Homeಮುಖಪುಟಲಾಭವನ್ನು ಖಾಸಗೀಕರಿಸಿ, ನಷ್ಟವನ್ನು ರಾಷ್ಟ್ರೀಕರಣ ಮಾಡಲಾಗುತ್ತಿದೆ: ರಾಹುಲ್ ಗಾಂಧಿ

ಲಾಭವನ್ನು ಖಾಸಗೀಕರಿಸಿ, ನಷ್ಟವನ್ನು ರಾಷ್ಟ್ರೀಕರಣ ಮಾಡಲಾಗುತ್ತಿದೆ: ರಾಹುಲ್ ಗಾಂಧಿ

ಬ್ಯಾಂಕ್‌ ನೌಕರರ ಮುಷ್ಕರ ಇಂದು ಎರಡನೇ ದಿನಕ್ಕೆ ಕಾಲಿಟ್ಟಿದೆ. ನಾಳೆ ಮಾರ್ಚ್ 17 ರಂದು ಎಲ್‌ಐಸಿ ನೌಕರರು ರಾಷ್ಟ್ರಾದ್ಯಂತ ಮುಷ್ಕರ ನಡೆಸುವುದಾಗಿ ಘೋಷಿಸಿದ್ದಾರೆ.

- Advertisement -
- Advertisement -

ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಲಾಭವನ್ನು ಖಾಸಗೀಕರಿಸಿ, ನಷ್ಟವನ್ನು ರಾಷ್ಟ್ರೀಕರಣ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.

ಬ್ಯಾಂಕುಗಳ ಖಾಸಗೀಕರಣ ವಿರೋಧಿಸಿ ನಡೆಯುತ್ತಿರುವ ಅಖಿಲ ಭಾರತ ಬ್ಯಾಂಕ್‌ ನೌಕರರ ಮುಷ್ಕರ ಬೆಂಬಲಿಸಿ ಟ್ವೀಟ್ ಮಾಡಿರುವ ಅವರು, “ಭಾರತದ ಸಾರ್ವಜನಿಕ ಉದ್ದಿಮೆಗಳನ್ನು ಮೋದಿಕ್ರೋನಿಗಳಿಗೆ (ನರೇಂದ್ರ ಮೋದಿಯವರ ಕ್ರೋನಿ ಬಂಡವಾಳಶಾಹಿ ಗೆಳಯರು) ಮಾರಾಟ ಮಾಡುವ ಮೂಲಕ ಭಾರತದ ಆರ್ಥಿಕ ರಕ್ಷಣೆಯ ವಿಷಯದಲ್ಲಿ ತೀವ್ರ ರಾಜಿ ಮಾಡಿಕೊಳ್ಳಲಾಗುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಅಂದರೆ ಸರ್ಕಾರಕ್ಕೆ ಲಾಭವಾಗಬಹುದಿದ್ದ ಕ್ಷೇತ್ರಗಳನ್ನು ಖಾಸಗಿಯವರಿಗೆ ಬಿಟ್ಟುಕೊಡುವ ಮೂಲಕ ಅವರು ಲಾಭ ಮಾಡಿಕೊಳ್ಳಲು ಸಹಾಯ ಮಾಡಲಾಗುತ್ತಿದೆ. ಅದೇ ಸಮಯದಲ್ಲಿ ನಷ್ಟವನ್ನು ಮಾತ್ರ ದೇಶದ ಪ್ರತಿಯೊಬ್ಬರ ಮೇಲೆ ಹೇರುವ ಮೂಲಕ ರಾಷ್ಟ್ರೀಕರಣ ಮಾಡಲಾಗುತ್ತಿದೆ ಎಂದು ರಾಹುಲ್ ಟೀಕಿಸಿದ್ದಾರೆ.

ಬ್ಯಾಂಕುಗಳ ಖಾಸಗೀಕರಣ ವಿರೋಧಿಸಿ ದೇಶಾದ್ಯಂತ ಹೋರಾಟ ನಡೆಸುತ್ತಿರುವ ಬ್ಯಾಂಕ್ ಉದ್ಯೋಗಿಗಳ ಪರ ನಿಲ್ಲುತ್ತೇನೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ನಿನ್ನೆ ಕೂಡ ಅದಾನಿ ಆಸ್ತಿಯಲ್ಲಾದ ಬೃಹತ್ ಹೆಚ್ಚಳವನ್ನು ಟೀಕಿಸಿ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದರು. “2020ರಲ್ಲಿ ನಿಮ್ಮ ಸಂಪತ್ತು ಎಷ್ಟು ಹೆಚ್ಚಾಗಿದೆ? ಶೂನ್ಯ. ನೀವು ಬದುಕಲು ಹೆಣಗಾಡುತ್ತಿದ್ದೀರಿ; ಆದರೆ ಅವರು (ಅದಾನಿ) ₹12 ಲಕ್ಷ ಕೋಟಿ ರೂ. ಗಳಿಸಿ ತಮ್ಮ ಸಂಪತನ್ನು ಶೇಕಡಾ 50ರಷ್ಟು ಹೆಚ್ಚಿಸಿಕೊಂಡಿದ್ದಾರೆ. ಇದು ಏಕೆ ಎಂದು ಹೇಳಬಲ್ಲೀರಾ?” ಎಂದು ಬ್ಲೂಮ್‌ಬರ್ಗ್ ವರದಿಯೊಂದನ್ನು ಉಲ್ಲೇಖಿಸಿ ಪ್ರಶ್ನಿಸಿದ್ದರು.

ಬ್ಯಾಂಕ್‌ ನೌಕರರ ಮುಷ್ಕರ ಇಂದು ಎರಡನೇ ದಿನಕ್ಕೆ ಕಾಲಿಟ್ಟಿದೆ. ನಾಳೆ ಮಾರ್ಚ್ 17 ರಂದು ಎಲ್‌ಐಸಿ ನೌಕರರು ರಾಷ್ಟ್ರಾದ್ಯಂತ ಮುಷ್ಕರ ನಡೆಸುವುದಾಗಿ ಘೋಷಿಸಿದ್ದಾರೆ.


ಇದನ್ನೂ ಓದಿ: ನೀವು ಬದುಕುಳಿಯಲು ಹೆಣಗುತ್ತಿರುವಾಗ ಅದಾನಿ 12 ಲಕ್ಷ ಕೋಟಿ ಗಳಿಸಿದ್ದು ಹೇಗೆ? – ರಾಹುಲ್ ಗಾಂಧಿ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....