Homeಮುಖಪುಟ’ಶೂ ನೆಕ್ಕಿದವನ ಹೆಸರನ್ನು ಕೇರಳ ಕಸದ ಬುಟ್ಟಿಗೆ ಎಸೆಯಬೇಕು’: ಗೋಲ್ವಾಲ್ಕರ್ ವಿರುದ್ದ ಕಿಡಿ

’ಶೂ ನೆಕ್ಕಿದವನ ಹೆಸರನ್ನು ಕೇರಳ ಕಸದ ಬುಟ್ಟಿಗೆ ಎಸೆಯಬೇಕು’: ಗೋಲ್ವಾಲ್ಕರ್ ವಿರುದ್ದ ಕಿಡಿ

ವೈಜ್ಞಾನಿಕ ಸಂಸ್ಥೆಗೆ ಆರೆಸ್ಸೆಸ್ ನಾಯಕನ ಹೆಸರಿಡುವ ಕೇಂದ್ರದ ಕ್ರಮಕ್ಕೆ ಕೇರಳದಾದ್ಯಂತ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿದೆ

- Advertisement -
- Advertisement -

ತಿರುವನಂತಪುರಂನ ರಾಜೀವ್ ಗಾಂಧಿ ಸೆಂಟರ್ ಫಾರ್ ಬಯೋಟೆಕ್ನಾಲಜಿ (RGCB) ಯ ಎರಡನೇ ಕ್ಯಾಂಪಸ್‌ಗೆ ಆರೆಸ್ಸೆಸ್ ಮುಖಂಡ ಗೋಲ್ವಾಲ್ಕರ್‌ ಹೆಸರಿಡುವುದಕ್ಕೆ ಕೇರಳದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಖ್ಯಾತ ಮಲಯಾಳಂ ಚಿತ್ರ ನಟ ಹರೀಶ್ ಪೆರಾಡಿ, “ಆ ಶೂ ನೆಕ್ಕಿದವನ ಹೆಸರನ್ನು ಕೇರಳ ಕಸದ ಬುಟ್ಟಿಗೆ ಎಸೆಯಬೇಕು” ಎಂದು ಕಿಡಿಕಾರಿದ್ದಾರೆ.

ಇಂಡಿಯಾ ಇಂಟರ್‌‌ನ್ಯಾಷನಲ್ ಸೈನ್ಸ್ ಫೆಸ್ಟಿವೆಲ್(IISF)ನ ಅಧಿವೇಶನದ ವೀಡಿಯೋ ಸಂದೇಶದಲ್ಲಿ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಹರ್ಷ್ ವರ್ಧನ್ ಈ ಬಗ್ಗೆ ತಿಳಿಸಿದ್ದು, ಸಂಸ್ಥೆಗೆ ಆರೆಸ್ಸೆಸ್‌‌ನ ಎರಡನೇ ನಾಯಕನಾಗಿದ್ದ ಎಂ.ಎಸ್. ಗೊಲ್ವಾಲ್ಕರ್‌ ಅವರ ಹೆಸರನ್ನು ಇಡುವುದಾಗಿ ಹೇಳಿದ್ದಾರೆ. ಅದನ್ನು ‘ಶ್ರೀ ಗೂರುಜಿ ಮಾಧವ ಸದಾಶಿವ ಗೋಲ್ವಾಲ್ಕರ್ ನ್ಯಾಷನಲ್ ಸೆಂಟರ್ ಫಾರ್ ಕಾಂಪ್ಲೆಕ್ಸ್ ಡಿಸೀಸ್ ಇನ್ ಕ್ಯಾನ್ಸರ್ ಮತ್ತು ವೈರಲ್ ಇನ್‌‌ಫೆಕ್ಷನ್’ ಎಂದು ಕರೆದಿದ್ದಾರೆ.

ಇದನ್ನೂ ಓದಿ: ಹೆಸರೂ ಸೇರಿ ಎಲ್ಲವೂ ಸಂಶಯಾಸ್ಪದವಾಗಿದ್ದ ಸತ್ಯಶೋಧನಾ ಸಮಿತಿ: ಆರೆಸ್ಸೆಸ್ ಹೀಗೇಕೆ ಮಾಡಿತು?

ವೈಜ್ಞಾನಿಕ ಸಂಸ್ಥೆಗೆ ಆರೆಸ್ಸೆಸ್ ನಾಯಕನ ಹೆಸರಿಡುವ ಕೇಂದ್ರದ ಕ್ರಮಕ್ಕೆ ಕೇರಳದಾದ್ಯಂತ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿದ್ದು, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್‌ಗೆ ಗೋಲ್ವಾಲ್ಕರ್ ಹೆಸರಿಡದಂತೆ ಕೋರಿ ಪತ್ರ ಬರೆದಿದ್ದಾರೆ. ಸಂಸ್ಥೆಗೆ ಅಂತರಾಷ್ಟ್ರೀಯ ಖ್ಯಾತಿಯ ಭಾರತೀಯ ವಿಜ್ಞಾನಿಗಳನ್ನು ಹೆಸರಿಡಬಹುದು ಮತ್ತು ಪ್ರಸ್ತುತ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ತಿಳಿಸಿದ್ದಾರೆ.

ಕೋಮುವಾದ ಸಿದ್ಧಾಂತವನ್ನು ಪ್ರತಿಪಾದಿಸಿದ ಗೋಲ್ವಾಲ್ಕರ್ ಅವರಂತಹ ವ್ಯಕ್ತಿಯ ಹೆಸರನ್ನು ವೈಜ್ಞಾನಿಕ ಸಂಶೋಧನಾ ಸಂಸ್ಥೆಗೆ ಇಡುವುದು ಸೂಕ್ತವಲ್ಲ ಎಂದು ಪಿಣರಾಯಿ ಫೇಸ್‌ಬುಕ್ ಪೋಸ್ಟ್‌ನಲ್ಲಿ ಬರೆದಿದ್ದು, “ಇಂತಹ ಸಂಸ್ಥೆಯು ಮುಕ್ತ ಚಿಂತನೆಯನ್ನು ಕಟ್ಟಿಕೊಟ್ಟ ವ್ಯಕ್ತಿಗಳ ಇತಿಹಾಸದಿಂದ ಪ್ರೇರಿತವಾಗಬೇಕೇ ಹೊರತು ಕೋಮುವಾದವನ್ನು ಆಧರಿಸಿದ ದ್ವೇಷದ ಸಿದ್ಧಾಂತವನ್ನು ಪ್ರತಿಪಾದಿಸಿದವರದ್ದಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಜೊತೆಗೆ ಆರೆಸ್ಸೆಸ್ ಮುಖಂಡರು ಕೂಡಾ ಕೊರೊನಾ ಹಗರಣದಲ್ಲಿ ಬಾಗಿ: ಡಿ.ಕೆ. ಸುರೇಶ್

ಕೋಮುವಾದವನ್ನು ಉತ್ತೇಜಿಸಿರುವುದರ ಹೊರತಾಗಿ ಗೋಲ್ವಾಲ್ಕರ್‌ಗೂ ವಿಜ್ಞಾನಕ್ಕೂ ಏನು ಸಂಬಂಧವಿದೆ ಎಂದು ಸಂಸದ ಶಶಿ ತರೂರ್ ಕೇಳಿದ್ದು, “ಧರ್ಮವು ವಿಜ್ಞಾನದಲ್ಲಿ ಪ್ರಾಬಲ್ಯ ಸಾಧಿಸಬೇಕು” ಎಂಬ ಉಲ್ಲೇಖಕ್ಕಾಗಿ ಹಿಟ್ಲರ್ ಅಭಿಮಾನಿ ಗೋಲ್ವಾಲ್ಕರ್ ಅವರನ್ನು ನೆನಪಿಸಿಕೊಳ್ಳಬೇಕಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಗೋಲ್ವಾಲ್ಕರ್ ಅತಿದೊಡ್ಡ ಕೋಮುವಾದಿ ಮತ್ತು ಅವರ ನಾಮಕರಣ ಕ್ರಮವನ್ನು ವಿರೋಧಿಸುವುದಾಗಿ ಸಿಪಿಐ (ಎಂ) ಪೊಲಿಟ್‌ಬ್ಯುರೊ ಸದಸ್ಯ ಎಂ.ಎ. ಬೇಬಿ ಹೇಳಿದ್ದು, “ಕೇರಳದ ಪ್ರಜಾಪ್ರಭುತ್ವ ಸಮುದಾಯವು ಈ ಕ್ರಮವನ್ನು ವಿರೋಧಿಸಬೇಕು. ಗಾಂಧೀಜಿಯವರ ಹತ್ಯೆಯ ಸಮಯದಲ್ಲಿ ಈ ಆರೆಸ್ಸೆಸ್ ಮುಖ್ಯಸ್ಥ ಭಾರತದಲ್ಲಿ ಕೋಮು ದ್ವೇಷದ ಹರಡುವಿಕೆಗೆ ಕಾರಣವಾಗಿದ್ದರು. 1940 ರಿಂದ 1970 ರವರೆಗೆ ಗೋಲ್ವಾಲ್ಕರ್ ಮುಖ್ಯಸ್ಥರಾಗಿದ್ದಾಗ, ಆರೆಸ್ಸೆಸ್ ಭಾರತ ಕಂಡ ಅತಿದೊಡ್ಡ ಕೋಮು ಗಲಭೆಗಳನ್ನು ನಡೆಸಿತ್ತು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಣ್ಣ ಕೈಗಾರಿಕೆಗೆ ಘೋಷಿಸಿದ ಸಾಲ ಯೋಜನೆಯ ಅನುಷ್ಠಾನ ವಿಳಂಬ: ಆರೆಸ್ಸೆಸ್ ಅಂಗಸಂಸ್ಥೆ ಆರೋಪ

ಎರಡನೇ ಕ್ಯಾಂಪಸ್ ತಂತ್ರಜ್ಞಾನ ನಾವೀನ್ಯತೆಯ ಕೇಂದ್ರವಾಗಲಿದ್ದು, ಇದು ಕೋಶ ಆಧಾರಿತ ಚಿಕಿತ್ಸಾ ಸಂಶೋಧನೆಗೆ ಅತ್ಯಾಧುನಿಕ ಸೌಲಭ್ಯ ಒದಗಿಸಲಿದೆ. ಕ್ಯಾನ್ಸರ್ ಔಷಧಗಳು, ಇಮ್ಯುನೊಥೆರಪಿ ಸಂಶೋಧನೆ, ಸ್ಟೆಮ್ ಸೆಲ್ ಕಸಿ, ಜೀನ್ ಥೆರಪಿ ಮತ್ತು ಸೂಕ್ಷ್ಮಜೀವಿಯ ಕ್ಯಾನ್ಸರ್ ಪತ್ತೆ ಮತ್ತು ವಿಶ್ಲೇಷಣೆ ಕುರಿತು ಸಂಶೋಧನೆಗಳು ಇಲ್ಲಿ ನಡೆಯಲಿದೆ.

ಇದನ್ನೂ ಓದಿ: ಆಪರೇಷನ್ ಕಮಲದಲ್ಲಿ ಶುರುವಾಯ್ತು ಕೃಷ್ಣ ಗಾರುಡಿ: ಒಕ್ಕಲಿಗ ವರ್ಸಸ್ ಒಕ್ಕಲಿಗೆ! ಇದು ಆರೆಸ್ಸೆಸ್ಸಿನ ಹೊಸ ದಾಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...