Homeಕರ್ನಾಟಕಚಿನ್ನದ ಕಳ್ಳಸಾಗಣೆ ಪ್ರಕರಣ | ರನ್ಯಾ ರಾವ್ ಜಾಮೀನು ಆದೇಶ ಮಾರ್ಚ್ 27ಕ್ಕೆ ಕಾಯ್ದಿರಿಸಿದ ಕೋರ್ಟ್‌

ಚಿನ್ನದ ಕಳ್ಳಸಾಗಣೆ ಪ್ರಕರಣ | ರನ್ಯಾ ರಾವ್ ಜಾಮೀನು ಆದೇಶ ಮಾರ್ಚ್ 27ಕ್ಕೆ ಕಾಯ್ದಿರಿಸಿದ ಕೋರ್ಟ್‌

- Advertisement -
- Advertisement -

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಅವರ ಜಾಮೀನು ಅರ್ಜಿಯ ಆದೇಶವನ್ನು ಬೆಂಗಳೂರಿನ ನ್ಯಾಯಾಲಯ ಮಂಗಳವಾರ ಮಾರ್ಚ್ 27 ಕ್ಕೆ ಕಾಯ್ದಿರಿಸಿದೆ. ರನ್ಯಾ ಅವರ ವಕೀಲರ ವಾದಗಳು ಮತ್ತು ತನಿಖಾ ಸಂಸ್ಥೆಯಾದ ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಸಲ್ಲಿಸಿದ ಆಕ್ಷೇಪಣೆಗಳ ನಂತರ 63 ನೇ ಹೆಚ್ಚುವರಿ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರು ಆದೇಶವನ್ನು ಕಾಯ್ದಿರಿಸಿದ್ದಾರೆ. ಚಿನ್ನದ ಕಳ್ಳಸಾಗಣೆ ಪ್ರಕರಣ

33 ವರ್ಷದ ರನ್ಯಾ ಅವರನ್ನು ಮಾರ್ಚ್ 3 ರಂದು ದುಬೈನಿಂದ ಬೆಂಗಳೂರಿಗೆ ಆಗಮಿಸಿದ್ದಾಗ ಬಂಧಿಸಲಾಗಿತ್ತು. ಅವರು 12.56 ಕೋಟಿ ರೂ. ಮೌಲ್ಯದ 14.2 ಕೆಜಿ ವಿದೇಶಿ ಮೂಲದ ಚಿನ್ನದ ಗಟ್ಟಿಗಳನ್ನು ತಮ್ಮೊಂದಿಗೆ ಸಾಗಿಸುತ್ತಿರುವುದು ಕಂಡುಬಂದಿದೆ ಎಂದು ಕಂದಾಯ ಗುಪ್ತಚರ ನಿರ್ದೇಶನಾಲಯ ಆರೋಪಿಸಿತ್ತು. ಅವರು ಪ್ರಸ್ತುತ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಮಾರ್ಚ್ 14 ರಂದು ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯವು ರನ್ಯಾ ಅವರ ಜಾಮೀನು ತಿರಸ್ಕರಿಸಿದ ನಂತರ ಅವರು ಸೆಷನ್ಸ್ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

ಭಾರತೀಯ ಆರ್ಥಿಕತೆಯ ಮೇಲಿನ ಪರಿಣಾಮಗಳು, ದುಬೈಗೆ ಹವಾಲಾ ವಹಿವಾಟು, ಅಂತರರಾಷ್ಟ್ರೀಯ ಸಂಪರ್ಕಗಳು, ಈ ವರ್ಷ ದುಬೈಗೆ 27 ಬಾರಿ ಪ್ರಯಾಣ, ಯುಎಇ ನಿವಾಸಿ ಗುರುತಿನ ಚೀಟಿ ಹೊಂದಿರುವುದು ಮತ್ತು ಕರ್ತವ್ಯದಿಂದ ತಪ್ಪಿಸಿಕೊಳ್ಳಲು ಕಸ್ಟಮ್ಸ್‌ನ ಗ್ರೀನ್ ಚಾನೆಲ್‌ಗೆ ಪ್ರವೇಶ ಸೇರಿದಂತ ಹಲವು ವಿಚಾರಗಳನ್ನು ವಿಶೇಷ ನ್ಯಾಯಾಲಯವು ನಟಿಯ ಜಾಮೀನು ತಿರಸ್ಕರಿಸುವಾಗ ಅವಲಂಬಿಸಿತ್ತು.

ರನ್ಯಾ ರಾವ್ ಅವರು ಕರ್ನಾಟಕದ ಡಿಜಿಪಿ ಕೆ. ರಾಮಚಂದ್ರ ರಾವ್‌ ಅವರ ಮಲಮಗಳು. ಈ ಪ್ರಕರಣದಲ್ಲಿ ಅವರ ಪತಿ ಜತಿನ್ ಹುಕ್ಕೇರಿ ವಿರುದ್ಧ ಕೂಡಾ ತನಿಖೆ ನಡೆಸಲಾಗುತ್ತಿದ್ದು, ಡಿಜಿಪಿ ಕೆ. ರಾಮಚಂದ್ರ ಅವರನ್ನು ಸರ್ಕಾರ ಕಡ್ಡಾಯ ರಜೆಯಲ್ಲಿರುವಂತೆ ಆದೇಶಿಸಲಾಗಿದೆ. ಚಿನ್ನದ ಕಳ್ಳಸಾಗಣೆ ಪ್ರಕರಣ

ನಟಿ ಮತ್ತು ಮಾಡೆಲ್ ಆಗಿರುವ ರನ್ಯಾ ರಾವ್ ಅವರು ಮುಖ್ಯವಾಗಿ ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡಿದ್ದಾರೆ. 2014ರಲ್ಲಿ ಸುದೀಪ್ ನಿರ್ದೇಶನದ “ಮಾಣಿಕ್ಯ” ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಅವರು, ನಂತರ 2016ರಲ್ಲಿ ತಮಿಳು ಚಿತ್ರ “ವಾಗಾ” ಮತ್ತು 2017ರಲ್ಲಿ ಕನ್ನಡ ಚಿತ್ರ “ಪಟಾಕಿ”ಯಲ್ಲಿ ನಟಿಸಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರಾಷ್ಟ್ರೀಯ ಶಿಕ್ಷಣ ನೀತಿ-2020: ಖಾಸಗೀಕರಣದ ವಿರುದ್ಧ NSUI, AISA, SFI, AISF, MSF, CRJD ವಿದ್ಯಾರ್ಥಿಗಳ ಭಾರೀ ಪ್ರತಿಭಟನೆ

ರಾಷ್ಟ್ರೀಯ ಶಿಕ್ಷಣ ನೀತಿ-2020: ಖಾಸಗೀಕರಣದ ವಿರುದ್ಧ NSUI, AISA, SFI, AISF, MSF, CRJD ವಿದ್ಯಾರ್ಥಿಗಳ ಭಾರೀ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತ್ಯತೀತ ತಾಣ ಬಾಬಾ ಬುಡನ್‌ ಗಿರಿಯಲ್ಲಿ ‘ವೈದಿಕ ಆಚರಣೆ’ಗೆ ವಿರೋಧ; ಕಾಂಗ್ರೆಸ್‌ ಸರ್ಕಾರದ ವಿರುದ್ದ ಪ್ರತಿಭಟನೆ

ಕೋಮುವಾದಿಗಳು ಎಷ್ಟೇ ವಿಷಯ ತಿರುಚುವ ಕೆಲಸ ಮಾಡಿದರೂ ಬಾಬಾ ಬುಡನ್ ಗಿರಿಯ ಜಾತ್ಯತೀತ ಹಿನ್ನೆಲೆಯನ್ನು ಮುಚ್ಚಿಡುವುದಕ್ಕೆ ಸಾಧ್ಯವಿಲ್ಲ. ಅಲ್ಲಿನ ಸೌಹಾರ್ಧ ಪರಂಪರೆಯನ್ನು ಬದಿಗೆ ಸರಿಸಿ, ವೈದಿಕ ಆಚರಣೆಗೆ ಅನುಮತಿ ನೀಡುವ ಮೂಲಕ ಹಿಂದುತ್ವ...

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಜಲಾಂತರ್ಗಾಮಿ ದಾಳಿ: ಸಮುದ್ರದಲ್ಲಿ ಶವಗಳು ಪತ್ತೆ

ಶ್ರೀಲಂಕಾದ ದಕ್ಷಿಣ ಕರಾವಳಿಯಲ್ಲಿ ಬುಧವಾರ ಜಲಾಂತರ್ಗಾಮಿ ದಾಳಿಯ ನಂತರ ಇರಾನ್ ನೌಕಾ ಯುದ್ಧನೌಕೆ ಐರಿಸ್ ದೇನಾ ಮುಳುಗಿದೆ ಎಂದು ವರದಿಯಾಗಿದೆ.  ಈ ದಾಳಿಯಲ್ಲಿ ಕನಿಷ್ಠ 101 ಜನರು ಕಾಣೆಯಾಗಿದ್ದಾರೆ ಮತ್ತು 78 ಜನರು ಗಾಯಗೊಂಡಿದ್ದಾರೆ,...

ಹೆದ್ದಾರಿಯಲ್ಲಿ ದ್ವೇಷ ಬರಹ : ಮುಸ್ಲಿಮರು ಭಾರತದಲ್ಲಿ ‘ಬಾಡಿಗೆದಾರರು’ ಅವರು ಹಾಗೆಯೇ ಬದುಕಬೇಕು ಎಂದ ಹಿಂದೂ ರಕ್ಷಾ ದಳದ ಸದಸ್ಯರು

2026ರ ಫೆಬ್ರವರಿ 26 ಮತ್ತು 27ರ ನಡುವಿನ ಮಧ್ಯರಾತ್ರಿ ಉತ್ತರ ಪ್ರದೇಶದ ದೆಹಲಿ–ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆಯ ಮೇಲೆ ಹಿಂದೂ ರಕ್ಷಾ ದಳಕ್ಕೆ (ಹೆಚ್‌ಆರ್‌ಡಿ) ಸೇರಿದ ಮಹಿಳೆಯರು ಹಿಂದಿಯಲ್ಲಿ “मुसलमान के लिए...

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಹತ್ಯೆಗೆ ಗುರಿಯಾಗುತ್ತಾನೆ: ಇಸ್ರೇಲ್ ರಕ್ಷಣಾ ಸಚಿವನಿಂದ ಬೆದರಿಕೆ

ದುಬೈ: ‘ಅಯತೊಲ್ಲಾ ಅಲಿ ಖಮೇನಿ ಉತ್ತರಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ ಅವರನ್ನು ಹತ್ಯೆ ಮಾಡುತ್ತೇವೆ’ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಬುಧವಾರ ಪರೋಕ್ಷವಾಗಿ ಬೆದರಿಕೆ ಹಾಕಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ...

ಇರಾನ್ ಮೇಲಿನ ಇಸ್ರೇಲ್-ಅಮೆರಿಕ ದಾಳಿಗಳು ಅಂತರರಾಷ್ಟ್ರೀಯ ಕಾನೂನಿಗೆ ಸರಿ ಹೊಂದುವುದಿಲ್ಲ: ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ

ಸಿಡ್ನಿ: ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲ್ ದಾಳಿಗಳನ್ನು "ವಿಷಾದದಿಂದ" ಬೆಂಬಲಿಸುವುದಾಗಿ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಹೇಳಿದ್ದಾರೆ. ಆದರೆ ಈ ಸಂಘರ್ಷವು ಅಂತರರಾಷ್ಟ್ರೀಯ ಕ್ರಮದ ವೈಫಲ್ಯವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು...

ಉತ್ತರ ಪ್ರದೇಶ | ಅತ್ಯಾಚಾರ ಸಂತ್ರಸ್ತೆಯನ್ನು ಗುಂಡಿಕ್ಕಿ ಕೊಂದ ಆರೋಪಿ

ಸುಮಾರು 17 ವರ್ಷದ ಅತ್ಯಾಚಾರ ಸಂತ್ರಸ್ತೆಯನ್ನು 22 ವರ್ಷದ ಆರೋಪಿ ಗುಂಡಿಕ್ಕಿ ಕೊಂದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಯ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು...

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್; ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿಸಿದ 37 ಭಾರತೀಯ ಹಡಗುಗಳು

ಇಸ್ರೇಲ್-ಯುಎಸ್ ಜಂಟಿ ದಾಳಿಯ ನಂತರ, ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವುದರಿಂದ ಭಾರತೀಯ ಹಡಗುಗಳು ಬಿಕ್ಕಟ್ಟಿನಲ್ಲಿ ಸಿಲುಕಿಕೊಂಡಿವೆ. ಭಾರತೀಯ ಧ್ವಜ ಹೊಂದಿರುವ 37 ಹಡಗುಗಳು ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ನೀರಿನಲ್ಲಿ ಸಿಲುಕಿಕೊಂಡಿವೆ. 37 ಹಡಗುಗಳು...

ಪಾಲ್ಘರ್: ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಹೊತ್ತಿ ಉರಿದ ಟೆಂಪೋ: 28 ವರ್ಷದ ಚಾಲಕ ಸಜೀವ ದಹನ, ಕ್ಲೀನರ್ ಗೆ ಗಾಯ

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಟೆಂಪೋಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಪಂಜಾಬ್‌ನ 28 ವರ್ಷದ ಚಾಲಕ ಸುಟ್ಟು ಕರಕಲಾಗಿದ್ದು, ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ಜನನಿಬಿಡ...

ಗುಜರಾತ್| ಅಂತರ್ಧರ್ಮೀಯ ದಂಪತಿಗೆ ಪೊಲೀಸರ ರಕ್ಷಣೆ; ‘ಲವ್ ಜಿಹಾದ್’ ಎಂದು ಕೂಗಿದ ವಿಎಚ್‌ಪಿ

ಮಾರ್ಚ್ 3 ರಂದು ಗುಜರಾತ್‌ನ ಅಹಮದಾಬಾದ್‌ನ ಮೆಟ್ರೋ ನ್ಯಾಯಾಲಯದ ಸಂಕೀರ್ಣದೊಳಗಿನ ವಿವಾಹ ನೋಂದಣಿ ಕಚೇರಿಯು ಅವ್ಯವಸ್ಥೆಯ ತಾಣವಾಯಿತು. ಗಾಂಧಿನಗರದ ಹಿಂದೂ ಮಹಿಳೆಯೊಬ್ಬರು ನಗರದ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಲು ಬಂದ ನಂತರ ಹಿಂದುತ್ವ ಸಂಘಟನೆಯ...

ಖಮೇನಿ ಹತ್ಯೆ ಕುರಿತು ಪೋಸ್ಟ್‌ : ನ್ಯಾಷನಲ್ ಕಾನ್ಫರೆನ್ಸ್ ಸಂಸದ, ಶ್ರೀನಗರದ ಮಾಜಿ ಮೇಯರ್ ವಿರುದ್ಧ ಎಫ್‌ಐಆರ್

ದಾರಿತಪ್ಪಿಸುವ ಆನ್‌ಲೈನ್ ವಿಷಯವನ್ನು ಹಂಚಿಕೊಂಡ ಆರೋಪದ ಮೇಲೆ ಜಮ್ಮು ಕಾಶ್ಮೀರದ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ಸಂಸದ ಅಗಾ ಸೈಯದ್ ರೂಹುಲ್ಲಾ ಮೆಹದಿ ಮತ್ತು ಶ್ರೀನಗರದ ಮಾಜಿ ಮೇಯರ್ ಜುನೈದ್ ಅಝೀಂ ಮಟ್ಟು ವಿರುದ್ಧ...