Homeಮುಖಪುಟಸೇತುವೆಗಳನ್ನು ಕಟ್ಟಿ, ಗೋಡೆಗಳನ್ನಲ್ಲ: ರೈತ ಹೋರಾಟ ಹಣಿಯುವ ಕೇಂದ್ರದ ಕ್ರಮಕ್ಕೆ ರಾಹುಲ್ ವಿರೋಧ

ಸೇತುವೆಗಳನ್ನು ಕಟ್ಟಿ, ಗೋಡೆಗಳನ್ನಲ್ಲ: ರೈತ ಹೋರಾಟ ಹಣಿಯುವ ಕೇಂದ್ರದ ಕ್ರಮಕ್ಕೆ ರಾಹುಲ್ ವಿರೋಧ

ನಾವು ಶಾಂತಿಯುತವಾಗಿದ್ದೆವು, ಶಾಂತಿಯುವಾಗಿದ್ದೇವೆ ಮತ್ತು ಶಾಂತಿಯುತವಾಗಿರುತ್ತೇವೆ. ನಿಮ್ಮ ಗೂಂಡಾಗಳಿಂದ ನಮ್ಮನ್ನು ಪ್ರಚೋದಿಸಬೇಡಿ - ಕಿಸಾನ್ ಏಕ್ತಾ ಮೋರ್ಚಾ

- Advertisement -
- Advertisement -

ಕೃಷಿ ಕಾನೂನುಗಳ ವಿರುದ್ಧ ಹೋರಾಡುತ್ತಿರುವ ರೈತರನ್ನು ದಮನಿಸಲು ಮತ್ತು ಹೆಚ್ಚಿನ ರೈತರು ಪ್ರತಿಭಟನೆಗೆ ಬಂದು ಸೇರದಂತೆ ತಡೆಯಲು ಕೇಂದ್ರ ಸರ್ಕಾರವು ರಸ್ತೆಗಳನ್ನು ಅಗೆದು, ಚೂಪಾದ ಮೊಳೆಗಳನ್ನು ನೆಟ್ಟಿ, ದೊಡ್ಡ ದೊಡ್ಡ ಗೋಡೆಗಳು, ಮುಳ್ಳುತಂತಿಗಳು, ಬ್ಯಾರಿಕೇಡ್‌ಗಳನ್ನು ಹಾಕುತ್ತಿರುವುದಕ್ಕೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರೋಧ ವ್ಯಕ್ತಪಡಿಸಿದ್ದಾರೆ. ಸೇತುವೆಗಳನ್ನು ಕಟ್ಟಿ, ಗೋಡೆಗಳನ್ನಲ್ಲ ಎಂದು ಅವರು ಆಗ್ರಹಿಸಿದ್ದಾರೆ.

ಮಾಧ್ಯಮಗಳಲ್ಲಿ ಪ್ರಕಟಗೊಂಡ ಕೇಂದ್ರ ಸರ್ಕಾರದ ದಮನಕಾರಿ ಕ್ರಮಗಳ ಫೋಟೊಗಳನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿರುವ ರಾಹುಲ್ ಗಾಂಧಿ “ಭಾರತ ಸರ್ಕಾರ, ಸೇತುವೆಗಳನ್ನು ಕಟ್ಟಿ, ಗೋಡೆಗಳನ್ನಲ್ಲ” ಎಂದು ಕಿಡಿಕಾರಿದ್ದಾರೆ.

ದೆಹಲಿಯ ಗಡಿಗಳಲ್ಲಿ ರೈತರು ಪ್ರತಿಭಟಿಸುತ್ತಿರುವ ಸ್ಥಳಗಳ ಸುತ್ತ ಮತ್ತು ಹತ್ತಿರದ ರಸ್ತೆಗಳಲ್ಲಿ ಬ್ಯಾರಿಕೇಡ್, ಕಾಂಕ್ರಿಟ್ ಗೋಡೆ ಮತ್ತು ಕಬ್ಬಿಣ ತಂತಿ-ಕಬ್ಬಿಣ ಮುಳ್ಳುಗಳನ್ನು ಅಳವಡಿಸಿರುವ ಸರ್ಕಾರದ ಕ್ರಮವನ್ನು ರಾಹುಲ್ ಗಾಂಧಿ ವ್ಯಂಗ್ಯದ ಮೂಲಕ ಟೀಕೆ ಮಾಡಿದ್ದು ಕೇವಲ ನಾಲ್ಕು ಪದಗಳ ಟ್ವೀಟ್ ಮಾಡಿದ್ದಾರೆ.

ಶಾಂತಿಯುತ ಪ್ರತಿಭಟನೆಯೋ ಅಥವಾ ಯುದ್ಧವೋ ? ರೈತರ ಧ್ವನಿಯನ್ನು ತಡೆಗಟ್ಟಲು ಈ ರೀತಿ ಮಾಡುವುದಕ್ಕೆ ಯಾವುದೇ ಸಮರ್ಥನೆಯಿಲ್ಲ. ನಿಮ್ಮ ಬ್ಯಾರಿಕೇಡ್‌ಗಳು, ಮುಳ್ಳುತಂತಿಗಳಿಂದ ನಮ್ಮನ್ನು ತಡೆಯಲು ಸಾಧ್ಯವಿಲ್ಲ. ನಾವು ಶಾಂತಿಯುತವಾಗಿದ್ದೆವು, ಶಾಂತಿಯುವಾಗಿದ್ದೇವೆ ಮತ್ತು ಶಾಂತಿಯುತವಾಗಿರುತ್ತೇವೆ. ನಿಮ್ಮ ಗೂಂಡಾಗಳಿಂದ ನಮ್ಮನ್ನು ಪ್ರಚೋದಿಸಬೇಡಿ ಎಂದು ಕಿಸಾನ್ ಏಕ್ತಾ ಮೋರ್ಚಾ ಟ್ವೀಟ್ ಮಾಡಿದೆ.

ಈ ಕುರಿತು ಪ್ರಿಯಾಂಕಾ ಗಾಂಧಿ ಕೂಡ ಹಿಂದಿಯಲ್ಲಿ ಟ್ವೀಟ್ ಮಾಡಿದ್ದು, ‘ಪ್ರಧಾನ್‌ಮಂತ್ರಿ ಜಿ, ಅಪನೆ  ಕಿಸಾನೊ ಸೆ ಹಿಂ ಯುದ್ಧ್?’ (ಪ್ರಧಾನಮಂತ್ರಿಯವರೇ, ನಮ್ಮ ರೈತರೊಂದಿಗೇ ಯುದ್ಧವಾ?) ಎಂದು ಕುಟುಕಿದ್ದಾರೆ. ಅವರು ಗೋಡೆ, ಕಬ್ಬಿಣ ತಂತಿ ಅಳವಡಿಸುವ ವಿಡಿಯೋ ಶೇರ್ ಮಾಡಿದ್ದಾರೆ.

ದೆಹಲಿಯ ಸಿಂಘು, ಟಿಕ್ರಿ ಹಾಗೂ ಗಾಜಿಪುರ್‌ ಗಡಿಗಳಲ್ಲಿ ರೈತರ ಪ್ರತಿಭಟೆನೆಗಳು ತೀವ್ರವಾಗಿ ಹೆಚ್ಚುತ್ತಿದೆ. ರೈತರು ಅಲ್ಲಿಗೆ ಭಾರಿ ಸಂಖ್ಯೆಯಲ್ಲಿ ಹರಿದು ಬರುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಅಲ್ಲಿ ಭದ್ರತಾ ಸಿಬ್ಬಂದಿಯನ್ನು ಹೆಚ್ಚಿಸುವುದು ಸೇರಿದಂತೆ, ಹಲವು ಹಂತಗಳ ಬ್ಯಾರಿಕೇಡ್ ಹಾಕಲಾಗಿದೆ. ಜೊತೆಗೆ ರಸ್ತೆಗಳಲ್ಲಿ ತಡರಾತ್ರಿ ಕಂದಕಗಳನ್ನು ಅಗೆಯಲಾಗಿದೆ. ರಸ್ತೆಯಲ್ಲಿ ಮುಳ್ಳು ಕಂಬಿಗಳನ್ನು ನೆಡುವ ಮೂಲಕ ರೈತರ ಟೈಯರ್ ಪಂಚರ್ ಮಾಡಲು ಯತ್ನಿಸುತ್ತಿದೆ.

ಪೊಲೀಸರು ರಸ್ತೆಗಳನ್ನು ಅಗೆಯುತ್ತಿದ್ದು, ದೊಡ್ಡ ದೊಡ್ಡ ಬ್ಯಾರಿಕೇಡ್‌ಗಳು, ಮುಳ್ಳು ತಂತಿಗಳನ್ನು ನೆಡುವ ಮೂಲಕ ರೈತರು ಪ್ರತಿಭಟನೆಗೆ ಬಾರದಂತೆ ತಡೆಯುತ್ತಿದೆ. ರೈಲುಗಳ ಮಾರ್ಗಗಳನ್ನೇ ಬದಲಿಸುತ್ತಿದೆ. ಬಿಜೆಪಿ-ಆರ್‌ಎಸ್‌ಎಸ್‌ ಗೂಂಡಾಗಳನ್ನು ಛೂ ಬಿಟ್ಟು ಶಾಂತಿಯುತ ರೈತ ಹೋರಾಟಕ್ಕೆ ಅಡ್ಡಿಪಡಿಸಲಾಗುತ್ತಿದೆ. ಇಂತಹ ಕೃತ್ಯಗಳನ್ನು ಕೇಂದ್ರ ಸರ್ಕಾರ ನಿಲ್ಲಿಸುವವರೆಗೂ ಸರ್ಕಾರದೊಂದಿಗೆ ಔಪಚಾರಿಕ ಮಾತುಕತೆ ಸಾಧ್ಯವಿಲ್ಲವೆಂದು ಸಂಯುಕ್ತ ಕಿಸಾನ್ ಮೋರ್ಚಾ ಘೋಷಿಸಿದೆ. ಅಲ್ಲದೆ ಫೆಬ್ರವರಿ 6ರ ಶನಿವಾರ ಮಧ್ಯಾಹ್ನ 12 ರಿಂದ 3 ಗಂಟೆಯ ತನಕ ಅಂದರೆ ಒಟ್ಟು ಮೂರು ಗಂಟೆಗಳ ಕಾಲ ದೇಶಾದ್ಯಂತ ‘ಸಂಚಾರ ಸ್ಥಗಿತ ಚಳವಳಿ’ ನಡೆಸುವಂತೆ ಕರೆ ನೀಡಿದೆ.

100ಕ್ಕೂ ಹೆಚ್ಚು ರೈತರು ಕಾಣೆಯಾಗಿರುವುದು, ರೈತರು ಮತ್ತು ಪತ್ರಕರ್ತರ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಿರುವುದು, ರೈತರು ಪ್ರತಿಭಟನೆ ನಡೆಸುತ್ತಿರುವ ಗಡಿಗಳಲ್ಲಿ ಇಂಟರ್‌ನೆಟ್ ಸ್ಥಗಿತ, ಹೋರಾಟಗಾರರಿಗೆ ಕಿರುಕುಳ, ಪ್ರತಿಭಟನಾ ಸ್ಥಳಗಳ ವಿದ್ಯುತ್ ಮತ್ತು ನೀರು ಸರಬರಾಜನ್ನು ನಿಲ್ಲಿಸಿರುವುದನ್ನು ವಿರೋಧಿಸಿ ಸರ್ಕಾರದ ವಿರುದ್ದ ಪ್ರತಿಭಟಿಸಲು ರೈತರು ಈ ‘ಸಂಚಾರ ಸ್ಥಗಿತ ಚಳವಳಿ’ ಕರೆ ನೀಡಿದ್ದಾರೆ.


ಇದನ್ನೂ ಓದಿ: ರೈತ ಹೋರಾಟ ತಡೆಯಲು ದಾರಿಯಲ್ಲಿ ಮುಳ್ಳುಕಂಬ ನೆಡುತ್ತಿರುವ ಕೇಂದ್ರ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...