Homeಮುಖಪುಟಚಿನ್ನ ಕಳ್ಳಸಾಗಣೆ ಪ್ರಕರಣ: ಪಿಣರಾಯಿ ವಿಜಯನ್ ಹೆಸರನ್ನು ಉಲ್ಲೇಖಿಸುವಂತೆ ಆರೋಪಿಗೆ ಒತ್ತಡ!

ಚಿನ್ನ ಕಳ್ಳಸಾಗಣೆ ಪ್ರಕರಣ: ಪಿಣರಾಯಿ ವಿಜಯನ್ ಹೆಸರನ್ನು ಉಲ್ಲೇಖಿಸುವಂತೆ ಆರೋಪಿಗೆ ಒತ್ತಡ!

ಆರೋಪಿ ಸ್ವಪ್ನಾ ಸುರೇಶ್ ಅವರ ರಕ್ಷಣಾತ್ಮಕ ವಿವರಗಳಿಗೆ ನಿಯೋಜಿಸಲಾದ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಕೆಲವು ಆಶ್ಚರ್ಯಕರ ಹೇಳಿಕೆಗಳನ್ನು ನೀಡಿದ್ದಾರೆ

- Advertisement -
- Advertisement -

ಕೇರಳದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೆಸರನ್ನು ಉಲ್ಲೇಖಿಸುವಂತೆ ಆರೋಪಿಯ ಮೇಲೆ ಒತ್ತಡ ಹೇರಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಆರೋಪಿ ಸ್ವಪ್ನಾ ಸುರೇಶ್ ಗೆ “ಸಿಎಂ ಪಿಣರಾಯಿ ವಿಜಯನ್” ಹೆಸರನ್ನು ಉಲ್ಲೇಖಿಸುವಂತೆ ಒತ್ತಡ ಹೇರಲಾಗಿತ್ತು ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳಿದ್ದು, ಈ ನಡುವೆ ಚಿನ್ನ ಕಳ್ಳಸಾಗಣೆ ಪ್ರಕರಣವು ಪ್ರತಿ ಪಕ್ಷಗಳಿಗೆ ಪ್ರಮುಖ ವಿಷಯವಾಗಿ ಮಾರ್ಪಟ್ಟಿದೆ.

ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ಆರೋಪಿ ಸ್ವಪ್ನಾ ಸುರೇಶ್ ಕೇರಳ ಸಿಎಂ ಪಿಣರಾಯಿ ವಿಜಯನ್ ರನ್ನು ಹೆಸರಿಸಿದ್ದಾರೆ ಎಂದು ಈ ತಿಂಗಳ ಆರಂಭದಲ್ಲಿ ತೆರಿಗೆ ಇಲಾಖೆ ನ್ಯಾಯಾಲಯದಲ್ಲಿ ಅಫಿಡವಿಟ್ ಸಲ್ಲಿಸಿತ್ತು. ಈ ಆರೋಪಕ್ಕೆ ಪ್ರತಿಯಾಗಿ ಪಿಣರಾಯಿ ವಿಜಯನ್, ಕೇಂದ್ರ ತನಿಖಾ ಸಂಸ್ಥೆಗಳು ‘ಸ್ವಯಂಪ್ರೇರಣೆಯಿಂದ’ ಚುನಾವಣಾ ಪ್ರಚಾರವನ್ನು ಕೈಗೆತ್ತಿಕೊಂಡಿವೆ ಎಂದು ವ್ಯಂಗ್ಯವಾಡಿದ್ದರು.

ಸ್ವಪ್ನಾ ಸುರೇಶ್ ಅವರ ರಕ್ಷಣಾತ್ಮಕ ವಿವರಗಳಿಗೆ ನಿಯೋಜಿಸಲಾದ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಕೆಲವು ಆಶ್ಚರ್ಯಕರ ಹೇಳಿಕೆಗಳನ್ನು ನೀಡಿದ್ದಾರೆ. ವಿಚಾರಣೆಯ ವೇಳೆ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರನ್ನು ಹೆಸರಿಸಲು ಸ್ವಪ್ನಾ ಸುರೇಶ್ ಅವರನ್ನು ‘ಇಡಿ’ಯು ಬಲವಂತವಾಗಿ ಒತ್ತಾಯಿಸಿತ್ತು ಎಂದು ಕೈಬರಹದ ಹೇಳಿಕೆಯಲ್ಲಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಗಂಗೂಲಿ ಕ್ಯಾಚ್ ಮಾಡಲು ಹೋಗಿ ‘ಕೋಬ್ರಾ’ ಹಿಡಿದ ಬಿಜೆಪಿ

ಅಧಿಕಾರಿಗಳ ಪ್ರಕಾರ, ಆಡಿಯೋ ಕ್ಲಿಪ್‌ನ ಮೂಲದ ಕುರಿತಾದ ತನಿಖೆಗೆ ಸಂಬಂಧಿಸಿದಂತೆ ಪೊಲೀಸ್ ಬೆಂಗಾವಲು ಅಧಿಕಾರಿಯ ಹೇಳಿಕೆಯನ್ನು ದಾಖಲಿಸಲಾಗಿದೆ. ಇದರಲ್ಲಿ ಸ್ವಪ್ನಾ ಸುರೇಶ್ ಅವರು ಪಿಣರಾಯಿ ವಿಜಯನ್ ಅವರ ಹೆಸರನ್ನು ಉಲ್ಲೇಖಿಸಲು ಒತ್ತಾಯಿಸುವ ಕುರಿತಾದಂತೆ ಹೇಳಿಕೆ ನೀಡಿರುವುದಾಗಿ ತಿಳಿದು ಬಂದಿದೆ.

ಆದರೆ, ಉದ್ದೇಶಿತ ಆಡಿಯೊ ಕ್ಲಿಪ್‌ನಲ್ಲಿ ಸ್ವಪ್ನಾ ಸುರೇಶ್ ಯಾರೊಂದಿಗೆ ಮಾತನಾಡುತ್ತಿದ್ದಾರೆ ಎಂಬುದು ಆಕೆಗೆ ತಿಳಿದಿಲ್ಲ ಎಂದು ಪೊಲೀಸ್ ಬೆಂಗಾವಲು ಅಧಿಕಾರಿಯೋರ್ವರು ಹೇಳಿಕೆ ನೀಡಿದ್ದಾಗಿ ವರದಿ ತಿಳಿಸಿದೆ.

ಈ ಹಿಂದೆ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಆದೇಶದ ಮೇರೆಗೆ ಸ್ವಪ್ನಾ ಸುರೇಶ್ ಅವರ ಚಿನ್ನ ಕಳ್ಳಸಾಗಣೆ ನಡೆದಿದೆ ಎಂಬ ಆರೋಪಕ್ಕೆ, ಪ್ರಕರಣವನ್ನು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ(UAPA) ಅಡಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಯು ಈ ಹೇಳಿಕೆಗೆ ಯಾವುದೇ ಪುರಾವೆಗಳು ಕಂಡುಬಂದಿಲ್ಲ ಎಂದು ಹೇಳಿತ್ತು.

2020 ರ ಜುಲೈ 5 ರಂದು ಕೊಚ್ಚಿಯ ಕಸ್ಟಮ್ಸ್ (ಪ್ರಿವೆಂಟಿವ್) ಕಮಿಷನರೇಟ್, ತಿರುವನಂತಪುರ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಏರ್ ಕಾರ್ಗೋ ಟರ್ಮಿನಲ್‌ನಲ್ಲಿ ಯುಎಇಯಿಂದ ಬಂದ ರಾಜತಾಂತ್ರಿಕ ಸಾಮಾನು ಸರಂಜಾಮುಗಳಿಂದ 14.82 ಕೋಟಿ ರೂ.ಗಳ 30 ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿತ್ತು. ನಂತರ ಈ ಪ್ರಕರಣವನ್ನು ಎನ್‌ಐಎಗೆ ವರ್ಗಾಯಿಸಲಾಯಿತು.

ಈ ಪ್ರಕರಣದ ತನಿಖೆಗಾಗಿ ಆರಂಭದಲ್ಲಿ ಸರಿತ್ ಪಿಎಸ್, ಸ್ವಪ್ನಾ ಸುರೇಶ್ ಮತ್ತು ಸಂದೀಪ್ ನಾಯರ್ ಅವರನ್ನು ಬಂಧಿಸಲಾಗಿತ್ತು. ಇಲ್ಲಿಯವರೆಗೆ ಈ ಪ್ರಕರಣದಲ್ಲಿ ಎನ್‌ಐಎಯು 21 ಜನರನ್ನು ಬಂಧಿಸಿದೆ. ಕಳೆದ ಅಕ್ಟೋಬರ್‌ನಲ್ಲಿ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಎನ್‌ಐಎ ಬಂಧಿಸಿದ್ದ ಸ್ವಪ್ನಾ ಅವರನ್ನು ದೀರ್ಘವಾಗಿ ವಿಚಾರಣೆ ನಡೆಸಲಾಗಿದೆ.


ಇದನ್ನೂ ಓದಿ: ಮಹಿಳಾ ದಿನಾಚರಣೆಯ ದಿನವೇ ಪೊದೆಯಲ್ಲಿ ಪತ್ತೆಯಾದ ನವಜಾತ ಹೆಣ್ಣುಮಗು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...