Homeಕರ್ನಾಟಕ’ದಿ ಬೆಸ್ಟ್ ಆ್ಯಕ್ಟರ್’ ಕಿರುಚಿತ್ರಕ್ಕೆ ಸುವರ್ಣಕಾಲ: ಅಮೆರಿಕ ಫಿಲ್ಮ್‌ ಫೆಸ್ಟಿವಲ್‌ಗೆ ನಾಮನಿರ್ದೇಶನ

’ದಿ ಬೆಸ್ಟ್ ಆ್ಯಕ್ಟರ್’ ಕಿರುಚಿತ್ರಕ್ಕೆ ಸುವರ್ಣಕಾಲ: ಅಮೆರಿಕ ಫಿಲ್ಮ್‌ ಫೆಸ್ಟಿವಲ್‌ಗೆ ನಾಮನಿರ್ದೇಶನ

- Advertisement -
- Advertisement -

ಕನ್ನಡ ಚಿತ್ರರಂಗದಲ್ಲಿ ಈಗ ಪ್ರಯೋಗಾತ್ಮಕ ಚಿತ್ರಗಳ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಕಿರುಚಿತ್ರಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿವೆ. ಭಿನ್ನ ಕಥಾಹಂದರ, ನಿರೂಪಣಾ ಶೈಲಿಯ ಮೂಲಕ ಕನ್ನಡದ ಕಿರುಚಿತ್ರ ‘ದಿ ಬೆಸ್ಟ್ ಆ್ಯಕ್ಟರ್’ ಅನೇಕ ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಂಡಿದೆ. ಚಿತ್ರದ ಕೀರ್ತಿ ದಿನೇ ದಿನೆ ಹೆಚ್ಚುತ್ತಿದ್ದು, ಈಗ ಮತ್ತೊಂದು ಸಂತಸದ ಸುದ್ದಿ ನೀಡಿದೆ.

’ದಿ ಬೆಸ್ಟ್ ಆ್ಯಕ್ಟರ್’ ಕಿರುಚಿತ್ರ ಅಮೆರಿಕನ್ ಗೋಲ್ಡನ್ ಪಿಕ್ಚರ್ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಚಿತ್ರೋತ್ಸವಕ್ಕೆ ನಾಮ ನಿರ್ದೇಶನಗೊಂಡಿದೆ. ನಾಗರಾಜ್ ಸೋಮಯಾಜಿ ನಿರ್ದೇಶನ ಮತ್ತು ಚಿತ್ರಕಥೆ ಹೊಂದಿರುವ ’ದಿ ಬೆಸ್ಟ್ ಆ್ಯಕ್ಟರ್’ ಕಿರುಚಿತ್ರ ದಿನೇಶ್ ವೈದ್ಯ ಅಂಪರು ಮತ್ತು ಸರ್ವಸ್ವ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗಿದೆ. ಈಗ ಚಿತ್ರವು ಅಮೆರಿಕನ್ ಗೋಲ್ಡನ್ ಪಿಕ್ಚರ್ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲು ನಾಮ ನಿರ್ದೇಶನಗೊಂಡಿದೆ.

ಈ ಬಗ್ಗೆ ಚಿತ್ರೋತ್ಸವ ಸಂಸ್ಥೆಯು ಸರ್ವಸ್ವ ನಿರ್ಮಾಣ ಸಂಸ್ಥೆಗೆ ಪತ್ರ ಬರೆದು ಅಕ್ಟೋಬರ್‌ 2019ರ ಚಿತ್ರೋತ್ಸವಕ್ಕೆ ಆಯ್ಕೆಯಾಗಿರುವ ಬಗ್ಗೆ ಮಾಹಿತಿ ನೀಡಿದೆ. ಇದು ಚಿತ್ರಕ್ಕೆ ಮತ್ತೊಂದು ಸುವರ್ಣಗರಿ ಮೂಡಿಸಿದೆ.

ಕಳೆದ ಜುಲೈನಲ್ಲಿ ’ದಿ ಬೆಸ್ಟ್ ಆ್ಯಕ್ಟರ್’ ಕಿರುಚಿತ್ರ ಬೆಂಗಳೂರಿನ ಬನಶಂಕರಿಯ ಸುಚಿತ್ರ ಚಿತ್ರಮಂದಿರದಲ್ಲಿ ಪ್ರದರ್ಶನಗೊಂಡಿತ್ತು. ಚಿತ್ರದಲ್ಲಿ ‘ಕಟಕ’ ಪೋಷಕ ಪಾತ್ರದಲ್ಲಿ ಗಮನ ಸೆಳೆದಿದ್ದ ಮಾಧವ ಕಾರ್ಕಡ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಾರೆ. ಮಾಧವ್‌ ಅವರ ಸ್ವಾಭಾವಿಕ ಎನಿಸುವ ನಟನೆ ಆಪ್ತವಾಗಿದ್ದು, ಚಿತ್ರದ ಯಶಸ್ಸಿಗೆ ಪೂರಕವಾಗಿದೆ ಅನ್ನೋದು ನಿರ್ದೇಶಕರ ಮಾತು. ಶ್ರೀಧರ್ ಬನವಾಸಿಯವರು ಕಥೆ ಬರೆದಿದ್ದು, ಭಾಸ್ಕರ್ ಬಂಜೆರಾ ಅವರ ಸಂಭಾಷಣೆಯಿದೆ. ಅರ್ಜುನ್ ರಾಮು ಅವರ ಹಿನ್ನೆಲೆ ಸಂಗೀತ ಮತ್ತು ಬಿ.ಎಸ್ ಸಂಕೇತ್ ಅವರ ಸಂಕಲನ ಚಿತ್ರಕ್ಕಿದೆ.

ಉತ್ತಮ ಕಥಾಹಂದರದ ಮೂಲಕ ಗಮನ ಸೆಳೆದಿರುವ ’ದಿ ಬೆಸ್ಟ್ ಆ್ಯಕ್ಟರ್’ ಕೆಲವು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ದೆಹಲಿಯಲ್ಲಿ ನಡೆದ 10 ನೇ ದಾದಾಪಾಲ್ಕೆ ಫಿಲ್ಮ್ ಫೆಸ್ಟಿವಲ್‌ನಲ್ಲಿ ಎಸ್.ಕೆ ರಾವ್ ಅವರು ಚಿತ್ರದ ಛಾಯಾಗ್ರಹಣಕ್ಕಾಗಿ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿಗೆ ಭಾಜನರಾದರು. ಕೋಲ್ಕತ್ತಾದಲ್ಲಿ ನಡೆದ ಎನ್. ಇಜೆಡ್ ಅಂತಾರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್‌ನಲ್ಲಿ ಚಿತ್ರಕ್ಕೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯು ಲಭಿಸಿದೆ. ರೋಮ್ ಇಂಡಿಪೆಂಡೆಂಟ್ ಪ್ರಿಸ್ಮಾ ಅವಾರ್ಡ್, ಆರ್ಫ್ ಬರ್ಲಿನ್ ಇಂಟರ್ ನ್ಯಾಷನಲ್ ಅವಾರ್ಡ್ ಕೂಡ ಲಭಿಸಿದೆ.

’ದಿ ಬೆಸ್ಟ್ ಆ್ಯಕ್ಟರ್’ ಕಿರುಚಿತ್ರ ಅನೇಕ ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಂಡಿದೆ. ಬೆಳಗಾವಿಯ ಮೂವಿಂಗ್ ಪಿಕ್ಚರ್ಸ್ ಫೆಸ್ಟಿವಲ್, ಕೋಲ್ಕತ್ತದಲ್ಲಿ ನಡೆದ ಎನ್‌.ಇಜೆಡ್ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್, ಜೋಧಪುರದ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಮತ್ತು ಲಂಡನ್ನಿನ ಇಂಟರ್ ನ್ಯಾಷನಲ್ ಫಿಲ್ಮ್ ಮೇಕರ್ ಫೆಸ್ಟಿವಲ್‌ಗಳಲ್ಲಿ ಪ್ರದರ್ಶನಗೊಂಡು ಸೈ ಎನಿಸಿಕೊಂಡಿದೆ.

ಈಗ ಈ ಸಾಲಿಗೆ ಅಮೆರಿಕನ್ ಗೋಲ್ಡನ್ ಪಿಕ್ಚರ್ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಸಹ ಸೇರಿಕೊಂಡಿದೆ.
ನಾಗರಾಜ್ ಸೋಮಯಾಜಿಯವರ ’ದಿ ಬೆಸ್ಟ್ ಆ್ಯಕ್ಟರ’ ಚಿತ್ರತಂಡವೇ ಪುಕ್ಸಟ್ಟೆ ಲೈಫು ಎಂಬ ವಿಭಿನ್ನ ಶೀರ್ಷಿಕೆಯ ಕಥೆಯನ್ನು ಹೊತ್ತು ತರುತ್ತಿದೆ. ಚಿತ್ರೀಕರಣವು ಈಗ ಮುಕ್ತಾಯವಾಗಿದ್ದು, ಎಲ್ಲ ಅಂದುಕೊಂಡಂತೆ ಆದರೆ ಮುಂದಿನ ವರ್ಷದ ಪ್ರಾರಂಭದಲ್ಲಿ ಸಂಕ್ರಾಂತಿಯ ವೇಳೆಗೆ ಪ್ರೇಕ್ಷಕರ ಮುಂದೆ ತರಲು ಚಿತ್ರತಂಡ ನಿರ್ಧರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...