Homeಮುಖಪುಟಗೋಡ್ಸೆ ಆರಾಧನೆ, ಹಿಂದೂ ರಾಷ್ಟ್ರಕ್ಕೆ ಕರೆ; ವಿವಾದಿತ ಶಾಸಕ ರಾಜಾಸಿಂಗ್ ವಿರುದ್ಧ ಸರಣಿ ಪ್ರಕರಣ ದಾಖಲು

ಗೋಡ್ಸೆ ಆರಾಧನೆ, ಹಿಂದೂ ರಾಷ್ಟ್ರಕ್ಕೆ ಕರೆ; ವಿವಾದಿತ ಶಾಸಕ ರಾಜಾಸಿಂಗ್ ವಿರುದ್ಧ ಸರಣಿ ಪ್ರಕರಣ ದಾಖಲು

- Advertisement -
- Advertisement -

ಉಚ್ಚಾಟಿತ ಬಿಜೆಪಿ ಶಾಸಕ ರಾಜಾ ಸಿಂಗ್ ವಿರುದ್ಧ ಒಂದರ ಹಿಂದೆ ಒಂದರಂತೆ ಪ್ರಕರಣಗಳನ್ನು ಕಳೆದ ಮೂರು ದಿನಗಳಿಂದ ಹೈದರಾಬಾದ್ ನಗರ ಪೊಲೀಸರು ದಾಖಲಿಸಿದ್ದಾರೆ.

ಮಹಾತ್ಮ ಗಾಂಧಿಯವರ ಹಂತಕ ನಾಥೂರಾಂ ಗೋಡ್ಸೆಯ ಭಾವಚಿತ್ರ ಪ್ರದರ್ಶನ ಮತ್ತು ಅಖಂಡ ಭಾರತ ನಿರ್ಮಾಣಕ್ಕೆ ಕರೆ ನೀಡಿದ ಹಿನ್ನೆಲೆಯಲ್ಲಿ ಗೋಶಾಮಹಲ್ ಶಾಸಕನ ವಿರುದ್ಧ ಇತ್ತೀಚಿನ ಪ್ರಕರಣ ದಾಖಲಾಗಿದೆ.

ಅಫ್ಘಾನಿಸ್ತಾನ, ಬಾಂಗ್ಲಾದೇಶ, ಭೂತಾನ್, ಭಾರತ, ಮಾಲ್ಡೀವ್ಸ್, ಮ್ಯಾನ್ಮಾರ್, ನೇಪಾಳ, ಪಾಕಿಸ್ತಾನ, ಶ್ರೀಲಂಕಾ ಮತ್ತು ಟಿಬೆಟ್ ಎಲ್ಲವೂ ‘ಅಖಂಡಾ ಭಾರತ’ದ ಭಾಗವೆಂದು ಬಲಪಂಥೀಯ ಗುಂಪುಗಳು ಮೊದಲಿನಿಂದಲೂ ಪ್ರತಿಪಾದಿಸುತ್ತಾ ಬರುತ್ತಿವೆ.

ಇದರ ನಡುವೆ ಮಾರ್ಚ್ 30 ರ ಗುರುವಾರದ ರಾಮನವಮಿ ಮೆರವಣಿಗೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಕ್ಕಾಗಿ ರಾಜಾ ಸಿಂಗ್‌ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

“ರ್‍ಯಾಲಿಯಲ್ಲಿ ನಾಥೂರಾಮ್ ಗೋಡ್ಸೆ‌ಯ ಚಿತ್ರವನ್ನು ಪ್ರದರ್ಶಿಸಿದ್ದಕ್ಕಾಗಿ ಮತ್ತು ಅಖಂಡ ಭಾರತದ ಬಗ್ಗೆ ಮಾತನಾಡಿದ ಬಿಜೆಪಿ ಶಾಸಕ ರಾಜಾ ಸಿಂಗ್ ವಿರುದ್ಧ ನಾವು ಪ್ರಕರಣ ದಾಖಲಿಸಿದ್ದೇವೆ. ಬೇಗಂ ಬಜಾರ್ ಚತ್ರಿ ಪ್ರದೇಶದಲ್ಲಿ (ಶಾಹ್ ಇನಾಯತ್ ಗುಂಜ್‌ನ ನೆರೆಹೊರೆ) ರಾಜಾ ಸಿಂಗ್ ಭಾಷಣ ಮಾಡಿದ್ದಾರೆ” ಎಂದು ಡಿಸಿಪಿ (ನೈಋತ್ಯ ವಲಯ-ಹೈದರಾಬಾದ್) ಕಿರಣ್ ಖರೆ ತಿಳಿಸಿರುವುದಾಗಿ ‘ಸೌತ್ ಫಸ್ಟ್’ ಜಾಲತಾಣ ವರದಿ ಮಾಡಿದೆ.

ರಾಜಾ ಸಿಂಗ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ, “ಪೊಲೀಸರು ಅನಗತ್ಯವಾಗಿ ನನ್ನನ್ನು ಪ್ರಕರಣದಲ್ಲಿ ಸಿಲುಕಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಕಳೆದ ವರ್ಷ ನವೆಂಬರ್‌ನಲ್ಲಿ ತೆಲಂಗಾಣ ಹೈಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ ನಂತರ ರಾಜಾ ಸಿಂಗ್‌ ವಿರುದ್ಧ ದಾಖಲಾದ 10ನೇ ಪ್ರಕರಣ ಇದಾಗಿದೆ.

ಗೋಶಾಮಹಲ್ ಶಾಸಕ ರಾಜಾ ಸಿಂಗ್ ಗುರುವಾರ ಹೈದರಾಬಾದ್‌ನಲ್ಲಿ ರಾಮನವಮಿ ಮೆರವಣಿಗೆಗೆ ಚಾಲನೆ ನೀಡಿದರು. ಭಾರತವನ್ನು ಹಿಂದೂ ರಾಷ್ಟ್ರ (ರಾಷ್ಟ್ರ) ಮಾಡುವುದಾಗಿ ತಮ್ಮ ಬೆಂಬಲಿಗರೊಂದಿಗೆ ಪ್ರತಿಜ್ಞೆ ಮಾಡಿದರು.

“ನಾನು, ರಾಜಾ ಸಿಂಗ್, ಭಾರತವನ್ನು ಅಖಂಡ ಹಿಂದೂ ರಾಷ್ಟ್ರವನ್ನಾಗಿ ಮಾಡಲು ಈ ಪ್ರಮಾಣ ಮಾಡುತ್ತಿದ್ದೇನೆ. ಭಾರತ ಹಿಂದೂ ರಾಷ್ಟ್ರ ಆಗುವವರೆಗೂ ನಾನು ಸುಮ್ಮನಿರುವುದಿಲ್ಲ” ಎಂದು ತಿಳಿಸಿದರು.

ನಂತರ ರಾಜಾ ಸಿಂಗ್ ಲವ್ ಜಿಹಾದ್ ಬಗ್ಗೆ ಮಾತನಾಡಿದರು. ಲವ್‌ ಜಿಹಾದ್ ಸಂಘಪರಿವಾರ ಕಲ್ಪಿತ ಪಿತೂರಿ ಸಿದ್ಧಾಂತವೆಂದೇ ಗುರುತಿಸಲ್ಪಟ್ಟಿದೆ.

“ನಾನು ಸಂತರನ್ನು ರಕ್ಷಿಸುತ್ತೇನೆ, ಲವ್ ಜಿಹಾದ್‌ಗೆ ಧೈರ್ಯದಿಂದ ಉತ್ತರಿಸುತ್ತೇನೆ, ಗೋಹತ್ಯೆ ನಡೆಯಲು ಬಿಡುವುದಿಲ್ಲ. ನಾನು ಹಿಂದೂ ರಾಷ್ಟ್ರಕ್ಕಾಗಿ ನನ್ನ ಪ್ರಾಣವನ್ನೇ ನೀಡುತ್ತೇನೆ. ಜಾತಿ ಮತ್ತು ರಾಜಕೀಯದ ಆಧಾರದ ಮೇಲೆ (ರಾಷ್ಟ್ರವನ್ನು) ವಿಭಜಿಸುವುದಿಲ್ಲ. ನನ್ನ ಕೊನೆಯ ಉಸಿರು ಇರುವವರೆಗೂ ನನಗೆ ಒಂದೇ ಒಂದು ಉದ್ದೇಶವಿದೆ: ಅದು ಹಿಂದೂ ರಾಷ್ಟ್ರ” ಎಂದು ಹೇಳಿದರು.

ಇದನ್ನೂ ಓದಿರಿ: ಮರುಕಳಿಸಿದ ದ್ವೇಷ ಭಾಷಣ: ಹೈಕೋರ್ಟ್ ಆದೇಶ ಉಲ್ಲಂಘಿಸಿ ಮತ್ತೆ ನಾಲಿಗೆ ಹರಿಬಿಟ್ಟ ಶಾಸಕ ರಾಜಾಸಿಂಗ್

ಹಿಂದೂ ರಾಷ್ಟ್ರದಲ್ಲಿ ರಚಿಸಲಾಗುವ ಕಾನೂನಿನ ಕುರಿತು ಮಾತನಾಡಿದ ಅವರು, “ಹಿಂದೂಗಳಿಗೆ ಮಾತ್ರ ಮತದಾನದ ಹಕ್ಕು ನೀಡಲಾಗುವುದು” ಎಂದು ಘೋಷಿಸಿದ್ದಾರೆ.

ಇದರ ನಡುವೆ ನಿರ್ದಿಷ್ಟ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಒಬ್ಬ ವ್ಯಕ್ತಿ ಮತ್ತು ನಗರ ಮೂಲದ ಸುದ್ದಿ ವಾಹಿನಿಯ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣವನ್ನು ಹೈದರಾಬಾದ್‌ನ ಬಂಜಾರಾ ಹಿಲ್ಸ್ ಪೊಲೀಸರು ದಾಖಲಿಸಿದ್ದಾರೆ.

ವ್ಯಕ್ತಿಯನ್ನು ನಗರ ಮೂಲದ ಸಾಮಾಜಿಕ ಕಾರ್ಯಕರ್ತ ಫೈಸಲ್ ಖಾನ್ ಎಂದು ಗುರುತಿಸಲಾಗಿದೆ. ಅವರು ಎಎಸ್ ನ್ಯೂಸ್ ನೆಟ್‌ವರ್ಕ್ ಸಹಾಯದಿಂದ ರಸ್ತೆಯಲ್ಲಿ ವೀಡಿಯೊವನ್ನು ಚಿತ್ರೀಕರಿಸಿದ್ದಾರೆ ಮತ್ತು ಅದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...