Homeಕರ್ನಾಟಕಗೋಕರ್ಣ ಅರ್ಬನ್ ಬ್ಯಾಂಕ್ ಭಾನಗಡಿ; ಹಾಲಕ್ಕಿ ಬುಡಕಟ್ಟಿನ ಅಟೆಂಡರ್‌ಗೆ ಬಲವಂತದ ನಿವೃತ್ತಿ!

ಗೋಕರ್ಣ ಅರ್ಬನ್ ಬ್ಯಾಂಕ್ ಭಾನಗಡಿ; ಹಾಲಕ್ಕಿ ಬುಡಕಟ್ಟಿನ ಅಟೆಂಡರ್‌ಗೆ ಬಲವಂತದ ನಿವೃತ್ತಿ!

- Advertisement -
- Advertisement -

ಗೋಕರ್ಣ ಮಹಾಬಲೇಶ್ವರ ಸಹಕಾರ ಬ್ಯಾಂಕ್ ಯಾನೆ ಗೋಕರ್ಣ ಅರ್ಬನ್ ಬ್ಯಾಂಕ್ ಪಟ್ಟಭದ್ರರ ಕಪಿಮುಷ್ಠಿಯಲ್ಲಿ ಸಿಕ್ಕಿಬಿದ್ದು ಒದ್ದಾಡುತ್ತಿದೆ. ಸರ್ಕಾರದ ಕಾನೂನು ಕಟ್ಟಳೆ, ಸಹಕಾರ ಇಲಾಖೆಯ ಸೂಚನೆ ಸುತ್ತೋಲೆಗೆಲ್ಲ ಇಲ್ಲಿ ಕವಡೆ ಕಾಸಿನ ಕಿಮ್ಮತ್ತೂ ಇಲ್ಲ! ಜನರಲ್ ಮ್ಯಾನೇಜರ್ ಸಾಹೇಬರ ಏಕಪಕ್ಷೀಯ ಆಡಳಿತ, ಗ್ರಾಹಕರು ಮತ್ತು ಸಾರ್ವಜನಿಕರನ್ನು ದಿಗಿಲುಗೊಳಿಸಿಬಿಟ್ಟಿದೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗ ಸಮುದಾಯದ ಬಡಪಾಯಿ ಅಟೆಂಡರ್ ಒಬ್ಬರನ್ನು ಬಲಾತ್ಕಾರದಿಂದ ನಿವೃತ್ತಿಗೊಳಿಸಿರುವ ಪ್ರಕರಣವಂತೂ ಸದರಿ ಬ್ಯಾಂಕ್ ಬಗೆಗಿದ್ದ ನಂಬಿಕೆ, ದಿನದಿಂದ ದಿನಕ್ಕೆ ಕುಸಿಯುವಂತೆ ಮಾಡಿಬಿಟ್ಟಿದೆ.

ಬ್ಯಾಂಕಿನಲ್ಲಿ ಬರೋಬ್ಬರಿ 28 ವರ್ಷದಿಂದ ನಿಷ್ಠೆ ನಿಯತ್ತಿನಿಂದ ಚಾಕರಿ ಮಾಡಿಕೊಂಡಿದ್ದ ರಾಮ ತಿಮ್ಮಗೌಡರಿಗೆ ಮೋಸ ಮಾಡಿರುವ ಬ್ಯಾಂಕ್ ಮಂಡಳಿ ನಮ್ಮ ಹಣಕ್ಕೆ ಅದೆಂಥ ಭದ್ರತೆ ಸೌಲಭ್ಯ ಒದಗಿಸಬಹುದೆಂಬ ಆತಂಕದ ವಾದ ಗ್ರಾಹಕರದು. ರಾಮಗೌಡ 1-10-1994ರಂದು ಅಟೆಂಡರ್ ಹುದ್ದೆಗೆ ನೇಮಕಾತಿ ಪಡೆದುಕೊಂಡಿದ್ದರು. ಸಹಕಾರ ಇಲಾಖೆ ಮತ್ತು ಸರ್ಕಾರದ ಹಲವು ನಿಯಮ ನಿರ್ದೇಶನಗಳ ಪ್ರಕಾರ ರಾಮಗೌಡರಿಗೆ 2023ರ ತನಕ ಬ್ಯಾಂಕಲ್ಲಿ ಉದ್ಯೋಗ ಮಾಡುವ ಅವಕಾಶವಿದೆ. ಆದರೆ ಬ್ಯಾಂಕ್‌ನ ಅಷ್ಟೂ ಆಡಳಿತವನ್ನು ತನ್ನಿಚ್ಛೆಯಂತೆ ನಡೆಸುತ್ತಿರುವ ಜನರಲ್ ಮ್ಯಾನೇಜರ್ 29-4-2021 ರಂದು ಗೌಡರಿಗೆ “ನಿವೃತ್ತಿ ಸಂದೇಶ” ರವಾನಿಸಿದ್ದಾರೆ!

ಬ್ಯಾಂಕ್ ಆಡಳಿತ ಮಂಡಳಿ ಆದೇಶದಂತೆ 31-5-2021ರಂದು ನೌಕರಿಯಿಂದ ಬಿಡುಗಡೆ ಮಾಡಲಾಗುತ್ತದೆಂದು ತಿಳಿಸಿದ್ದಾರೆ. ಈ ಅನಿರೀಕ್ಷಿತ ಆಘಾತದಿಂದ ಹೌಹಾರಿದ ಅಸಹಾಯಕ ಗೌಡರು “ಸರ್, ನನಗಿನ್ನೂ 58 ವರ್ಷ ವಯಸ್ಸು 2ವರ್ಷ ಸೇವಾವಧಿ ಇನ್ನೂ ಬಾಕಿಯಿದೆ ಅನ್ಯಾಯ ಮಾಡಬೇಡಿ” ಎಂದು ಪರಿಪರಿಯಾಗಿ ಅಲವತ್ತುಕೊಂಡಿದ್ದಾರೆ, ಇದ್ಯಾವುದಕ್ಕೂ ಕೇರ್ ಮಾಡದ ಜನರಲ್ ಮ್ಯಾನೇಜರ್ ಹಠದಿಂದ ರಾಮಗೌಡರನ್ನು 31-5-2021 ರಂದು ನಿವೃತ್ತಿಗೊಳಿಸಿ ಆದೇಶ ಕೊಟ್ಟು ಹೊರಹಾಕಿದ್ದಾರೆ!

ನೌಕರರನ್ನು 58 ವರ್ಷಕ್ಕೆ ನಿವೃತ್ತಿಗೊಳಿಸುವ ಸಹಕಾರ ಸಂಘ ಅಥವಾ ಸಹಕಾರ ಬ್ಯಾಂಕ್‌ಗಳ 1960ರ ನಿಯಮ 18(2)ನ್ನು ರಾಜ್ಯ ಸರ್ಕಾರದ ಅಧಿಸೂಚನೆ ಸ.ಸಿಎಲ್‌ಎಮ್/2008 ದಿನಾಂಕ 17-9-2008 ರಂತೆ ಎರಡು ವರ್ಷ ಹೆಚ್ಚಿಗೆ ಸೇವಾವಧಿ ಕಲ್ಪಿಸಿ ಬದಲಾಯಿಸಲಾಗಿದೆ. ಈ ನಿಯಮ ಎಲ್ಲ ಸಹಕಾರಿ ಸಂಘ/ಸಹಕಾರಿ ಬ್ಯಾಂಕ್ ಬೈಲಾದಲ್ಲಿ ಕಡ್ಡಾಯವಾಗಿ ಅಳವಡಿಸಿಕೊಳ್ಳಲು ಸರ್ಕಾರ ಕಟ್ಟುನಿಟ್ಟಿನ ಸೂಚನೆ ಸಹ ನೀಡಿದ್ದೂ ಇದೆ. ಆದರೆ ಸರ್ಕಾರದ ಈ ನಿಯಮ ಗೋಕರ್ಣ ಅರ್ಬನ್ ಬ್ಯಾಂಕ್ ಆಡಳಿತಗಾರರು ಕಡೆಗಣಿಸಿ 58 ವರ್ಷಕ್ಕೆ ನೌಕರರನ್ನು ಮನೆಗಟ್ಟುತ್ತಿದ್ದಾರೆ!

ಸಹಕಾರ ಸಂಘಗಳ ನಿಬಂಧಕರು ದಿನಾಂಕ 25-9-2008ರಂದು ಹೊರಡಿಸಿದ ಸುತ್ತೋಲೆ ಕ್ರಮ ಸಂಖ್ಯೆ ಆರ್‌ಎಸ್‌ಆರ್/ಎಎಸ್‌ಸಿ/02/2008-09ರಲ್ಲಿ ಎಲ್ಲ ಸಹಕಾರ ಸಂಘ/ಸಹಕಾರ ಬ್ಯಾಂಕ್‌ಗಳು ನೌಕರರ ನಿವೃತ್ತಿ ವಯಸ್ಸಿನಲ್ಲಾದ ಬದಲಾವಣೆ ತಿದ್ದುಪಡಿ ನಿಯಮ ತಮ್ಮ ಸಂಸ್ಥೆಯ ಪೋಟ್ ನಿಯಮದಲ್ಲಿ ಅಳವಡಿಸಿಕೊಳ್ಳಲು ಸೂಚಿಸಿದ ಆದೇಶವನ್ನು ಗೋಕರ್ಣ ಅರ್ಬನ್ ಬ್ಯಾಂಕ್ ಆಡಳಿತ ಅಧಿಕಾರಿಗಳು ಧಿಕ್ಕರಿಸಿ ಕೂತಿದ್ದಾರೆ!!

“ನಮ್ಮ ಬ್ಯಾಂಕಿನಲ್ಲಿ 58 ವರ್ಷಕ್ಕೆ ನಿವೃತ್ತಿಗೊಳಿಸುವ ಪೋಟ್ ನಿಯಮ ಬದಲಾಯಿಸಿಲ್ಲ; ಬದಲಾಯಿಸೋದೂ ಇಲ್ಲ; ನೀನು ಕೆಲಸಕ್ಕೆ ಬರುವುದು ಬೇಡ” ಎಂದು ಪಾಪದ ರಾಮಗೌಡರಿಗೆ ಜನರಲ್ ಮ್ಯಾನೇಜರ್ ಮತ್ತು ಆತನ ಕಣ್ಸನ್ನೆಗೆ ತಕ್ಕಂತೆ ಕುಣಿಯುವ ಕೆಲವು ನಿರ್ದೇಶಕರು ಏರು ಸ್ವರದಲ್ಲಿ ಹೇಳಿ ಹೊರಹಾಕಿದ್ದಾರೆ. ಈ ದಬ್ಬಾಳಿಕೆಯಿಂದ ಹೈರಾಣಾದ ರಾಮಗೌಡ ತನಗಾದ ಅನ್ಯಾಯವನ್ನು ಸಹಕಾರ ಸಂಘಗಳ ಉಪ ನಿಬಂಧಕರಿಗೆ ನಿವೇದಿಸಿಕೊಂಡಿದ್ದಾರೆ.

ದಾವೆ ವಿಚಾರಣೆ ನಡೆಸಿದ ಉಪ ನಿಬಂಧಕರಿಗೆ, ಗೋಕರ್ಣ ಅರ್ಬನ್ ಬ್ಯಾಂಕ್‌ನವರು ಎಲ್ಲ ನಿಯಮ ನೀತಿಗಳನ್ನು ಪ್ರಜ್ಞಾಪೂರ್ವಕವಾಗೇ ಮೂಲೆಗೊತ್ತಿ ರಾಮಗೌಡರನ್ನು ಎರಡು ವರ್ಷ ಮೊದಲೇ ನೀವೃತ್ತಿ ಮಾಡಿದ್ದಾರೆಂದು ಖಾತ್ರಿಯಾಗಿದೆ. ಅಂತೆಯೇ ಬ್ಯಾಂಕ್ ಗೌಡರಿಗೆ ಕೊಟ್ಟಿರುವ ನಿವೃತ್ತಿ ಆದೇಶಕ್ಕೆ ತಡೆಯಾಜ್ಞೆಯನ್ನೂ ಉಪ ನಿಬಂಧಕರು ನೀಡಿದ್ದಾರೆ. ಇಷ್ಟಾದರೂ ಬ್ಯಾಂಕ್‌ನವರು ಮಾತ್ರ ಗೌಡರನ್ನು ಕರ್ತವ್ಯಕ್ಕೆ ಸೇರಿಸಿಕೊಳ್ಳದೆ ಸತಾಯಿಸುತ್ತಿದ್ದಾರೆ. ಬ್ಯಾಂಕಿನ ಅಧ್ಯಕ್ಷರು ಎರಡು ಬಣದ ನಡುವೆ ಸಿಕ್ಕಿಬಿದ್ದಂತೆ ಒದ್ದಾಡುತ್ತಿರುವುದು ಅನೇಕ ಅನುಮಾನಕ್ಕೆ ಎಡೆ ಮಾಡಿದೆ!

ರಾಮಗೌಡ ದಿನವೂ ಡಿಆರ್ ಕೋರ್ಟಿನ ತಡೆಯಾಜ್ಞೆ ಹಿಡಿದುಕೊಂಡು ಬ್ಯಾಂಕಿಗೆ ಉದ್ಯೋಗಕ್ಕೆಂದು ಹೋಗುತ್ತಿದ್ದಾರೆ. ಆದರೆ ಅವರಿಗೆ ಒಳಗೆ ಬಿಟ್ಟುಕೊಳ್ಳುತ್ತಿಲ್ಲ. ಅವರು ಬೆಳಗಿಂದ ಸಂಜೆವರೆಗೆ ಬ್ಯಾಂಕಿನ ಮೂಲೆಯಲ್ಲಿ ಕುಳಿತು ಎದ್ದು ಬರುತ್ತಿದ್ದಾರೆ. ಈಗ ಅವರಿಗೆ ಬ್ಯಾಂಕಿನ ಬ್ಯಾಚ್, ಸಮವಸ್ತ್ರ ಧರಿಸದಂತೆ ಜಿಎಂ ಸಾಹೇಬರು ಧಮಕಿ ಹಾಕಹತ್ತಿದ್ದಾರೆ ಎಂದು ಕೂಡ ಆರೋಪಿಸಲಾಗಿದೆ. ಬ್ಯಾಂಕಿನ ಆವರಣದಲ್ಲಿ ಅಹಿತಕರ ಘಟನೆ ಸಂಭವಿಸುವ ದುಗುಡದ ವಾತಾವರಣ ಸೃಷ್ಟಿಯಾಗಿದೆ!

ಧ್ವನಿಯಿಲ್ಲದ ಬುಡಕಟ್ಟು ಸಮುದಾಯದ ರಾಮಗೌಡ ಅಧಿಕಾರಸ್ಥರ ದರ್ಪಕ್ಕೆ ಕಂಗಾಲಾಗಿದ್ದಾರೆ. ಹಾಲಕ್ಕಿ ಒಕ್ಕಲು ಸಮುದಾಯದವರು ಸರ್ಕಾರಿ, ಅರೆ ಸರ್ಕಾರಿ, ಖಾಸಗಿ ಅಥವಾ ಸಹಕಾರ ಸಂಘದಂಥ ಸಂಸ್ಥೆಗಳಲ್ಲಿ ನೌಕರಿ ಗಿಟ್ಟಿಸುವುದೇ ಅಪರೂಪ. ಅಂಥದ್ದರಲ್ಲಿ ಶೋಷಿತ ಜನಾಂಗದ ಅಮಾಯಕನ ಹೊಟ್ಟೆಪಾಡಿನ ಉದ್ಯೋಗವೇ ಕಸಿಯುವ ಕ್ರೌರ್ಯಕ್ಕೆ ಗೋಕರ್ಣ ಅರ್ಬನ್ ಬ್ಯಾಂಕ್ ಆಡಳಿತಗಾರರು ಕೈ ಹಾಕಿರುವುದು ಘೋರ ದುರಂತ ಎಂದು ಅಂತಃಕರಣವುಳ್ಳ ಜನರ ಆಕ್ರೋಶವಾಗಿದೆ.

ಅಷ್ಟಕ್ಕೂ ಈ ಅನ್ಯಾಯದ ನಿವೃತ್ತಿ ಮಸಲತ್ತಿನ ಅಸಲಿಯತ್ತೇನೆಂದು ಹುಡುಕುತ್ತ ಹೋದರೆ, ಹೊಸ ನೇಮಕಾತಿ ಹರಾಜು ಹಾಕಿದರೆ ದೊಡ್ಡ ಗಂಟು ದಕ್ಕುತ್ತದೆಂಬ ಆಸೆ ಇರಬಹುದಾ ಎಂಬ ಪ್ರಶ್ನೆಗಳು ಕೂಡ ಏಳುತ್ತವೆ.

ಸಹಕಾರ ಇಲಾಖೆಯ ಅಧಿಕಾರಿಗಳು ಗೋಕರ್ಣ ಅರ್ಬನ್ ಬ್ಯಾಂಕ್‌ನತ್ತ ಕಣ್ಣಗಲಿಸಿ ನೋಡಬೇಕಿದೆ; ಮುಗ್ಧ ರಾಮಗೌಡರಿಗೆ ನ್ಯಾಯ ಒದಗಿಸಬೇಕಿದೆ.


ಇದನ್ನೂ ಓದಿ: 5 ವರ್ಷದೊಳಗಿನ ಮಕ್ಕಳಿಗೆ ಮಾಸ್ಕ್ ಕಡ್ಡಾಯವಲ್ಲ- ಹೊಸ ಮಾರ್ಗಸೂಚಿ ಪ್ರಕಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...