Homeಕರ್ನಾಟಕಗೋಕಾಕ್ ಉಪಚುನಾವಣೆ: ಅವರಿವರ ಜೊತೆ ಇದ್ದಾರೆಯೇ ಇಲ್ಲವೇ? ಸದ್ಯಕ್ಕೆ ವದಂತಿಗಳದ್ದೇ ಅಬ್ಬರ

ಗೋಕಾಕ್ ಉಪಚುನಾವಣೆ: ಅವರಿವರ ಜೊತೆ ಇದ್ದಾರೆಯೇ ಇಲ್ಲವೇ? ಸದ್ಯಕ್ಕೆ ವದಂತಿಗಳದ್ದೇ ಅಬ್ಬರ

- Advertisement -
- Advertisement -

ಸಮ್ಮಿಶ್ರ ಸರ್ಕಾರವನ್ನು ಅತಂತ್ರಗೊಳಿಸಲು ಸತತ ಪ್ರಯತ್ನಮಾಡಿ ಕಡೆಗೂ ಬಿಜೆಪಿ ಸರ್ಕಾರ ಬರಲು ಕಾರಣವಾದ ರಮೇಶ್ ಜಾರಕಿಹೊಳಿಯ ಗೋಕಾಕ್ ವಿಧಾನಸಭಾ ಕ್ಷೇತ್ರ ಈಗ ರಾಜ್ಯದ ಪ್ರತಿಷ್ಟಿತ ಕಣವಾಗಿ ಮಾರ್ಪಟ್ಟಿದೆ. ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಮತ್ತೆ ಗೋಕಾಕ್ ಕ್ಷೇತ್ರದಿಂದ ಆರಿಸಿ ಬರಲು ಯತ್ನಿಸುತ್ತಿದ್ದು,ಬಿಜೆಪಿಯ ಅಧಿಕೃತ ಅಭ್ಯರ್ಥಿಯಾಗಿದ್ದಾರೆ. ಆದರೆ ಈತನಿಗೆ ಎದುರಾಳಿಯಾಗಿ ಕಾಂಗ್ರೆಸ್‍ನಿಂದ ಈತನ ಸಹೋದರ ಲಖನ್ ಜಾರಕಿಹೊಳಿ ಕಣಕ್ಕಿಳಿದಿದ್ದು ಲಖನ್‍ಗೆ ಸತೀಶ್ ಜಾರಕಿಹೊಳಿಯ ಸಂಪೂರ್ಣ ಬೆಂಬಲವಿದೆ. ಇವರಿಬ್ಬರಿಗೂ ಪೈಪೋಟಿಯಾಗಿ ಜೆಡಿಎಸ್ ಅಭ್ಯರ್ಥಿ ಅಶೋಕ ಪೂಜಾರಿ ಕಣದಲ್ಲಿದ್ದಾರೆ. ಲಖನ್ ಜಾರಕಿಹೊಳಿ ಜೊತೆ ಸತೀಶ್ ಜಾರಕಿಹೊಳಿಯು ಸಹ ನಾಮಪತ್ರ ಸಲ್ಲಿಸಿ ಹುಬ್ಬೇರಿಸುವಂತೆ ಮಾಡಿದ್ದರು. ಲಖನ್ ನಾಮಪತ್ರವೇನಾದರೂ ಕೊನೆಕ್ಷಣದಲ್ಲಿ ತಿರಸ್ಕೃತವಾದರೆ ಇರಲಿ ಎನ್ನುವ ತಂತ್ರ ಇದಾಗಿದೆ ಎನ್ನಲಾಗಿದೆ. ಆದ್ದರಿಂದ ಈ ಕ್ಷೇತ್ರ ಸದ್ಯಕ್ಕೆ ತ್ರಿಕೋನ ಸ್ಪರ್ಧೆಯಾಗಿ ಮಾರ್ಪಡುವ ಸಾಧ್ಯತೆಯೇ ಹೆಚ್ಚು. ರಮೇಶ್ ಮತ್ತು ಸತೀಶ್ ಜಾರಕಿಹೊಳಿ ಸಹೋದರರ ನಡುವೆ ಬಿರುಕು ಉಂಟಾಗಿದ್ದು ರಮೇಶ್‍ರನ್ನು ಸೋಲಿಸಲೇಬೇಕಿಂದ ಸತೀಶ್, ಲಖನ್ ಜಾರಕಿಹೊಳಿಯನ್ನು ನಿಲ್ಲಿಸಿ ಶತಾಯಗತಾಯ ಗೆಲ್ಲಿಸಲು ಪ್ರಯತ್ನ ಪಡುತ್ತಿದ್ದಾರೆ. ಸತತ ಮೂರು ಬಾರಿ ರಮೇಶ್ ಜಾರಕಿಹೊಳಿ ವಿರುದ್ಧ ಇದೇ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತಿದ್ದ ಅಶೋಕ ಪೂಜಾರಿ ಬಿಜೆಪಿಯಲ್ಲಿ ಟಿಕೆಟ್ ಸಿಗದ ಕಾರಣ ಜೆಡಿಎಸ್ ಅಭ್ಯರ್ಥಿಯಾಗಿ ಮತಯಾಚನೆಗೆ ಸಿದ್ಧರಾಗಿದ್ದಾರೆ.

ಬೆಳಗಾವಿಯು ರಮೇಶ್ ಜಾರಕಿಹೊಳಿಯ ಹಲವು ಪ್ರಹಸನಗಳಿಂದ ಗಮನಸೆಳೆಯುವ ಜೊತೆಗೆ ಸಹೋದರರ ಜಗಳ, ಜಾರಕಿಹೊಳಿ ಕುಟುಂಬ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಜೊತೆ ಜಗಳ, ಡಿಕೆಶಿ ವರ್ಸಸ್ ಜಾರಕಿಹೊಳಿ ಕುಟುಂಬ, ಉಮೇಶ್ ಕತ್ತಿ ವರ್ಸಸ್ ಲಕ್ಷ್ಮಣ ಸವದಿ ಈ ರೀತಿಯ ಜಗಳಗಳಿಗೂ ಸಹ ಗಮನ ಸೆಳೆಯುತ್ತಿತ್ತು. ಈಗ ಈ ಎಲ್ಲಾ ಒಳ ಮತ್ತು ಹೊರ ಜಗಳಗಳೂ ಸಹ ಗೋಕಾಕ್ ವಿಧಾನಸಭಾ ಉಪಚುನಾವಣೆಯ ಮೇಲೆ ದಟ್ಟವಾದಂತಹ ಪ್ರಭಾವವನ್ನು ಬೀರುವುದು ಖಚಿತವಾಗಿದೆ. ಶತ್ರುಗಳ ಶತ್ರು ಮಿತ್ರ ಎನ್ನುವಂತೆ ಮೂವರು ಅಭ್ಯರ್ಥಿಗಳಿಗೂ ಊಹಿಸದ ರೀತಿಯಲ್ಲಿ ಸ್ವಪಕ್ಷದಿಂದ ಅಲ್ಲದೇ ಹೊರಗಿನಿಂದಲೂ ಸಹ ಬೆಂಬಲ ವ್ಯಕ್ತವಾಗುತ್ತಿದೆ ಮತ್ತು ಸ್ವಪಕ್ಷದವರೇ ಕಾಲೆಳೆಯುವ ಸಾಧ್ಯತೆಗಳು ಹೆಚ್ಚಾಗಿರುವುದು ವಿಚಿತ್ರವಾದ ಸಂಗತಿಯಾಗಿದೆ. ರಮೇಶ್ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಮಧ್ಯೆ ಅಷ್ಟೊಂದು ಜಗಳಗಳಿದ್ದರೂ, ಸತೀಶ್ ಜಾರಕಿಹೊಳಿಯ ಜೊತೆಗೆ ಇಬ್ಬರಿಗೂ ತಗಾದೆ ಇರುವುದರಿಂದ ಲಕ್ಷ್ಮೀ ಹೆಬ್ಬಾಳಕರ್ ರಮೇಶ್‍ಗೆ ಬೆಂಬಲಿಸುವ ಒಳ ಒಪ್ಪಂದವಾಗಿದೆಯೆಂದು ಕ್ಷೇತ್ರದ ಜನ ಮಾತಾಡಿಕೊಳ್ಳುತ್ತಿದ್ದಾರೆ. ಹಾಗಾಗಿಯೇ ಲಕ್ಷ್ಮೀ ಒಬ್ಬರಿಗೇ ಕಾಂಗ್ರೆಸ್‍ನಿಂದ ಗೋಕಾಕ್ ಉಸ್ತುವಾರಿ ನೀಡಲಾಯಿತು, ಆದರೂ ನಾಮಪತ್ರ ಸಲ್ಲಿಕೆಗೆ ಅವರು ಹೋಗಿರದಿದ್ದು ವದಂತಿಗಳಿಗೆ ಕಾರಣವಾಗಿದೆ.

ಇತ್ತೀಚಿಗೆ ಕನಕಪುರದ ಹತ್ತಿರ ಕೆಲವು ಮುಖಂಡರು ಮತ್ತು ಸ್ವಾಮೀಜಿಯ ಜೊತೆ ಜೆಡಿಎಸ್ ಅಭ್ಯರ್ಥಿ ಅಶೋಕ ಪೂಜಾರಿ ಚರ್ಚೆ ಮಾಡಿರುವ ಫೋಟೋ ಹರಿದಾಡುತ್ತಿದ್ದು ಇದು ಡಿಕೆ ಶಿವಕುಮಾರ್ ಅಣತಿಯಂತೆ ಗೋಕಾಕ್ ಮತಕ್ಷೇತ್ರದ ಕುರಿತು ನಡೆದ ಪ್ಲಾನಿಂಗ್ ಮೀಟಿಂಗ್ ಎಂದು ಹೇಳಲಾಗುತ್ತಿದೆ. ಡಿಕೆಶಿ ಜಾರಕಿಹೊಳಿ ಕುಟುಂಬದ ನಡುವೆ ಒಳ ಜಗಳಗಳಿದ್ದು ಡಿಕೆಶಿ ತಮ್ಮದೇ ಪಕ್ಷದ ಅಭ್ಯರ್ಥಿ ಲಖನ್ ಜಾರಕಿಹೊಳಿಗೆ ಬೆಂಬಲಿಸದೆ ಅಶೋಕ್ ಪೂಜಾರಿಗೆ ಬೆಂಬಲಿಸುವ ಸಾಧ್ಯತೆ ಇದೆಯೆಂದು ಈ ಫೋಟೋ ಇಟ್ಟುಕೊಂಡು ಚರ್ಚೆ ಶುರುಮಾಡಿದ್ದಾರೆ. ಡಿಕೆಶಿ ಮತ್ತು ಲಕ್ಷ್ಮಿ ಬೇರೆ ಬೇರೆ ಅಭ್ಯರ್ಥಿಗಳಿಗೆ ಬೆಂಬಲಿಸುವ ಸಾಧ್ಯತೆ ಇರದಿದ್ದರೂ, ವದಂತಿಗಳಿಗೆ ಅದರದ್ದೇ ಆದ ತರ್ಕಗಳಿವೆ.
ಹಾಗೆಯೇ ಅರಭಾವಿ ಶಾಸಕ ಜಾರಕಿಹೊಳಿ ಸೋದರರಲ್ಲೊಬ್ಬರಾದ ಬಾಲಚಂದ್ರ ಮೇಲ್ನೋಟಕ್ಕೆ ಪಕ್ಷದ ಅಭ್ಯರ್ಥಿ ರಮೇಶ್ ಪರ ಒಂದು ಹೇಳಿಕೆ ನೀಡಿದ್ದರೂ, ವಿರುದ್ಧವಾಗಿ ಕೆಲಸ ಮಾಡುತ್ತಾರೆಂಬ ಗುಮಾನಿಯೂ ಹರಿದಾಡುತ್ತಿದೆ.

ಇತ್ತ ಉಪ ಮುಖ್ಯಮಂತ್ರಿ ಸ್ಥಾನ ತನಗೆ ಸಿಗದೇ ಲಕ್ಷ್ಮಣ ಸವದಿಗೆ ಸಿಕ್ಕಿತೆಂದು ಉಮೇಶ್ ಕತ್ತಿ ಸಹಾ ಬಿಜೆಪಿ ಮೇಲೆ ಗರಂ ಆಗಿದ್ದರು. ಜಾರಕಿಹೊಳಿ ಕುಟುಂಬದ ಜೊತೆ ತಗಾದೆ ಇರುವ ಲಕ್ಷ್ಮಣ ಸವದಿಯನ್ನು ದುರ್ಬಲಗೊಳಿಸಬೇಕೆಂದರೆ ರಮೇಶ್ ಜಾರಕಿಹೊಳಿಯ ಬೆಂಬಲಕ್ಕೆ ನಿಲ್ಲಲೇಬೇಕು ಎನ್ನುವ ತೀರ್ಮಾನಕ್ಕೆ ಉಮೇಶ್ ಕತ್ತಿ ಬಂದಿದ್ದಾರೆ ಎನ್ನಲಾಗುತ್ತಿದೆ.

ಇನ್ನು ಈ ಕ್ಷೇತ್ರದಲ್ಲಿ ಲಿಂಗಾಯತ ಮತದಾರರು ನಿರ್ಣಾಯಕ ವಾಗಿದ್ದು ಲಿಂಗಾಯತರ ಮತಗಳು ಯಾರಿಗೆ ಬೀಳಲಿದೆ ಎಂಬುದು ಬಹಳ ಮುಖ್ಯವಾಗುತ್ತದೆ. ಹಾಗೆ ನೋಡಿದರೆ ಸಾಂಪ್ರದಾಯಿಕ ವಾಗಿ ಬಿಜೆಪಿಗೆ ಈ ಸಮುದಾಯದ ಮತಗಳು ಬೀಳುತ್ತವೆ. ಆದರೆ ರಮೇಶ್ ಜಾರಕಿಹೊಳಿ ಲಿಂಗಾಯಿತರ ಜೊತೆ ಅಷ್ಟೇನು ಚೆನ್ನಾಗಿಲ್ಲ ಎಂಬ ಮಾತುಗಳು ಕೇಳಿಬರುತ್ತಿದ್ದು ಇವು ಲಿಂಗಾಯತ ಸಮುದಾಯದ ಜೆಡಿಎಸ್ ಅಭ್ಯರ್ಥಿ ಅಶೋಕ ಪೂಜಾರಿಯ ಮಡಿಲು ಸೇರಲಿವೆಯಾ ಎಂಬುದು ಸಹ ಒಂದು ಯಕ್ಷಪ್ರಶ್ನೆಯಾಗಿದೆ.

ಗೋಕಾಕ್ ವಿಧಾನಸಭಾ ಕ್ಷೇತ್ರ ಈ ಬಾರಿ ಕ್ಷೇತ್ರದ ಜನತೆಯ ರಾಜಕೀಯ ಪ್ರಜ್ಞೆಯನ್ನು ಪರೀಕ್ಷೆಗೆ ಒಳಪಡಿಸುವಂತೆ ಭಾಸವಾಗುತ್ತಿದೆ. ಯಾಕೆಂದರೆ ಗೆದ್ದು ಕ್ಷೇತ್ರದ ಹಿತಾಸಕ್ತಿಗಾಗಿ ಕೆಲಸ ಮಾಡದೆ ಸ್ವಲಾಭಕ್ಕಾಗಿ ಪದೇ ಪದೇ ರೇಸಾರ್ಟ್‍ಗೆ ಹೋದಂತಹ ರಮೇಶ್ ಜಾರಕಿಹೊಳಿ ಮತ್ತೆ ಗೆಲ್ಲದಂತೆ ಮಾಡುತ್ತಾರೋ, ಮತ್ತೆ ಗೆಲ್ಲಿಸಿ ವಿಧಾನ ಸಭೆಗೆ ಕಳುಹಿಸುತ್ತಾರೋ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...