Homeಕರ್ನಾಟಕಗೋಕರ್ಣ ಅರ್ಬನ್ ಬ್ಯಾಂಕ್ ಭಾನಗಡಿ; ಹಾಲಕ್ಕಿ ಬುಡಕಟ್ಟಿನ ಅಟೆಂಡರ್‌ಗೆ ಬಲವಂತದ ನಿವೃತ್ತಿ!

ಗೋಕರ್ಣ ಅರ್ಬನ್ ಬ್ಯಾಂಕ್ ಭಾನಗಡಿ; ಹಾಲಕ್ಕಿ ಬುಡಕಟ್ಟಿನ ಅಟೆಂಡರ್‌ಗೆ ಬಲವಂತದ ನಿವೃತ್ತಿ!

- Advertisement -
- Advertisement -

ಗೋಕರ್ಣ ಮಹಾಬಲೇಶ್ವರ ಸಹಕಾರ ಬ್ಯಾಂಕ್ ಯಾನೆ ಗೋಕರ್ಣ ಅರ್ಬನ್ ಬ್ಯಾಂಕ್ ಪಟ್ಟಭದ್ರರ ಕಪಿಮುಷ್ಠಿಯಲ್ಲಿ ಸಿಕ್ಕಿಬಿದ್ದು ಒದ್ದಾಡುತ್ತಿದೆ. ಸರ್ಕಾರದ ಕಾನೂನು ಕಟ್ಟಳೆ, ಸಹಕಾರ ಇಲಾಖೆಯ ಸೂಚನೆ ಸುತ್ತೋಲೆಗೆಲ್ಲ ಇಲ್ಲಿ ಕವಡೆ ಕಾಸಿನ ಕಿಮ್ಮತ್ತೂ ಇಲ್ಲ! ಜನರಲ್ ಮ್ಯಾನೇಜರ್ ಸಾಹೇಬರ ಏಕಪಕ್ಷೀಯ ಆಡಳಿತ, ಗ್ರಾಹಕರು ಮತ್ತು ಸಾರ್ವಜನಿಕರನ್ನು ದಿಗಿಲುಗೊಳಿಸಿಬಿಟ್ಟಿದೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗ ಸಮುದಾಯದ ಬಡಪಾಯಿ ಅಟೆಂಡರ್ ಒಬ್ಬರನ್ನು ಬಲಾತ್ಕಾರದಿಂದ ನಿವೃತ್ತಿಗೊಳಿಸಿರುವ ಪ್ರಕರಣವಂತೂ ಸದರಿ ಬ್ಯಾಂಕ್ ಬಗೆಗಿದ್ದ ನಂಬಿಕೆ, ದಿನದಿಂದ ದಿನಕ್ಕೆ ಕುಸಿಯುವಂತೆ ಮಾಡಿಬಿಟ್ಟಿದೆ.

ಬ್ಯಾಂಕಿನಲ್ಲಿ ಬರೋಬ್ಬರಿ 28 ವರ್ಷದಿಂದ ನಿಷ್ಠೆ ನಿಯತ್ತಿನಿಂದ ಚಾಕರಿ ಮಾಡಿಕೊಂಡಿದ್ದ ರಾಮ ತಿಮ್ಮಗೌಡರಿಗೆ ಮೋಸ ಮಾಡಿರುವ ಬ್ಯಾಂಕ್ ಮಂಡಳಿ ನಮ್ಮ ಹಣಕ್ಕೆ ಅದೆಂಥ ಭದ್ರತೆ ಸೌಲಭ್ಯ ಒದಗಿಸಬಹುದೆಂಬ ಆತಂಕದ ವಾದ ಗ್ರಾಹಕರದು. ರಾಮಗೌಡ 1-10-1994ರಂದು ಅಟೆಂಡರ್ ಹುದ್ದೆಗೆ ನೇಮಕಾತಿ ಪಡೆದುಕೊಂಡಿದ್ದರು. ಸಹಕಾರ ಇಲಾಖೆ ಮತ್ತು ಸರ್ಕಾರದ ಹಲವು ನಿಯಮ ನಿರ್ದೇಶನಗಳ ಪ್ರಕಾರ ರಾಮಗೌಡರಿಗೆ 2023ರ ತನಕ ಬ್ಯಾಂಕಲ್ಲಿ ಉದ್ಯೋಗ ಮಾಡುವ ಅವಕಾಶವಿದೆ. ಆದರೆ ಬ್ಯಾಂಕ್‌ನ ಅಷ್ಟೂ ಆಡಳಿತವನ್ನು ತನ್ನಿಚ್ಛೆಯಂತೆ ನಡೆಸುತ್ತಿರುವ ಜನರಲ್ ಮ್ಯಾನೇಜರ್ 29-4-2021 ರಂದು ಗೌಡರಿಗೆ “ನಿವೃತ್ತಿ ಸಂದೇಶ” ರವಾನಿಸಿದ್ದಾರೆ!

ಬ್ಯಾಂಕ್ ಆಡಳಿತ ಮಂಡಳಿ ಆದೇಶದಂತೆ 31-5-2021ರಂದು ನೌಕರಿಯಿಂದ ಬಿಡುಗಡೆ ಮಾಡಲಾಗುತ್ತದೆಂದು ತಿಳಿಸಿದ್ದಾರೆ. ಈ ಅನಿರೀಕ್ಷಿತ ಆಘಾತದಿಂದ ಹೌಹಾರಿದ ಅಸಹಾಯಕ ಗೌಡರು “ಸರ್, ನನಗಿನ್ನೂ 58 ವರ್ಷ ವಯಸ್ಸು 2ವರ್ಷ ಸೇವಾವಧಿ ಇನ್ನೂ ಬಾಕಿಯಿದೆ ಅನ್ಯಾಯ ಮಾಡಬೇಡಿ” ಎಂದು ಪರಿಪರಿಯಾಗಿ ಅಲವತ್ತುಕೊಂಡಿದ್ದಾರೆ, ಇದ್ಯಾವುದಕ್ಕೂ ಕೇರ್ ಮಾಡದ ಜನರಲ್ ಮ್ಯಾನೇಜರ್ ಹಠದಿಂದ ರಾಮಗೌಡರನ್ನು 31-5-2021 ರಂದು ನಿವೃತ್ತಿಗೊಳಿಸಿ ಆದೇಶ ಕೊಟ್ಟು ಹೊರಹಾಕಿದ್ದಾರೆ!

ನೌಕರರನ್ನು 58 ವರ್ಷಕ್ಕೆ ನಿವೃತ್ತಿಗೊಳಿಸುವ ಸಹಕಾರ ಸಂಘ ಅಥವಾ ಸಹಕಾರ ಬ್ಯಾಂಕ್‌ಗಳ 1960ರ ನಿಯಮ 18(2)ನ್ನು ರಾಜ್ಯ ಸರ್ಕಾರದ ಅಧಿಸೂಚನೆ ಸ.ಸಿಎಲ್‌ಎಮ್/2008 ದಿನಾಂಕ 17-9-2008 ರಂತೆ ಎರಡು ವರ್ಷ ಹೆಚ್ಚಿಗೆ ಸೇವಾವಧಿ ಕಲ್ಪಿಸಿ ಬದಲಾಯಿಸಲಾಗಿದೆ. ಈ ನಿಯಮ ಎಲ್ಲ ಸಹಕಾರಿ ಸಂಘ/ಸಹಕಾರಿ ಬ್ಯಾಂಕ್ ಬೈಲಾದಲ್ಲಿ ಕಡ್ಡಾಯವಾಗಿ ಅಳವಡಿಸಿಕೊಳ್ಳಲು ಸರ್ಕಾರ ಕಟ್ಟುನಿಟ್ಟಿನ ಸೂಚನೆ ಸಹ ನೀಡಿದ್ದೂ ಇದೆ. ಆದರೆ ಸರ್ಕಾರದ ಈ ನಿಯಮ ಗೋಕರ್ಣ ಅರ್ಬನ್ ಬ್ಯಾಂಕ್ ಆಡಳಿತಗಾರರು ಕಡೆಗಣಿಸಿ 58 ವರ್ಷಕ್ಕೆ ನೌಕರರನ್ನು ಮನೆಗಟ್ಟುತ್ತಿದ್ದಾರೆ!

ಸಹಕಾರ ಸಂಘಗಳ ನಿಬಂಧಕರು ದಿನಾಂಕ 25-9-2008ರಂದು ಹೊರಡಿಸಿದ ಸುತ್ತೋಲೆ ಕ್ರಮ ಸಂಖ್ಯೆ ಆರ್‌ಎಸ್‌ಆರ್/ಎಎಸ್‌ಸಿ/02/2008-09ರಲ್ಲಿ ಎಲ್ಲ ಸಹಕಾರ ಸಂಘ/ಸಹಕಾರ ಬ್ಯಾಂಕ್‌ಗಳು ನೌಕರರ ನಿವೃತ್ತಿ ವಯಸ್ಸಿನಲ್ಲಾದ ಬದಲಾವಣೆ ತಿದ್ದುಪಡಿ ನಿಯಮ ತಮ್ಮ ಸಂಸ್ಥೆಯ ಪೋಟ್ ನಿಯಮದಲ್ಲಿ ಅಳವಡಿಸಿಕೊಳ್ಳಲು ಸೂಚಿಸಿದ ಆದೇಶವನ್ನು ಗೋಕರ್ಣ ಅರ್ಬನ್ ಬ್ಯಾಂಕ್ ಆಡಳಿತ ಅಧಿಕಾರಿಗಳು ಧಿಕ್ಕರಿಸಿ ಕೂತಿದ್ದಾರೆ!!

“ನಮ್ಮ ಬ್ಯಾಂಕಿನಲ್ಲಿ 58 ವರ್ಷಕ್ಕೆ ನಿವೃತ್ತಿಗೊಳಿಸುವ ಪೋಟ್ ನಿಯಮ ಬದಲಾಯಿಸಿಲ್ಲ; ಬದಲಾಯಿಸೋದೂ ಇಲ್ಲ; ನೀನು ಕೆಲಸಕ್ಕೆ ಬರುವುದು ಬೇಡ” ಎಂದು ಪಾಪದ ರಾಮಗೌಡರಿಗೆ ಜನರಲ್ ಮ್ಯಾನೇಜರ್ ಮತ್ತು ಆತನ ಕಣ್ಸನ್ನೆಗೆ ತಕ್ಕಂತೆ ಕುಣಿಯುವ ಕೆಲವು ನಿರ್ದೇಶಕರು ಏರು ಸ್ವರದಲ್ಲಿ ಹೇಳಿ ಹೊರಹಾಕಿದ್ದಾರೆ. ಈ ದಬ್ಬಾಳಿಕೆಯಿಂದ ಹೈರಾಣಾದ ರಾಮಗೌಡ ತನಗಾದ ಅನ್ಯಾಯವನ್ನು ಸಹಕಾರ ಸಂಘಗಳ ಉಪ ನಿಬಂಧಕರಿಗೆ ನಿವೇದಿಸಿಕೊಂಡಿದ್ದಾರೆ.

ದಾವೆ ವಿಚಾರಣೆ ನಡೆಸಿದ ಉಪ ನಿಬಂಧಕರಿಗೆ, ಗೋಕರ್ಣ ಅರ್ಬನ್ ಬ್ಯಾಂಕ್‌ನವರು ಎಲ್ಲ ನಿಯಮ ನೀತಿಗಳನ್ನು ಪ್ರಜ್ಞಾಪೂರ್ವಕವಾಗೇ ಮೂಲೆಗೊತ್ತಿ ರಾಮಗೌಡರನ್ನು ಎರಡು ವರ್ಷ ಮೊದಲೇ ನೀವೃತ್ತಿ ಮಾಡಿದ್ದಾರೆಂದು ಖಾತ್ರಿಯಾಗಿದೆ. ಅಂತೆಯೇ ಬ್ಯಾಂಕ್ ಗೌಡರಿಗೆ ಕೊಟ್ಟಿರುವ ನಿವೃತ್ತಿ ಆದೇಶಕ್ಕೆ ತಡೆಯಾಜ್ಞೆಯನ್ನೂ ಉಪ ನಿಬಂಧಕರು ನೀಡಿದ್ದಾರೆ. ಇಷ್ಟಾದರೂ ಬ್ಯಾಂಕ್‌ನವರು ಮಾತ್ರ ಗೌಡರನ್ನು ಕರ್ತವ್ಯಕ್ಕೆ ಸೇರಿಸಿಕೊಳ್ಳದೆ ಸತಾಯಿಸುತ್ತಿದ್ದಾರೆ. ಬ್ಯಾಂಕಿನ ಅಧ್ಯಕ್ಷರು ಎರಡು ಬಣದ ನಡುವೆ ಸಿಕ್ಕಿಬಿದ್ದಂತೆ ಒದ್ದಾಡುತ್ತಿರುವುದು ಅನೇಕ ಅನುಮಾನಕ್ಕೆ ಎಡೆ ಮಾಡಿದೆ!

ರಾಮಗೌಡ ದಿನವೂ ಡಿಆರ್ ಕೋರ್ಟಿನ ತಡೆಯಾಜ್ಞೆ ಹಿಡಿದುಕೊಂಡು ಬ್ಯಾಂಕಿಗೆ ಉದ್ಯೋಗಕ್ಕೆಂದು ಹೋಗುತ್ತಿದ್ದಾರೆ. ಆದರೆ ಅವರಿಗೆ ಒಳಗೆ ಬಿಟ್ಟುಕೊಳ್ಳುತ್ತಿಲ್ಲ. ಅವರು ಬೆಳಗಿಂದ ಸಂಜೆವರೆಗೆ ಬ್ಯಾಂಕಿನ ಮೂಲೆಯಲ್ಲಿ ಕುಳಿತು ಎದ್ದು ಬರುತ್ತಿದ್ದಾರೆ. ಈಗ ಅವರಿಗೆ ಬ್ಯಾಂಕಿನ ಬ್ಯಾಚ್, ಸಮವಸ್ತ್ರ ಧರಿಸದಂತೆ ಜಿಎಂ ಸಾಹೇಬರು ಧಮಕಿ ಹಾಕಹತ್ತಿದ್ದಾರೆ ಎಂದು ಕೂಡ ಆರೋಪಿಸಲಾಗಿದೆ. ಬ್ಯಾಂಕಿನ ಆವರಣದಲ್ಲಿ ಅಹಿತಕರ ಘಟನೆ ಸಂಭವಿಸುವ ದುಗುಡದ ವಾತಾವರಣ ಸೃಷ್ಟಿಯಾಗಿದೆ!

ಧ್ವನಿಯಿಲ್ಲದ ಬುಡಕಟ್ಟು ಸಮುದಾಯದ ರಾಮಗೌಡ ಅಧಿಕಾರಸ್ಥರ ದರ್ಪಕ್ಕೆ ಕಂಗಾಲಾಗಿದ್ದಾರೆ. ಹಾಲಕ್ಕಿ ಒಕ್ಕಲು ಸಮುದಾಯದವರು ಸರ್ಕಾರಿ, ಅರೆ ಸರ್ಕಾರಿ, ಖಾಸಗಿ ಅಥವಾ ಸಹಕಾರ ಸಂಘದಂಥ ಸಂಸ್ಥೆಗಳಲ್ಲಿ ನೌಕರಿ ಗಿಟ್ಟಿಸುವುದೇ ಅಪರೂಪ. ಅಂಥದ್ದರಲ್ಲಿ ಶೋಷಿತ ಜನಾಂಗದ ಅಮಾಯಕನ ಹೊಟ್ಟೆಪಾಡಿನ ಉದ್ಯೋಗವೇ ಕಸಿಯುವ ಕ್ರೌರ್ಯಕ್ಕೆ ಗೋಕರ್ಣ ಅರ್ಬನ್ ಬ್ಯಾಂಕ್ ಆಡಳಿತಗಾರರು ಕೈ ಹಾಕಿರುವುದು ಘೋರ ದುರಂತ ಎಂದು ಅಂತಃಕರಣವುಳ್ಳ ಜನರ ಆಕ್ರೋಶವಾಗಿದೆ.

ಅಷ್ಟಕ್ಕೂ ಈ ಅನ್ಯಾಯದ ನಿವೃತ್ತಿ ಮಸಲತ್ತಿನ ಅಸಲಿಯತ್ತೇನೆಂದು ಹುಡುಕುತ್ತ ಹೋದರೆ, ಹೊಸ ನೇಮಕಾತಿ ಹರಾಜು ಹಾಕಿದರೆ ದೊಡ್ಡ ಗಂಟು ದಕ್ಕುತ್ತದೆಂಬ ಆಸೆ ಇರಬಹುದಾ ಎಂಬ ಪ್ರಶ್ನೆಗಳು ಕೂಡ ಏಳುತ್ತವೆ.

ಸಹಕಾರ ಇಲಾಖೆಯ ಅಧಿಕಾರಿಗಳು ಗೋಕರ್ಣ ಅರ್ಬನ್ ಬ್ಯಾಂಕ್‌ನತ್ತ ಕಣ್ಣಗಲಿಸಿ ನೋಡಬೇಕಿದೆ; ಮುಗ್ಧ ರಾಮಗೌಡರಿಗೆ ನ್ಯಾಯ ಒದಗಿಸಬೇಕಿದೆ.


ಇದನ್ನೂ ಓದಿ: 5 ವರ್ಷದೊಳಗಿನ ಮಕ್ಕಳಿಗೆ ಮಾಸ್ಕ್ ಕಡ್ಡಾಯವಲ್ಲ- ಹೊಸ ಮಾರ್ಗಸೂಚಿ ಪ್ರಕಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...