Homeಮುಖಪುಟಗೋಡ್ಸೆ ಆರಾಧನೆ, ಹಿಂದೂ ರಾಷ್ಟ್ರಕ್ಕೆ ಕರೆ; ವಿವಾದಿತ ಶಾಸಕ ರಾಜಾಸಿಂಗ್ ವಿರುದ್ಧ ಸರಣಿ ಪ್ರಕರಣ ದಾಖಲು

ಗೋಡ್ಸೆ ಆರಾಧನೆ, ಹಿಂದೂ ರಾಷ್ಟ್ರಕ್ಕೆ ಕರೆ; ವಿವಾದಿತ ಶಾಸಕ ರಾಜಾಸಿಂಗ್ ವಿರುದ್ಧ ಸರಣಿ ಪ್ರಕರಣ ದಾಖಲು

- Advertisement -
- Advertisement -

ಉಚ್ಚಾಟಿತ ಬಿಜೆಪಿ ಶಾಸಕ ರಾಜಾ ಸಿಂಗ್ ವಿರುದ್ಧ ಒಂದರ ಹಿಂದೆ ಒಂದರಂತೆ ಪ್ರಕರಣಗಳನ್ನು ಕಳೆದ ಮೂರು ದಿನಗಳಿಂದ ಹೈದರಾಬಾದ್ ನಗರ ಪೊಲೀಸರು ದಾಖಲಿಸಿದ್ದಾರೆ.

ಮಹಾತ್ಮ ಗಾಂಧಿಯವರ ಹಂತಕ ನಾಥೂರಾಂ ಗೋಡ್ಸೆಯ ಭಾವಚಿತ್ರ ಪ್ರದರ್ಶನ ಮತ್ತು ಅಖಂಡ ಭಾರತ ನಿರ್ಮಾಣಕ್ಕೆ ಕರೆ ನೀಡಿದ ಹಿನ್ನೆಲೆಯಲ್ಲಿ ಗೋಶಾಮಹಲ್ ಶಾಸಕನ ವಿರುದ್ಧ ಇತ್ತೀಚಿನ ಪ್ರಕರಣ ದಾಖಲಾಗಿದೆ.

ಅಫ್ಘಾನಿಸ್ತಾನ, ಬಾಂಗ್ಲಾದೇಶ, ಭೂತಾನ್, ಭಾರತ, ಮಾಲ್ಡೀವ್ಸ್, ಮ್ಯಾನ್ಮಾರ್, ನೇಪಾಳ, ಪಾಕಿಸ್ತಾನ, ಶ್ರೀಲಂಕಾ ಮತ್ತು ಟಿಬೆಟ್ ಎಲ್ಲವೂ ‘ಅಖಂಡಾ ಭಾರತ’ದ ಭಾಗವೆಂದು ಬಲಪಂಥೀಯ ಗುಂಪುಗಳು ಮೊದಲಿನಿಂದಲೂ ಪ್ರತಿಪಾದಿಸುತ್ತಾ ಬರುತ್ತಿವೆ.

ಇದರ ನಡುವೆ ಮಾರ್ಚ್ 30 ರ ಗುರುವಾರದ ರಾಮನವಮಿ ಮೆರವಣಿಗೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಕ್ಕಾಗಿ ರಾಜಾ ಸಿಂಗ್‌ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

“ರ್‍ಯಾಲಿಯಲ್ಲಿ ನಾಥೂರಾಮ್ ಗೋಡ್ಸೆ‌ಯ ಚಿತ್ರವನ್ನು ಪ್ರದರ್ಶಿಸಿದ್ದಕ್ಕಾಗಿ ಮತ್ತು ಅಖಂಡ ಭಾರತದ ಬಗ್ಗೆ ಮಾತನಾಡಿದ ಬಿಜೆಪಿ ಶಾಸಕ ರಾಜಾ ಸಿಂಗ್ ವಿರುದ್ಧ ನಾವು ಪ್ರಕರಣ ದಾಖಲಿಸಿದ್ದೇವೆ. ಬೇಗಂ ಬಜಾರ್ ಚತ್ರಿ ಪ್ರದೇಶದಲ್ಲಿ (ಶಾಹ್ ಇನಾಯತ್ ಗುಂಜ್‌ನ ನೆರೆಹೊರೆ) ರಾಜಾ ಸಿಂಗ್ ಭಾಷಣ ಮಾಡಿದ್ದಾರೆ” ಎಂದು ಡಿಸಿಪಿ (ನೈಋತ್ಯ ವಲಯ-ಹೈದರಾಬಾದ್) ಕಿರಣ್ ಖರೆ ತಿಳಿಸಿರುವುದಾಗಿ ‘ಸೌತ್ ಫಸ್ಟ್’ ಜಾಲತಾಣ ವರದಿ ಮಾಡಿದೆ.

ರಾಜಾ ಸಿಂಗ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ, “ಪೊಲೀಸರು ಅನಗತ್ಯವಾಗಿ ನನ್ನನ್ನು ಪ್ರಕರಣದಲ್ಲಿ ಸಿಲುಕಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಕಳೆದ ವರ್ಷ ನವೆಂಬರ್‌ನಲ್ಲಿ ತೆಲಂಗಾಣ ಹೈಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ ನಂತರ ರಾಜಾ ಸಿಂಗ್‌ ವಿರುದ್ಧ ದಾಖಲಾದ 10ನೇ ಪ್ರಕರಣ ಇದಾಗಿದೆ.

ಗೋಶಾಮಹಲ್ ಶಾಸಕ ರಾಜಾ ಸಿಂಗ್ ಗುರುವಾರ ಹೈದರಾಬಾದ್‌ನಲ್ಲಿ ರಾಮನವಮಿ ಮೆರವಣಿಗೆಗೆ ಚಾಲನೆ ನೀಡಿದರು. ಭಾರತವನ್ನು ಹಿಂದೂ ರಾಷ್ಟ್ರ (ರಾಷ್ಟ್ರ) ಮಾಡುವುದಾಗಿ ತಮ್ಮ ಬೆಂಬಲಿಗರೊಂದಿಗೆ ಪ್ರತಿಜ್ಞೆ ಮಾಡಿದರು.

“ನಾನು, ರಾಜಾ ಸಿಂಗ್, ಭಾರತವನ್ನು ಅಖಂಡ ಹಿಂದೂ ರಾಷ್ಟ್ರವನ್ನಾಗಿ ಮಾಡಲು ಈ ಪ್ರಮಾಣ ಮಾಡುತ್ತಿದ್ದೇನೆ. ಭಾರತ ಹಿಂದೂ ರಾಷ್ಟ್ರ ಆಗುವವರೆಗೂ ನಾನು ಸುಮ್ಮನಿರುವುದಿಲ್ಲ” ಎಂದು ತಿಳಿಸಿದರು.

ನಂತರ ರಾಜಾ ಸಿಂಗ್ ಲವ್ ಜಿಹಾದ್ ಬಗ್ಗೆ ಮಾತನಾಡಿದರು. ಲವ್‌ ಜಿಹಾದ್ ಸಂಘಪರಿವಾರ ಕಲ್ಪಿತ ಪಿತೂರಿ ಸಿದ್ಧಾಂತವೆಂದೇ ಗುರುತಿಸಲ್ಪಟ್ಟಿದೆ.

“ನಾನು ಸಂತರನ್ನು ರಕ್ಷಿಸುತ್ತೇನೆ, ಲವ್ ಜಿಹಾದ್‌ಗೆ ಧೈರ್ಯದಿಂದ ಉತ್ತರಿಸುತ್ತೇನೆ, ಗೋಹತ್ಯೆ ನಡೆಯಲು ಬಿಡುವುದಿಲ್ಲ. ನಾನು ಹಿಂದೂ ರಾಷ್ಟ್ರಕ್ಕಾಗಿ ನನ್ನ ಪ್ರಾಣವನ್ನೇ ನೀಡುತ್ತೇನೆ. ಜಾತಿ ಮತ್ತು ರಾಜಕೀಯದ ಆಧಾರದ ಮೇಲೆ (ರಾಷ್ಟ್ರವನ್ನು) ವಿಭಜಿಸುವುದಿಲ್ಲ. ನನ್ನ ಕೊನೆಯ ಉಸಿರು ಇರುವವರೆಗೂ ನನಗೆ ಒಂದೇ ಒಂದು ಉದ್ದೇಶವಿದೆ: ಅದು ಹಿಂದೂ ರಾಷ್ಟ್ರ” ಎಂದು ಹೇಳಿದರು.

ಇದನ್ನೂ ಓದಿರಿ: ಮರುಕಳಿಸಿದ ದ್ವೇಷ ಭಾಷಣ: ಹೈಕೋರ್ಟ್ ಆದೇಶ ಉಲ್ಲಂಘಿಸಿ ಮತ್ತೆ ನಾಲಿಗೆ ಹರಿಬಿಟ್ಟ ಶಾಸಕ ರಾಜಾಸಿಂಗ್

ಹಿಂದೂ ರಾಷ್ಟ್ರದಲ್ಲಿ ರಚಿಸಲಾಗುವ ಕಾನೂನಿನ ಕುರಿತು ಮಾತನಾಡಿದ ಅವರು, “ಹಿಂದೂಗಳಿಗೆ ಮಾತ್ರ ಮತದಾನದ ಹಕ್ಕು ನೀಡಲಾಗುವುದು” ಎಂದು ಘೋಷಿಸಿದ್ದಾರೆ.

ಇದರ ನಡುವೆ ನಿರ್ದಿಷ್ಟ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಒಬ್ಬ ವ್ಯಕ್ತಿ ಮತ್ತು ನಗರ ಮೂಲದ ಸುದ್ದಿ ವಾಹಿನಿಯ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣವನ್ನು ಹೈದರಾಬಾದ್‌ನ ಬಂಜಾರಾ ಹಿಲ್ಸ್ ಪೊಲೀಸರು ದಾಖಲಿಸಿದ್ದಾರೆ.

ವ್ಯಕ್ತಿಯನ್ನು ನಗರ ಮೂಲದ ಸಾಮಾಜಿಕ ಕಾರ್ಯಕರ್ತ ಫೈಸಲ್ ಖಾನ್ ಎಂದು ಗುರುತಿಸಲಾಗಿದೆ. ಅವರು ಎಎಸ್ ನ್ಯೂಸ್ ನೆಟ್‌ವರ್ಕ್ ಸಹಾಯದಿಂದ ರಸ್ತೆಯಲ್ಲಿ ವೀಡಿಯೊವನ್ನು ಚಿತ್ರೀಕರಿಸಿದ್ದಾರೆ ಮತ್ತು ಅದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...