ಮತ್ತೆ ನಾಲಿಗೆ ಹರಿಬಿಟ್ಟ ಶಾಸಕ ರಾಜಾಸಿಂಗ್

ಹಿಂದೂ ರಾಷ್ಟ್ರದಲ್ಲಿ ರಚಿಸಲಾಗುವ ಕಾನೂನಿನ ಕುರಿತು ಮಾತನಾಡಿದ ಅವರು, “ಹಿಂದೂಗಳಿಗೆ ಮಾತ್ರ ಮತದಾನದ ಹಕ್ಕು ನೀಡಲಾಗುವುದು” ಎಂದು ಘೋಷಿಸಿದ್ದಾರೆ.

ಇದರ ನಡುವೆ ನಿರ್ದಿಷ್ಟ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಒಬ್ಬ ವ್ಯಕ್ತಿ ಮತ್ತು ನಗರ ಮೂಲದ ಸುದ್ದಿ ವಾಹಿನಿಯ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣವನ್ನು ಹೈದರಾಬಾದ್‌ನ ಬಂಜಾರಾ ಹಿಲ್ಸ್ ಪೊಲೀಸರು ದಾಖಲಿಸಿದ್ದಾರೆ.

ವ್ಯಕ್ತಿಯನ್ನು ನಗರ ಮೂಲದ ಸಾಮಾಜಿಕ ಕಾರ್ಯಕರ್ತ ಫೈಸಲ್ ಖಾನ್ ಎಂದು ಗುರುತಿಸಲಾಗಿದೆ. ಅವರು ಎಎಸ್ ನ್ಯೂಸ್ ನೆಟ್‌ವರ್ಕ್ ಸಹಾಯದಿಂದ ರಸ್ತೆಯಲ್ಲಿ ವೀಡಿಯೊವನ್ನು ಚಿತ್ರೀಕರಿಸಿದ್ದಾರೆ ಮತ್ತು ಅದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...