Homeಕರ್ನಾಟಕಗೋಕರ್ಣ ಅರ್ಬನ್ ಬ್ಯಾಂಕ್ ಭಾನಗಡಿ; ಹಾಲಕ್ಕಿ ಬುಡಕಟ್ಟಿನ ಅಟೆಂಡರ್‌ಗೆ ಬಲವಂತದ ನಿವೃತ್ತಿ!

ಗೋಕರ್ಣ ಅರ್ಬನ್ ಬ್ಯಾಂಕ್ ಭಾನಗಡಿ; ಹಾಲಕ್ಕಿ ಬುಡಕಟ್ಟಿನ ಅಟೆಂಡರ್‌ಗೆ ಬಲವಂತದ ನಿವೃತ್ತಿ!

- Advertisement -
- Advertisement -

ಗೋಕರ್ಣ ಮಹಾಬಲೇಶ್ವರ ಸಹಕಾರ ಬ್ಯಾಂಕ್ ಯಾನೆ ಗೋಕರ್ಣ ಅರ್ಬನ್ ಬ್ಯಾಂಕ್ ಪಟ್ಟಭದ್ರರ ಕಪಿಮುಷ್ಠಿಯಲ್ಲಿ ಸಿಕ್ಕಿಬಿದ್ದು ಒದ್ದಾಡುತ್ತಿದೆ. ಸರ್ಕಾರದ ಕಾನೂನು ಕಟ್ಟಳೆ, ಸಹಕಾರ ಇಲಾಖೆಯ ಸೂಚನೆ ಸುತ್ತೋಲೆಗೆಲ್ಲ ಇಲ್ಲಿ ಕವಡೆ ಕಾಸಿನ ಕಿಮ್ಮತ್ತೂ ಇಲ್ಲ! ಜನರಲ್ ಮ್ಯಾನೇಜರ್ ಸಾಹೇಬರ ಏಕಪಕ್ಷೀಯ ಆಡಳಿತ, ಗ್ರಾಹಕರು ಮತ್ತು ಸಾರ್ವಜನಿಕರನ್ನು ದಿಗಿಲುಗೊಳಿಸಿಬಿಟ್ಟಿದೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗ ಸಮುದಾಯದ ಬಡಪಾಯಿ ಅಟೆಂಡರ್ ಒಬ್ಬರನ್ನು ಬಲಾತ್ಕಾರದಿಂದ ನಿವೃತ್ತಿಗೊಳಿಸಿರುವ ಪ್ರಕರಣವಂತೂ ಸದರಿ ಬ್ಯಾಂಕ್ ಬಗೆಗಿದ್ದ ನಂಬಿಕೆ, ದಿನದಿಂದ ದಿನಕ್ಕೆ ಕುಸಿಯುವಂತೆ ಮಾಡಿಬಿಟ್ಟಿದೆ.

ಬ್ಯಾಂಕಿನಲ್ಲಿ ಬರೋಬ್ಬರಿ 28 ವರ್ಷದಿಂದ ನಿಷ್ಠೆ ನಿಯತ್ತಿನಿಂದ ಚಾಕರಿ ಮಾಡಿಕೊಂಡಿದ್ದ ರಾಮ ತಿಮ್ಮಗೌಡರಿಗೆ ಮೋಸ ಮಾಡಿರುವ ಬ್ಯಾಂಕ್ ಮಂಡಳಿ ನಮ್ಮ ಹಣಕ್ಕೆ ಅದೆಂಥ ಭದ್ರತೆ ಸೌಲಭ್ಯ ಒದಗಿಸಬಹುದೆಂಬ ಆತಂಕದ ವಾದ ಗ್ರಾಹಕರದು. ರಾಮಗೌಡ 1-10-1994ರಂದು ಅಟೆಂಡರ್ ಹುದ್ದೆಗೆ ನೇಮಕಾತಿ ಪಡೆದುಕೊಂಡಿದ್ದರು. ಸಹಕಾರ ಇಲಾಖೆ ಮತ್ತು ಸರ್ಕಾರದ ಹಲವು ನಿಯಮ ನಿರ್ದೇಶನಗಳ ಪ್ರಕಾರ ರಾಮಗೌಡರಿಗೆ 2023ರ ತನಕ ಬ್ಯಾಂಕಲ್ಲಿ ಉದ್ಯೋಗ ಮಾಡುವ ಅವಕಾಶವಿದೆ. ಆದರೆ ಬ್ಯಾಂಕ್‌ನ ಅಷ್ಟೂ ಆಡಳಿತವನ್ನು ತನ್ನಿಚ್ಛೆಯಂತೆ ನಡೆಸುತ್ತಿರುವ ಜನರಲ್ ಮ್ಯಾನೇಜರ್ 29-4-2021 ರಂದು ಗೌಡರಿಗೆ “ನಿವೃತ್ತಿ ಸಂದೇಶ” ರವಾನಿಸಿದ್ದಾರೆ!

ಬ್ಯಾಂಕ್ ಆಡಳಿತ ಮಂಡಳಿ ಆದೇಶದಂತೆ 31-5-2021ರಂದು ನೌಕರಿಯಿಂದ ಬಿಡುಗಡೆ ಮಾಡಲಾಗುತ್ತದೆಂದು ತಿಳಿಸಿದ್ದಾರೆ. ಈ ಅನಿರೀಕ್ಷಿತ ಆಘಾತದಿಂದ ಹೌಹಾರಿದ ಅಸಹಾಯಕ ಗೌಡರು “ಸರ್, ನನಗಿನ್ನೂ 58 ವರ್ಷ ವಯಸ್ಸು 2ವರ್ಷ ಸೇವಾವಧಿ ಇನ್ನೂ ಬಾಕಿಯಿದೆ ಅನ್ಯಾಯ ಮಾಡಬೇಡಿ” ಎಂದು ಪರಿಪರಿಯಾಗಿ ಅಲವತ್ತುಕೊಂಡಿದ್ದಾರೆ, ಇದ್ಯಾವುದಕ್ಕೂ ಕೇರ್ ಮಾಡದ ಜನರಲ್ ಮ್ಯಾನೇಜರ್ ಹಠದಿಂದ ರಾಮಗೌಡರನ್ನು 31-5-2021 ರಂದು ನಿವೃತ್ತಿಗೊಳಿಸಿ ಆದೇಶ ಕೊಟ್ಟು ಹೊರಹಾಕಿದ್ದಾರೆ!

ನೌಕರರನ್ನು 58 ವರ್ಷಕ್ಕೆ ನಿವೃತ್ತಿಗೊಳಿಸುವ ಸಹಕಾರ ಸಂಘ ಅಥವಾ ಸಹಕಾರ ಬ್ಯಾಂಕ್‌ಗಳ 1960ರ ನಿಯಮ 18(2)ನ್ನು ರಾಜ್ಯ ಸರ್ಕಾರದ ಅಧಿಸೂಚನೆ ಸ.ಸಿಎಲ್‌ಎಮ್/2008 ದಿನಾಂಕ 17-9-2008 ರಂತೆ ಎರಡು ವರ್ಷ ಹೆಚ್ಚಿಗೆ ಸೇವಾವಧಿ ಕಲ್ಪಿಸಿ ಬದಲಾಯಿಸಲಾಗಿದೆ. ಈ ನಿಯಮ ಎಲ್ಲ ಸಹಕಾರಿ ಸಂಘ/ಸಹಕಾರಿ ಬ್ಯಾಂಕ್ ಬೈಲಾದಲ್ಲಿ ಕಡ್ಡಾಯವಾಗಿ ಅಳವಡಿಸಿಕೊಳ್ಳಲು ಸರ್ಕಾರ ಕಟ್ಟುನಿಟ್ಟಿನ ಸೂಚನೆ ಸಹ ನೀಡಿದ್ದೂ ಇದೆ. ಆದರೆ ಸರ್ಕಾರದ ಈ ನಿಯಮ ಗೋಕರ್ಣ ಅರ್ಬನ್ ಬ್ಯಾಂಕ್ ಆಡಳಿತಗಾರರು ಕಡೆಗಣಿಸಿ 58 ವರ್ಷಕ್ಕೆ ನೌಕರರನ್ನು ಮನೆಗಟ್ಟುತ್ತಿದ್ದಾರೆ!

ಸಹಕಾರ ಸಂಘಗಳ ನಿಬಂಧಕರು ದಿನಾಂಕ 25-9-2008ರಂದು ಹೊರಡಿಸಿದ ಸುತ್ತೋಲೆ ಕ್ರಮ ಸಂಖ್ಯೆ ಆರ್‌ಎಸ್‌ಆರ್/ಎಎಸ್‌ಸಿ/02/2008-09ರಲ್ಲಿ ಎಲ್ಲ ಸಹಕಾರ ಸಂಘ/ಸಹಕಾರ ಬ್ಯಾಂಕ್‌ಗಳು ನೌಕರರ ನಿವೃತ್ತಿ ವಯಸ್ಸಿನಲ್ಲಾದ ಬದಲಾವಣೆ ತಿದ್ದುಪಡಿ ನಿಯಮ ತಮ್ಮ ಸಂಸ್ಥೆಯ ಪೋಟ್ ನಿಯಮದಲ್ಲಿ ಅಳವಡಿಸಿಕೊಳ್ಳಲು ಸೂಚಿಸಿದ ಆದೇಶವನ್ನು ಗೋಕರ್ಣ ಅರ್ಬನ್ ಬ್ಯಾಂಕ್ ಆಡಳಿತ ಅಧಿಕಾರಿಗಳು ಧಿಕ್ಕರಿಸಿ ಕೂತಿದ್ದಾರೆ!!

“ನಮ್ಮ ಬ್ಯಾಂಕಿನಲ್ಲಿ 58 ವರ್ಷಕ್ಕೆ ನಿವೃತ್ತಿಗೊಳಿಸುವ ಪೋಟ್ ನಿಯಮ ಬದಲಾಯಿಸಿಲ್ಲ; ಬದಲಾಯಿಸೋದೂ ಇಲ್ಲ; ನೀನು ಕೆಲಸಕ್ಕೆ ಬರುವುದು ಬೇಡ” ಎಂದು ಪಾಪದ ರಾಮಗೌಡರಿಗೆ ಜನರಲ್ ಮ್ಯಾನೇಜರ್ ಮತ್ತು ಆತನ ಕಣ್ಸನ್ನೆಗೆ ತಕ್ಕಂತೆ ಕುಣಿಯುವ ಕೆಲವು ನಿರ್ದೇಶಕರು ಏರು ಸ್ವರದಲ್ಲಿ ಹೇಳಿ ಹೊರಹಾಕಿದ್ದಾರೆ. ಈ ದಬ್ಬಾಳಿಕೆಯಿಂದ ಹೈರಾಣಾದ ರಾಮಗೌಡ ತನಗಾದ ಅನ್ಯಾಯವನ್ನು ಸಹಕಾರ ಸಂಘಗಳ ಉಪ ನಿಬಂಧಕರಿಗೆ ನಿವೇದಿಸಿಕೊಂಡಿದ್ದಾರೆ.

ದಾವೆ ವಿಚಾರಣೆ ನಡೆಸಿದ ಉಪ ನಿಬಂಧಕರಿಗೆ, ಗೋಕರ್ಣ ಅರ್ಬನ್ ಬ್ಯಾಂಕ್‌ನವರು ಎಲ್ಲ ನಿಯಮ ನೀತಿಗಳನ್ನು ಪ್ರಜ್ಞಾಪೂರ್ವಕವಾಗೇ ಮೂಲೆಗೊತ್ತಿ ರಾಮಗೌಡರನ್ನು ಎರಡು ವರ್ಷ ಮೊದಲೇ ನೀವೃತ್ತಿ ಮಾಡಿದ್ದಾರೆಂದು ಖಾತ್ರಿಯಾಗಿದೆ. ಅಂತೆಯೇ ಬ್ಯಾಂಕ್ ಗೌಡರಿಗೆ ಕೊಟ್ಟಿರುವ ನಿವೃತ್ತಿ ಆದೇಶಕ್ಕೆ ತಡೆಯಾಜ್ಞೆಯನ್ನೂ ಉಪ ನಿಬಂಧಕರು ನೀಡಿದ್ದಾರೆ. ಇಷ್ಟಾದರೂ ಬ್ಯಾಂಕ್‌ನವರು ಮಾತ್ರ ಗೌಡರನ್ನು ಕರ್ತವ್ಯಕ್ಕೆ ಸೇರಿಸಿಕೊಳ್ಳದೆ ಸತಾಯಿಸುತ್ತಿದ್ದಾರೆ. ಬ್ಯಾಂಕಿನ ಅಧ್ಯಕ್ಷರು ಎರಡು ಬಣದ ನಡುವೆ ಸಿಕ್ಕಿಬಿದ್ದಂತೆ ಒದ್ದಾಡುತ್ತಿರುವುದು ಅನೇಕ ಅನುಮಾನಕ್ಕೆ ಎಡೆ ಮಾಡಿದೆ!

ರಾಮಗೌಡ ದಿನವೂ ಡಿಆರ್ ಕೋರ್ಟಿನ ತಡೆಯಾಜ್ಞೆ ಹಿಡಿದುಕೊಂಡು ಬ್ಯಾಂಕಿಗೆ ಉದ್ಯೋಗಕ್ಕೆಂದು ಹೋಗುತ್ತಿದ್ದಾರೆ. ಆದರೆ ಅವರಿಗೆ ಒಳಗೆ ಬಿಟ್ಟುಕೊಳ್ಳುತ್ತಿಲ್ಲ. ಅವರು ಬೆಳಗಿಂದ ಸಂಜೆವರೆಗೆ ಬ್ಯಾಂಕಿನ ಮೂಲೆಯಲ್ಲಿ ಕುಳಿತು ಎದ್ದು ಬರುತ್ತಿದ್ದಾರೆ. ಈಗ ಅವರಿಗೆ ಬ್ಯಾಂಕಿನ ಬ್ಯಾಚ್, ಸಮವಸ್ತ್ರ ಧರಿಸದಂತೆ ಜಿಎಂ ಸಾಹೇಬರು ಧಮಕಿ ಹಾಕಹತ್ತಿದ್ದಾರೆ ಎಂದು ಕೂಡ ಆರೋಪಿಸಲಾಗಿದೆ. ಬ್ಯಾಂಕಿನ ಆವರಣದಲ್ಲಿ ಅಹಿತಕರ ಘಟನೆ ಸಂಭವಿಸುವ ದುಗುಡದ ವಾತಾವರಣ ಸೃಷ್ಟಿಯಾಗಿದೆ!

ಧ್ವನಿಯಿಲ್ಲದ ಬುಡಕಟ್ಟು ಸಮುದಾಯದ ರಾಮಗೌಡ ಅಧಿಕಾರಸ್ಥರ ದರ್ಪಕ್ಕೆ ಕಂಗಾಲಾಗಿದ್ದಾರೆ. ಹಾಲಕ್ಕಿ ಒಕ್ಕಲು ಸಮುದಾಯದವರು ಸರ್ಕಾರಿ, ಅರೆ ಸರ್ಕಾರಿ, ಖಾಸಗಿ ಅಥವಾ ಸಹಕಾರ ಸಂಘದಂಥ ಸಂಸ್ಥೆಗಳಲ್ಲಿ ನೌಕರಿ ಗಿಟ್ಟಿಸುವುದೇ ಅಪರೂಪ. ಅಂಥದ್ದರಲ್ಲಿ ಶೋಷಿತ ಜನಾಂಗದ ಅಮಾಯಕನ ಹೊಟ್ಟೆಪಾಡಿನ ಉದ್ಯೋಗವೇ ಕಸಿಯುವ ಕ್ರೌರ್ಯಕ್ಕೆ ಗೋಕರ್ಣ ಅರ್ಬನ್ ಬ್ಯಾಂಕ್ ಆಡಳಿತಗಾರರು ಕೈ ಹಾಕಿರುವುದು ಘೋರ ದುರಂತ ಎಂದು ಅಂತಃಕರಣವುಳ್ಳ ಜನರ ಆಕ್ರೋಶವಾಗಿದೆ.

ಅಷ್ಟಕ್ಕೂ ಈ ಅನ್ಯಾಯದ ನಿವೃತ್ತಿ ಮಸಲತ್ತಿನ ಅಸಲಿಯತ್ತೇನೆಂದು ಹುಡುಕುತ್ತ ಹೋದರೆ, ಹೊಸ ನೇಮಕಾತಿ ಹರಾಜು ಹಾಕಿದರೆ ದೊಡ್ಡ ಗಂಟು ದಕ್ಕುತ್ತದೆಂಬ ಆಸೆ ಇರಬಹುದಾ ಎಂಬ ಪ್ರಶ್ನೆಗಳು ಕೂಡ ಏಳುತ್ತವೆ.

ಸಹಕಾರ ಇಲಾಖೆಯ ಅಧಿಕಾರಿಗಳು ಗೋಕರ್ಣ ಅರ್ಬನ್ ಬ್ಯಾಂಕ್‌ನತ್ತ ಕಣ್ಣಗಲಿಸಿ ನೋಡಬೇಕಿದೆ; ಮುಗ್ಧ ರಾಮಗೌಡರಿಗೆ ನ್ಯಾಯ ಒದಗಿಸಬೇಕಿದೆ.


ಇದನ್ನೂ ಓದಿ: 5 ವರ್ಷದೊಳಗಿನ ಮಕ್ಕಳಿಗೆ ಮಾಸ್ಕ್ ಕಡ್ಡಾಯವಲ್ಲ- ಹೊಸ ಮಾರ್ಗಸೂಚಿ ಪ್ರಕಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...