Homeಮುಖಪುಟ’ಶೂ ನೆಕ್ಕಿದವನ ಹೆಸರನ್ನು ಕೇರಳ ಕಸದ ಬುಟ್ಟಿಗೆ ಎಸೆಯಬೇಕು’: ಗೋಲ್ವಾಲ್ಕರ್ ವಿರುದ್ದ ಕಿಡಿ

’ಶೂ ನೆಕ್ಕಿದವನ ಹೆಸರನ್ನು ಕೇರಳ ಕಸದ ಬುಟ್ಟಿಗೆ ಎಸೆಯಬೇಕು’: ಗೋಲ್ವಾಲ್ಕರ್ ವಿರುದ್ದ ಕಿಡಿ

ವೈಜ್ಞಾನಿಕ ಸಂಸ್ಥೆಗೆ ಆರೆಸ್ಸೆಸ್ ನಾಯಕನ ಹೆಸರಿಡುವ ಕೇಂದ್ರದ ಕ್ರಮಕ್ಕೆ ಕೇರಳದಾದ್ಯಂತ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿದೆ

- Advertisement -
- Advertisement -

ತಿರುವನಂತಪುರಂನ ರಾಜೀವ್ ಗಾಂಧಿ ಸೆಂಟರ್ ಫಾರ್ ಬಯೋಟೆಕ್ನಾಲಜಿ (RGCB) ಯ ಎರಡನೇ ಕ್ಯಾಂಪಸ್‌ಗೆ ಆರೆಸ್ಸೆಸ್ ಮುಖಂಡ ಗೋಲ್ವಾಲ್ಕರ್‌ ಹೆಸರಿಡುವುದಕ್ಕೆ ಕೇರಳದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಖ್ಯಾತ ಮಲಯಾಳಂ ಚಿತ್ರ ನಟ ಹರೀಶ್ ಪೆರಾಡಿ, “ಆ ಶೂ ನೆಕ್ಕಿದವನ ಹೆಸರನ್ನು ಕೇರಳ ಕಸದ ಬುಟ್ಟಿಗೆ ಎಸೆಯಬೇಕು” ಎಂದು ಕಿಡಿಕಾರಿದ್ದಾರೆ.

ಇಂಡಿಯಾ ಇಂಟರ್‌‌ನ್ಯಾಷನಲ್ ಸೈನ್ಸ್ ಫೆಸ್ಟಿವೆಲ್(IISF)ನ ಅಧಿವೇಶನದ ವೀಡಿಯೋ ಸಂದೇಶದಲ್ಲಿ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಹರ್ಷ್ ವರ್ಧನ್ ಈ ಬಗ್ಗೆ ತಿಳಿಸಿದ್ದು, ಸಂಸ್ಥೆಗೆ ಆರೆಸ್ಸೆಸ್‌‌ನ ಎರಡನೇ ನಾಯಕನಾಗಿದ್ದ ಎಂ.ಎಸ್. ಗೊಲ್ವಾಲ್ಕರ್‌ ಅವರ ಹೆಸರನ್ನು ಇಡುವುದಾಗಿ ಹೇಳಿದ್ದಾರೆ. ಅದನ್ನು ‘ಶ್ರೀ ಗೂರುಜಿ ಮಾಧವ ಸದಾಶಿವ ಗೋಲ್ವಾಲ್ಕರ್ ನ್ಯಾಷನಲ್ ಸೆಂಟರ್ ಫಾರ್ ಕಾಂಪ್ಲೆಕ್ಸ್ ಡಿಸೀಸ್ ಇನ್ ಕ್ಯಾನ್ಸರ್ ಮತ್ತು ವೈರಲ್ ಇನ್‌‌ಫೆಕ್ಷನ್’ ಎಂದು ಕರೆದಿದ್ದಾರೆ.

ಇದನ್ನೂ ಓದಿ: ಹೆಸರೂ ಸೇರಿ ಎಲ್ಲವೂ ಸಂಶಯಾಸ್ಪದವಾಗಿದ್ದ ಸತ್ಯಶೋಧನಾ ಸಮಿತಿ: ಆರೆಸ್ಸೆಸ್ ಹೀಗೇಕೆ ಮಾಡಿತು?

ವೈಜ್ಞಾನಿಕ ಸಂಸ್ಥೆಗೆ ಆರೆಸ್ಸೆಸ್ ನಾಯಕನ ಹೆಸರಿಡುವ ಕೇಂದ್ರದ ಕ್ರಮಕ್ಕೆ ಕೇರಳದಾದ್ಯಂತ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿದ್ದು, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್‌ಗೆ ಗೋಲ್ವಾಲ್ಕರ್ ಹೆಸರಿಡದಂತೆ ಕೋರಿ ಪತ್ರ ಬರೆದಿದ್ದಾರೆ. ಸಂಸ್ಥೆಗೆ ಅಂತರಾಷ್ಟ್ರೀಯ ಖ್ಯಾತಿಯ ಭಾರತೀಯ ವಿಜ್ಞಾನಿಗಳನ್ನು ಹೆಸರಿಡಬಹುದು ಮತ್ತು ಪ್ರಸ್ತುತ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ತಿಳಿಸಿದ್ದಾರೆ.

ಕೋಮುವಾದ ಸಿದ್ಧಾಂತವನ್ನು ಪ್ರತಿಪಾದಿಸಿದ ಗೋಲ್ವಾಲ್ಕರ್ ಅವರಂತಹ ವ್ಯಕ್ತಿಯ ಹೆಸರನ್ನು ವೈಜ್ಞಾನಿಕ ಸಂಶೋಧನಾ ಸಂಸ್ಥೆಗೆ ಇಡುವುದು ಸೂಕ್ತವಲ್ಲ ಎಂದು ಪಿಣರಾಯಿ ಫೇಸ್‌ಬುಕ್ ಪೋಸ್ಟ್‌ನಲ್ಲಿ ಬರೆದಿದ್ದು, “ಇಂತಹ ಸಂಸ್ಥೆಯು ಮುಕ್ತ ಚಿಂತನೆಯನ್ನು ಕಟ್ಟಿಕೊಟ್ಟ ವ್ಯಕ್ತಿಗಳ ಇತಿಹಾಸದಿಂದ ಪ್ರೇರಿತವಾಗಬೇಕೇ ಹೊರತು ಕೋಮುವಾದವನ್ನು ಆಧರಿಸಿದ ದ್ವೇಷದ ಸಿದ್ಧಾಂತವನ್ನು ಪ್ರತಿಪಾದಿಸಿದವರದ್ದಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಜೊತೆಗೆ ಆರೆಸ್ಸೆಸ್ ಮುಖಂಡರು ಕೂಡಾ ಕೊರೊನಾ ಹಗರಣದಲ್ಲಿ ಬಾಗಿ: ಡಿ.ಕೆ. ಸುರೇಶ್

ಕೋಮುವಾದವನ್ನು ಉತ್ತೇಜಿಸಿರುವುದರ ಹೊರತಾಗಿ ಗೋಲ್ವಾಲ್ಕರ್‌ಗೂ ವಿಜ್ಞಾನಕ್ಕೂ ಏನು ಸಂಬಂಧವಿದೆ ಎಂದು ಸಂಸದ ಶಶಿ ತರೂರ್ ಕೇಳಿದ್ದು, “ಧರ್ಮವು ವಿಜ್ಞಾನದಲ್ಲಿ ಪ್ರಾಬಲ್ಯ ಸಾಧಿಸಬೇಕು” ಎಂಬ ಉಲ್ಲೇಖಕ್ಕಾಗಿ ಹಿಟ್ಲರ್ ಅಭಿಮಾನಿ ಗೋಲ್ವಾಲ್ಕರ್ ಅವರನ್ನು ನೆನಪಿಸಿಕೊಳ್ಳಬೇಕಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಗೋಲ್ವಾಲ್ಕರ್ ಅತಿದೊಡ್ಡ ಕೋಮುವಾದಿ ಮತ್ತು ಅವರ ನಾಮಕರಣ ಕ್ರಮವನ್ನು ವಿರೋಧಿಸುವುದಾಗಿ ಸಿಪಿಐ (ಎಂ) ಪೊಲಿಟ್‌ಬ್ಯುರೊ ಸದಸ್ಯ ಎಂ.ಎ. ಬೇಬಿ ಹೇಳಿದ್ದು, “ಕೇರಳದ ಪ್ರಜಾಪ್ರಭುತ್ವ ಸಮುದಾಯವು ಈ ಕ್ರಮವನ್ನು ವಿರೋಧಿಸಬೇಕು. ಗಾಂಧೀಜಿಯವರ ಹತ್ಯೆಯ ಸಮಯದಲ್ಲಿ ಈ ಆರೆಸ್ಸೆಸ್ ಮುಖ್ಯಸ್ಥ ಭಾರತದಲ್ಲಿ ಕೋಮು ದ್ವೇಷದ ಹರಡುವಿಕೆಗೆ ಕಾರಣವಾಗಿದ್ದರು. 1940 ರಿಂದ 1970 ರವರೆಗೆ ಗೋಲ್ವಾಲ್ಕರ್ ಮುಖ್ಯಸ್ಥರಾಗಿದ್ದಾಗ, ಆರೆಸ್ಸೆಸ್ ಭಾರತ ಕಂಡ ಅತಿದೊಡ್ಡ ಕೋಮು ಗಲಭೆಗಳನ್ನು ನಡೆಸಿತ್ತು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಣ್ಣ ಕೈಗಾರಿಕೆಗೆ ಘೋಷಿಸಿದ ಸಾಲ ಯೋಜನೆಯ ಅನುಷ್ಠಾನ ವಿಳಂಬ: ಆರೆಸ್ಸೆಸ್ ಅಂಗಸಂಸ್ಥೆ ಆರೋಪ

ಎರಡನೇ ಕ್ಯಾಂಪಸ್ ತಂತ್ರಜ್ಞಾನ ನಾವೀನ್ಯತೆಯ ಕೇಂದ್ರವಾಗಲಿದ್ದು, ಇದು ಕೋಶ ಆಧಾರಿತ ಚಿಕಿತ್ಸಾ ಸಂಶೋಧನೆಗೆ ಅತ್ಯಾಧುನಿಕ ಸೌಲಭ್ಯ ಒದಗಿಸಲಿದೆ. ಕ್ಯಾನ್ಸರ್ ಔಷಧಗಳು, ಇಮ್ಯುನೊಥೆರಪಿ ಸಂಶೋಧನೆ, ಸ್ಟೆಮ್ ಸೆಲ್ ಕಸಿ, ಜೀನ್ ಥೆರಪಿ ಮತ್ತು ಸೂಕ್ಷ್ಮಜೀವಿಯ ಕ್ಯಾನ್ಸರ್ ಪತ್ತೆ ಮತ್ತು ವಿಶ್ಲೇಷಣೆ ಕುರಿತು ಸಂಶೋಧನೆಗಳು ಇಲ್ಲಿ ನಡೆಯಲಿದೆ.

ಇದನ್ನೂ ಓದಿ: ಆಪರೇಷನ್ ಕಮಲದಲ್ಲಿ ಶುರುವಾಯ್ತು ಕೃಷ್ಣ ಗಾರುಡಿ: ಒಕ್ಕಲಿಗ ವರ್ಸಸ್ ಒಕ್ಕಲಿಗೆ! ಇದು ಆರೆಸ್ಸೆಸ್ಸಿನ ಹೊಸ ದಾಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...