Homeಮುಖಪುಟ’ಶೂ ನೆಕ್ಕಿದವನ ಹೆಸರನ್ನು ಕೇರಳ ಕಸದ ಬುಟ್ಟಿಗೆ ಎಸೆಯಬೇಕು’: ಗೋಲ್ವಾಲ್ಕರ್ ವಿರುದ್ದ ಕಿಡಿ

’ಶೂ ನೆಕ್ಕಿದವನ ಹೆಸರನ್ನು ಕೇರಳ ಕಸದ ಬುಟ್ಟಿಗೆ ಎಸೆಯಬೇಕು’: ಗೋಲ್ವಾಲ್ಕರ್ ವಿರುದ್ದ ಕಿಡಿ

ವೈಜ್ಞಾನಿಕ ಸಂಸ್ಥೆಗೆ ಆರೆಸ್ಸೆಸ್ ನಾಯಕನ ಹೆಸರಿಡುವ ಕೇಂದ್ರದ ಕ್ರಮಕ್ಕೆ ಕೇರಳದಾದ್ಯಂತ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿದೆ

- Advertisement -
- Advertisement -

ತಿರುವನಂತಪುರಂನ ರಾಜೀವ್ ಗಾಂಧಿ ಸೆಂಟರ್ ಫಾರ್ ಬಯೋಟೆಕ್ನಾಲಜಿ (RGCB) ಯ ಎರಡನೇ ಕ್ಯಾಂಪಸ್‌ಗೆ ಆರೆಸ್ಸೆಸ್ ಮುಖಂಡ ಗೋಲ್ವಾಲ್ಕರ್‌ ಹೆಸರಿಡುವುದಕ್ಕೆ ಕೇರಳದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಖ್ಯಾತ ಮಲಯಾಳಂ ಚಿತ್ರ ನಟ ಹರೀಶ್ ಪೆರಾಡಿ, “ಆ ಶೂ ನೆಕ್ಕಿದವನ ಹೆಸರನ್ನು ಕೇರಳ ಕಸದ ಬುಟ್ಟಿಗೆ ಎಸೆಯಬೇಕು” ಎಂದು ಕಿಡಿಕಾರಿದ್ದಾರೆ.

ಇಂಡಿಯಾ ಇಂಟರ್‌‌ನ್ಯಾಷನಲ್ ಸೈನ್ಸ್ ಫೆಸ್ಟಿವೆಲ್(IISF)ನ ಅಧಿವೇಶನದ ವೀಡಿಯೋ ಸಂದೇಶದಲ್ಲಿ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಹರ್ಷ್ ವರ್ಧನ್ ಈ ಬಗ್ಗೆ ತಿಳಿಸಿದ್ದು, ಸಂಸ್ಥೆಗೆ ಆರೆಸ್ಸೆಸ್‌‌ನ ಎರಡನೇ ನಾಯಕನಾಗಿದ್ದ ಎಂ.ಎಸ್. ಗೊಲ್ವಾಲ್ಕರ್‌ ಅವರ ಹೆಸರನ್ನು ಇಡುವುದಾಗಿ ಹೇಳಿದ್ದಾರೆ. ಅದನ್ನು ‘ಶ್ರೀ ಗೂರುಜಿ ಮಾಧವ ಸದಾಶಿವ ಗೋಲ್ವಾಲ್ಕರ್ ನ್ಯಾಷನಲ್ ಸೆಂಟರ್ ಫಾರ್ ಕಾಂಪ್ಲೆಕ್ಸ್ ಡಿಸೀಸ್ ಇನ್ ಕ್ಯಾನ್ಸರ್ ಮತ್ತು ವೈರಲ್ ಇನ್‌‌ಫೆಕ್ಷನ್’ ಎಂದು ಕರೆದಿದ್ದಾರೆ.

ಇದನ್ನೂ ಓದಿ: ಹೆಸರೂ ಸೇರಿ ಎಲ್ಲವೂ ಸಂಶಯಾಸ್ಪದವಾಗಿದ್ದ ಸತ್ಯಶೋಧನಾ ಸಮಿತಿ: ಆರೆಸ್ಸೆಸ್ ಹೀಗೇಕೆ ಮಾಡಿತು?

ವೈಜ್ಞಾನಿಕ ಸಂಸ್ಥೆಗೆ ಆರೆಸ್ಸೆಸ್ ನಾಯಕನ ಹೆಸರಿಡುವ ಕೇಂದ್ರದ ಕ್ರಮಕ್ಕೆ ಕೇರಳದಾದ್ಯಂತ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿದ್ದು, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್‌ಗೆ ಗೋಲ್ವಾಲ್ಕರ್ ಹೆಸರಿಡದಂತೆ ಕೋರಿ ಪತ್ರ ಬರೆದಿದ್ದಾರೆ. ಸಂಸ್ಥೆಗೆ ಅಂತರಾಷ್ಟ್ರೀಯ ಖ್ಯಾತಿಯ ಭಾರತೀಯ ವಿಜ್ಞಾನಿಗಳನ್ನು ಹೆಸರಿಡಬಹುದು ಮತ್ತು ಪ್ರಸ್ತುತ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ತಿಳಿಸಿದ್ದಾರೆ.

ಕೋಮುವಾದ ಸಿದ್ಧಾಂತವನ್ನು ಪ್ರತಿಪಾದಿಸಿದ ಗೋಲ್ವಾಲ್ಕರ್ ಅವರಂತಹ ವ್ಯಕ್ತಿಯ ಹೆಸರನ್ನು ವೈಜ್ಞಾನಿಕ ಸಂಶೋಧನಾ ಸಂಸ್ಥೆಗೆ ಇಡುವುದು ಸೂಕ್ತವಲ್ಲ ಎಂದು ಪಿಣರಾಯಿ ಫೇಸ್‌ಬುಕ್ ಪೋಸ್ಟ್‌ನಲ್ಲಿ ಬರೆದಿದ್ದು, “ಇಂತಹ ಸಂಸ್ಥೆಯು ಮುಕ್ತ ಚಿಂತನೆಯನ್ನು ಕಟ್ಟಿಕೊಟ್ಟ ವ್ಯಕ್ತಿಗಳ ಇತಿಹಾಸದಿಂದ ಪ್ರೇರಿತವಾಗಬೇಕೇ ಹೊರತು ಕೋಮುವಾದವನ್ನು ಆಧರಿಸಿದ ದ್ವೇಷದ ಸಿದ್ಧಾಂತವನ್ನು ಪ್ರತಿಪಾದಿಸಿದವರದ್ದಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಜೊತೆಗೆ ಆರೆಸ್ಸೆಸ್ ಮುಖಂಡರು ಕೂಡಾ ಕೊರೊನಾ ಹಗರಣದಲ್ಲಿ ಬಾಗಿ: ಡಿ.ಕೆ. ಸುರೇಶ್

ಕೋಮುವಾದವನ್ನು ಉತ್ತೇಜಿಸಿರುವುದರ ಹೊರತಾಗಿ ಗೋಲ್ವಾಲ್ಕರ್‌ಗೂ ವಿಜ್ಞಾನಕ್ಕೂ ಏನು ಸಂಬಂಧವಿದೆ ಎಂದು ಸಂಸದ ಶಶಿ ತರೂರ್ ಕೇಳಿದ್ದು, “ಧರ್ಮವು ವಿಜ್ಞಾನದಲ್ಲಿ ಪ್ರಾಬಲ್ಯ ಸಾಧಿಸಬೇಕು” ಎಂಬ ಉಲ್ಲೇಖಕ್ಕಾಗಿ ಹಿಟ್ಲರ್ ಅಭಿಮಾನಿ ಗೋಲ್ವಾಲ್ಕರ್ ಅವರನ್ನು ನೆನಪಿಸಿಕೊಳ್ಳಬೇಕಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಗೋಲ್ವಾಲ್ಕರ್ ಅತಿದೊಡ್ಡ ಕೋಮುವಾದಿ ಮತ್ತು ಅವರ ನಾಮಕರಣ ಕ್ರಮವನ್ನು ವಿರೋಧಿಸುವುದಾಗಿ ಸಿಪಿಐ (ಎಂ) ಪೊಲಿಟ್‌ಬ್ಯುರೊ ಸದಸ್ಯ ಎಂ.ಎ. ಬೇಬಿ ಹೇಳಿದ್ದು, “ಕೇರಳದ ಪ್ರಜಾಪ್ರಭುತ್ವ ಸಮುದಾಯವು ಈ ಕ್ರಮವನ್ನು ವಿರೋಧಿಸಬೇಕು. ಗಾಂಧೀಜಿಯವರ ಹತ್ಯೆಯ ಸಮಯದಲ್ಲಿ ಈ ಆರೆಸ್ಸೆಸ್ ಮುಖ್ಯಸ್ಥ ಭಾರತದಲ್ಲಿ ಕೋಮು ದ್ವೇಷದ ಹರಡುವಿಕೆಗೆ ಕಾರಣವಾಗಿದ್ದರು. 1940 ರಿಂದ 1970 ರವರೆಗೆ ಗೋಲ್ವಾಲ್ಕರ್ ಮುಖ್ಯಸ್ಥರಾಗಿದ್ದಾಗ, ಆರೆಸ್ಸೆಸ್ ಭಾರತ ಕಂಡ ಅತಿದೊಡ್ಡ ಕೋಮು ಗಲಭೆಗಳನ್ನು ನಡೆಸಿತ್ತು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಣ್ಣ ಕೈಗಾರಿಕೆಗೆ ಘೋಷಿಸಿದ ಸಾಲ ಯೋಜನೆಯ ಅನುಷ್ಠಾನ ವಿಳಂಬ: ಆರೆಸ್ಸೆಸ್ ಅಂಗಸಂಸ್ಥೆ ಆರೋಪ

ಎರಡನೇ ಕ್ಯಾಂಪಸ್ ತಂತ್ರಜ್ಞಾನ ನಾವೀನ್ಯತೆಯ ಕೇಂದ್ರವಾಗಲಿದ್ದು, ಇದು ಕೋಶ ಆಧಾರಿತ ಚಿಕಿತ್ಸಾ ಸಂಶೋಧನೆಗೆ ಅತ್ಯಾಧುನಿಕ ಸೌಲಭ್ಯ ಒದಗಿಸಲಿದೆ. ಕ್ಯಾನ್ಸರ್ ಔಷಧಗಳು, ಇಮ್ಯುನೊಥೆರಪಿ ಸಂಶೋಧನೆ, ಸ್ಟೆಮ್ ಸೆಲ್ ಕಸಿ, ಜೀನ್ ಥೆರಪಿ ಮತ್ತು ಸೂಕ್ಷ್ಮಜೀವಿಯ ಕ್ಯಾನ್ಸರ್ ಪತ್ತೆ ಮತ್ತು ವಿಶ್ಲೇಷಣೆ ಕುರಿತು ಸಂಶೋಧನೆಗಳು ಇಲ್ಲಿ ನಡೆಯಲಿದೆ.

ಇದನ್ನೂ ಓದಿ: ಆಪರೇಷನ್ ಕಮಲದಲ್ಲಿ ಶುರುವಾಯ್ತು ಕೃಷ್ಣ ಗಾರುಡಿ: ಒಕ್ಕಲಿಗ ವರ್ಸಸ್ ಒಕ್ಕಲಿಗೆ! ಇದು ಆರೆಸ್ಸೆಸ್ಸಿನ ಹೊಸ ದಾಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...