Homeಕರ್ನಾಟಕಗೋಕರ್ಣ ಅರ್ಬನ್ ಬ್ಯಾಂಕ್ ಭಾನಗಡಿ; ಹಾಲಕ್ಕಿ ಬುಡಕಟ್ಟಿನ ಅಟೆಂಡರ್‌ಗೆ ಬಲವಂತದ ನಿವೃತ್ತಿ!

ಗೋಕರ್ಣ ಅರ್ಬನ್ ಬ್ಯಾಂಕ್ ಭಾನಗಡಿ; ಹಾಲಕ್ಕಿ ಬುಡಕಟ್ಟಿನ ಅಟೆಂಡರ್‌ಗೆ ಬಲವಂತದ ನಿವೃತ್ತಿ!

- Advertisement -
- Advertisement -

ಗೋಕರ್ಣ ಮಹಾಬಲೇಶ್ವರ ಸಹಕಾರ ಬ್ಯಾಂಕ್ ಯಾನೆ ಗೋಕರ್ಣ ಅರ್ಬನ್ ಬ್ಯಾಂಕ್ ಪಟ್ಟಭದ್ರರ ಕಪಿಮುಷ್ಠಿಯಲ್ಲಿ ಸಿಕ್ಕಿಬಿದ್ದು ಒದ್ದಾಡುತ್ತಿದೆ. ಸರ್ಕಾರದ ಕಾನೂನು ಕಟ್ಟಳೆ, ಸಹಕಾರ ಇಲಾಖೆಯ ಸೂಚನೆ ಸುತ್ತೋಲೆಗೆಲ್ಲ ಇಲ್ಲಿ ಕವಡೆ ಕಾಸಿನ ಕಿಮ್ಮತ್ತೂ ಇಲ್ಲ! ಜನರಲ್ ಮ್ಯಾನೇಜರ್ ಸಾಹೇಬರ ಏಕಪಕ್ಷೀಯ ಆಡಳಿತ, ಗ್ರಾಹಕರು ಮತ್ತು ಸಾರ್ವಜನಿಕರನ್ನು ದಿಗಿಲುಗೊಳಿಸಿಬಿಟ್ಟಿದೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗ ಸಮುದಾಯದ ಬಡಪಾಯಿ ಅಟೆಂಡರ್ ಒಬ್ಬರನ್ನು ಬಲಾತ್ಕಾರದಿಂದ ನಿವೃತ್ತಿಗೊಳಿಸಿರುವ ಪ್ರಕರಣವಂತೂ ಸದರಿ ಬ್ಯಾಂಕ್ ಬಗೆಗಿದ್ದ ನಂಬಿಕೆ, ದಿನದಿಂದ ದಿನಕ್ಕೆ ಕುಸಿಯುವಂತೆ ಮಾಡಿಬಿಟ್ಟಿದೆ.

ಬ್ಯಾಂಕಿನಲ್ಲಿ ಬರೋಬ್ಬರಿ 28 ವರ್ಷದಿಂದ ನಿಷ್ಠೆ ನಿಯತ್ತಿನಿಂದ ಚಾಕರಿ ಮಾಡಿಕೊಂಡಿದ್ದ ರಾಮ ತಿಮ್ಮಗೌಡರಿಗೆ ಮೋಸ ಮಾಡಿರುವ ಬ್ಯಾಂಕ್ ಮಂಡಳಿ ನಮ್ಮ ಹಣಕ್ಕೆ ಅದೆಂಥ ಭದ್ರತೆ ಸೌಲಭ್ಯ ಒದಗಿಸಬಹುದೆಂಬ ಆತಂಕದ ವಾದ ಗ್ರಾಹಕರದು. ರಾಮಗೌಡ 1-10-1994ರಂದು ಅಟೆಂಡರ್ ಹುದ್ದೆಗೆ ನೇಮಕಾತಿ ಪಡೆದುಕೊಂಡಿದ್ದರು. ಸಹಕಾರ ಇಲಾಖೆ ಮತ್ತು ಸರ್ಕಾರದ ಹಲವು ನಿಯಮ ನಿರ್ದೇಶನಗಳ ಪ್ರಕಾರ ರಾಮಗೌಡರಿಗೆ 2023ರ ತನಕ ಬ್ಯಾಂಕಲ್ಲಿ ಉದ್ಯೋಗ ಮಾಡುವ ಅವಕಾಶವಿದೆ. ಆದರೆ ಬ್ಯಾಂಕ್‌ನ ಅಷ್ಟೂ ಆಡಳಿತವನ್ನು ತನ್ನಿಚ್ಛೆಯಂತೆ ನಡೆಸುತ್ತಿರುವ ಜನರಲ್ ಮ್ಯಾನೇಜರ್ 29-4-2021 ರಂದು ಗೌಡರಿಗೆ “ನಿವೃತ್ತಿ ಸಂದೇಶ” ರವಾನಿಸಿದ್ದಾರೆ!

ಬ್ಯಾಂಕ್ ಆಡಳಿತ ಮಂಡಳಿ ಆದೇಶದಂತೆ 31-5-2021ರಂದು ನೌಕರಿಯಿಂದ ಬಿಡುಗಡೆ ಮಾಡಲಾಗುತ್ತದೆಂದು ತಿಳಿಸಿದ್ದಾರೆ. ಈ ಅನಿರೀಕ್ಷಿತ ಆಘಾತದಿಂದ ಹೌಹಾರಿದ ಅಸಹಾಯಕ ಗೌಡರು “ಸರ್, ನನಗಿನ್ನೂ 58 ವರ್ಷ ವಯಸ್ಸು 2ವರ್ಷ ಸೇವಾವಧಿ ಇನ್ನೂ ಬಾಕಿಯಿದೆ ಅನ್ಯಾಯ ಮಾಡಬೇಡಿ” ಎಂದು ಪರಿಪರಿಯಾಗಿ ಅಲವತ್ತುಕೊಂಡಿದ್ದಾರೆ, ಇದ್ಯಾವುದಕ್ಕೂ ಕೇರ್ ಮಾಡದ ಜನರಲ್ ಮ್ಯಾನೇಜರ್ ಹಠದಿಂದ ರಾಮಗೌಡರನ್ನು 31-5-2021 ರಂದು ನಿವೃತ್ತಿಗೊಳಿಸಿ ಆದೇಶ ಕೊಟ್ಟು ಹೊರಹಾಕಿದ್ದಾರೆ!

ನೌಕರರನ್ನು 58 ವರ್ಷಕ್ಕೆ ನಿವೃತ್ತಿಗೊಳಿಸುವ ಸಹಕಾರ ಸಂಘ ಅಥವಾ ಸಹಕಾರ ಬ್ಯಾಂಕ್‌ಗಳ 1960ರ ನಿಯಮ 18(2)ನ್ನು ರಾಜ್ಯ ಸರ್ಕಾರದ ಅಧಿಸೂಚನೆ ಸ.ಸಿಎಲ್‌ಎಮ್/2008 ದಿನಾಂಕ 17-9-2008 ರಂತೆ ಎರಡು ವರ್ಷ ಹೆಚ್ಚಿಗೆ ಸೇವಾವಧಿ ಕಲ್ಪಿಸಿ ಬದಲಾಯಿಸಲಾಗಿದೆ. ಈ ನಿಯಮ ಎಲ್ಲ ಸಹಕಾರಿ ಸಂಘ/ಸಹಕಾರಿ ಬ್ಯಾಂಕ್ ಬೈಲಾದಲ್ಲಿ ಕಡ್ಡಾಯವಾಗಿ ಅಳವಡಿಸಿಕೊಳ್ಳಲು ಸರ್ಕಾರ ಕಟ್ಟುನಿಟ್ಟಿನ ಸೂಚನೆ ಸಹ ನೀಡಿದ್ದೂ ಇದೆ. ಆದರೆ ಸರ್ಕಾರದ ಈ ನಿಯಮ ಗೋಕರ್ಣ ಅರ್ಬನ್ ಬ್ಯಾಂಕ್ ಆಡಳಿತಗಾರರು ಕಡೆಗಣಿಸಿ 58 ವರ್ಷಕ್ಕೆ ನೌಕರರನ್ನು ಮನೆಗಟ್ಟುತ್ತಿದ್ದಾರೆ!

ಸಹಕಾರ ಸಂಘಗಳ ನಿಬಂಧಕರು ದಿನಾಂಕ 25-9-2008ರಂದು ಹೊರಡಿಸಿದ ಸುತ್ತೋಲೆ ಕ್ರಮ ಸಂಖ್ಯೆ ಆರ್‌ಎಸ್‌ಆರ್/ಎಎಸ್‌ಸಿ/02/2008-09ರಲ್ಲಿ ಎಲ್ಲ ಸಹಕಾರ ಸಂಘ/ಸಹಕಾರ ಬ್ಯಾಂಕ್‌ಗಳು ನೌಕರರ ನಿವೃತ್ತಿ ವಯಸ್ಸಿನಲ್ಲಾದ ಬದಲಾವಣೆ ತಿದ್ದುಪಡಿ ನಿಯಮ ತಮ್ಮ ಸಂಸ್ಥೆಯ ಪೋಟ್ ನಿಯಮದಲ್ಲಿ ಅಳವಡಿಸಿಕೊಳ್ಳಲು ಸೂಚಿಸಿದ ಆದೇಶವನ್ನು ಗೋಕರ್ಣ ಅರ್ಬನ್ ಬ್ಯಾಂಕ್ ಆಡಳಿತ ಅಧಿಕಾರಿಗಳು ಧಿಕ್ಕರಿಸಿ ಕೂತಿದ್ದಾರೆ!!

“ನಮ್ಮ ಬ್ಯಾಂಕಿನಲ್ಲಿ 58 ವರ್ಷಕ್ಕೆ ನಿವೃತ್ತಿಗೊಳಿಸುವ ಪೋಟ್ ನಿಯಮ ಬದಲಾಯಿಸಿಲ್ಲ; ಬದಲಾಯಿಸೋದೂ ಇಲ್ಲ; ನೀನು ಕೆಲಸಕ್ಕೆ ಬರುವುದು ಬೇಡ” ಎಂದು ಪಾಪದ ರಾಮಗೌಡರಿಗೆ ಜನರಲ್ ಮ್ಯಾನೇಜರ್ ಮತ್ತು ಆತನ ಕಣ್ಸನ್ನೆಗೆ ತಕ್ಕಂತೆ ಕುಣಿಯುವ ಕೆಲವು ನಿರ್ದೇಶಕರು ಏರು ಸ್ವರದಲ್ಲಿ ಹೇಳಿ ಹೊರಹಾಕಿದ್ದಾರೆ. ಈ ದಬ್ಬಾಳಿಕೆಯಿಂದ ಹೈರಾಣಾದ ರಾಮಗೌಡ ತನಗಾದ ಅನ್ಯಾಯವನ್ನು ಸಹಕಾರ ಸಂಘಗಳ ಉಪ ನಿಬಂಧಕರಿಗೆ ನಿವೇದಿಸಿಕೊಂಡಿದ್ದಾರೆ.

ದಾವೆ ವಿಚಾರಣೆ ನಡೆಸಿದ ಉಪ ನಿಬಂಧಕರಿಗೆ, ಗೋಕರ್ಣ ಅರ್ಬನ್ ಬ್ಯಾಂಕ್‌ನವರು ಎಲ್ಲ ನಿಯಮ ನೀತಿಗಳನ್ನು ಪ್ರಜ್ಞಾಪೂರ್ವಕವಾಗೇ ಮೂಲೆಗೊತ್ತಿ ರಾಮಗೌಡರನ್ನು ಎರಡು ವರ್ಷ ಮೊದಲೇ ನೀವೃತ್ತಿ ಮಾಡಿದ್ದಾರೆಂದು ಖಾತ್ರಿಯಾಗಿದೆ. ಅಂತೆಯೇ ಬ್ಯಾಂಕ್ ಗೌಡರಿಗೆ ಕೊಟ್ಟಿರುವ ನಿವೃತ್ತಿ ಆದೇಶಕ್ಕೆ ತಡೆಯಾಜ್ಞೆಯನ್ನೂ ಉಪ ನಿಬಂಧಕರು ನೀಡಿದ್ದಾರೆ. ಇಷ್ಟಾದರೂ ಬ್ಯಾಂಕ್‌ನವರು ಮಾತ್ರ ಗೌಡರನ್ನು ಕರ್ತವ್ಯಕ್ಕೆ ಸೇರಿಸಿಕೊಳ್ಳದೆ ಸತಾಯಿಸುತ್ತಿದ್ದಾರೆ. ಬ್ಯಾಂಕಿನ ಅಧ್ಯಕ್ಷರು ಎರಡು ಬಣದ ನಡುವೆ ಸಿಕ್ಕಿಬಿದ್ದಂತೆ ಒದ್ದಾಡುತ್ತಿರುವುದು ಅನೇಕ ಅನುಮಾನಕ್ಕೆ ಎಡೆ ಮಾಡಿದೆ!

ರಾಮಗೌಡ ದಿನವೂ ಡಿಆರ್ ಕೋರ್ಟಿನ ತಡೆಯಾಜ್ಞೆ ಹಿಡಿದುಕೊಂಡು ಬ್ಯಾಂಕಿಗೆ ಉದ್ಯೋಗಕ್ಕೆಂದು ಹೋಗುತ್ತಿದ್ದಾರೆ. ಆದರೆ ಅವರಿಗೆ ಒಳಗೆ ಬಿಟ್ಟುಕೊಳ್ಳುತ್ತಿಲ್ಲ. ಅವರು ಬೆಳಗಿಂದ ಸಂಜೆವರೆಗೆ ಬ್ಯಾಂಕಿನ ಮೂಲೆಯಲ್ಲಿ ಕುಳಿತು ಎದ್ದು ಬರುತ್ತಿದ್ದಾರೆ. ಈಗ ಅವರಿಗೆ ಬ್ಯಾಂಕಿನ ಬ್ಯಾಚ್, ಸಮವಸ್ತ್ರ ಧರಿಸದಂತೆ ಜಿಎಂ ಸಾಹೇಬರು ಧಮಕಿ ಹಾಕಹತ್ತಿದ್ದಾರೆ ಎಂದು ಕೂಡ ಆರೋಪಿಸಲಾಗಿದೆ. ಬ್ಯಾಂಕಿನ ಆವರಣದಲ್ಲಿ ಅಹಿತಕರ ಘಟನೆ ಸಂಭವಿಸುವ ದುಗುಡದ ವಾತಾವರಣ ಸೃಷ್ಟಿಯಾಗಿದೆ!

ಧ್ವನಿಯಿಲ್ಲದ ಬುಡಕಟ್ಟು ಸಮುದಾಯದ ರಾಮಗೌಡ ಅಧಿಕಾರಸ್ಥರ ದರ್ಪಕ್ಕೆ ಕಂಗಾಲಾಗಿದ್ದಾರೆ. ಹಾಲಕ್ಕಿ ಒಕ್ಕಲು ಸಮುದಾಯದವರು ಸರ್ಕಾರಿ, ಅರೆ ಸರ್ಕಾರಿ, ಖಾಸಗಿ ಅಥವಾ ಸಹಕಾರ ಸಂಘದಂಥ ಸಂಸ್ಥೆಗಳಲ್ಲಿ ನೌಕರಿ ಗಿಟ್ಟಿಸುವುದೇ ಅಪರೂಪ. ಅಂಥದ್ದರಲ್ಲಿ ಶೋಷಿತ ಜನಾಂಗದ ಅಮಾಯಕನ ಹೊಟ್ಟೆಪಾಡಿನ ಉದ್ಯೋಗವೇ ಕಸಿಯುವ ಕ್ರೌರ್ಯಕ್ಕೆ ಗೋಕರ್ಣ ಅರ್ಬನ್ ಬ್ಯಾಂಕ್ ಆಡಳಿತಗಾರರು ಕೈ ಹಾಕಿರುವುದು ಘೋರ ದುರಂತ ಎಂದು ಅಂತಃಕರಣವುಳ್ಳ ಜನರ ಆಕ್ರೋಶವಾಗಿದೆ.

ಅಷ್ಟಕ್ಕೂ ಈ ಅನ್ಯಾಯದ ನಿವೃತ್ತಿ ಮಸಲತ್ತಿನ ಅಸಲಿಯತ್ತೇನೆಂದು ಹುಡುಕುತ್ತ ಹೋದರೆ, ಹೊಸ ನೇಮಕಾತಿ ಹರಾಜು ಹಾಕಿದರೆ ದೊಡ್ಡ ಗಂಟು ದಕ್ಕುತ್ತದೆಂಬ ಆಸೆ ಇರಬಹುದಾ ಎಂಬ ಪ್ರಶ್ನೆಗಳು ಕೂಡ ಏಳುತ್ತವೆ.

ಸಹಕಾರ ಇಲಾಖೆಯ ಅಧಿಕಾರಿಗಳು ಗೋಕರ್ಣ ಅರ್ಬನ್ ಬ್ಯಾಂಕ್‌ನತ್ತ ಕಣ್ಣಗಲಿಸಿ ನೋಡಬೇಕಿದೆ; ಮುಗ್ಧ ರಾಮಗೌಡರಿಗೆ ನ್ಯಾಯ ಒದಗಿಸಬೇಕಿದೆ.


ಇದನ್ನೂ ಓದಿ: 5 ವರ್ಷದೊಳಗಿನ ಮಕ್ಕಳಿಗೆ ಮಾಸ್ಕ್ ಕಡ್ಡಾಯವಲ್ಲ- ಹೊಸ ಮಾರ್ಗಸೂಚಿ ಪ್ರಕಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...