Homeಮುಖಪುಟ’ಶೂ ನೆಕ್ಕಿದವನ ಹೆಸರನ್ನು ಕೇರಳ ಕಸದ ಬುಟ್ಟಿಗೆ ಎಸೆಯಬೇಕು’: ಗೋಲ್ವಾಲ್ಕರ್ ವಿರುದ್ದ ಕಿಡಿ

’ಶೂ ನೆಕ್ಕಿದವನ ಹೆಸರನ್ನು ಕೇರಳ ಕಸದ ಬುಟ್ಟಿಗೆ ಎಸೆಯಬೇಕು’: ಗೋಲ್ವಾಲ್ಕರ್ ವಿರುದ್ದ ಕಿಡಿ

ವೈಜ್ಞಾನಿಕ ಸಂಸ್ಥೆಗೆ ಆರೆಸ್ಸೆಸ್ ನಾಯಕನ ಹೆಸರಿಡುವ ಕೇಂದ್ರದ ಕ್ರಮಕ್ಕೆ ಕೇರಳದಾದ್ಯಂತ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿದೆ

- Advertisement -
- Advertisement -

ತಿರುವನಂತಪುರಂನ ರಾಜೀವ್ ಗಾಂಧಿ ಸೆಂಟರ್ ಫಾರ್ ಬಯೋಟೆಕ್ನಾಲಜಿ (RGCB) ಯ ಎರಡನೇ ಕ್ಯಾಂಪಸ್‌ಗೆ ಆರೆಸ್ಸೆಸ್ ಮುಖಂಡ ಗೋಲ್ವಾಲ್ಕರ್‌ ಹೆಸರಿಡುವುದಕ್ಕೆ ಕೇರಳದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಖ್ಯಾತ ಮಲಯಾಳಂ ಚಿತ್ರ ನಟ ಹರೀಶ್ ಪೆರಾಡಿ, “ಆ ಶೂ ನೆಕ್ಕಿದವನ ಹೆಸರನ್ನು ಕೇರಳ ಕಸದ ಬುಟ್ಟಿಗೆ ಎಸೆಯಬೇಕು” ಎಂದು ಕಿಡಿಕಾರಿದ್ದಾರೆ.

ಇಂಡಿಯಾ ಇಂಟರ್‌‌ನ್ಯಾಷನಲ್ ಸೈನ್ಸ್ ಫೆಸ್ಟಿವೆಲ್(IISF)ನ ಅಧಿವೇಶನದ ವೀಡಿಯೋ ಸಂದೇಶದಲ್ಲಿ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಹರ್ಷ್ ವರ್ಧನ್ ಈ ಬಗ್ಗೆ ತಿಳಿಸಿದ್ದು, ಸಂಸ್ಥೆಗೆ ಆರೆಸ್ಸೆಸ್‌‌ನ ಎರಡನೇ ನಾಯಕನಾಗಿದ್ದ ಎಂ.ಎಸ್. ಗೊಲ್ವಾಲ್ಕರ್‌ ಅವರ ಹೆಸರನ್ನು ಇಡುವುದಾಗಿ ಹೇಳಿದ್ದಾರೆ. ಅದನ್ನು ‘ಶ್ರೀ ಗೂರುಜಿ ಮಾಧವ ಸದಾಶಿವ ಗೋಲ್ವಾಲ್ಕರ್ ನ್ಯಾಷನಲ್ ಸೆಂಟರ್ ಫಾರ್ ಕಾಂಪ್ಲೆಕ್ಸ್ ಡಿಸೀಸ್ ಇನ್ ಕ್ಯಾನ್ಸರ್ ಮತ್ತು ವೈರಲ್ ಇನ್‌‌ಫೆಕ್ಷನ್’ ಎಂದು ಕರೆದಿದ್ದಾರೆ.

ಇದನ್ನೂ ಓದಿ: ಹೆಸರೂ ಸೇರಿ ಎಲ್ಲವೂ ಸಂಶಯಾಸ್ಪದವಾಗಿದ್ದ ಸತ್ಯಶೋಧನಾ ಸಮಿತಿ: ಆರೆಸ್ಸೆಸ್ ಹೀಗೇಕೆ ಮಾಡಿತು?

ವೈಜ್ಞಾನಿಕ ಸಂಸ್ಥೆಗೆ ಆರೆಸ್ಸೆಸ್ ನಾಯಕನ ಹೆಸರಿಡುವ ಕೇಂದ್ರದ ಕ್ರಮಕ್ಕೆ ಕೇರಳದಾದ್ಯಂತ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿದ್ದು, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್‌ಗೆ ಗೋಲ್ವಾಲ್ಕರ್ ಹೆಸರಿಡದಂತೆ ಕೋರಿ ಪತ್ರ ಬರೆದಿದ್ದಾರೆ. ಸಂಸ್ಥೆಗೆ ಅಂತರಾಷ್ಟ್ರೀಯ ಖ್ಯಾತಿಯ ಭಾರತೀಯ ವಿಜ್ಞಾನಿಗಳನ್ನು ಹೆಸರಿಡಬಹುದು ಮತ್ತು ಪ್ರಸ್ತುತ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ತಿಳಿಸಿದ್ದಾರೆ.

ಕೋಮುವಾದ ಸಿದ್ಧಾಂತವನ್ನು ಪ್ರತಿಪಾದಿಸಿದ ಗೋಲ್ವಾಲ್ಕರ್ ಅವರಂತಹ ವ್ಯಕ್ತಿಯ ಹೆಸರನ್ನು ವೈಜ್ಞಾನಿಕ ಸಂಶೋಧನಾ ಸಂಸ್ಥೆಗೆ ಇಡುವುದು ಸೂಕ್ತವಲ್ಲ ಎಂದು ಪಿಣರಾಯಿ ಫೇಸ್‌ಬುಕ್ ಪೋಸ್ಟ್‌ನಲ್ಲಿ ಬರೆದಿದ್ದು, “ಇಂತಹ ಸಂಸ್ಥೆಯು ಮುಕ್ತ ಚಿಂತನೆಯನ್ನು ಕಟ್ಟಿಕೊಟ್ಟ ವ್ಯಕ್ತಿಗಳ ಇತಿಹಾಸದಿಂದ ಪ್ರೇರಿತವಾಗಬೇಕೇ ಹೊರತು ಕೋಮುವಾದವನ್ನು ಆಧರಿಸಿದ ದ್ವೇಷದ ಸಿದ್ಧಾಂತವನ್ನು ಪ್ರತಿಪಾದಿಸಿದವರದ್ದಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಜೊತೆಗೆ ಆರೆಸ್ಸೆಸ್ ಮುಖಂಡರು ಕೂಡಾ ಕೊರೊನಾ ಹಗರಣದಲ್ಲಿ ಬಾಗಿ: ಡಿ.ಕೆ. ಸುರೇಶ್

ಕೋಮುವಾದವನ್ನು ಉತ್ತೇಜಿಸಿರುವುದರ ಹೊರತಾಗಿ ಗೋಲ್ವಾಲ್ಕರ್‌ಗೂ ವಿಜ್ಞಾನಕ್ಕೂ ಏನು ಸಂಬಂಧವಿದೆ ಎಂದು ಸಂಸದ ಶಶಿ ತರೂರ್ ಕೇಳಿದ್ದು, “ಧರ್ಮವು ವಿಜ್ಞಾನದಲ್ಲಿ ಪ್ರಾಬಲ್ಯ ಸಾಧಿಸಬೇಕು” ಎಂಬ ಉಲ್ಲೇಖಕ್ಕಾಗಿ ಹಿಟ್ಲರ್ ಅಭಿಮಾನಿ ಗೋಲ್ವಾಲ್ಕರ್ ಅವರನ್ನು ನೆನಪಿಸಿಕೊಳ್ಳಬೇಕಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಗೋಲ್ವಾಲ್ಕರ್ ಅತಿದೊಡ್ಡ ಕೋಮುವಾದಿ ಮತ್ತು ಅವರ ನಾಮಕರಣ ಕ್ರಮವನ್ನು ವಿರೋಧಿಸುವುದಾಗಿ ಸಿಪಿಐ (ಎಂ) ಪೊಲಿಟ್‌ಬ್ಯುರೊ ಸದಸ್ಯ ಎಂ.ಎ. ಬೇಬಿ ಹೇಳಿದ್ದು, “ಕೇರಳದ ಪ್ರಜಾಪ್ರಭುತ್ವ ಸಮುದಾಯವು ಈ ಕ್ರಮವನ್ನು ವಿರೋಧಿಸಬೇಕು. ಗಾಂಧೀಜಿಯವರ ಹತ್ಯೆಯ ಸಮಯದಲ್ಲಿ ಈ ಆರೆಸ್ಸೆಸ್ ಮುಖ್ಯಸ್ಥ ಭಾರತದಲ್ಲಿ ಕೋಮು ದ್ವೇಷದ ಹರಡುವಿಕೆಗೆ ಕಾರಣವಾಗಿದ್ದರು. 1940 ರಿಂದ 1970 ರವರೆಗೆ ಗೋಲ್ವಾಲ್ಕರ್ ಮುಖ್ಯಸ್ಥರಾಗಿದ್ದಾಗ, ಆರೆಸ್ಸೆಸ್ ಭಾರತ ಕಂಡ ಅತಿದೊಡ್ಡ ಕೋಮು ಗಲಭೆಗಳನ್ನು ನಡೆಸಿತ್ತು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಣ್ಣ ಕೈಗಾರಿಕೆಗೆ ಘೋಷಿಸಿದ ಸಾಲ ಯೋಜನೆಯ ಅನುಷ್ಠಾನ ವಿಳಂಬ: ಆರೆಸ್ಸೆಸ್ ಅಂಗಸಂಸ್ಥೆ ಆರೋಪ

ಎರಡನೇ ಕ್ಯಾಂಪಸ್ ತಂತ್ರಜ್ಞಾನ ನಾವೀನ್ಯತೆಯ ಕೇಂದ್ರವಾಗಲಿದ್ದು, ಇದು ಕೋಶ ಆಧಾರಿತ ಚಿಕಿತ್ಸಾ ಸಂಶೋಧನೆಗೆ ಅತ್ಯಾಧುನಿಕ ಸೌಲಭ್ಯ ಒದಗಿಸಲಿದೆ. ಕ್ಯಾನ್ಸರ್ ಔಷಧಗಳು, ಇಮ್ಯುನೊಥೆರಪಿ ಸಂಶೋಧನೆ, ಸ್ಟೆಮ್ ಸೆಲ್ ಕಸಿ, ಜೀನ್ ಥೆರಪಿ ಮತ್ತು ಸೂಕ್ಷ್ಮಜೀವಿಯ ಕ್ಯಾನ್ಸರ್ ಪತ್ತೆ ಮತ್ತು ವಿಶ್ಲೇಷಣೆ ಕುರಿತು ಸಂಶೋಧನೆಗಳು ಇಲ್ಲಿ ನಡೆಯಲಿದೆ.

ಇದನ್ನೂ ಓದಿ: ಆಪರೇಷನ್ ಕಮಲದಲ್ಲಿ ಶುರುವಾಯ್ತು ಕೃಷ್ಣ ಗಾರುಡಿ: ಒಕ್ಕಲಿಗ ವರ್ಸಸ್ ಒಕ್ಕಲಿಗೆ! ಇದು ಆರೆಸ್ಸೆಸ್ಸಿನ ಹೊಸ ದಾಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...