Homeಕರ್ನಾಟಕ’ದಿ ಬೆಸ್ಟ್ ಆ್ಯಕ್ಟರ್’ ಕಿರುಚಿತ್ರಕ್ಕೆ ಸುವರ್ಣಕಾಲ: ಅಮೆರಿಕ ಫಿಲ್ಮ್‌ ಫೆಸ್ಟಿವಲ್‌ಗೆ ನಾಮನಿರ್ದೇಶನ

’ದಿ ಬೆಸ್ಟ್ ಆ್ಯಕ್ಟರ್’ ಕಿರುಚಿತ್ರಕ್ಕೆ ಸುವರ್ಣಕಾಲ: ಅಮೆರಿಕ ಫಿಲ್ಮ್‌ ಫೆಸ್ಟಿವಲ್‌ಗೆ ನಾಮನಿರ್ದೇಶನ

- Advertisement -
- Advertisement -

ಕನ್ನಡ ಚಿತ್ರರಂಗದಲ್ಲಿ ಈಗ ಪ್ರಯೋಗಾತ್ಮಕ ಚಿತ್ರಗಳ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಕಿರುಚಿತ್ರಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿವೆ. ಭಿನ್ನ ಕಥಾಹಂದರ, ನಿರೂಪಣಾ ಶೈಲಿಯ ಮೂಲಕ ಕನ್ನಡದ ಕಿರುಚಿತ್ರ ‘ದಿ ಬೆಸ್ಟ್ ಆ್ಯಕ್ಟರ್’ ಅನೇಕ ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಂಡಿದೆ. ಚಿತ್ರದ ಕೀರ್ತಿ ದಿನೇ ದಿನೆ ಹೆಚ್ಚುತ್ತಿದ್ದು, ಈಗ ಮತ್ತೊಂದು ಸಂತಸದ ಸುದ್ದಿ ನೀಡಿದೆ.

’ದಿ ಬೆಸ್ಟ್ ಆ್ಯಕ್ಟರ್’ ಕಿರುಚಿತ್ರ ಅಮೆರಿಕನ್ ಗೋಲ್ಡನ್ ಪಿಕ್ಚರ್ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಚಿತ್ರೋತ್ಸವಕ್ಕೆ ನಾಮ ನಿರ್ದೇಶನಗೊಂಡಿದೆ. ನಾಗರಾಜ್ ಸೋಮಯಾಜಿ ನಿರ್ದೇಶನ ಮತ್ತು ಚಿತ್ರಕಥೆ ಹೊಂದಿರುವ ’ದಿ ಬೆಸ್ಟ್ ಆ್ಯಕ್ಟರ್’ ಕಿರುಚಿತ್ರ ದಿನೇಶ್ ವೈದ್ಯ ಅಂಪರು ಮತ್ತು ಸರ್ವಸ್ವ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗಿದೆ. ಈಗ ಚಿತ್ರವು ಅಮೆರಿಕನ್ ಗೋಲ್ಡನ್ ಪಿಕ್ಚರ್ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲು ನಾಮ ನಿರ್ದೇಶನಗೊಂಡಿದೆ.

ಈ ಬಗ್ಗೆ ಚಿತ್ರೋತ್ಸವ ಸಂಸ್ಥೆಯು ಸರ್ವಸ್ವ ನಿರ್ಮಾಣ ಸಂಸ್ಥೆಗೆ ಪತ್ರ ಬರೆದು ಅಕ್ಟೋಬರ್‌ 2019ರ ಚಿತ್ರೋತ್ಸವಕ್ಕೆ ಆಯ್ಕೆಯಾಗಿರುವ ಬಗ್ಗೆ ಮಾಹಿತಿ ನೀಡಿದೆ. ಇದು ಚಿತ್ರಕ್ಕೆ ಮತ್ತೊಂದು ಸುವರ್ಣಗರಿ ಮೂಡಿಸಿದೆ.

ಕಳೆದ ಜುಲೈನಲ್ಲಿ ’ದಿ ಬೆಸ್ಟ್ ಆ್ಯಕ್ಟರ್’ ಕಿರುಚಿತ್ರ ಬೆಂಗಳೂರಿನ ಬನಶಂಕರಿಯ ಸುಚಿತ್ರ ಚಿತ್ರಮಂದಿರದಲ್ಲಿ ಪ್ರದರ್ಶನಗೊಂಡಿತ್ತು. ಚಿತ್ರದಲ್ಲಿ ‘ಕಟಕ’ ಪೋಷಕ ಪಾತ್ರದಲ್ಲಿ ಗಮನ ಸೆಳೆದಿದ್ದ ಮಾಧವ ಕಾರ್ಕಡ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಾರೆ. ಮಾಧವ್‌ ಅವರ ಸ್ವಾಭಾವಿಕ ಎನಿಸುವ ನಟನೆ ಆಪ್ತವಾಗಿದ್ದು, ಚಿತ್ರದ ಯಶಸ್ಸಿಗೆ ಪೂರಕವಾಗಿದೆ ಅನ್ನೋದು ನಿರ್ದೇಶಕರ ಮಾತು. ಶ್ರೀಧರ್ ಬನವಾಸಿಯವರು ಕಥೆ ಬರೆದಿದ್ದು, ಭಾಸ್ಕರ್ ಬಂಜೆರಾ ಅವರ ಸಂಭಾಷಣೆಯಿದೆ. ಅರ್ಜುನ್ ರಾಮು ಅವರ ಹಿನ್ನೆಲೆ ಸಂಗೀತ ಮತ್ತು ಬಿ.ಎಸ್ ಸಂಕೇತ್ ಅವರ ಸಂಕಲನ ಚಿತ್ರಕ್ಕಿದೆ.

ಉತ್ತಮ ಕಥಾಹಂದರದ ಮೂಲಕ ಗಮನ ಸೆಳೆದಿರುವ ’ದಿ ಬೆಸ್ಟ್ ಆ್ಯಕ್ಟರ್’ ಕೆಲವು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ದೆಹಲಿಯಲ್ಲಿ ನಡೆದ 10 ನೇ ದಾದಾಪಾಲ್ಕೆ ಫಿಲ್ಮ್ ಫೆಸ್ಟಿವಲ್‌ನಲ್ಲಿ ಎಸ್.ಕೆ ರಾವ್ ಅವರು ಚಿತ್ರದ ಛಾಯಾಗ್ರಹಣಕ್ಕಾಗಿ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿಗೆ ಭಾಜನರಾದರು. ಕೋಲ್ಕತ್ತಾದಲ್ಲಿ ನಡೆದ ಎನ್. ಇಜೆಡ್ ಅಂತಾರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್‌ನಲ್ಲಿ ಚಿತ್ರಕ್ಕೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯು ಲಭಿಸಿದೆ. ರೋಮ್ ಇಂಡಿಪೆಂಡೆಂಟ್ ಪ್ರಿಸ್ಮಾ ಅವಾರ್ಡ್, ಆರ್ಫ್ ಬರ್ಲಿನ್ ಇಂಟರ್ ನ್ಯಾಷನಲ್ ಅವಾರ್ಡ್ ಕೂಡ ಲಭಿಸಿದೆ.

’ದಿ ಬೆಸ್ಟ್ ಆ್ಯಕ್ಟರ್’ ಕಿರುಚಿತ್ರ ಅನೇಕ ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಂಡಿದೆ. ಬೆಳಗಾವಿಯ ಮೂವಿಂಗ್ ಪಿಕ್ಚರ್ಸ್ ಫೆಸ್ಟಿವಲ್, ಕೋಲ್ಕತ್ತದಲ್ಲಿ ನಡೆದ ಎನ್‌.ಇಜೆಡ್ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್, ಜೋಧಪುರದ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಮತ್ತು ಲಂಡನ್ನಿನ ಇಂಟರ್ ನ್ಯಾಷನಲ್ ಫಿಲ್ಮ್ ಮೇಕರ್ ಫೆಸ್ಟಿವಲ್‌ಗಳಲ್ಲಿ ಪ್ರದರ್ಶನಗೊಂಡು ಸೈ ಎನಿಸಿಕೊಂಡಿದೆ.

ಈಗ ಈ ಸಾಲಿಗೆ ಅಮೆರಿಕನ್ ಗೋಲ್ಡನ್ ಪಿಕ್ಚರ್ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಸಹ ಸೇರಿಕೊಂಡಿದೆ.
ನಾಗರಾಜ್ ಸೋಮಯಾಜಿಯವರ ’ದಿ ಬೆಸ್ಟ್ ಆ್ಯಕ್ಟರ’ ಚಿತ್ರತಂಡವೇ ಪುಕ್ಸಟ್ಟೆ ಲೈಫು ಎಂಬ ವಿಭಿನ್ನ ಶೀರ್ಷಿಕೆಯ ಕಥೆಯನ್ನು ಹೊತ್ತು ತರುತ್ತಿದೆ. ಚಿತ್ರೀಕರಣವು ಈಗ ಮುಕ್ತಾಯವಾಗಿದ್ದು, ಎಲ್ಲ ಅಂದುಕೊಂಡಂತೆ ಆದರೆ ಮುಂದಿನ ವರ್ಷದ ಪ್ರಾರಂಭದಲ್ಲಿ ಸಂಕ್ರಾಂತಿಯ ವೇಳೆಗೆ ಪ್ರೇಕ್ಷಕರ ಮುಂದೆ ತರಲು ಚಿತ್ರತಂಡ ನಿರ್ಧರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....