Homeಕರ್ನಾಟಕಗೋಕಾಕ್ ಉಪಚುನಾವಣೆ: ಅವರಿವರ ಜೊತೆ ಇದ್ದಾರೆಯೇ ಇಲ್ಲವೇ? ಸದ್ಯಕ್ಕೆ ವದಂತಿಗಳದ್ದೇ ಅಬ್ಬರ

ಗೋಕಾಕ್ ಉಪಚುನಾವಣೆ: ಅವರಿವರ ಜೊತೆ ಇದ್ದಾರೆಯೇ ಇಲ್ಲವೇ? ಸದ್ಯಕ್ಕೆ ವದಂತಿಗಳದ್ದೇ ಅಬ್ಬರ

- Advertisement -
- Advertisement -

ಸಮ್ಮಿಶ್ರ ಸರ್ಕಾರವನ್ನು ಅತಂತ್ರಗೊಳಿಸಲು ಸತತ ಪ್ರಯತ್ನಮಾಡಿ ಕಡೆಗೂ ಬಿಜೆಪಿ ಸರ್ಕಾರ ಬರಲು ಕಾರಣವಾದ ರಮೇಶ್ ಜಾರಕಿಹೊಳಿಯ ಗೋಕಾಕ್ ವಿಧಾನಸಭಾ ಕ್ಷೇತ್ರ ಈಗ ರಾಜ್ಯದ ಪ್ರತಿಷ್ಟಿತ ಕಣವಾಗಿ ಮಾರ್ಪಟ್ಟಿದೆ. ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಮತ್ತೆ ಗೋಕಾಕ್ ಕ್ಷೇತ್ರದಿಂದ ಆರಿಸಿ ಬರಲು ಯತ್ನಿಸುತ್ತಿದ್ದು,ಬಿಜೆಪಿಯ ಅಧಿಕೃತ ಅಭ್ಯರ್ಥಿಯಾಗಿದ್ದಾರೆ. ಆದರೆ ಈತನಿಗೆ ಎದುರಾಳಿಯಾಗಿ ಕಾಂಗ್ರೆಸ್‍ನಿಂದ ಈತನ ಸಹೋದರ ಲಖನ್ ಜಾರಕಿಹೊಳಿ ಕಣಕ್ಕಿಳಿದಿದ್ದು ಲಖನ್‍ಗೆ ಸತೀಶ್ ಜಾರಕಿಹೊಳಿಯ ಸಂಪೂರ್ಣ ಬೆಂಬಲವಿದೆ. ಇವರಿಬ್ಬರಿಗೂ ಪೈಪೋಟಿಯಾಗಿ ಜೆಡಿಎಸ್ ಅಭ್ಯರ್ಥಿ ಅಶೋಕ ಪೂಜಾರಿ ಕಣದಲ್ಲಿದ್ದಾರೆ. ಲಖನ್ ಜಾರಕಿಹೊಳಿ ಜೊತೆ ಸತೀಶ್ ಜಾರಕಿಹೊಳಿಯು ಸಹ ನಾಮಪತ್ರ ಸಲ್ಲಿಸಿ ಹುಬ್ಬೇರಿಸುವಂತೆ ಮಾಡಿದ್ದರು. ಲಖನ್ ನಾಮಪತ್ರವೇನಾದರೂ ಕೊನೆಕ್ಷಣದಲ್ಲಿ ತಿರಸ್ಕೃತವಾದರೆ ಇರಲಿ ಎನ್ನುವ ತಂತ್ರ ಇದಾಗಿದೆ ಎನ್ನಲಾಗಿದೆ. ಆದ್ದರಿಂದ ಈ ಕ್ಷೇತ್ರ ಸದ್ಯಕ್ಕೆ ತ್ರಿಕೋನ ಸ್ಪರ್ಧೆಯಾಗಿ ಮಾರ್ಪಡುವ ಸಾಧ್ಯತೆಯೇ ಹೆಚ್ಚು. ರಮೇಶ್ ಮತ್ತು ಸತೀಶ್ ಜಾರಕಿಹೊಳಿ ಸಹೋದರರ ನಡುವೆ ಬಿರುಕು ಉಂಟಾಗಿದ್ದು ರಮೇಶ್‍ರನ್ನು ಸೋಲಿಸಲೇಬೇಕಿಂದ ಸತೀಶ್, ಲಖನ್ ಜಾರಕಿಹೊಳಿಯನ್ನು ನಿಲ್ಲಿಸಿ ಶತಾಯಗತಾಯ ಗೆಲ್ಲಿಸಲು ಪ್ರಯತ್ನ ಪಡುತ್ತಿದ್ದಾರೆ. ಸತತ ಮೂರು ಬಾರಿ ರಮೇಶ್ ಜಾರಕಿಹೊಳಿ ವಿರುದ್ಧ ಇದೇ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತಿದ್ದ ಅಶೋಕ ಪೂಜಾರಿ ಬಿಜೆಪಿಯಲ್ಲಿ ಟಿಕೆಟ್ ಸಿಗದ ಕಾರಣ ಜೆಡಿಎಸ್ ಅಭ್ಯರ್ಥಿಯಾಗಿ ಮತಯಾಚನೆಗೆ ಸಿದ್ಧರಾಗಿದ್ದಾರೆ.

ಬೆಳಗಾವಿಯು ರಮೇಶ್ ಜಾರಕಿಹೊಳಿಯ ಹಲವು ಪ್ರಹಸನಗಳಿಂದ ಗಮನಸೆಳೆಯುವ ಜೊತೆಗೆ ಸಹೋದರರ ಜಗಳ, ಜಾರಕಿಹೊಳಿ ಕುಟುಂಬ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಜೊತೆ ಜಗಳ, ಡಿಕೆಶಿ ವರ್ಸಸ್ ಜಾರಕಿಹೊಳಿ ಕುಟುಂಬ, ಉಮೇಶ್ ಕತ್ತಿ ವರ್ಸಸ್ ಲಕ್ಷ್ಮಣ ಸವದಿ ಈ ರೀತಿಯ ಜಗಳಗಳಿಗೂ ಸಹ ಗಮನ ಸೆಳೆಯುತ್ತಿತ್ತು. ಈಗ ಈ ಎಲ್ಲಾ ಒಳ ಮತ್ತು ಹೊರ ಜಗಳಗಳೂ ಸಹ ಗೋಕಾಕ್ ವಿಧಾನಸಭಾ ಉಪಚುನಾವಣೆಯ ಮೇಲೆ ದಟ್ಟವಾದಂತಹ ಪ್ರಭಾವವನ್ನು ಬೀರುವುದು ಖಚಿತವಾಗಿದೆ. ಶತ್ರುಗಳ ಶತ್ರು ಮಿತ್ರ ಎನ್ನುವಂತೆ ಮೂವರು ಅಭ್ಯರ್ಥಿಗಳಿಗೂ ಊಹಿಸದ ರೀತಿಯಲ್ಲಿ ಸ್ವಪಕ್ಷದಿಂದ ಅಲ್ಲದೇ ಹೊರಗಿನಿಂದಲೂ ಸಹ ಬೆಂಬಲ ವ್ಯಕ್ತವಾಗುತ್ತಿದೆ ಮತ್ತು ಸ್ವಪಕ್ಷದವರೇ ಕಾಲೆಳೆಯುವ ಸಾಧ್ಯತೆಗಳು ಹೆಚ್ಚಾಗಿರುವುದು ವಿಚಿತ್ರವಾದ ಸಂಗತಿಯಾಗಿದೆ. ರಮೇಶ್ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಮಧ್ಯೆ ಅಷ್ಟೊಂದು ಜಗಳಗಳಿದ್ದರೂ, ಸತೀಶ್ ಜಾರಕಿಹೊಳಿಯ ಜೊತೆಗೆ ಇಬ್ಬರಿಗೂ ತಗಾದೆ ಇರುವುದರಿಂದ ಲಕ್ಷ್ಮೀ ಹೆಬ್ಬಾಳಕರ್ ರಮೇಶ್‍ಗೆ ಬೆಂಬಲಿಸುವ ಒಳ ಒಪ್ಪಂದವಾಗಿದೆಯೆಂದು ಕ್ಷೇತ್ರದ ಜನ ಮಾತಾಡಿಕೊಳ್ಳುತ್ತಿದ್ದಾರೆ. ಹಾಗಾಗಿಯೇ ಲಕ್ಷ್ಮೀ ಒಬ್ಬರಿಗೇ ಕಾಂಗ್ರೆಸ್‍ನಿಂದ ಗೋಕಾಕ್ ಉಸ್ತುವಾರಿ ನೀಡಲಾಯಿತು, ಆದರೂ ನಾಮಪತ್ರ ಸಲ್ಲಿಕೆಗೆ ಅವರು ಹೋಗಿರದಿದ್ದು ವದಂತಿಗಳಿಗೆ ಕಾರಣವಾಗಿದೆ.

ಇತ್ತೀಚಿಗೆ ಕನಕಪುರದ ಹತ್ತಿರ ಕೆಲವು ಮುಖಂಡರು ಮತ್ತು ಸ್ವಾಮೀಜಿಯ ಜೊತೆ ಜೆಡಿಎಸ್ ಅಭ್ಯರ್ಥಿ ಅಶೋಕ ಪೂಜಾರಿ ಚರ್ಚೆ ಮಾಡಿರುವ ಫೋಟೋ ಹರಿದಾಡುತ್ತಿದ್ದು ಇದು ಡಿಕೆ ಶಿವಕುಮಾರ್ ಅಣತಿಯಂತೆ ಗೋಕಾಕ್ ಮತಕ್ಷೇತ್ರದ ಕುರಿತು ನಡೆದ ಪ್ಲಾನಿಂಗ್ ಮೀಟಿಂಗ್ ಎಂದು ಹೇಳಲಾಗುತ್ತಿದೆ. ಡಿಕೆಶಿ ಜಾರಕಿಹೊಳಿ ಕುಟುಂಬದ ನಡುವೆ ಒಳ ಜಗಳಗಳಿದ್ದು ಡಿಕೆಶಿ ತಮ್ಮದೇ ಪಕ್ಷದ ಅಭ್ಯರ್ಥಿ ಲಖನ್ ಜಾರಕಿಹೊಳಿಗೆ ಬೆಂಬಲಿಸದೆ ಅಶೋಕ್ ಪೂಜಾರಿಗೆ ಬೆಂಬಲಿಸುವ ಸಾಧ್ಯತೆ ಇದೆಯೆಂದು ಈ ಫೋಟೋ ಇಟ್ಟುಕೊಂಡು ಚರ್ಚೆ ಶುರುಮಾಡಿದ್ದಾರೆ. ಡಿಕೆಶಿ ಮತ್ತು ಲಕ್ಷ್ಮಿ ಬೇರೆ ಬೇರೆ ಅಭ್ಯರ್ಥಿಗಳಿಗೆ ಬೆಂಬಲಿಸುವ ಸಾಧ್ಯತೆ ಇರದಿದ್ದರೂ, ವದಂತಿಗಳಿಗೆ ಅದರದ್ದೇ ಆದ ತರ್ಕಗಳಿವೆ.
ಹಾಗೆಯೇ ಅರಭಾವಿ ಶಾಸಕ ಜಾರಕಿಹೊಳಿ ಸೋದರರಲ್ಲೊಬ್ಬರಾದ ಬಾಲಚಂದ್ರ ಮೇಲ್ನೋಟಕ್ಕೆ ಪಕ್ಷದ ಅಭ್ಯರ್ಥಿ ರಮೇಶ್ ಪರ ಒಂದು ಹೇಳಿಕೆ ನೀಡಿದ್ದರೂ, ವಿರುದ್ಧವಾಗಿ ಕೆಲಸ ಮಾಡುತ್ತಾರೆಂಬ ಗುಮಾನಿಯೂ ಹರಿದಾಡುತ್ತಿದೆ.

ಇತ್ತ ಉಪ ಮುಖ್ಯಮಂತ್ರಿ ಸ್ಥಾನ ತನಗೆ ಸಿಗದೇ ಲಕ್ಷ್ಮಣ ಸವದಿಗೆ ಸಿಕ್ಕಿತೆಂದು ಉಮೇಶ್ ಕತ್ತಿ ಸಹಾ ಬಿಜೆಪಿ ಮೇಲೆ ಗರಂ ಆಗಿದ್ದರು. ಜಾರಕಿಹೊಳಿ ಕುಟುಂಬದ ಜೊತೆ ತಗಾದೆ ಇರುವ ಲಕ್ಷ್ಮಣ ಸವದಿಯನ್ನು ದುರ್ಬಲಗೊಳಿಸಬೇಕೆಂದರೆ ರಮೇಶ್ ಜಾರಕಿಹೊಳಿಯ ಬೆಂಬಲಕ್ಕೆ ನಿಲ್ಲಲೇಬೇಕು ಎನ್ನುವ ತೀರ್ಮಾನಕ್ಕೆ ಉಮೇಶ್ ಕತ್ತಿ ಬಂದಿದ್ದಾರೆ ಎನ್ನಲಾಗುತ್ತಿದೆ.

ಇನ್ನು ಈ ಕ್ಷೇತ್ರದಲ್ಲಿ ಲಿಂಗಾಯತ ಮತದಾರರು ನಿರ್ಣಾಯಕ ವಾಗಿದ್ದು ಲಿಂಗಾಯತರ ಮತಗಳು ಯಾರಿಗೆ ಬೀಳಲಿದೆ ಎಂಬುದು ಬಹಳ ಮುಖ್ಯವಾಗುತ್ತದೆ. ಹಾಗೆ ನೋಡಿದರೆ ಸಾಂಪ್ರದಾಯಿಕ ವಾಗಿ ಬಿಜೆಪಿಗೆ ಈ ಸಮುದಾಯದ ಮತಗಳು ಬೀಳುತ್ತವೆ. ಆದರೆ ರಮೇಶ್ ಜಾರಕಿಹೊಳಿ ಲಿಂಗಾಯಿತರ ಜೊತೆ ಅಷ್ಟೇನು ಚೆನ್ನಾಗಿಲ್ಲ ಎಂಬ ಮಾತುಗಳು ಕೇಳಿಬರುತ್ತಿದ್ದು ಇವು ಲಿಂಗಾಯತ ಸಮುದಾಯದ ಜೆಡಿಎಸ್ ಅಭ್ಯರ್ಥಿ ಅಶೋಕ ಪೂಜಾರಿಯ ಮಡಿಲು ಸೇರಲಿವೆಯಾ ಎಂಬುದು ಸಹ ಒಂದು ಯಕ್ಷಪ್ರಶ್ನೆಯಾಗಿದೆ.

ಗೋಕಾಕ್ ವಿಧಾನಸಭಾ ಕ್ಷೇತ್ರ ಈ ಬಾರಿ ಕ್ಷೇತ್ರದ ಜನತೆಯ ರಾಜಕೀಯ ಪ್ರಜ್ಞೆಯನ್ನು ಪರೀಕ್ಷೆಗೆ ಒಳಪಡಿಸುವಂತೆ ಭಾಸವಾಗುತ್ತಿದೆ. ಯಾಕೆಂದರೆ ಗೆದ್ದು ಕ್ಷೇತ್ರದ ಹಿತಾಸಕ್ತಿಗಾಗಿ ಕೆಲಸ ಮಾಡದೆ ಸ್ವಲಾಭಕ್ಕಾಗಿ ಪದೇ ಪದೇ ರೇಸಾರ್ಟ್‍ಗೆ ಹೋದಂತಹ ರಮೇಶ್ ಜಾರಕಿಹೊಳಿ ಮತ್ತೆ ಗೆಲ್ಲದಂತೆ ಮಾಡುತ್ತಾರೋ, ಮತ್ತೆ ಗೆಲ್ಲಿಸಿ ವಿಧಾನ ಸಭೆಗೆ ಕಳುಹಿಸುತ್ತಾರೋ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...