Homeಕರ್ನಾಟಕಗೋಕಾಕ್ ಉಪಚುನಾವಣೆ: ಅವರಿವರ ಜೊತೆ ಇದ್ದಾರೆಯೇ ಇಲ್ಲವೇ? ಸದ್ಯಕ್ಕೆ ವದಂತಿಗಳದ್ದೇ ಅಬ್ಬರ

ಗೋಕಾಕ್ ಉಪಚುನಾವಣೆ: ಅವರಿವರ ಜೊತೆ ಇದ್ದಾರೆಯೇ ಇಲ್ಲವೇ? ಸದ್ಯಕ್ಕೆ ವದಂತಿಗಳದ್ದೇ ಅಬ್ಬರ

- Advertisement -
- Advertisement -

ಸಮ್ಮಿಶ್ರ ಸರ್ಕಾರವನ್ನು ಅತಂತ್ರಗೊಳಿಸಲು ಸತತ ಪ್ರಯತ್ನಮಾಡಿ ಕಡೆಗೂ ಬಿಜೆಪಿ ಸರ್ಕಾರ ಬರಲು ಕಾರಣವಾದ ರಮೇಶ್ ಜಾರಕಿಹೊಳಿಯ ಗೋಕಾಕ್ ವಿಧಾನಸಭಾ ಕ್ಷೇತ್ರ ಈಗ ರಾಜ್ಯದ ಪ್ರತಿಷ್ಟಿತ ಕಣವಾಗಿ ಮಾರ್ಪಟ್ಟಿದೆ. ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಮತ್ತೆ ಗೋಕಾಕ್ ಕ್ಷೇತ್ರದಿಂದ ಆರಿಸಿ ಬರಲು ಯತ್ನಿಸುತ್ತಿದ್ದು,ಬಿಜೆಪಿಯ ಅಧಿಕೃತ ಅಭ್ಯರ್ಥಿಯಾಗಿದ್ದಾರೆ. ಆದರೆ ಈತನಿಗೆ ಎದುರಾಳಿಯಾಗಿ ಕಾಂಗ್ರೆಸ್‍ನಿಂದ ಈತನ ಸಹೋದರ ಲಖನ್ ಜಾರಕಿಹೊಳಿ ಕಣಕ್ಕಿಳಿದಿದ್ದು ಲಖನ್‍ಗೆ ಸತೀಶ್ ಜಾರಕಿಹೊಳಿಯ ಸಂಪೂರ್ಣ ಬೆಂಬಲವಿದೆ. ಇವರಿಬ್ಬರಿಗೂ ಪೈಪೋಟಿಯಾಗಿ ಜೆಡಿಎಸ್ ಅಭ್ಯರ್ಥಿ ಅಶೋಕ ಪೂಜಾರಿ ಕಣದಲ್ಲಿದ್ದಾರೆ. ಲಖನ್ ಜಾರಕಿಹೊಳಿ ಜೊತೆ ಸತೀಶ್ ಜಾರಕಿಹೊಳಿಯು ಸಹ ನಾಮಪತ್ರ ಸಲ್ಲಿಸಿ ಹುಬ್ಬೇರಿಸುವಂತೆ ಮಾಡಿದ್ದರು. ಲಖನ್ ನಾಮಪತ್ರವೇನಾದರೂ ಕೊನೆಕ್ಷಣದಲ್ಲಿ ತಿರಸ್ಕೃತವಾದರೆ ಇರಲಿ ಎನ್ನುವ ತಂತ್ರ ಇದಾಗಿದೆ ಎನ್ನಲಾಗಿದೆ. ಆದ್ದರಿಂದ ಈ ಕ್ಷೇತ್ರ ಸದ್ಯಕ್ಕೆ ತ್ರಿಕೋನ ಸ್ಪರ್ಧೆಯಾಗಿ ಮಾರ್ಪಡುವ ಸಾಧ್ಯತೆಯೇ ಹೆಚ್ಚು. ರಮೇಶ್ ಮತ್ತು ಸತೀಶ್ ಜಾರಕಿಹೊಳಿ ಸಹೋದರರ ನಡುವೆ ಬಿರುಕು ಉಂಟಾಗಿದ್ದು ರಮೇಶ್‍ರನ್ನು ಸೋಲಿಸಲೇಬೇಕಿಂದ ಸತೀಶ್, ಲಖನ್ ಜಾರಕಿಹೊಳಿಯನ್ನು ನಿಲ್ಲಿಸಿ ಶತಾಯಗತಾಯ ಗೆಲ್ಲಿಸಲು ಪ್ರಯತ್ನ ಪಡುತ್ತಿದ್ದಾರೆ. ಸತತ ಮೂರು ಬಾರಿ ರಮೇಶ್ ಜಾರಕಿಹೊಳಿ ವಿರುದ್ಧ ಇದೇ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತಿದ್ದ ಅಶೋಕ ಪೂಜಾರಿ ಬಿಜೆಪಿಯಲ್ಲಿ ಟಿಕೆಟ್ ಸಿಗದ ಕಾರಣ ಜೆಡಿಎಸ್ ಅಭ್ಯರ್ಥಿಯಾಗಿ ಮತಯಾಚನೆಗೆ ಸಿದ್ಧರಾಗಿದ್ದಾರೆ.

ಬೆಳಗಾವಿಯು ರಮೇಶ್ ಜಾರಕಿಹೊಳಿಯ ಹಲವು ಪ್ರಹಸನಗಳಿಂದ ಗಮನಸೆಳೆಯುವ ಜೊತೆಗೆ ಸಹೋದರರ ಜಗಳ, ಜಾರಕಿಹೊಳಿ ಕುಟುಂಬ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಜೊತೆ ಜಗಳ, ಡಿಕೆಶಿ ವರ್ಸಸ್ ಜಾರಕಿಹೊಳಿ ಕುಟುಂಬ, ಉಮೇಶ್ ಕತ್ತಿ ವರ್ಸಸ್ ಲಕ್ಷ್ಮಣ ಸವದಿ ಈ ರೀತಿಯ ಜಗಳಗಳಿಗೂ ಸಹ ಗಮನ ಸೆಳೆಯುತ್ತಿತ್ತು. ಈಗ ಈ ಎಲ್ಲಾ ಒಳ ಮತ್ತು ಹೊರ ಜಗಳಗಳೂ ಸಹ ಗೋಕಾಕ್ ವಿಧಾನಸಭಾ ಉಪಚುನಾವಣೆಯ ಮೇಲೆ ದಟ್ಟವಾದಂತಹ ಪ್ರಭಾವವನ್ನು ಬೀರುವುದು ಖಚಿತವಾಗಿದೆ. ಶತ್ರುಗಳ ಶತ್ರು ಮಿತ್ರ ಎನ್ನುವಂತೆ ಮೂವರು ಅಭ್ಯರ್ಥಿಗಳಿಗೂ ಊಹಿಸದ ರೀತಿಯಲ್ಲಿ ಸ್ವಪಕ್ಷದಿಂದ ಅಲ್ಲದೇ ಹೊರಗಿನಿಂದಲೂ ಸಹ ಬೆಂಬಲ ವ್ಯಕ್ತವಾಗುತ್ತಿದೆ ಮತ್ತು ಸ್ವಪಕ್ಷದವರೇ ಕಾಲೆಳೆಯುವ ಸಾಧ್ಯತೆಗಳು ಹೆಚ್ಚಾಗಿರುವುದು ವಿಚಿತ್ರವಾದ ಸಂಗತಿಯಾಗಿದೆ. ರಮೇಶ್ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಮಧ್ಯೆ ಅಷ್ಟೊಂದು ಜಗಳಗಳಿದ್ದರೂ, ಸತೀಶ್ ಜಾರಕಿಹೊಳಿಯ ಜೊತೆಗೆ ಇಬ್ಬರಿಗೂ ತಗಾದೆ ಇರುವುದರಿಂದ ಲಕ್ಷ್ಮೀ ಹೆಬ್ಬಾಳಕರ್ ರಮೇಶ್‍ಗೆ ಬೆಂಬಲಿಸುವ ಒಳ ಒಪ್ಪಂದವಾಗಿದೆಯೆಂದು ಕ್ಷೇತ್ರದ ಜನ ಮಾತಾಡಿಕೊಳ್ಳುತ್ತಿದ್ದಾರೆ. ಹಾಗಾಗಿಯೇ ಲಕ್ಷ್ಮೀ ಒಬ್ಬರಿಗೇ ಕಾಂಗ್ರೆಸ್‍ನಿಂದ ಗೋಕಾಕ್ ಉಸ್ತುವಾರಿ ನೀಡಲಾಯಿತು, ಆದರೂ ನಾಮಪತ್ರ ಸಲ್ಲಿಕೆಗೆ ಅವರು ಹೋಗಿರದಿದ್ದು ವದಂತಿಗಳಿಗೆ ಕಾರಣವಾಗಿದೆ.

ಇತ್ತೀಚಿಗೆ ಕನಕಪುರದ ಹತ್ತಿರ ಕೆಲವು ಮುಖಂಡರು ಮತ್ತು ಸ್ವಾಮೀಜಿಯ ಜೊತೆ ಜೆಡಿಎಸ್ ಅಭ್ಯರ್ಥಿ ಅಶೋಕ ಪೂಜಾರಿ ಚರ್ಚೆ ಮಾಡಿರುವ ಫೋಟೋ ಹರಿದಾಡುತ್ತಿದ್ದು ಇದು ಡಿಕೆ ಶಿವಕುಮಾರ್ ಅಣತಿಯಂತೆ ಗೋಕಾಕ್ ಮತಕ್ಷೇತ್ರದ ಕುರಿತು ನಡೆದ ಪ್ಲಾನಿಂಗ್ ಮೀಟಿಂಗ್ ಎಂದು ಹೇಳಲಾಗುತ್ತಿದೆ. ಡಿಕೆಶಿ ಜಾರಕಿಹೊಳಿ ಕುಟುಂಬದ ನಡುವೆ ಒಳ ಜಗಳಗಳಿದ್ದು ಡಿಕೆಶಿ ತಮ್ಮದೇ ಪಕ್ಷದ ಅಭ್ಯರ್ಥಿ ಲಖನ್ ಜಾರಕಿಹೊಳಿಗೆ ಬೆಂಬಲಿಸದೆ ಅಶೋಕ್ ಪೂಜಾರಿಗೆ ಬೆಂಬಲಿಸುವ ಸಾಧ್ಯತೆ ಇದೆಯೆಂದು ಈ ಫೋಟೋ ಇಟ್ಟುಕೊಂಡು ಚರ್ಚೆ ಶುರುಮಾಡಿದ್ದಾರೆ. ಡಿಕೆಶಿ ಮತ್ತು ಲಕ್ಷ್ಮಿ ಬೇರೆ ಬೇರೆ ಅಭ್ಯರ್ಥಿಗಳಿಗೆ ಬೆಂಬಲಿಸುವ ಸಾಧ್ಯತೆ ಇರದಿದ್ದರೂ, ವದಂತಿಗಳಿಗೆ ಅದರದ್ದೇ ಆದ ತರ್ಕಗಳಿವೆ.
ಹಾಗೆಯೇ ಅರಭಾವಿ ಶಾಸಕ ಜಾರಕಿಹೊಳಿ ಸೋದರರಲ್ಲೊಬ್ಬರಾದ ಬಾಲಚಂದ್ರ ಮೇಲ್ನೋಟಕ್ಕೆ ಪಕ್ಷದ ಅಭ್ಯರ್ಥಿ ರಮೇಶ್ ಪರ ಒಂದು ಹೇಳಿಕೆ ನೀಡಿದ್ದರೂ, ವಿರುದ್ಧವಾಗಿ ಕೆಲಸ ಮಾಡುತ್ತಾರೆಂಬ ಗುಮಾನಿಯೂ ಹರಿದಾಡುತ್ತಿದೆ.

ಇತ್ತ ಉಪ ಮುಖ್ಯಮಂತ್ರಿ ಸ್ಥಾನ ತನಗೆ ಸಿಗದೇ ಲಕ್ಷ್ಮಣ ಸವದಿಗೆ ಸಿಕ್ಕಿತೆಂದು ಉಮೇಶ್ ಕತ್ತಿ ಸಹಾ ಬಿಜೆಪಿ ಮೇಲೆ ಗರಂ ಆಗಿದ್ದರು. ಜಾರಕಿಹೊಳಿ ಕುಟುಂಬದ ಜೊತೆ ತಗಾದೆ ಇರುವ ಲಕ್ಷ್ಮಣ ಸವದಿಯನ್ನು ದುರ್ಬಲಗೊಳಿಸಬೇಕೆಂದರೆ ರಮೇಶ್ ಜಾರಕಿಹೊಳಿಯ ಬೆಂಬಲಕ್ಕೆ ನಿಲ್ಲಲೇಬೇಕು ಎನ್ನುವ ತೀರ್ಮಾನಕ್ಕೆ ಉಮೇಶ್ ಕತ್ತಿ ಬಂದಿದ್ದಾರೆ ಎನ್ನಲಾಗುತ್ತಿದೆ.

ಇನ್ನು ಈ ಕ್ಷೇತ್ರದಲ್ಲಿ ಲಿಂಗಾಯತ ಮತದಾರರು ನಿರ್ಣಾಯಕ ವಾಗಿದ್ದು ಲಿಂಗಾಯತರ ಮತಗಳು ಯಾರಿಗೆ ಬೀಳಲಿದೆ ಎಂಬುದು ಬಹಳ ಮುಖ್ಯವಾಗುತ್ತದೆ. ಹಾಗೆ ನೋಡಿದರೆ ಸಾಂಪ್ರದಾಯಿಕ ವಾಗಿ ಬಿಜೆಪಿಗೆ ಈ ಸಮುದಾಯದ ಮತಗಳು ಬೀಳುತ್ತವೆ. ಆದರೆ ರಮೇಶ್ ಜಾರಕಿಹೊಳಿ ಲಿಂಗಾಯಿತರ ಜೊತೆ ಅಷ್ಟೇನು ಚೆನ್ನಾಗಿಲ್ಲ ಎಂಬ ಮಾತುಗಳು ಕೇಳಿಬರುತ್ತಿದ್ದು ಇವು ಲಿಂಗಾಯತ ಸಮುದಾಯದ ಜೆಡಿಎಸ್ ಅಭ್ಯರ್ಥಿ ಅಶೋಕ ಪೂಜಾರಿಯ ಮಡಿಲು ಸೇರಲಿವೆಯಾ ಎಂಬುದು ಸಹ ಒಂದು ಯಕ್ಷಪ್ರಶ್ನೆಯಾಗಿದೆ.

ಗೋಕಾಕ್ ವಿಧಾನಸಭಾ ಕ್ಷೇತ್ರ ಈ ಬಾರಿ ಕ್ಷೇತ್ರದ ಜನತೆಯ ರಾಜಕೀಯ ಪ್ರಜ್ಞೆಯನ್ನು ಪರೀಕ್ಷೆಗೆ ಒಳಪಡಿಸುವಂತೆ ಭಾಸವಾಗುತ್ತಿದೆ. ಯಾಕೆಂದರೆ ಗೆದ್ದು ಕ್ಷೇತ್ರದ ಹಿತಾಸಕ್ತಿಗಾಗಿ ಕೆಲಸ ಮಾಡದೆ ಸ್ವಲಾಭಕ್ಕಾಗಿ ಪದೇ ಪದೇ ರೇಸಾರ್ಟ್‍ಗೆ ಹೋದಂತಹ ರಮೇಶ್ ಜಾರಕಿಹೊಳಿ ಮತ್ತೆ ಗೆಲ್ಲದಂತೆ ಮಾಡುತ್ತಾರೋ, ಮತ್ತೆ ಗೆಲ್ಲಿಸಿ ವಿಧಾನ ಸಭೆಗೆ ಕಳುಹಿಸುತ್ತಾರೋ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...