Homeಕರ್ನಾಟಕಗೋಕರ್ಣ ಅರ್ಬನ್ ಬ್ಯಾಂಕ್ ಭಾನಗಡಿ; ಹಾಲಕ್ಕಿ ಬುಡಕಟ್ಟಿನ ಅಟೆಂಡರ್‌ಗೆ ಬಲವಂತದ ನಿವೃತ್ತಿ!

ಗೋಕರ್ಣ ಅರ್ಬನ್ ಬ್ಯಾಂಕ್ ಭಾನಗಡಿ; ಹಾಲಕ್ಕಿ ಬುಡಕಟ್ಟಿನ ಅಟೆಂಡರ್‌ಗೆ ಬಲವಂತದ ನಿವೃತ್ತಿ!

- Advertisement -
- Advertisement -

ಗೋಕರ್ಣ ಮಹಾಬಲೇಶ್ವರ ಸಹಕಾರ ಬ್ಯಾಂಕ್ ಯಾನೆ ಗೋಕರ್ಣ ಅರ್ಬನ್ ಬ್ಯಾಂಕ್ ಪಟ್ಟಭದ್ರರ ಕಪಿಮುಷ್ಠಿಯಲ್ಲಿ ಸಿಕ್ಕಿಬಿದ್ದು ಒದ್ದಾಡುತ್ತಿದೆ. ಸರ್ಕಾರದ ಕಾನೂನು ಕಟ್ಟಳೆ, ಸಹಕಾರ ಇಲಾಖೆಯ ಸೂಚನೆ ಸುತ್ತೋಲೆಗೆಲ್ಲ ಇಲ್ಲಿ ಕವಡೆ ಕಾಸಿನ ಕಿಮ್ಮತ್ತೂ ಇಲ್ಲ! ಜನರಲ್ ಮ್ಯಾನೇಜರ್ ಸಾಹೇಬರ ಏಕಪಕ್ಷೀಯ ಆಡಳಿತ, ಗ್ರಾಹಕರು ಮತ್ತು ಸಾರ್ವಜನಿಕರನ್ನು ದಿಗಿಲುಗೊಳಿಸಿಬಿಟ್ಟಿದೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗ ಸಮುದಾಯದ ಬಡಪಾಯಿ ಅಟೆಂಡರ್ ಒಬ್ಬರನ್ನು ಬಲಾತ್ಕಾರದಿಂದ ನಿವೃತ್ತಿಗೊಳಿಸಿರುವ ಪ್ರಕರಣವಂತೂ ಸದರಿ ಬ್ಯಾಂಕ್ ಬಗೆಗಿದ್ದ ನಂಬಿಕೆ, ದಿನದಿಂದ ದಿನಕ್ಕೆ ಕುಸಿಯುವಂತೆ ಮಾಡಿಬಿಟ್ಟಿದೆ.

ಬ್ಯಾಂಕಿನಲ್ಲಿ ಬರೋಬ್ಬರಿ 28 ವರ್ಷದಿಂದ ನಿಷ್ಠೆ ನಿಯತ್ತಿನಿಂದ ಚಾಕರಿ ಮಾಡಿಕೊಂಡಿದ್ದ ರಾಮ ತಿಮ್ಮಗೌಡರಿಗೆ ಮೋಸ ಮಾಡಿರುವ ಬ್ಯಾಂಕ್ ಮಂಡಳಿ ನಮ್ಮ ಹಣಕ್ಕೆ ಅದೆಂಥ ಭದ್ರತೆ ಸೌಲಭ್ಯ ಒದಗಿಸಬಹುದೆಂಬ ಆತಂಕದ ವಾದ ಗ್ರಾಹಕರದು. ರಾಮಗೌಡ 1-10-1994ರಂದು ಅಟೆಂಡರ್ ಹುದ್ದೆಗೆ ನೇಮಕಾತಿ ಪಡೆದುಕೊಂಡಿದ್ದರು. ಸಹಕಾರ ಇಲಾಖೆ ಮತ್ತು ಸರ್ಕಾರದ ಹಲವು ನಿಯಮ ನಿರ್ದೇಶನಗಳ ಪ್ರಕಾರ ರಾಮಗೌಡರಿಗೆ 2023ರ ತನಕ ಬ್ಯಾಂಕಲ್ಲಿ ಉದ್ಯೋಗ ಮಾಡುವ ಅವಕಾಶವಿದೆ. ಆದರೆ ಬ್ಯಾಂಕ್‌ನ ಅಷ್ಟೂ ಆಡಳಿತವನ್ನು ತನ್ನಿಚ್ಛೆಯಂತೆ ನಡೆಸುತ್ತಿರುವ ಜನರಲ್ ಮ್ಯಾನೇಜರ್ 29-4-2021 ರಂದು ಗೌಡರಿಗೆ “ನಿವೃತ್ತಿ ಸಂದೇಶ” ರವಾನಿಸಿದ್ದಾರೆ!

ಬ್ಯಾಂಕ್ ಆಡಳಿತ ಮಂಡಳಿ ಆದೇಶದಂತೆ 31-5-2021ರಂದು ನೌಕರಿಯಿಂದ ಬಿಡುಗಡೆ ಮಾಡಲಾಗುತ್ತದೆಂದು ತಿಳಿಸಿದ್ದಾರೆ. ಈ ಅನಿರೀಕ್ಷಿತ ಆಘಾತದಿಂದ ಹೌಹಾರಿದ ಅಸಹಾಯಕ ಗೌಡರು “ಸರ್, ನನಗಿನ್ನೂ 58 ವರ್ಷ ವಯಸ್ಸು 2ವರ್ಷ ಸೇವಾವಧಿ ಇನ್ನೂ ಬಾಕಿಯಿದೆ ಅನ್ಯಾಯ ಮಾಡಬೇಡಿ” ಎಂದು ಪರಿಪರಿಯಾಗಿ ಅಲವತ್ತುಕೊಂಡಿದ್ದಾರೆ, ಇದ್ಯಾವುದಕ್ಕೂ ಕೇರ್ ಮಾಡದ ಜನರಲ್ ಮ್ಯಾನೇಜರ್ ಹಠದಿಂದ ರಾಮಗೌಡರನ್ನು 31-5-2021 ರಂದು ನಿವೃತ್ತಿಗೊಳಿಸಿ ಆದೇಶ ಕೊಟ್ಟು ಹೊರಹಾಕಿದ್ದಾರೆ!

ನೌಕರರನ್ನು 58 ವರ್ಷಕ್ಕೆ ನಿವೃತ್ತಿಗೊಳಿಸುವ ಸಹಕಾರ ಸಂಘ ಅಥವಾ ಸಹಕಾರ ಬ್ಯಾಂಕ್‌ಗಳ 1960ರ ನಿಯಮ 18(2)ನ್ನು ರಾಜ್ಯ ಸರ್ಕಾರದ ಅಧಿಸೂಚನೆ ಸ.ಸಿಎಲ್‌ಎಮ್/2008 ದಿನಾಂಕ 17-9-2008 ರಂತೆ ಎರಡು ವರ್ಷ ಹೆಚ್ಚಿಗೆ ಸೇವಾವಧಿ ಕಲ್ಪಿಸಿ ಬದಲಾಯಿಸಲಾಗಿದೆ. ಈ ನಿಯಮ ಎಲ್ಲ ಸಹಕಾರಿ ಸಂಘ/ಸಹಕಾರಿ ಬ್ಯಾಂಕ್ ಬೈಲಾದಲ್ಲಿ ಕಡ್ಡಾಯವಾಗಿ ಅಳವಡಿಸಿಕೊಳ್ಳಲು ಸರ್ಕಾರ ಕಟ್ಟುನಿಟ್ಟಿನ ಸೂಚನೆ ಸಹ ನೀಡಿದ್ದೂ ಇದೆ. ಆದರೆ ಸರ್ಕಾರದ ಈ ನಿಯಮ ಗೋಕರ್ಣ ಅರ್ಬನ್ ಬ್ಯಾಂಕ್ ಆಡಳಿತಗಾರರು ಕಡೆಗಣಿಸಿ 58 ವರ್ಷಕ್ಕೆ ನೌಕರರನ್ನು ಮನೆಗಟ್ಟುತ್ತಿದ್ದಾರೆ!

ಸಹಕಾರ ಸಂಘಗಳ ನಿಬಂಧಕರು ದಿನಾಂಕ 25-9-2008ರಂದು ಹೊರಡಿಸಿದ ಸುತ್ತೋಲೆ ಕ್ರಮ ಸಂಖ್ಯೆ ಆರ್‌ಎಸ್‌ಆರ್/ಎಎಸ್‌ಸಿ/02/2008-09ರಲ್ಲಿ ಎಲ್ಲ ಸಹಕಾರ ಸಂಘ/ಸಹಕಾರ ಬ್ಯಾಂಕ್‌ಗಳು ನೌಕರರ ನಿವೃತ್ತಿ ವಯಸ್ಸಿನಲ್ಲಾದ ಬದಲಾವಣೆ ತಿದ್ದುಪಡಿ ನಿಯಮ ತಮ್ಮ ಸಂಸ್ಥೆಯ ಪೋಟ್ ನಿಯಮದಲ್ಲಿ ಅಳವಡಿಸಿಕೊಳ್ಳಲು ಸೂಚಿಸಿದ ಆದೇಶವನ್ನು ಗೋಕರ್ಣ ಅರ್ಬನ್ ಬ್ಯಾಂಕ್ ಆಡಳಿತ ಅಧಿಕಾರಿಗಳು ಧಿಕ್ಕರಿಸಿ ಕೂತಿದ್ದಾರೆ!!

“ನಮ್ಮ ಬ್ಯಾಂಕಿನಲ್ಲಿ 58 ವರ್ಷಕ್ಕೆ ನಿವೃತ್ತಿಗೊಳಿಸುವ ಪೋಟ್ ನಿಯಮ ಬದಲಾಯಿಸಿಲ್ಲ; ಬದಲಾಯಿಸೋದೂ ಇಲ್ಲ; ನೀನು ಕೆಲಸಕ್ಕೆ ಬರುವುದು ಬೇಡ” ಎಂದು ಪಾಪದ ರಾಮಗೌಡರಿಗೆ ಜನರಲ್ ಮ್ಯಾನೇಜರ್ ಮತ್ತು ಆತನ ಕಣ್ಸನ್ನೆಗೆ ತಕ್ಕಂತೆ ಕುಣಿಯುವ ಕೆಲವು ನಿರ್ದೇಶಕರು ಏರು ಸ್ವರದಲ್ಲಿ ಹೇಳಿ ಹೊರಹಾಕಿದ್ದಾರೆ. ಈ ದಬ್ಬಾಳಿಕೆಯಿಂದ ಹೈರಾಣಾದ ರಾಮಗೌಡ ತನಗಾದ ಅನ್ಯಾಯವನ್ನು ಸಹಕಾರ ಸಂಘಗಳ ಉಪ ನಿಬಂಧಕರಿಗೆ ನಿವೇದಿಸಿಕೊಂಡಿದ್ದಾರೆ.

ದಾವೆ ವಿಚಾರಣೆ ನಡೆಸಿದ ಉಪ ನಿಬಂಧಕರಿಗೆ, ಗೋಕರ್ಣ ಅರ್ಬನ್ ಬ್ಯಾಂಕ್‌ನವರು ಎಲ್ಲ ನಿಯಮ ನೀತಿಗಳನ್ನು ಪ್ರಜ್ಞಾಪೂರ್ವಕವಾಗೇ ಮೂಲೆಗೊತ್ತಿ ರಾಮಗೌಡರನ್ನು ಎರಡು ವರ್ಷ ಮೊದಲೇ ನೀವೃತ್ತಿ ಮಾಡಿದ್ದಾರೆಂದು ಖಾತ್ರಿಯಾಗಿದೆ. ಅಂತೆಯೇ ಬ್ಯಾಂಕ್ ಗೌಡರಿಗೆ ಕೊಟ್ಟಿರುವ ನಿವೃತ್ತಿ ಆದೇಶಕ್ಕೆ ತಡೆಯಾಜ್ಞೆಯನ್ನೂ ಉಪ ನಿಬಂಧಕರು ನೀಡಿದ್ದಾರೆ. ಇಷ್ಟಾದರೂ ಬ್ಯಾಂಕ್‌ನವರು ಮಾತ್ರ ಗೌಡರನ್ನು ಕರ್ತವ್ಯಕ್ಕೆ ಸೇರಿಸಿಕೊಳ್ಳದೆ ಸತಾಯಿಸುತ್ತಿದ್ದಾರೆ. ಬ್ಯಾಂಕಿನ ಅಧ್ಯಕ್ಷರು ಎರಡು ಬಣದ ನಡುವೆ ಸಿಕ್ಕಿಬಿದ್ದಂತೆ ಒದ್ದಾಡುತ್ತಿರುವುದು ಅನೇಕ ಅನುಮಾನಕ್ಕೆ ಎಡೆ ಮಾಡಿದೆ!

ರಾಮಗೌಡ ದಿನವೂ ಡಿಆರ್ ಕೋರ್ಟಿನ ತಡೆಯಾಜ್ಞೆ ಹಿಡಿದುಕೊಂಡು ಬ್ಯಾಂಕಿಗೆ ಉದ್ಯೋಗಕ್ಕೆಂದು ಹೋಗುತ್ತಿದ್ದಾರೆ. ಆದರೆ ಅವರಿಗೆ ಒಳಗೆ ಬಿಟ್ಟುಕೊಳ್ಳುತ್ತಿಲ್ಲ. ಅವರು ಬೆಳಗಿಂದ ಸಂಜೆವರೆಗೆ ಬ್ಯಾಂಕಿನ ಮೂಲೆಯಲ್ಲಿ ಕುಳಿತು ಎದ್ದು ಬರುತ್ತಿದ್ದಾರೆ. ಈಗ ಅವರಿಗೆ ಬ್ಯಾಂಕಿನ ಬ್ಯಾಚ್, ಸಮವಸ್ತ್ರ ಧರಿಸದಂತೆ ಜಿಎಂ ಸಾಹೇಬರು ಧಮಕಿ ಹಾಕಹತ್ತಿದ್ದಾರೆ ಎಂದು ಕೂಡ ಆರೋಪಿಸಲಾಗಿದೆ. ಬ್ಯಾಂಕಿನ ಆವರಣದಲ್ಲಿ ಅಹಿತಕರ ಘಟನೆ ಸಂಭವಿಸುವ ದುಗುಡದ ವಾತಾವರಣ ಸೃಷ್ಟಿಯಾಗಿದೆ!

ಧ್ವನಿಯಿಲ್ಲದ ಬುಡಕಟ್ಟು ಸಮುದಾಯದ ರಾಮಗೌಡ ಅಧಿಕಾರಸ್ಥರ ದರ್ಪಕ್ಕೆ ಕಂಗಾಲಾಗಿದ್ದಾರೆ. ಹಾಲಕ್ಕಿ ಒಕ್ಕಲು ಸಮುದಾಯದವರು ಸರ್ಕಾರಿ, ಅರೆ ಸರ್ಕಾರಿ, ಖಾಸಗಿ ಅಥವಾ ಸಹಕಾರ ಸಂಘದಂಥ ಸಂಸ್ಥೆಗಳಲ್ಲಿ ನೌಕರಿ ಗಿಟ್ಟಿಸುವುದೇ ಅಪರೂಪ. ಅಂಥದ್ದರಲ್ಲಿ ಶೋಷಿತ ಜನಾಂಗದ ಅಮಾಯಕನ ಹೊಟ್ಟೆಪಾಡಿನ ಉದ್ಯೋಗವೇ ಕಸಿಯುವ ಕ್ರೌರ್ಯಕ್ಕೆ ಗೋಕರ್ಣ ಅರ್ಬನ್ ಬ್ಯಾಂಕ್ ಆಡಳಿತಗಾರರು ಕೈ ಹಾಕಿರುವುದು ಘೋರ ದುರಂತ ಎಂದು ಅಂತಃಕರಣವುಳ್ಳ ಜನರ ಆಕ್ರೋಶವಾಗಿದೆ.

ಅಷ್ಟಕ್ಕೂ ಈ ಅನ್ಯಾಯದ ನಿವೃತ್ತಿ ಮಸಲತ್ತಿನ ಅಸಲಿಯತ್ತೇನೆಂದು ಹುಡುಕುತ್ತ ಹೋದರೆ, ಹೊಸ ನೇಮಕಾತಿ ಹರಾಜು ಹಾಕಿದರೆ ದೊಡ್ಡ ಗಂಟು ದಕ್ಕುತ್ತದೆಂಬ ಆಸೆ ಇರಬಹುದಾ ಎಂಬ ಪ್ರಶ್ನೆಗಳು ಕೂಡ ಏಳುತ್ತವೆ.

ಸಹಕಾರ ಇಲಾಖೆಯ ಅಧಿಕಾರಿಗಳು ಗೋಕರ್ಣ ಅರ್ಬನ್ ಬ್ಯಾಂಕ್‌ನತ್ತ ಕಣ್ಣಗಲಿಸಿ ನೋಡಬೇಕಿದೆ; ಮುಗ್ಧ ರಾಮಗೌಡರಿಗೆ ನ್ಯಾಯ ಒದಗಿಸಬೇಕಿದೆ.


ಇದನ್ನೂ ಓದಿ: 5 ವರ್ಷದೊಳಗಿನ ಮಕ್ಕಳಿಗೆ ಮಾಸ್ಕ್ ಕಡ್ಡಾಯವಲ್ಲ- ಹೊಸ ಮಾರ್ಗಸೂಚಿ ಪ್ರಕಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...