Homeಮುಖಪುಟಗೋಡ್ಸೆ ಆರಾಧನೆ, ಹಿಂದೂ ರಾಷ್ಟ್ರಕ್ಕೆ ಕರೆ; ವಿವಾದಿತ ಶಾಸಕ ರಾಜಾಸಿಂಗ್ ವಿರುದ್ಧ ಸರಣಿ ಪ್ರಕರಣ ದಾಖಲು

ಗೋಡ್ಸೆ ಆರಾಧನೆ, ಹಿಂದೂ ರಾಷ್ಟ್ರಕ್ಕೆ ಕರೆ; ವಿವಾದಿತ ಶಾಸಕ ರಾಜಾಸಿಂಗ್ ವಿರುದ್ಧ ಸರಣಿ ಪ್ರಕರಣ ದಾಖಲು

- Advertisement -
- Advertisement -

ಉಚ್ಚಾಟಿತ ಬಿಜೆಪಿ ಶಾಸಕ ರಾಜಾ ಸಿಂಗ್ ವಿರುದ್ಧ ಒಂದರ ಹಿಂದೆ ಒಂದರಂತೆ ಪ್ರಕರಣಗಳನ್ನು ಕಳೆದ ಮೂರು ದಿನಗಳಿಂದ ಹೈದರಾಬಾದ್ ನಗರ ಪೊಲೀಸರು ದಾಖಲಿಸಿದ್ದಾರೆ.

ಮಹಾತ್ಮ ಗಾಂಧಿಯವರ ಹಂತಕ ನಾಥೂರಾಂ ಗೋಡ್ಸೆಯ ಭಾವಚಿತ್ರ ಪ್ರದರ್ಶನ ಮತ್ತು ಅಖಂಡ ಭಾರತ ನಿರ್ಮಾಣಕ್ಕೆ ಕರೆ ನೀಡಿದ ಹಿನ್ನೆಲೆಯಲ್ಲಿ ಗೋಶಾಮಹಲ್ ಶಾಸಕನ ವಿರುದ್ಧ ಇತ್ತೀಚಿನ ಪ್ರಕರಣ ದಾಖಲಾಗಿದೆ.

ಅಫ್ಘಾನಿಸ್ತಾನ, ಬಾಂಗ್ಲಾದೇಶ, ಭೂತಾನ್, ಭಾರತ, ಮಾಲ್ಡೀವ್ಸ್, ಮ್ಯಾನ್ಮಾರ್, ನೇಪಾಳ, ಪಾಕಿಸ್ತಾನ, ಶ್ರೀಲಂಕಾ ಮತ್ತು ಟಿಬೆಟ್ ಎಲ್ಲವೂ ‘ಅಖಂಡಾ ಭಾರತ’ದ ಭಾಗವೆಂದು ಬಲಪಂಥೀಯ ಗುಂಪುಗಳು ಮೊದಲಿನಿಂದಲೂ ಪ್ರತಿಪಾದಿಸುತ್ತಾ ಬರುತ್ತಿವೆ.

ಇದರ ನಡುವೆ ಮಾರ್ಚ್ 30 ರ ಗುರುವಾರದ ರಾಮನವಮಿ ಮೆರವಣಿಗೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಕ್ಕಾಗಿ ರಾಜಾ ಸಿಂಗ್‌ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

“ರ್‍ಯಾಲಿಯಲ್ಲಿ ನಾಥೂರಾಮ್ ಗೋಡ್ಸೆ‌ಯ ಚಿತ್ರವನ್ನು ಪ್ರದರ್ಶಿಸಿದ್ದಕ್ಕಾಗಿ ಮತ್ತು ಅಖಂಡ ಭಾರತದ ಬಗ್ಗೆ ಮಾತನಾಡಿದ ಬಿಜೆಪಿ ಶಾಸಕ ರಾಜಾ ಸಿಂಗ್ ವಿರುದ್ಧ ನಾವು ಪ್ರಕರಣ ದಾಖಲಿಸಿದ್ದೇವೆ. ಬೇಗಂ ಬಜಾರ್ ಚತ್ರಿ ಪ್ರದೇಶದಲ್ಲಿ (ಶಾಹ್ ಇನಾಯತ್ ಗುಂಜ್‌ನ ನೆರೆಹೊರೆ) ರಾಜಾ ಸಿಂಗ್ ಭಾಷಣ ಮಾಡಿದ್ದಾರೆ” ಎಂದು ಡಿಸಿಪಿ (ನೈಋತ್ಯ ವಲಯ-ಹೈದರಾಬಾದ್) ಕಿರಣ್ ಖರೆ ತಿಳಿಸಿರುವುದಾಗಿ ‘ಸೌತ್ ಫಸ್ಟ್’ ಜಾಲತಾಣ ವರದಿ ಮಾಡಿದೆ.

ರಾಜಾ ಸಿಂಗ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ, “ಪೊಲೀಸರು ಅನಗತ್ಯವಾಗಿ ನನ್ನನ್ನು ಪ್ರಕರಣದಲ್ಲಿ ಸಿಲುಕಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಕಳೆದ ವರ್ಷ ನವೆಂಬರ್‌ನಲ್ಲಿ ತೆಲಂಗಾಣ ಹೈಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ ನಂತರ ರಾಜಾ ಸಿಂಗ್‌ ವಿರುದ್ಧ ದಾಖಲಾದ 10ನೇ ಪ್ರಕರಣ ಇದಾಗಿದೆ.

ಗೋಶಾಮಹಲ್ ಶಾಸಕ ರಾಜಾ ಸಿಂಗ್ ಗುರುವಾರ ಹೈದರಾಬಾದ್‌ನಲ್ಲಿ ರಾಮನವಮಿ ಮೆರವಣಿಗೆಗೆ ಚಾಲನೆ ನೀಡಿದರು. ಭಾರತವನ್ನು ಹಿಂದೂ ರಾಷ್ಟ್ರ (ರಾಷ್ಟ್ರ) ಮಾಡುವುದಾಗಿ ತಮ್ಮ ಬೆಂಬಲಿಗರೊಂದಿಗೆ ಪ್ರತಿಜ್ಞೆ ಮಾಡಿದರು.

“ನಾನು, ರಾಜಾ ಸಿಂಗ್, ಭಾರತವನ್ನು ಅಖಂಡ ಹಿಂದೂ ರಾಷ್ಟ್ರವನ್ನಾಗಿ ಮಾಡಲು ಈ ಪ್ರಮಾಣ ಮಾಡುತ್ತಿದ್ದೇನೆ. ಭಾರತ ಹಿಂದೂ ರಾಷ್ಟ್ರ ಆಗುವವರೆಗೂ ನಾನು ಸುಮ್ಮನಿರುವುದಿಲ್ಲ” ಎಂದು ತಿಳಿಸಿದರು.

ನಂತರ ರಾಜಾ ಸಿಂಗ್ ಲವ್ ಜಿಹಾದ್ ಬಗ್ಗೆ ಮಾತನಾಡಿದರು. ಲವ್‌ ಜಿಹಾದ್ ಸಂಘಪರಿವಾರ ಕಲ್ಪಿತ ಪಿತೂರಿ ಸಿದ್ಧಾಂತವೆಂದೇ ಗುರುತಿಸಲ್ಪಟ್ಟಿದೆ.

“ನಾನು ಸಂತರನ್ನು ರಕ್ಷಿಸುತ್ತೇನೆ, ಲವ್ ಜಿಹಾದ್‌ಗೆ ಧೈರ್ಯದಿಂದ ಉತ್ತರಿಸುತ್ತೇನೆ, ಗೋಹತ್ಯೆ ನಡೆಯಲು ಬಿಡುವುದಿಲ್ಲ. ನಾನು ಹಿಂದೂ ರಾಷ್ಟ್ರಕ್ಕಾಗಿ ನನ್ನ ಪ್ರಾಣವನ್ನೇ ನೀಡುತ್ತೇನೆ. ಜಾತಿ ಮತ್ತು ರಾಜಕೀಯದ ಆಧಾರದ ಮೇಲೆ (ರಾಷ್ಟ್ರವನ್ನು) ವಿಭಜಿಸುವುದಿಲ್ಲ. ನನ್ನ ಕೊನೆಯ ಉಸಿರು ಇರುವವರೆಗೂ ನನಗೆ ಒಂದೇ ಒಂದು ಉದ್ದೇಶವಿದೆ: ಅದು ಹಿಂದೂ ರಾಷ್ಟ್ರ” ಎಂದು ಹೇಳಿದರು.

ಇದನ್ನೂ ಓದಿರಿ: ಮರುಕಳಿಸಿದ ದ್ವೇಷ ಭಾಷಣ: ಹೈಕೋರ್ಟ್ ಆದೇಶ ಉಲ್ಲಂಘಿಸಿ ಮತ್ತೆ ನಾಲಿಗೆ ಹರಿಬಿಟ್ಟ ಶಾಸಕ ರಾಜಾಸಿಂಗ್

ಹಿಂದೂ ರಾಷ್ಟ್ರದಲ್ಲಿ ರಚಿಸಲಾಗುವ ಕಾನೂನಿನ ಕುರಿತು ಮಾತನಾಡಿದ ಅವರು, “ಹಿಂದೂಗಳಿಗೆ ಮಾತ್ರ ಮತದಾನದ ಹಕ್ಕು ನೀಡಲಾಗುವುದು” ಎಂದು ಘೋಷಿಸಿದ್ದಾರೆ.

ಇದರ ನಡುವೆ ನಿರ್ದಿಷ್ಟ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಒಬ್ಬ ವ್ಯಕ್ತಿ ಮತ್ತು ನಗರ ಮೂಲದ ಸುದ್ದಿ ವಾಹಿನಿಯ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣವನ್ನು ಹೈದರಾಬಾದ್‌ನ ಬಂಜಾರಾ ಹಿಲ್ಸ್ ಪೊಲೀಸರು ದಾಖಲಿಸಿದ್ದಾರೆ.

ವ್ಯಕ್ತಿಯನ್ನು ನಗರ ಮೂಲದ ಸಾಮಾಜಿಕ ಕಾರ್ಯಕರ್ತ ಫೈಸಲ್ ಖಾನ್ ಎಂದು ಗುರುತಿಸಲಾಗಿದೆ. ಅವರು ಎಎಸ್ ನ್ಯೂಸ್ ನೆಟ್‌ವರ್ಕ್ ಸಹಾಯದಿಂದ ರಸ್ತೆಯಲ್ಲಿ ವೀಡಿಯೊವನ್ನು ಚಿತ್ರೀಕರಿಸಿದ್ದಾರೆ ಮತ್ತು ಅದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...