Homeಕರ್ನಾಟಕಗೋಕರ್ಣ ಅರ್ಬನ್ ಬ್ಯಾಂಕ್ ಭಾನಗಡಿ; ಹಾಲಕ್ಕಿ ಬುಡಕಟ್ಟಿನ ಅಟೆಂಡರ್‌ಗೆ ಬಲವಂತದ ನಿವೃತ್ತಿ!

ಗೋಕರ್ಣ ಅರ್ಬನ್ ಬ್ಯಾಂಕ್ ಭಾನಗಡಿ; ಹಾಲಕ್ಕಿ ಬುಡಕಟ್ಟಿನ ಅಟೆಂಡರ್‌ಗೆ ಬಲವಂತದ ನಿವೃತ್ತಿ!

- Advertisement -
- Advertisement -

ಗೋಕರ್ಣ ಮಹಾಬಲೇಶ್ವರ ಸಹಕಾರ ಬ್ಯಾಂಕ್ ಯಾನೆ ಗೋಕರ್ಣ ಅರ್ಬನ್ ಬ್ಯಾಂಕ್ ಪಟ್ಟಭದ್ರರ ಕಪಿಮುಷ್ಠಿಯಲ್ಲಿ ಸಿಕ್ಕಿಬಿದ್ದು ಒದ್ದಾಡುತ್ತಿದೆ. ಸರ್ಕಾರದ ಕಾನೂನು ಕಟ್ಟಳೆ, ಸಹಕಾರ ಇಲಾಖೆಯ ಸೂಚನೆ ಸುತ್ತೋಲೆಗೆಲ್ಲ ಇಲ್ಲಿ ಕವಡೆ ಕಾಸಿನ ಕಿಮ್ಮತ್ತೂ ಇಲ್ಲ! ಜನರಲ್ ಮ್ಯಾನೇಜರ್ ಸಾಹೇಬರ ಏಕಪಕ್ಷೀಯ ಆಡಳಿತ, ಗ್ರಾಹಕರು ಮತ್ತು ಸಾರ್ವಜನಿಕರನ್ನು ದಿಗಿಲುಗೊಳಿಸಿಬಿಟ್ಟಿದೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗ ಸಮುದಾಯದ ಬಡಪಾಯಿ ಅಟೆಂಡರ್ ಒಬ್ಬರನ್ನು ಬಲಾತ್ಕಾರದಿಂದ ನಿವೃತ್ತಿಗೊಳಿಸಿರುವ ಪ್ರಕರಣವಂತೂ ಸದರಿ ಬ್ಯಾಂಕ್ ಬಗೆಗಿದ್ದ ನಂಬಿಕೆ, ದಿನದಿಂದ ದಿನಕ್ಕೆ ಕುಸಿಯುವಂತೆ ಮಾಡಿಬಿಟ್ಟಿದೆ.

ಬ್ಯಾಂಕಿನಲ್ಲಿ ಬರೋಬ್ಬರಿ 28 ವರ್ಷದಿಂದ ನಿಷ್ಠೆ ನಿಯತ್ತಿನಿಂದ ಚಾಕರಿ ಮಾಡಿಕೊಂಡಿದ್ದ ರಾಮ ತಿಮ್ಮಗೌಡರಿಗೆ ಮೋಸ ಮಾಡಿರುವ ಬ್ಯಾಂಕ್ ಮಂಡಳಿ ನಮ್ಮ ಹಣಕ್ಕೆ ಅದೆಂಥ ಭದ್ರತೆ ಸೌಲಭ್ಯ ಒದಗಿಸಬಹುದೆಂಬ ಆತಂಕದ ವಾದ ಗ್ರಾಹಕರದು. ರಾಮಗೌಡ 1-10-1994ರಂದು ಅಟೆಂಡರ್ ಹುದ್ದೆಗೆ ನೇಮಕಾತಿ ಪಡೆದುಕೊಂಡಿದ್ದರು. ಸಹಕಾರ ಇಲಾಖೆ ಮತ್ತು ಸರ್ಕಾರದ ಹಲವು ನಿಯಮ ನಿರ್ದೇಶನಗಳ ಪ್ರಕಾರ ರಾಮಗೌಡರಿಗೆ 2023ರ ತನಕ ಬ್ಯಾಂಕಲ್ಲಿ ಉದ್ಯೋಗ ಮಾಡುವ ಅವಕಾಶವಿದೆ. ಆದರೆ ಬ್ಯಾಂಕ್‌ನ ಅಷ್ಟೂ ಆಡಳಿತವನ್ನು ತನ್ನಿಚ್ಛೆಯಂತೆ ನಡೆಸುತ್ತಿರುವ ಜನರಲ್ ಮ್ಯಾನೇಜರ್ 29-4-2021 ರಂದು ಗೌಡರಿಗೆ “ನಿವೃತ್ತಿ ಸಂದೇಶ” ರವಾನಿಸಿದ್ದಾರೆ!

ಬ್ಯಾಂಕ್ ಆಡಳಿತ ಮಂಡಳಿ ಆದೇಶದಂತೆ 31-5-2021ರಂದು ನೌಕರಿಯಿಂದ ಬಿಡುಗಡೆ ಮಾಡಲಾಗುತ್ತದೆಂದು ತಿಳಿಸಿದ್ದಾರೆ. ಈ ಅನಿರೀಕ್ಷಿತ ಆಘಾತದಿಂದ ಹೌಹಾರಿದ ಅಸಹಾಯಕ ಗೌಡರು “ಸರ್, ನನಗಿನ್ನೂ 58 ವರ್ಷ ವಯಸ್ಸು 2ವರ್ಷ ಸೇವಾವಧಿ ಇನ್ನೂ ಬಾಕಿಯಿದೆ ಅನ್ಯಾಯ ಮಾಡಬೇಡಿ” ಎಂದು ಪರಿಪರಿಯಾಗಿ ಅಲವತ್ತುಕೊಂಡಿದ್ದಾರೆ, ಇದ್ಯಾವುದಕ್ಕೂ ಕೇರ್ ಮಾಡದ ಜನರಲ್ ಮ್ಯಾನೇಜರ್ ಹಠದಿಂದ ರಾಮಗೌಡರನ್ನು 31-5-2021 ರಂದು ನಿವೃತ್ತಿಗೊಳಿಸಿ ಆದೇಶ ಕೊಟ್ಟು ಹೊರಹಾಕಿದ್ದಾರೆ!

ನೌಕರರನ್ನು 58 ವರ್ಷಕ್ಕೆ ನಿವೃತ್ತಿಗೊಳಿಸುವ ಸಹಕಾರ ಸಂಘ ಅಥವಾ ಸಹಕಾರ ಬ್ಯಾಂಕ್‌ಗಳ 1960ರ ನಿಯಮ 18(2)ನ್ನು ರಾಜ್ಯ ಸರ್ಕಾರದ ಅಧಿಸೂಚನೆ ಸ.ಸಿಎಲ್‌ಎಮ್/2008 ದಿನಾಂಕ 17-9-2008 ರಂತೆ ಎರಡು ವರ್ಷ ಹೆಚ್ಚಿಗೆ ಸೇವಾವಧಿ ಕಲ್ಪಿಸಿ ಬದಲಾಯಿಸಲಾಗಿದೆ. ಈ ನಿಯಮ ಎಲ್ಲ ಸಹಕಾರಿ ಸಂಘ/ಸಹಕಾರಿ ಬ್ಯಾಂಕ್ ಬೈಲಾದಲ್ಲಿ ಕಡ್ಡಾಯವಾಗಿ ಅಳವಡಿಸಿಕೊಳ್ಳಲು ಸರ್ಕಾರ ಕಟ್ಟುನಿಟ್ಟಿನ ಸೂಚನೆ ಸಹ ನೀಡಿದ್ದೂ ಇದೆ. ಆದರೆ ಸರ್ಕಾರದ ಈ ನಿಯಮ ಗೋಕರ್ಣ ಅರ್ಬನ್ ಬ್ಯಾಂಕ್ ಆಡಳಿತಗಾರರು ಕಡೆಗಣಿಸಿ 58 ವರ್ಷಕ್ಕೆ ನೌಕರರನ್ನು ಮನೆಗಟ್ಟುತ್ತಿದ್ದಾರೆ!

ಸಹಕಾರ ಸಂಘಗಳ ನಿಬಂಧಕರು ದಿನಾಂಕ 25-9-2008ರಂದು ಹೊರಡಿಸಿದ ಸುತ್ತೋಲೆ ಕ್ರಮ ಸಂಖ್ಯೆ ಆರ್‌ಎಸ್‌ಆರ್/ಎಎಸ್‌ಸಿ/02/2008-09ರಲ್ಲಿ ಎಲ್ಲ ಸಹಕಾರ ಸಂಘ/ಸಹಕಾರ ಬ್ಯಾಂಕ್‌ಗಳು ನೌಕರರ ನಿವೃತ್ತಿ ವಯಸ್ಸಿನಲ್ಲಾದ ಬದಲಾವಣೆ ತಿದ್ದುಪಡಿ ನಿಯಮ ತಮ್ಮ ಸಂಸ್ಥೆಯ ಪೋಟ್ ನಿಯಮದಲ್ಲಿ ಅಳವಡಿಸಿಕೊಳ್ಳಲು ಸೂಚಿಸಿದ ಆದೇಶವನ್ನು ಗೋಕರ್ಣ ಅರ್ಬನ್ ಬ್ಯಾಂಕ್ ಆಡಳಿತ ಅಧಿಕಾರಿಗಳು ಧಿಕ್ಕರಿಸಿ ಕೂತಿದ್ದಾರೆ!!

“ನಮ್ಮ ಬ್ಯಾಂಕಿನಲ್ಲಿ 58 ವರ್ಷಕ್ಕೆ ನಿವೃತ್ತಿಗೊಳಿಸುವ ಪೋಟ್ ನಿಯಮ ಬದಲಾಯಿಸಿಲ್ಲ; ಬದಲಾಯಿಸೋದೂ ಇಲ್ಲ; ನೀನು ಕೆಲಸಕ್ಕೆ ಬರುವುದು ಬೇಡ” ಎಂದು ಪಾಪದ ರಾಮಗೌಡರಿಗೆ ಜನರಲ್ ಮ್ಯಾನೇಜರ್ ಮತ್ತು ಆತನ ಕಣ್ಸನ್ನೆಗೆ ತಕ್ಕಂತೆ ಕುಣಿಯುವ ಕೆಲವು ನಿರ್ದೇಶಕರು ಏರು ಸ್ವರದಲ್ಲಿ ಹೇಳಿ ಹೊರಹಾಕಿದ್ದಾರೆ. ಈ ದಬ್ಬಾಳಿಕೆಯಿಂದ ಹೈರಾಣಾದ ರಾಮಗೌಡ ತನಗಾದ ಅನ್ಯಾಯವನ್ನು ಸಹಕಾರ ಸಂಘಗಳ ಉಪ ನಿಬಂಧಕರಿಗೆ ನಿವೇದಿಸಿಕೊಂಡಿದ್ದಾರೆ.

ದಾವೆ ವಿಚಾರಣೆ ನಡೆಸಿದ ಉಪ ನಿಬಂಧಕರಿಗೆ, ಗೋಕರ್ಣ ಅರ್ಬನ್ ಬ್ಯಾಂಕ್‌ನವರು ಎಲ್ಲ ನಿಯಮ ನೀತಿಗಳನ್ನು ಪ್ರಜ್ಞಾಪೂರ್ವಕವಾಗೇ ಮೂಲೆಗೊತ್ತಿ ರಾಮಗೌಡರನ್ನು ಎರಡು ವರ್ಷ ಮೊದಲೇ ನೀವೃತ್ತಿ ಮಾಡಿದ್ದಾರೆಂದು ಖಾತ್ರಿಯಾಗಿದೆ. ಅಂತೆಯೇ ಬ್ಯಾಂಕ್ ಗೌಡರಿಗೆ ಕೊಟ್ಟಿರುವ ನಿವೃತ್ತಿ ಆದೇಶಕ್ಕೆ ತಡೆಯಾಜ್ಞೆಯನ್ನೂ ಉಪ ನಿಬಂಧಕರು ನೀಡಿದ್ದಾರೆ. ಇಷ್ಟಾದರೂ ಬ್ಯಾಂಕ್‌ನವರು ಮಾತ್ರ ಗೌಡರನ್ನು ಕರ್ತವ್ಯಕ್ಕೆ ಸೇರಿಸಿಕೊಳ್ಳದೆ ಸತಾಯಿಸುತ್ತಿದ್ದಾರೆ. ಬ್ಯಾಂಕಿನ ಅಧ್ಯಕ್ಷರು ಎರಡು ಬಣದ ನಡುವೆ ಸಿಕ್ಕಿಬಿದ್ದಂತೆ ಒದ್ದಾಡುತ್ತಿರುವುದು ಅನೇಕ ಅನುಮಾನಕ್ಕೆ ಎಡೆ ಮಾಡಿದೆ!

ರಾಮಗೌಡ ದಿನವೂ ಡಿಆರ್ ಕೋರ್ಟಿನ ತಡೆಯಾಜ್ಞೆ ಹಿಡಿದುಕೊಂಡು ಬ್ಯಾಂಕಿಗೆ ಉದ್ಯೋಗಕ್ಕೆಂದು ಹೋಗುತ್ತಿದ್ದಾರೆ. ಆದರೆ ಅವರಿಗೆ ಒಳಗೆ ಬಿಟ್ಟುಕೊಳ್ಳುತ್ತಿಲ್ಲ. ಅವರು ಬೆಳಗಿಂದ ಸಂಜೆವರೆಗೆ ಬ್ಯಾಂಕಿನ ಮೂಲೆಯಲ್ಲಿ ಕುಳಿತು ಎದ್ದು ಬರುತ್ತಿದ್ದಾರೆ. ಈಗ ಅವರಿಗೆ ಬ್ಯಾಂಕಿನ ಬ್ಯಾಚ್, ಸಮವಸ್ತ್ರ ಧರಿಸದಂತೆ ಜಿಎಂ ಸಾಹೇಬರು ಧಮಕಿ ಹಾಕಹತ್ತಿದ್ದಾರೆ ಎಂದು ಕೂಡ ಆರೋಪಿಸಲಾಗಿದೆ. ಬ್ಯಾಂಕಿನ ಆವರಣದಲ್ಲಿ ಅಹಿತಕರ ಘಟನೆ ಸಂಭವಿಸುವ ದುಗುಡದ ವಾತಾವರಣ ಸೃಷ್ಟಿಯಾಗಿದೆ!

ಧ್ವನಿಯಿಲ್ಲದ ಬುಡಕಟ್ಟು ಸಮುದಾಯದ ರಾಮಗೌಡ ಅಧಿಕಾರಸ್ಥರ ದರ್ಪಕ್ಕೆ ಕಂಗಾಲಾಗಿದ್ದಾರೆ. ಹಾಲಕ್ಕಿ ಒಕ್ಕಲು ಸಮುದಾಯದವರು ಸರ್ಕಾರಿ, ಅರೆ ಸರ್ಕಾರಿ, ಖಾಸಗಿ ಅಥವಾ ಸಹಕಾರ ಸಂಘದಂಥ ಸಂಸ್ಥೆಗಳಲ್ಲಿ ನೌಕರಿ ಗಿಟ್ಟಿಸುವುದೇ ಅಪರೂಪ. ಅಂಥದ್ದರಲ್ಲಿ ಶೋಷಿತ ಜನಾಂಗದ ಅಮಾಯಕನ ಹೊಟ್ಟೆಪಾಡಿನ ಉದ್ಯೋಗವೇ ಕಸಿಯುವ ಕ್ರೌರ್ಯಕ್ಕೆ ಗೋಕರ್ಣ ಅರ್ಬನ್ ಬ್ಯಾಂಕ್ ಆಡಳಿತಗಾರರು ಕೈ ಹಾಕಿರುವುದು ಘೋರ ದುರಂತ ಎಂದು ಅಂತಃಕರಣವುಳ್ಳ ಜನರ ಆಕ್ರೋಶವಾಗಿದೆ.

ಅಷ್ಟಕ್ಕೂ ಈ ಅನ್ಯಾಯದ ನಿವೃತ್ತಿ ಮಸಲತ್ತಿನ ಅಸಲಿಯತ್ತೇನೆಂದು ಹುಡುಕುತ್ತ ಹೋದರೆ, ಹೊಸ ನೇಮಕಾತಿ ಹರಾಜು ಹಾಕಿದರೆ ದೊಡ್ಡ ಗಂಟು ದಕ್ಕುತ್ತದೆಂಬ ಆಸೆ ಇರಬಹುದಾ ಎಂಬ ಪ್ರಶ್ನೆಗಳು ಕೂಡ ಏಳುತ್ತವೆ.

ಸಹಕಾರ ಇಲಾಖೆಯ ಅಧಿಕಾರಿಗಳು ಗೋಕರ್ಣ ಅರ್ಬನ್ ಬ್ಯಾಂಕ್‌ನತ್ತ ಕಣ್ಣಗಲಿಸಿ ನೋಡಬೇಕಿದೆ; ಮುಗ್ಧ ರಾಮಗೌಡರಿಗೆ ನ್ಯಾಯ ಒದಗಿಸಬೇಕಿದೆ.


ಇದನ್ನೂ ಓದಿ: 5 ವರ್ಷದೊಳಗಿನ ಮಕ್ಕಳಿಗೆ ಮಾಸ್ಕ್ ಕಡ್ಡಾಯವಲ್ಲ- ಹೊಸ ಮಾರ್ಗಸೂಚಿ ಪ್ರಕಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...