Homeಕರ್ನಾಟಕಗೋಕಾಕ್ ಉಪಚುನಾವಣೆ: ಅವರಿವರ ಜೊತೆ ಇದ್ದಾರೆಯೇ ಇಲ್ಲವೇ? ಸದ್ಯಕ್ಕೆ ವದಂತಿಗಳದ್ದೇ ಅಬ್ಬರ

ಗೋಕಾಕ್ ಉಪಚುನಾವಣೆ: ಅವರಿವರ ಜೊತೆ ಇದ್ದಾರೆಯೇ ಇಲ್ಲವೇ? ಸದ್ಯಕ್ಕೆ ವದಂತಿಗಳದ್ದೇ ಅಬ್ಬರ

- Advertisement -
- Advertisement -

ಸಮ್ಮಿಶ್ರ ಸರ್ಕಾರವನ್ನು ಅತಂತ್ರಗೊಳಿಸಲು ಸತತ ಪ್ರಯತ್ನಮಾಡಿ ಕಡೆಗೂ ಬಿಜೆಪಿ ಸರ್ಕಾರ ಬರಲು ಕಾರಣವಾದ ರಮೇಶ್ ಜಾರಕಿಹೊಳಿಯ ಗೋಕಾಕ್ ವಿಧಾನಸಭಾ ಕ್ಷೇತ್ರ ಈಗ ರಾಜ್ಯದ ಪ್ರತಿಷ್ಟಿತ ಕಣವಾಗಿ ಮಾರ್ಪಟ್ಟಿದೆ. ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಮತ್ತೆ ಗೋಕಾಕ್ ಕ್ಷೇತ್ರದಿಂದ ಆರಿಸಿ ಬರಲು ಯತ್ನಿಸುತ್ತಿದ್ದು,ಬಿಜೆಪಿಯ ಅಧಿಕೃತ ಅಭ್ಯರ್ಥಿಯಾಗಿದ್ದಾರೆ. ಆದರೆ ಈತನಿಗೆ ಎದುರಾಳಿಯಾಗಿ ಕಾಂಗ್ರೆಸ್‍ನಿಂದ ಈತನ ಸಹೋದರ ಲಖನ್ ಜಾರಕಿಹೊಳಿ ಕಣಕ್ಕಿಳಿದಿದ್ದು ಲಖನ್‍ಗೆ ಸತೀಶ್ ಜಾರಕಿಹೊಳಿಯ ಸಂಪೂರ್ಣ ಬೆಂಬಲವಿದೆ. ಇವರಿಬ್ಬರಿಗೂ ಪೈಪೋಟಿಯಾಗಿ ಜೆಡಿಎಸ್ ಅಭ್ಯರ್ಥಿ ಅಶೋಕ ಪೂಜಾರಿ ಕಣದಲ್ಲಿದ್ದಾರೆ. ಲಖನ್ ಜಾರಕಿಹೊಳಿ ಜೊತೆ ಸತೀಶ್ ಜಾರಕಿಹೊಳಿಯು ಸಹ ನಾಮಪತ್ರ ಸಲ್ಲಿಸಿ ಹುಬ್ಬೇರಿಸುವಂತೆ ಮಾಡಿದ್ದರು. ಲಖನ್ ನಾಮಪತ್ರವೇನಾದರೂ ಕೊನೆಕ್ಷಣದಲ್ಲಿ ತಿರಸ್ಕೃತವಾದರೆ ಇರಲಿ ಎನ್ನುವ ತಂತ್ರ ಇದಾಗಿದೆ ಎನ್ನಲಾಗಿದೆ. ಆದ್ದರಿಂದ ಈ ಕ್ಷೇತ್ರ ಸದ್ಯಕ್ಕೆ ತ್ರಿಕೋನ ಸ್ಪರ್ಧೆಯಾಗಿ ಮಾರ್ಪಡುವ ಸಾಧ್ಯತೆಯೇ ಹೆಚ್ಚು. ರಮೇಶ್ ಮತ್ತು ಸತೀಶ್ ಜಾರಕಿಹೊಳಿ ಸಹೋದರರ ನಡುವೆ ಬಿರುಕು ಉಂಟಾಗಿದ್ದು ರಮೇಶ್‍ರನ್ನು ಸೋಲಿಸಲೇಬೇಕಿಂದ ಸತೀಶ್, ಲಖನ್ ಜಾರಕಿಹೊಳಿಯನ್ನು ನಿಲ್ಲಿಸಿ ಶತಾಯಗತಾಯ ಗೆಲ್ಲಿಸಲು ಪ್ರಯತ್ನ ಪಡುತ್ತಿದ್ದಾರೆ. ಸತತ ಮೂರು ಬಾರಿ ರಮೇಶ್ ಜಾರಕಿಹೊಳಿ ವಿರುದ್ಧ ಇದೇ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತಿದ್ದ ಅಶೋಕ ಪೂಜಾರಿ ಬಿಜೆಪಿಯಲ್ಲಿ ಟಿಕೆಟ್ ಸಿಗದ ಕಾರಣ ಜೆಡಿಎಸ್ ಅಭ್ಯರ್ಥಿಯಾಗಿ ಮತಯಾಚನೆಗೆ ಸಿದ್ಧರಾಗಿದ್ದಾರೆ.

ಬೆಳಗಾವಿಯು ರಮೇಶ್ ಜಾರಕಿಹೊಳಿಯ ಹಲವು ಪ್ರಹಸನಗಳಿಂದ ಗಮನಸೆಳೆಯುವ ಜೊತೆಗೆ ಸಹೋದರರ ಜಗಳ, ಜಾರಕಿಹೊಳಿ ಕುಟುಂಬ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಜೊತೆ ಜಗಳ, ಡಿಕೆಶಿ ವರ್ಸಸ್ ಜಾರಕಿಹೊಳಿ ಕುಟುಂಬ, ಉಮೇಶ್ ಕತ್ತಿ ವರ್ಸಸ್ ಲಕ್ಷ್ಮಣ ಸವದಿ ಈ ರೀತಿಯ ಜಗಳಗಳಿಗೂ ಸಹ ಗಮನ ಸೆಳೆಯುತ್ತಿತ್ತು. ಈಗ ಈ ಎಲ್ಲಾ ಒಳ ಮತ್ತು ಹೊರ ಜಗಳಗಳೂ ಸಹ ಗೋಕಾಕ್ ವಿಧಾನಸಭಾ ಉಪಚುನಾವಣೆಯ ಮೇಲೆ ದಟ್ಟವಾದಂತಹ ಪ್ರಭಾವವನ್ನು ಬೀರುವುದು ಖಚಿತವಾಗಿದೆ. ಶತ್ರುಗಳ ಶತ್ರು ಮಿತ್ರ ಎನ್ನುವಂತೆ ಮೂವರು ಅಭ್ಯರ್ಥಿಗಳಿಗೂ ಊಹಿಸದ ರೀತಿಯಲ್ಲಿ ಸ್ವಪಕ್ಷದಿಂದ ಅಲ್ಲದೇ ಹೊರಗಿನಿಂದಲೂ ಸಹ ಬೆಂಬಲ ವ್ಯಕ್ತವಾಗುತ್ತಿದೆ ಮತ್ತು ಸ್ವಪಕ್ಷದವರೇ ಕಾಲೆಳೆಯುವ ಸಾಧ್ಯತೆಗಳು ಹೆಚ್ಚಾಗಿರುವುದು ವಿಚಿತ್ರವಾದ ಸಂಗತಿಯಾಗಿದೆ. ರಮೇಶ್ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಮಧ್ಯೆ ಅಷ್ಟೊಂದು ಜಗಳಗಳಿದ್ದರೂ, ಸತೀಶ್ ಜಾರಕಿಹೊಳಿಯ ಜೊತೆಗೆ ಇಬ್ಬರಿಗೂ ತಗಾದೆ ಇರುವುದರಿಂದ ಲಕ್ಷ್ಮೀ ಹೆಬ್ಬಾಳಕರ್ ರಮೇಶ್‍ಗೆ ಬೆಂಬಲಿಸುವ ಒಳ ಒಪ್ಪಂದವಾಗಿದೆಯೆಂದು ಕ್ಷೇತ್ರದ ಜನ ಮಾತಾಡಿಕೊಳ್ಳುತ್ತಿದ್ದಾರೆ. ಹಾಗಾಗಿಯೇ ಲಕ್ಷ್ಮೀ ಒಬ್ಬರಿಗೇ ಕಾಂಗ್ರೆಸ್‍ನಿಂದ ಗೋಕಾಕ್ ಉಸ್ತುವಾರಿ ನೀಡಲಾಯಿತು, ಆದರೂ ನಾಮಪತ್ರ ಸಲ್ಲಿಕೆಗೆ ಅವರು ಹೋಗಿರದಿದ್ದು ವದಂತಿಗಳಿಗೆ ಕಾರಣವಾಗಿದೆ.

ಇತ್ತೀಚಿಗೆ ಕನಕಪುರದ ಹತ್ತಿರ ಕೆಲವು ಮುಖಂಡರು ಮತ್ತು ಸ್ವಾಮೀಜಿಯ ಜೊತೆ ಜೆಡಿಎಸ್ ಅಭ್ಯರ್ಥಿ ಅಶೋಕ ಪೂಜಾರಿ ಚರ್ಚೆ ಮಾಡಿರುವ ಫೋಟೋ ಹರಿದಾಡುತ್ತಿದ್ದು ಇದು ಡಿಕೆ ಶಿವಕುಮಾರ್ ಅಣತಿಯಂತೆ ಗೋಕಾಕ್ ಮತಕ್ಷೇತ್ರದ ಕುರಿತು ನಡೆದ ಪ್ಲಾನಿಂಗ್ ಮೀಟಿಂಗ್ ಎಂದು ಹೇಳಲಾಗುತ್ತಿದೆ. ಡಿಕೆಶಿ ಜಾರಕಿಹೊಳಿ ಕುಟುಂಬದ ನಡುವೆ ಒಳ ಜಗಳಗಳಿದ್ದು ಡಿಕೆಶಿ ತಮ್ಮದೇ ಪಕ್ಷದ ಅಭ್ಯರ್ಥಿ ಲಖನ್ ಜಾರಕಿಹೊಳಿಗೆ ಬೆಂಬಲಿಸದೆ ಅಶೋಕ್ ಪೂಜಾರಿಗೆ ಬೆಂಬಲಿಸುವ ಸಾಧ್ಯತೆ ಇದೆಯೆಂದು ಈ ಫೋಟೋ ಇಟ್ಟುಕೊಂಡು ಚರ್ಚೆ ಶುರುಮಾಡಿದ್ದಾರೆ. ಡಿಕೆಶಿ ಮತ್ತು ಲಕ್ಷ್ಮಿ ಬೇರೆ ಬೇರೆ ಅಭ್ಯರ್ಥಿಗಳಿಗೆ ಬೆಂಬಲಿಸುವ ಸಾಧ್ಯತೆ ಇರದಿದ್ದರೂ, ವದಂತಿಗಳಿಗೆ ಅದರದ್ದೇ ಆದ ತರ್ಕಗಳಿವೆ.
ಹಾಗೆಯೇ ಅರಭಾವಿ ಶಾಸಕ ಜಾರಕಿಹೊಳಿ ಸೋದರರಲ್ಲೊಬ್ಬರಾದ ಬಾಲಚಂದ್ರ ಮೇಲ್ನೋಟಕ್ಕೆ ಪಕ್ಷದ ಅಭ್ಯರ್ಥಿ ರಮೇಶ್ ಪರ ಒಂದು ಹೇಳಿಕೆ ನೀಡಿದ್ದರೂ, ವಿರುದ್ಧವಾಗಿ ಕೆಲಸ ಮಾಡುತ್ತಾರೆಂಬ ಗುಮಾನಿಯೂ ಹರಿದಾಡುತ್ತಿದೆ.

ಇತ್ತ ಉಪ ಮುಖ್ಯಮಂತ್ರಿ ಸ್ಥಾನ ತನಗೆ ಸಿಗದೇ ಲಕ್ಷ್ಮಣ ಸವದಿಗೆ ಸಿಕ್ಕಿತೆಂದು ಉಮೇಶ್ ಕತ್ತಿ ಸಹಾ ಬಿಜೆಪಿ ಮೇಲೆ ಗರಂ ಆಗಿದ್ದರು. ಜಾರಕಿಹೊಳಿ ಕುಟುಂಬದ ಜೊತೆ ತಗಾದೆ ಇರುವ ಲಕ್ಷ್ಮಣ ಸವದಿಯನ್ನು ದುರ್ಬಲಗೊಳಿಸಬೇಕೆಂದರೆ ರಮೇಶ್ ಜಾರಕಿಹೊಳಿಯ ಬೆಂಬಲಕ್ಕೆ ನಿಲ್ಲಲೇಬೇಕು ಎನ್ನುವ ತೀರ್ಮಾನಕ್ಕೆ ಉಮೇಶ್ ಕತ್ತಿ ಬಂದಿದ್ದಾರೆ ಎನ್ನಲಾಗುತ್ತಿದೆ.

ಇನ್ನು ಈ ಕ್ಷೇತ್ರದಲ್ಲಿ ಲಿಂಗಾಯತ ಮತದಾರರು ನಿರ್ಣಾಯಕ ವಾಗಿದ್ದು ಲಿಂಗಾಯತರ ಮತಗಳು ಯಾರಿಗೆ ಬೀಳಲಿದೆ ಎಂಬುದು ಬಹಳ ಮುಖ್ಯವಾಗುತ್ತದೆ. ಹಾಗೆ ನೋಡಿದರೆ ಸಾಂಪ್ರದಾಯಿಕ ವಾಗಿ ಬಿಜೆಪಿಗೆ ಈ ಸಮುದಾಯದ ಮತಗಳು ಬೀಳುತ್ತವೆ. ಆದರೆ ರಮೇಶ್ ಜಾರಕಿಹೊಳಿ ಲಿಂಗಾಯಿತರ ಜೊತೆ ಅಷ್ಟೇನು ಚೆನ್ನಾಗಿಲ್ಲ ಎಂಬ ಮಾತುಗಳು ಕೇಳಿಬರುತ್ತಿದ್ದು ಇವು ಲಿಂಗಾಯತ ಸಮುದಾಯದ ಜೆಡಿಎಸ್ ಅಭ್ಯರ್ಥಿ ಅಶೋಕ ಪೂಜಾರಿಯ ಮಡಿಲು ಸೇರಲಿವೆಯಾ ಎಂಬುದು ಸಹ ಒಂದು ಯಕ್ಷಪ್ರಶ್ನೆಯಾಗಿದೆ.

ಗೋಕಾಕ್ ವಿಧಾನಸಭಾ ಕ್ಷೇತ್ರ ಈ ಬಾರಿ ಕ್ಷೇತ್ರದ ಜನತೆಯ ರಾಜಕೀಯ ಪ್ರಜ್ಞೆಯನ್ನು ಪರೀಕ್ಷೆಗೆ ಒಳಪಡಿಸುವಂತೆ ಭಾಸವಾಗುತ್ತಿದೆ. ಯಾಕೆಂದರೆ ಗೆದ್ದು ಕ್ಷೇತ್ರದ ಹಿತಾಸಕ್ತಿಗಾಗಿ ಕೆಲಸ ಮಾಡದೆ ಸ್ವಲಾಭಕ್ಕಾಗಿ ಪದೇ ಪದೇ ರೇಸಾರ್ಟ್‍ಗೆ ಹೋದಂತಹ ರಮೇಶ್ ಜಾರಕಿಹೊಳಿ ಮತ್ತೆ ಗೆಲ್ಲದಂತೆ ಮಾಡುತ್ತಾರೋ, ಮತ್ತೆ ಗೆಲ್ಲಿಸಿ ವಿಧಾನ ಸಭೆಗೆ ಕಳುಹಿಸುತ್ತಾರೋ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...