Homeಮುಖಪುಟಸೇತುವೆಗಳನ್ನು ಕಟ್ಟಿ, ಗೋಡೆಗಳನ್ನಲ್ಲ: ರೈತ ಹೋರಾಟ ಹಣಿಯುವ ಕೇಂದ್ರದ ಕ್ರಮಕ್ಕೆ ರಾಹುಲ್ ವಿರೋಧ

ಸೇತುವೆಗಳನ್ನು ಕಟ್ಟಿ, ಗೋಡೆಗಳನ್ನಲ್ಲ: ರೈತ ಹೋರಾಟ ಹಣಿಯುವ ಕೇಂದ್ರದ ಕ್ರಮಕ್ಕೆ ರಾಹುಲ್ ವಿರೋಧ

ನಾವು ಶಾಂತಿಯುತವಾಗಿದ್ದೆವು, ಶಾಂತಿಯುವಾಗಿದ್ದೇವೆ ಮತ್ತು ಶಾಂತಿಯುತವಾಗಿರುತ್ತೇವೆ. ನಿಮ್ಮ ಗೂಂಡಾಗಳಿಂದ ನಮ್ಮನ್ನು ಪ್ರಚೋದಿಸಬೇಡಿ - ಕಿಸಾನ್ ಏಕ್ತಾ ಮೋರ್ಚಾ

- Advertisement -
- Advertisement -

ಕೃಷಿ ಕಾನೂನುಗಳ ವಿರುದ್ಧ ಹೋರಾಡುತ್ತಿರುವ ರೈತರನ್ನು ದಮನಿಸಲು ಮತ್ತು ಹೆಚ್ಚಿನ ರೈತರು ಪ್ರತಿಭಟನೆಗೆ ಬಂದು ಸೇರದಂತೆ ತಡೆಯಲು ಕೇಂದ್ರ ಸರ್ಕಾರವು ರಸ್ತೆಗಳನ್ನು ಅಗೆದು, ಚೂಪಾದ ಮೊಳೆಗಳನ್ನು ನೆಟ್ಟಿ, ದೊಡ್ಡ ದೊಡ್ಡ ಗೋಡೆಗಳು, ಮುಳ್ಳುತಂತಿಗಳು, ಬ್ಯಾರಿಕೇಡ್‌ಗಳನ್ನು ಹಾಕುತ್ತಿರುವುದಕ್ಕೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರೋಧ ವ್ಯಕ್ತಪಡಿಸಿದ್ದಾರೆ. ಸೇತುವೆಗಳನ್ನು ಕಟ್ಟಿ, ಗೋಡೆಗಳನ್ನಲ್ಲ ಎಂದು ಅವರು ಆಗ್ರಹಿಸಿದ್ದಾರೆ.

ಮಾಧ್ಯಮಗಳಲ್ಲಿ ಪ್ರಕಟಗೊಂಡ ಕೇಂದ್ರ ಸರ್ಕಾರದ ದಮನಕಾರಿ ಕ್ರಮಗಳ ಫೋಟೊಗಳನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿರುವ ರಾಹುಲ್ ಗಾಂಧಿ “ಭಾರತ ಸರ್ಕಾರ, ಸೇತುವೆಗಳನ್ನು ಕಟ್ಟಿ, ಗೋಡೆಗಳನ್ನಲ್ಲ” ಎಂದು ಕಿಡಿಕಾರಿದ್ದಾರೆ.

ದೆಹಲಿಯ ಗಡಿಗಳಲ್ಲಿ ರೈತರು ಪ್ರತಿಭಟಿಸುತ್ತಿರುವ ಸ್ಥಳಗಳ ಸುತ್ತ ಮತ್ತು ಹತ್ತಿರದ ರಸ್ತೆಗಳಲ್ಲಿ ಬ್ಯಾರಿಕೇಡ್, ಕಾಂಕ್ರಿಟ್ ಗೋಡೆ ಮತ್ತು ಕಬ್ಬಿಣ ತಂತಿ-ಕಬ್ಬಿಣ ಮುಳ್ಳುಗಳನ್ನು ಅಳವಡಿಸಿರುವ ಸರ್ಕಾರದ ಕ್ರಮವನ್ನು ರಾಹುಲ್ ಗಾಂಧಿ ವ್ಯಂಗ್ಯದ ಮೂಲಕ ಟೀಕೆ ಮಾಡಿದ್ದು ಕೇವಲ ನಾಲ್ಕು ಪದಗಳ ಟ್ವೀಟ್ ಮಾಡಿದ್ದಾರೆ.

ಶಾಂತಿಯುತ ಪ್ರತಿಭಟನೆಯೋ ಅಥವಾ ಯುದ್ಧವೋ ? ರೈತರ ಧ್ವನಿಯನ್ನು ತಡೆಗಟ್ಟಲು ಈ ರೀತಿ ಮಾಡುವುದಕ್ಕೆ ಯಾವುದೇ ಸಮರ್ಥನೆಯಿಲ್ಲ. ನಿಮ್ಮ ಬ್ಯಾರಿಕೇಡ್‌ಗಳು, ಮುಳ್ಳುತಂತಿಗಳಿಂದ ನಮ್ಮನ್ನು ತಡೆಯಲು ಸಾಧ್ಯವಿಲ್ಲ. ನಾವು ಶಾಂತಿಯುತವಾಗಿದ್ದೆವು, ಶಾಂತಿಯುವಾಗಿದ್ದೇವೆ ಮತ್ತು ಶಾಂತಿಯುತವಾಗಿರುತ್ತೇವೆ. ನಿಮ್ಮ ಗೂಂಡಾಗಳಿಂದ ನಮ್ಮನ್ನು ಪ್ರಚೋದಿಸಬೇಡಿ ಎಂದು ಕಿಸಾನ್ ಏಕ್ತಾ ಮೋರ್ಚಾ ಟ್ವೀಟ್ ಮಾಡಿದೆ.

ಈ ಕುರಿತು ಪ್ರಿಯಾಂಕಾ ಗಾಂಧಿ ಕೂಡ ಹಿಂದಿಯಲ್ಲಿ ಟ್ವೀಟ್ ಮಾಡಿದ್ದು, ‘ಪ್ರಧಾನ್‌ಮಂತ್ರಿ ಜಿ, ಅಪನೆ  ಕಿಸಾನೊ ಸೆ ಹಿಂ ಯುದ್ಧ್?’ (ಪ್ರಧಾನಮಂತ್ರಿಯವರೇ, ನಮ್ಮ ರೈತರೊಂದಿಗೇ ಯುದ್ಧವಾ?) ಎಂದು ಕುಟುಕಿದ್ದಾರೆ. ಅವರು ಗೋಡೆ, ಕಬ್ಬಿಣ ತಂತಿ ಅಳವಡಿಸುವ ವಿಡಿಯೋ ಶೇರ್ ಮಾಡಿದ್ದಾರೆ.

ದೆಹಲಿಯ ಸಿಂಘು, ಟಿಕ್ರಿ ಹಾಗೂ ಗಾಜಿಪುರ್‌ ಗಡಿಗಳಲ್ಲಿ ರೈತರ ಪ್ರತಿಭಟೆನೆಗಳು ತೀವ್ರವಾಗಿ ಹೆಚ್ಚುತ್ತಿದೆ. ರೈತರು ಅಲ್ಲಿಗೆ ಭಾರಿ ಸಂಖ್ಯೆಯಲ್ಲಿ ಹರಿದು ಬರುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಅಲ್ಲಿ ಭದ್ರತಾ ಸಿಬ್ಬಂದಿಯನ್ನು ಹೆಚ್ಚಿಸುವುದು ಸೇರಿದಂತೆ, ಹಲವು ಹಂತಗಳ ಬ್ಯಾರಿಕೇಡ್ ಹಾಕಲಾಗಿದೆ. ಜೊತೆಗೆ ರಸ್ತೆಗಳಲ್ಲಿ ತಡರಾತ್ರಿ ಕಂದಕಗಳನ್ನು ಅಗೆಯಲಾಗಿದೆ. ರಸ್ತೆಯಲ್ಲಿ ಮುಳ್ಳು ಕಂಬಿಗಳನ್ನು ನೆಡುವ ಮೂಲಕ ರೈತರ ಟೈಯರ್ ಪಂಚರ್ ಮಾಡಲು ಯತ್ನಿಸುತ್ತಿದೆ.

ಪೊಲೀಸರು ರಸ್ತೆಗಳನ್ನು ಅಗೆಯುತ್ತಿದ್ದು, ದೊಡ್ಡ ದೊಡ್ಡ ಬ್ಯಾರಿಕೇಡ್‌ಗಳು, ಮುಳ್ಳು ತಂತಿಗಳನ್ನು ನೆಡುವ ಮೂಲಕ ರೈತರು ಪ್ರತಿಭಟನೆಗೆ ಬಾರದಂತೆ ತಡೆಯುತ್ತಿದೆ. ರೈಲುಗಳ ಮಾರ್ಗಗಳನ್ನೇ ಬದಲಿಸುತ್ತಿದೆ. ಬಿಜೆಪಿ-ಆರ್‌ಎಸ್‌ಎಸ್‌ ಗೂಂಡಾಗಳನ್ನು ಛೂ ಬಿಟ್ಟು ಶಾಂತಿಯುತ ರೈತ ಹೋರಾಟಕ್ಕೆ ಅಡ್ಡಿಪಡಿಸಲಾಗುತ್ತಿದೆ. ಇಂತಹ ಕೃತ್ಯಗಳನ್ನು ಕೇಂದ್ರ ಸರ್ಕಾರ ನಿಲ್ಲಿಸುವವರೆಗೂ ಸರ್ಕಾರದೊಂದಿಗೆ ಔಪಚಾರಿಕ ಮಾತುಕತೆ ಸಾಧ್ಯವಿಲ್ಲವೆಂದು ಸಂಯುಕ್ತ ಕಿಸಾನ್ ಮೋರ್ಚಾ ಘೋಷಿಸಿದೆ. ಅಲ್ಲದೆ ಫೆಬ್ರವರಿ 6ರ ಶನಿವಾರ ಮಧ್ಯಾಹ್ನ 12 ರಿಂದ 3 ಗಂಟೆಯ ತನಕ ಅಂದರೆ ಒಟ್ಟು ಮೂರು ಗಂಟೆಗಳ ಕಾಲ ದೇಶಾದ್ಯಂತ ‘ಸಂಚಾರ ಸ್ಥಗಿತ ಚಳವಳಿ’ ನಡೆಸುವಂತೆ ಕರೆ ನೀಡಿದೆ.

100ಕ್ಕೂ ಹೆಚ್ಚು ರೈತರು ಕಾಣೆಯಾಗಿರುವುದು, ರೈತರು ಮತ್ತು ಪತ್ರಕರ್ತರ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಿರುವುದು, ರೈತರು ಪ್ರತಿಭಟನೆ ನಡೆಸುತ್ತಿರುವ ಗಡಿಗಳಲ್ಲಿ ಇಂಟರ್‌ನೆಟ್ ಸ್ಥಗಿತ, ಹೋರಾಟಗಾರರಿಗೆ ಕಿರುಕುಳ, ಪ್ರತಿಭಟನಾ ಸ್ಥಳಗಳ ವಿದ್ಯುತ್ ಮತ್ತು ನೀರು ಸರಬರಾಜನ್ನು ನಿಲ್ಲಿಸಿರುವುದನ್ನು ವಿರೋಧಿಸಿ ಸರ್ಕಾರದ ವಿರುದ್ದ ಪ್ರತಿಭಟಿಸಲು ರೈತರು ಈ ‘ಸಂಚಾರ ಸ್ಥಗಿತ ಚಳವಳಿ’ ಕರೆ ನೀಡಿದ್ದಾರೆ.


ಇದನ್ನೂ ಓದಿ: ರೈತ ಹೋರಾಟ ತಡೆಯಲು ದಾರಿಯಲ್ಲಿ ಮುಳ್ಳುಕಂಬ ನೆಡುತ್ತಿರುವ ಕೇಂದ್ರ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...