Homeಮುಖಪುಟ’ಶೂ ನೆಕ್ಕಿದವನ ಹೆಸರನ್ನು ಕೇರಳ ಕಸದ ಬುಟ್ಟಿಗೆ ಎಸೆಯಬೇಕು’: ಗೋಲ್ವಾಲ್ಕರ್ ವಿರುದ್ದ ಕಿಡಿ

’ಶೂ ನೆಕ್ಕಿದವನ ಹೆಸರನ್ನು ಕೇರಳ ಕಸದ ಬುಟ್ಟಿಗೆ ಎಸೆಯಬೇಕು’: ಗೋಲ್ವಾಲ್ಕರ್ ವಿರುದ್ದ ಕಿಡಿ

ವೈಜ್ಞಾನಿಕ ಸಂಸ್ಥೆಗೆ ಆರೆಸ್ಸೆಸ್ ನಾಯಕನ ಹೆಸರಿಡುವ ಕೇಂದ್ರದ ಕ್ರಮಕ್ಕೆ ಕೇರಳದಾದ್ಯಂತ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿದೆ

- Advertisement -
- Advertisement -

ತಿರುವನಂತಪುರಂನ ರಾಜೀವ್ ಗಾಂಧಿ ಸೆಂಟರ್ ಫಾರ್ ಬಯೋಟೆಕ್ನಾಲಜಿ (RGCB) ಯ ಎರಡನೇ ಕ್ಯಾಂಪಸ್‌ಗೆ ಆರೆಸ್ಸೆಸ್ ಮುಖಂಡ ಗೋಲ್ವಾಲ್ಕರ್‌ ಹೆಸರಿಡುವುದಕ್ಕೆ ಕೇರಳದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಖ್ಯಾತ ಮಲಯಾಳಂ ಚಿತ್ರ ನಟ ಹರೀಶ್ ಪೆರಾಡಿ, “ಆ ಶೂ ನೆಕ್ಕಿದವನ ಹೆಸರನ್ನು ಕೇರಳ ಕಸದ ಬುಟ್ಟಿಗೆ ಎಸೆಯಬೇಕು” ಎಂದು ಕಿಡಿಕಾರಿದ್ದಾರೆ.

ಇಂಡಿಯಾ ಇಂಟರ್‌‌ನ್ಯಾಷನಲ್ ಸೈನ್ಸ್ ಫೆಸ್ಟಿವೆಲ್(IISF)ನ ಅಧಿವೇಶನದ ವೀಡಿಯೋ ಸಂದೇಶದಲ್ಲಿ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಹರ್ಷ್ ವರ್ಧನ್ ಈ ಬಗ್ಗೆ ತಿಳಿಸಿದ್ದು, ಸಂಸ್ಥೆಗೆ ಆರೆಸ್ಸೆಸ್‌‌ನ ಎರಡನೇ ನಾಯಕನಾಗಿದ್ದ ಎಂ.ಎಸ್. ಗೊಲ್ವಾಲ್ಕರ್‌ ಅವರ ಹೆಸರನ್ನು ಇಡುವುದಾಗಿ ಹೇಳಿದ್ದಾರೆ. ಅದನ್ನು ‘ಶ್ರೀ ಗೂರುಜಿ ಮಾಧವ ಸದಾಶಿವ ಗೋಲ್ವಾಲ್ಕರ್ ನ್ಯಾಷನಲ್ ಸೆಂಟರ್ ಫಾರ್ ಕಾಂಪ್ಲೆಕ್ಸ್ ಡಿಸೀಸ್ ಇನ್ ಕ್ಯಾನ್ಸರ್ ಮತ್ತು ವೈರಲ್ ಇನ್‌‌ಫೆಕ್ಷನ್’ ಎಂದು ಕರೆದಿದ್ದಾರೆ.

ಇದನ್ನೂ ಓದಿ: ಹೆಸರೂ ಸೇರಿ ಎಲ್ಲವೂ ಸಂಶಯಾಸ್ಪದವಾಗಿದ್ದ ಸತ್ಯಶೋಧನಾ ಸಮಿತಿ: ಆರೆಸ್ಸೆಸ್ ಹೀಗೇಕೆ ಮಾಡಿತು?

ವೈಜ್ಞಾನಿಕ ಸಂಸ್ಥೆಗೆ ಆರೆಸ್ಸೆಸ್ ನಾಯಕನ ಹೆಸರಿಡುವ ಕೇಂದ್ರದ ಕ್ರಮಕ್ಕೆ ಕೇರಳದಾದ್ಯಂತ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿದ್ದು, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್‌ಗೆ ಗೋಲ್ವಾಲ್ಕರ್ ಹೆಸರಿಡದಂತೆ ಕೋರಿ ಪತ್ರ ಬರೆದಿದ್ದಾರೆ. ಸಂಸ್ಥೆಗೆ ಅಂತರಾಷ್ಟ್ರೀಯ ಖ್ಯಾತಿಯ ಭಾರತೀಯ ವಿಜ್ಞಾನಿಗಳನ್ನು ಹೆಸರಿಡಬಹುದು ಮತ್ತು ಪ್ರಸ್ತುತ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ತಿಳಿಸಿದ್ದಾರೆ.

ಕೋಮುವಾದ ಸಿದ್ಧಾಂತವನ್ನು ಪ್ರತಿಪಾದಿಸಿದ ಗೋಲ್ವಾಲ್ಕರ್ ಅವರಂತಹ ವ್ಯಕ್ತಿಯ ಹೆಸರನ್ನು ವೈಜ್ಞಾನಿಕ ಸಂಶೋಧನಾ ಸಂಸ್ಥೆಗೆ ಇಡುವುದು ಸೂಕ್ತವಲ್ಲ ಎಂದು ಪಿಣರಾಯಿ ಫೇಸ್‌ಬುಕ್ ಪೋಸ್ಟ್‌ನಲ್ಲಿ ಬರೆದಿದ್ದು, “ಇಂತಹ ಸಂಸ್ಥೆಯು ಮುಕ್ತ ಚಿಂತನೆಯನ್ನು ಕಟ್ಟಿಕೊಟ್ಟ ವ್ಯಕ್ತಿಗಳ ಇತಿಹಾಸದಿಂದ ಪ್ರೇರಿತವಾಗಬೇಕೇ ಹೊರತು ಕೋಮುವಾದವನ್ನು ಆಧರಿಸಿದ ದ್ವೇಷದ ಸಿದ್ಧಾಂತವನ್ನು ಪ್ರತಿಪಾದಿಸಿದವರದ್ದಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಜೊತೆಗೆ ಆರೆಸ್ಸೆಸ್ ಮುಖಂಡರು ಕೂಡಾ ಕೊರೊನಾ ಹಗರಣದಲ್ಲಿ ಬಾಗಿ: ಡಿ.ಕೆ. ಸುರೇಶ್

ಕೋಮುವಾದವನ್ನು ಉತ್ತೇಜಿಸಿರುವುದರ ಹೊರತಾಗಿ ಗೋಲ್ವಾಲ್ಕರ್‌ಗೂ ವಿಜ್ಞಾನಕ್ಕೂ ಏನು ಸಂಬಂಧವಿದೆ ಎಂದು ಸಂಸದ ಶಶಿ ತರೂರ್ ಕೇಳಿದ್ದು, “ಧರ್ಮವು ವಿಜ್ಞಾನದಲ್ಲಿ ಪ್ರಾಬಲ್ಯ ಸಾಧಿಸಬೇಕು” ಎಂಬ ಉಲ್ಲೇಖಕ್ಕಾಗಿ ಹಿಟ್ಲರ್ ಅಭಿಮಾನಿ ಗೋಲ್ವಾಲ್ಕರ್ ಅವರನ್ನು ನೆನಪಿಸಿಕೊಳ್ಳಬೇಕಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಗೋಲ್ವಾಲ್ಕರ್ ಅತಿದೊಡ್ಡ ಕೋಮುವಾದಿ ಮತ್ತು ಅವರ ನಾಮಕರಣ ಕ್ರಮವನ್ನು ವಿರೋಧಿಸುವುದಾಗಿ ಸಿಪಿಐ (ಎಂ) ಪೊಲಿಟ್‌ಬ್ಯುರೊ ಸದಸ್ಯ ಎಂ.ಎ. ಬೇಬಿ ಹೇಳಿದ್ದು, “ಕೇರಳದ ಪ್ರಜಾಪ್ರಭುತ್ವ ಸಮುದಾಯವು ಈ ಕ್ರಮವನ್ನು ವಿರೋಧಿಸಬೇಕು. ಗಾಂಧೀಜಿಯವರ ಹತ್ಯೆಯ ಸಮಯದಲ್ಲಿ ಈ ಆರೆಸ್ಸೆಸ್ ಮುಖ್ಯಸ್ಥ ಭಾರತದಲ್ಲಿ ಕೋಮು ದ್ವೇಷದ ಹರಡುವಿಕೆಗೆ ಕಾರಣವಾಗಿದ್ದರು. 1940 ರಿಂದ 1970 ರವರೆಗೆ ಗೋಲ್ವಾಲ್ಕರ್ ಮುಖ್ಯಸ್ಥರಾಗಿದ್ದಾಗ, ಆರೆಸ್ಸೆಸ್ ಭಾರತ ಕಂಡ ಅತಿದೊಡ್ಡ ಕೋಮು ಗಲಭೆಗಳನ್ನು ನಡೆಸಿತ್ತು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಣ್ಣ ಕೈಗಾರಿಕೆಗೆ ಘೋಷಿಸಿದ ಸಾಲ ಯೋಜನೆಯ ಅನುಷ್ಠಾನ ವಿಳಂಬ: ಆರೆಸ್ಸೆಸ್ ಅಂಗಸಂಸ್ಥೆ ಆರೋಪ

ಎರಡನೇ ಕ್ಯಾಂಪಸ್ ತಂತ್ರಜ್ಞಾನ ನಾವೀನ್ಯತೆಯ ಕೇಂದ್ರವಾಗಲಿದ್ದು, ಇದು ಕೋಶ ಆಧಾರಿತ ಚಿಕಿತ್ಸಾ ಸಂಶೋಧನೆಗೆ ಅತ್ಯಾಧುನಿಕ ಸೌಲಭ್ಯ ಒದಗಿಸಲಿದೆ. ಕ್ಯಾನ್ಸರ್ ಔಷಧಗಳು, ಇಮ್ಯುನೊಥೆರಪಿ ಸಂಶೋಧನೆ, ಸ್ಟೆಮ್ ಸೆಲ್ ಕಸಿ, ಜೀನ್ ಥೆರಪಿ ಮತ್ತು ಸೂಕ್ಷ್ಮಜೀವಿಯ ಕ್ಯಾನ್ಸರ್ ಪತ್ತೆ ಮತ್ತು ವಿಶ್ಲೇಷಣೆ ಕುರಿತು ಸಂಶೋಧನೆಗಳು ಇಲ್ಲಿ ನಡೆಯಲಿದೆ.

ಇದನ್ನೂ ಓದಿ: ಆಪರೇಷನ್ ಕಮಲದಲ್ಲಿ ಶುರುವಾಯ್ತು ಕೃಷ್ಣ ಗಾರುಡಿ: ಒಕ್ಕಲಿಗ ವರ್ಸಸ್ ಒಕ್ಕಲಿಗೆ! ಇದು ಆರೆಸ್ಸೆಸ್ಸಿನ ಹೊಸ ದಾಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...