Homeಮುಖಪುಟಗೊಗೋಯ್ ಬಿಜೆಪಿ ರಾಜಕಾರಣ ಈ ಇಬ್ಬರು `ನ್ಯಾಯ' ಪಟುಗಳು ಏನು ಹೇಳ್ತಾರೆ

ಗೊಗೋಯ್ ಬಿಜೆಪಿ ರಾಜಕಾರಣ ಈ ಇಬ್ಬರು `ನ್ಯಾಯ’ ಪಟುಗಳು ಏನು ಹೇಳ್ತಾರೆ

- Advertisement -
- Advertisement -

ಜನವರಿ 2018: ದೇಶದ ಅತಿ ಹೆಚ್ಚು ನಂಬಿಕಸ್ಥ ಸಂಸ್ಥೆ ಮತ್ತು ಬಿಕ್ಕಟ್ಟನ ಸಮಯದಲ್ಲಿ ಕೊನೆಯ ಅಶಾವಾದ ಎಂದು ಪರಿಗಣಿಸಲಾಗುವ ಸುಪ್ರೀಂಕೋರ್ಟ್‍ನ ನಾಲ್ವರು ಹಿರಿಯ ನ್ಯಾಯಮೂರ್ತಿಗಳು ಪತ್ರಿಕಾಗೋಷ್ಠಿ ನಡೆಸಿ ಅಂದಿನ ಸುಪ್ರೀಂಕೋರ್ಟ್ ಮುಖ್ಯನ್ಯಾಯಾಧೀಶ ದೀಪಕ್ ಮಿಶ್ರ ಅವರು ಕೋರ್ಟ್ ಪ್ರಕರಣಗಳ ವಿಚಾರಣೆಯಲ್ಲಿ ನ್ಯಾಯಪೀಠಗಳನ್ನು ರಚಿಸುತ್ತಿರುವ ಅವರ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ತಾವು ಬರೆದಿದ್ದ ಪತ್ರದ ಬಗ್ಗೆ ಮಾಧ್ಯಮಗಳ ಜೊತೆ ಹಂಚಿಕೊಂಡಾಗ, ಅನ್ಯಾಯದ ವಿರುದ್ಧ ಸಾರ್ವಜನಿಕವಾಗಿ ಪ್ರತಿಭಟಿಸುವ ಗುಣ ಸುಪ್ರೀಂಕೋರ್ಟ್‍ನಂತಹ ಸಂಸ್ಥೆಯ ಹಿರಿಯ ನ್ಯಾಯಮೂರ್ತಿಗಳಿಗೂ ಇರುವ ಬಗ್ಗೆ ಬಹುತೇಕರಿಗೆ ಮೆಚ್ಚುಗೆಯಾಗಿತ್ತು. ಅಂದು ಪತ್ರಿಕಾಗೋಷ್ಠಿ ನಡೆಸಿದ್ದ ನಾಲ್ವರು ನ್ಯಾಯಮೂರ್ತಿಗಳು: ಕುರಿಯನ್ ಜೋಸೆಫ್, ಚಲಮೇಶ್ವರ್, ರಂಜನ್ ಗೊಗೋಯ್ ಮತ್ತು ಮದನ್ ಲೋಕೂರ್.

ದೀಪಕ್ ಮಿಶ್ರಾ ಅವರ ನಿವೃತ್ತಿ ನಂತರ ಮುಖ್ಯ ನ್ಯಾಯಾಧೀಶರ ಸ್ಥಾನ ಅಲಂಕರಿಸಿದ್ದು ರಂಜನ್ ಗೊಗೋಯ್. ಅಧಿಕಾರ ಸ್ವೀಕರಿಸಿದ ನಂತರದ ಅವರ ಮುಂದಿನ ನಡೆಗಳು ಅವರು ಪತ್ರಿಕಾಗೋಷ್ಠಿಯಲ್ಲಿ ತಳೆದಿದ್ದ ನಿಲುವಿಗೆ ಬಹುತೇಕ ತದ್ವಿರುದ್ಧವಾಗಿ ಕಂಡಿದ್ದು, ಈಗ ಪ್ರಸಕ್ತ ಕೇಂದ್ರ ಸರ್ಕಾರ ಅವರನ್ನು ರಾಜ್ಯಸಭೆಗೆ ನೇಮಕ ಮಾಡಿರುವುದು ಹಲವು ಪ್ರಶ್ನೆಗಳಿಗೆ, ಅನುಮಾನಗಳಿಗೆ ಅವಕಾಶ ಮಾಡಿಕೊಟ್ಟಿದೆ. ಇಂತಹ ನೇಮಕಾತಿಗಳು ಇಡೀ ನ್ಯಾಯಾಂಗ ವ್ಯವಸ್ಥೆಯ ಬಗ್ಗೆ ಅನುಮಾನ ತಳೆಯುವಂತೆ ಮಾಡುತ್ತವೆ ಕೂಡ. ಇದರ ಬಗ್ಗೆ ಅಂದು ಪತ್ರಿಕಾ ಗೋಷ್ಠಿಯಲ್ಲಿ ಜತೆಯಾಗಿದ್ದ ಮತ್ತೊಬ್ಬ ನ್ಯಾಯಾಧೀಶ (ನಿವೃತ್ತ) ಪ್ರತಿಕ್ರಿಯಿಸಿದ್ದು “ನ್ಯಾಯಮೂರ್ತಿ ಗೊಗೋಯ್ ಅವರಿಗೆ ಸಿಗುವ ಗೌರವದ ಬಗ್ಗೆ ಹಲವು ದಿನಗಳಿಂದ ಊಹೆ ಇತ್ತು. ಆ ನಿಟ್ಟಿನಲ್ಲಿ ಈ ನೇಮಕ ಅಷ್ಟು ಆಶ್ಚರ್ಯಕರವಾದುದ್ದಲ್ಲ. ಆದರೆ ಅದು ಇಷ್ಟು ತ್ವರಿತವಾಗಿ ಆಗಿದ್ದು ಅಚ್ಚರಿ. ಇದು ನ್ಯಾಯಾಂಗದ ಸ್ವಾಯತ್ತತೆ, ನಿಷ್ಪಕ್ಷಪಾತ ಮತ್ತು ಪ್ರಾಮಾಣಿಕತೆಯನ್ನು ಮರುವ್ಯಾಖ್ಯಾನ ಮಾಡುತ್ತದೆ. ಕೊನೆಯ ನಂಬಿಕೆಯೂ ಕಳಚಿತೆ?” ಎಂದು ಹೇಳಿರುವುದಾಗಿ ದ ಇಂಡನ್ ಎಕ್ಸ್ಪ್ರೆಸ್ ಪತ್ರಿಕೆ ವರದಿ ಮಾಡಿದೆ.

ಈ ಮೊದಲೂ ಎನ್‍ಡಿಎ ಸರ್ಕಾರ ನ್ಯಾಯಮೂರ್ತಿಗಳನ್ನು ಅವರ ನಿವೃತ್ತಿಯ ತಕ್ಷಣವೇ ಕಾಯಾರ್ಂಗ ಹುದ್ದೆಗಳಿಗೆ ನೇಮಕ ಮಾಡಿದ ಉದಾಹರಣೆಗಳಿವೆ. 2014 ರಲ್ಲಿ ಎನ್‍ಡಿಎ ಸರ್ಕಾರ ನಿವೃತ್ತ ನ್ಯಾಯಾಧೀಶ ಪಿ ಸದಾಶಿವಂ ಅವರನ್ನು ಕೇರಳದ ರಾಜ್ಯಪಾಲರನ್ನಾಗಿ ನೇಮಿಸಿತ್ತು.

“ಇದು ನ್ಯಾಯಾಂಗದ ಸ್ವಾಯತ್ತತೆ ಮತ್ತು ನಿಷ್ಪಕ್ಷಪಾತಕ್ಕೆ ಒದಗಿದ ಧಕ್ಕೆ. ಸರ್ಕಾರದ ಇಂತಹ ಉಡುಗೊರೆಗಳನ್ನು ಇತ್ತೀಚೆಗಷ್ಟೇ ನಿವೃತ್ತರಾದ ನ್ಯಾಯಮೂರ್ತಿಗಳು ಒಪ್ಪಿಕೊಂಡುಬಿಟ್ಟರೆ, ನಮ್ಮ ಕಾನೂನು ವಿದ್ಯಾರ್ಥಿಗಳಿಗೆ, ನಮ್ಮ ವಕೀಲರಿಗೆ, ನಮ್ಮ ಕಕ್ಷೀದಾರರಿಗೆ ನ್ಯಾಯಾಲಯದ ಸ್ವಾಯತ್ತತೆಯ ಬಗ್ಗೆ ಏನು ಉತ್ತರ ನೀಡುವುದು. ಈ ಹಿಂದೆ ಎನ್‍ಡಿಎ ಸರ್ಕಾರ ನಿವೃತ್ತ ನ್ಯಾಯಾಧೀಶ ಸದಾಶಿವನ್ ಅವರನ್ನು ರಾಜ್ಯಪಾಲರನ್ನಾಗಿ ನೇಮಿಸಿತ್ತು. ಈಗ ನ್ಯಾಯಮೂರ್ತಿ ರಂಜನ್ ಗೊಗೋಯ್ ಅವರನ್ನು ರಾಜ್ಯಸಭೆಗೆ ನೇಮಿಸಿದೆ. ಕೇಂದ್ರ ಸರ್ಕಾರಕ್ಕೆ ರಾಜ್ಯಸಭೆಗೆ ನ್ಯಾಯಮೂರ್ತಿಗಳನ್ನು ನೇಮಿಸಬೇಕು ಎಂದಿದ್ದರೆ, ಹತ್ತು ಬೇರೆ ನ್ಯಾಯಾಧೀಶರುಗಳು ಇದ್ದರು. ಇತ್ತೀಚೆಗಷ್ಟೇ ನಿವೃತ್ತರಾದ ನ್ಯಾಯಮೂರ್ತಿ ಗೊಗೋಯ್ ಅವರನ್ನು ನೇಮಿಸಿದ್ದು ಏಕೆ? ಕೇಂದ್ರ ಸರ್ಕಾರ ತಾನು ಗೆದ್ದ ಕೇಸುಗಳಿಗೆ ಇದನ್ನು ಉಡುಗೊರೆಯಾಗಿ ನೀಡುತ್ತಿರುವ ಅನುಮಾನ ಮೂಡುವುದಿಲ್ಲವೇ? ನಿವೃತ್ತರಾದರೂ ನಾವು ಇವರನ್ನೆಲ್ಲಾ ನ್ಯಾಯಮೂರ್ತಿಗಳು ಮತ್ತು ಯುವರ್ ಹಾನರ್ ಎಂದೇ ಸಂಬೋಧಿಸುವುದು. ಕಾರ್ಯಾಂಗ ಮತ್ತು ನ್ಯಾಯಾಂಗದ ನಡುವೆ ಇರಬೇಕಾದ ಗೋಡೆಯ ಬಗ್ಗೆ ಯಾರು ಹೇಳಬೇಕು” ಎಂದು ಸುಪ್ರೀಂ ಕೋರ್ಟ್ ಹಿರಿಯ ವಕೀಲರಾದ ಸಂಜಯ್ ಹೆಗಡೆ ನ್ಯಾಯಪಥದೊಂದಿಗೆ ತಮ್ಮ ಆಕ್ರೋಶವನ್ನು ಹಂಚಿಕೊಂಡಿದ್ದಾರೆ.

ಹೀಗೆ ಸುಪ್ರೀಂಕೋರ್ಟ್ ಮುಖ್ಯನ್ಯಾಯಾಧೀಶರು ನಿವೃತ್ತಿ ಪಡೆದ ಕೆಲವೇ ತಿಂಗಳುಗಳಲ್ಲಿ ಸರ್ಕಾರ ಇಂತಹ ನೇಮಕ ಮಾಡಿರುವುದು ಇದೇ ಮೊದಲು ಎನ್ನುವ ಸಂಜಯ್ ಹೆಗಡೆ “ಈ ಹಿಂದೆ ಕಾಂಗ್ರೆಸ್ ವಿರೋಧಪಕ್ಷದಲ್ಲಿ ಇದ್ದಾಗ ನಿವೃತ್ತ ನ್ಯಾಯಾಧೀಶ ರಂಗನಾಥ್ ಮಿಶ್ರ ಅವರನ್ನು ರಾಜ್ಯಸಭೆಗೆ ನಾಮಕರಣ ಮಾಡಿತ್ತು. ಅದು ಕೂಡ ತಪ್ಪು ನಡೆಯೇ ಆದರೂ, ಕನಿಷ್ಟ ಪಕ್ಷ ಆ ನ್ಯಾಯಾಧೀಶರ ನಿವೃತ್ತಿಗೂ ಮತ್ತು ರಾಜ್ಯಸಭೆಯ ನಾಮಕರಣಕ್ಕೂ ಎಂಟು ವರ್ಷಗಳ ಅಂತರವಿತ್ತು” ಎನ್ನುತ್ತಾರೆ.

ಮಾಜಿ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೋಯ್ ಅವರು ತಮ್ಮ ಕಾಲಾವಧಿಯಲ್ಲಿ ನಡೆಸಿದ ವಿಚಾರಣೆಗಳು ಮತ್ತು ನೀಡಿದ ತೀರ್ಪುಗಳು ಕೂಡ ಇಂತಹ ಅನುಮಾನಗಳಿಗೆ ಪುಷ್ಠಿ ಕೊಟ್ಟಿದೆ. ರಫೇಲ್ ವಿಮಾನಗಳ ಖರೀದಿಯಲ್ಲಿ ಭ್ರಷ್ಟಚಾರ ನಡೆದಿದೆ ಎಂಬ ಕೇಂದ್ರ ಸರ್ಕಾರದ ವಿರುದ್ಧದ ಆರೋಪ ಆಗಲಿ, ಸಿಬಿಐ ನಿರ್ದೇಶಕರನ್ನು ಕೇಂದ್ರ ಸರ್ಕಾರ ವಜಾ ಮಾಡಿದ್ದ ವಿವಾದವಾಗಲೀ, ನ್ಯಾಯಮೂರ್ತಿ ಗೊಗೋಯ್ ತಮ್ಮ ಅವಧಿಯಲ್ಲಿ ವಿಚಾರಣೆಗಳನ್ನು ಮುಂದೂಡಿದ ಬಗೆ ಅಥವಾ ಅವರು ನೀಡಿದ ಹಲವು ತೀರ್ಪುಗಳು ಕೇಂದ್ರ ಸರ್ಕಾರದ ಪರವಾಗಿತ್ತು ಎಂಬ ಟೀಕೆ ಹಲವು ವಲಯಗಳಿಂದ ಕೇಳಿಬರುತ್ತಲೇ ಇತ್ತು. ಹಾಗೆಯೇ ಅಸ್ಸಾಮಿನಲ್ಲಿ ನಾಗರಿಕರ ನೊಂದಣಿಗೆ ನೀಡಿದ್ದ ರಂಜನ್ ಗೊಗೋಯ್ ಅವರ ಆದೇಶ ಮುಂದೆ ಕೇಂದ್ರ ಸರ್ಕಾರಕ್ಕೆ ವಿವಾದಾತ್ಮಕ ಸಿಎಎ ತರಲು ಸಹಾಯ ಮಾಡಿತ್ತು.

ಇಂತಹ ಘನತೆವೆತ್ತ ಸಂಸ್ಥೆಗಳ ಸ್ವಾಯತ್ತತೆಗೆ ಧಕ್ಕೆ ತರಲು ಸರ್ಕಾರಗಳು ಪ್ರಯತ್ನ ಮಾಡುತ್ತಲೇ ಇರುತ್ತವೆ. ಈ ಹಿಂದೆ ರಾಜಕೀಯದಿಂದ ನ್ಯಾಯಾಂಗಕ್ಕೆ ಹೋಗಿ ಮತ್ತೆ ರಾಜಕೀಯಕ್ಕೆ ಹಿಂದಿರುಗಿದ ಉದಾಹರಣೆಗಳು ಇವೆ. ಭಾರತ ರಾಷ್ಟ್ರೀಯ ಕಾಂಗ್ರೆಸ್ ಸದಸ್ಯರಾಗಿ ರಾಜ್ಯಸಭೆಗೆ ಆಯ್ಕೆಯಾಗಿದ್ದ ಬಹುರುಲ್ ಇಸ್ಲಾಮ್ ಅವರು ರಾಜ್ಯಸಭೆಗೆ ರಾಜೀನಾಮೆ ನೀಡಿ ಗೌಹಾಟಿ ಹೈಕೋರ್ಟ್ ನ್ಯಾಯಾಧೀಶರಾಗಿದ್ದರು. ಅವರು ಸುಪ್ರೀಮ್ ಕೋರ್ಟ್ ನ್ಯಾಯಾಧೀಶರಾಗಿ ಕೂಡ ಕಾರ್ಯ ನಿರ್ವಹಿಸಿದ್ದರು. ತಮ್ಮ ಅವಧಿಯಲ್ಲಿ ನ್ಯಾಯಾಧೀಶ ಬಹುರುಲ್ ಇಸ್ಲಾಮ್ ಅವರು ಅಂದಿನ ಕಾಂಗ್ರೆಸ್ ಬಿಹಾರ ಮುಖ್ಯಮಂತ್ರಿ ಜಗನ್ನಾಥ್ ಮಿಶ್ರಾ ಅವರನ್ನು ನಗರ ಕೋಆಪರೆಟಿವ್ ಬ್ಯಾಂಕಿನ ಹಗರಣದ ಆರೋಪದಿಂದ ಮುಕ್ತಗೊಳಿಸಿ ತೀರ್ಪು ನೀಡಿದ್ದರು. ನಂತರ ಸುಪ್ರೀಂಕೋರ್ಟ್‍ಗೆ ರಾಜೀನಾಮೆ ನೀಡಿ ಮತ್ತೆ ಕಾಂಗ್ರೆಸ್ ಪಕ್ಷದಿಂದ ರಾಜ್ಯಸಭೆಗೆ ಸ್ಪರ್ಧಿಸಿದ್ದರು.

ಸರ್ಕಾರಗಳ ಆಮಿಷಗಳನ್ನು- ಕೊಡುಗೆಗಳನ್ನು ತಿರಸ್ಕರಿಸಿದ ನ್ಯಾಯಮೂರ್ತಿಗಳ ಉದಾಹರಣೆಗಳು ಕೂಡ ಹೇರಳವಾಗಿದೆ. ಪಶ್ಚಿಮ ಬಂಗಾಳದಲ್ಲಿ ಟಾಟ ಮೋಟಾರ್ಸ್ ಸಂಸ್ಥೆಗೆ ನೀಡಲು ಸಾವಿರ ಎಕರೆ ಜಮೀನನ್ನು 2006ರಲ್ಲಿ ರೈತರಿಂದ ವಶಪಡಿಸಿಕೊಂಡಿದ್ದ ಮುಖ್ಯಮಂತ್ರಿ ಬುದ್ಧದೇವ ಭಟ್ಟಾಚಾರ್ಯ ಸರ್ಕಾರದ ನಡೆ ಭಾರಿ ವಿವಾದಕ್ಕೆ ಕಾರಣವಾಗಿತ್ತು. ಮುಂದಿನ ಚುನಾವಣೆಯಲ್ಲಿ ಇದನ್ನೆ ಪ್ರಮುಖ ವಿಷಯವನ್ನಾಗಿಸಿ ಹೋರಾಡಿ ಮಮತಾ ಬ್ಯಾನರ್ಜಿ ಅವರ ಪಕ್ಷ ಪಶ್ಚಿಮ ಬಂಗಾಳದಲ್ಲಿ ಜಯಭೇರಿ ಬಾರಿಸಿ, ಮಮತಾ ಮುಖ್ಯಮಂತ್ರಿಯಾದರು. ಆದರೆ 2016ರಲ್ಲಿ ಸುಪ್ರೀಂಕೋರ್ಟ್‍ನಲ್ಲಿ ಇದರ ವಿಚಾರಣೆ ನಡೆದು, ನ್ಯಾಯಮೂರ್ತಿ ವಿ ಗೋಪಾಲ ಗೌಡ ಅವರನ್ನು ಒಳಗೊಂಡ ನ್ಯಾಯಪೀಠ ಜಮೀನು ವಶಪಡಿಸಿಕೊಂಡಿರುವುದು ಅಕ್ರಮ ಎಂದು ತೀರ್ಪು ಕೊಟ್ಟು, 12 ವಾರಗಳೊಳಗೆ ರೈತರಿಗೆ ಜಮೀನನ್ನು ಹಿಂದಿರುಗಿಸುವಂತೆ ಅಂದಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಸೂಚಿಸಿತ್ತು. ಇದಾದ ಕೆಲವೇ ತಿಂಗಳುಗಳಲ್ಲಿ ನ್ಯಾಯಮೂರ್ತಿ ಗೋಪಾಲಗೌಡ ನಿವೃತ್ತರಾಗಿದ್ದರು. ನಿವೃತ್ತಿಯ ನಂತರ ಅವರನ್ನು ಮಾನವ ಹಕ್ಕುಗಳ ಆಯೋಗದ ಮುಖ್ಯಸ್ಥರನ್ನಾಗಿ ನೇಮಿಸಲು ಪಶ್ಚಿಮ ಬಂಗಾಳ ಸರ್ಕಾರದಿಂದ ಪರೋಕ್ಷವಾಗಿ ಬಂದ ಕೊಡುಗೆಯನ್ನು ನಿರಾಕರಿಸಿದ್ದನ್ನು ನೆನಪಿಸಿಕೊಳ್ಳುವ ನ್ಯಾಯಾಧೀಶ ಗೋಪಾಲಗೌಡ ಅವರು “ಮಾನವ ಹಕ್ಕುಗಳ ಕಮಿಶನ್ ಮುಖ್ಯಸ್ಥನ ಹುದ್ದೆ ಆಗಲೀ, ಅಥವಾ ಸರ್ಕಾರ ನೀಡುವ ಇನ್ಯಾವುದೇ ಹುದ್ದೆಯನ್ನು ನಾನು ಒಪ್ಪಿಕೊಳ್ಳುವುದಿಲ್ಲ” ಎಂದು ತಮಗೆ ಸಂದೇಶ ನೀಡಿದವರಿಗೆ ತಿಳಿಸಿದ್ದನ್ನು ನ್ಯಾಯಪಥದೊಂದಿಗೆ ಹಂಚಿಕೊಂಡರು.

ಏಪ್ರಿಲ್ 2019ರಲ್ಲಿ ತಮ್ಮ ವಿರುದ್ಧ ಬಂದ ಲೈಂಗಿಕ ದೌರ್ಜನ್ಯದ ಆರೋಪದ ವಿರುದ್ಧ ನ್ಯಾಯಮೂರ್ತಿ ರಂಜನ್ ಗೊಗೋಯ್ ನಡೆದುಕೊಂಡ ಬಗೆ ವ್ಯಾಪಕ ಟೀಕೆಗೆ ಗುರಿಯಾಗಿತ್ತು. ತಮ್ಮ ವಿರುದ್ಧದ ಆರೋಪದ ವಿಚಾರಣೆಯನ್ನು ನಡೆಸುವ ಪೀಠಕ್ಕೆ ತಾವೇ ಮುಖ್ಯಸ್ಥರಾಗಿದ್ದರು. ಆಗಸ್ಟ್ 2019ರಲ್ಲಿ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತ್ವರಿತ ವಿಚಾರಣೆಗೆ ಉತ್ಸುಕರಾಗಿ, ಪ್ರತಿದಿನ ವಿಚಾರಣೆಯನ್ನು ನಡೆಸಲು ಮುಂದಾದರು. ಇದರ ನಡುವೆ ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಗೊಳಿಸಿ ಅಲ್ಲಿ ತೀವ್ರ ನಿರ್ಭಂಧ ಹೇರಿದ್ದನ್ನು ಪ್ರಶ್ನಿಸಿ, ಸುಪ್ರೀಂಕೋರ್ಟ್‍ಗೆ ಅರ್ಜಿ ಬಂದಾಗ, ಬಾಬ್ರಿ ಪ್ರಕರಣದಲ್ಲಿ ಕಾರ್ಯನಿರತನಾಗಿರುವ ಕಾರಣ ಹೇಳಿ ಆ ಅರ್ಜಿಯನ್ನು ಬೇರೆ ಪೀಠಕ್ಕೆ ಗೊಗೋಯ್ ವರ್ಗಾಯಿಸಿದ್ದರು. ನಂತರ ಬಾಬ್ರಿ ಮಸೀದಿ ಧ್ವಂಸದ ತೀರ್ಪು ಕೂಡ ಹಲವು ವಲಯಗಳಿಂದ ಭಾರಿ ಟೀಕೆಗೆ ಗುರಿಯಾಗಿತ್ತು. ತೀರ್ಪುಗಳನ್ನು ಬರೆದವರ ನ್ಯಾಯಮೂರ್ತಿಗಳ ಹೆಸರನ್ನು ಕೂಡ ತಿಳಿಸದೆ, ಬಾಭ್ರಿ ಮಸೀದಿ ಧ್ವಂಸ ಕಾನೂನು ಬಾಹಿರ ಅಂತ ಹೇಳಿಯೂ ಅಲ್ಲಿ ರಾಮಮಂದಿರ ಕಟ್ಟಲು ಅವಕಾಶ ನೀಡಿದ ತೀರ್ಪಿನ ಉದ್ದೇಶಗಳು ಗೊಂದಲಮಯವಾಗಿದ್ದವು.

ಸುಪ್ರೀಂಕೋರ್ಟ್‍ನ ಸ್ವಾಯತ್ತತೆ ಉಳಿಸಿಕೊಳ್ಳುವ ಸಲುವಾಗಿ ಹಿಂದೆಂದೂ ಕಂಡರಿಯದ ಪತ್ರಿಕಾಗೋಷ್ಠಿಯ ಭಾಗವಾಗಿದ್ದ ರಂಜನ್ ಗೊಗೋಯ್ ಅವರು, ಅವರೇ ಮುಖ್ಯ ನ್ಯಾಯಾಧೀಶರಾಗಿ ಅಧಿಕಾರ ಸ್ವೀಕರಿಸಿದ ಮೇಲೆ ನಡೆಸಿದ ವಿಚಾರಣೆಗಳು, ಕೊಟ್ಟ ತೀರ್ಪುಗಳು ಮತ್ತು ಈಗ ನಿವೃತ್ತಿಯ ನಂತರ ಸರ್ಕಾರದ ನೇಮಕವನ್ನು ಒಪ್ಪಿಕೊಂಡಿರುವ ಪ್ರಥಮದವರೆಗೂ ವಿವಾದಾತ್ಮಕ ನ್ಯಾಯಾಧೀಶರಾಗಿ ಇತಿಹಾಸದಲ್ಲಿ ಉಳಿಯಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...