Homeಕರ್ನಾಟಕಗೋಣಿ ತುಮಕೂರು ಅಸ್ಪೃಶ್ಯತೆ ಆಚರಣೆ ಪ್ರಕರಣ: ತಹಶೀಲ್ದಾರ್ ಸಮ್ಮುಖದಲ್ಲಿ ದೇಗುಲ ಪ್ರವೇಶಿಸಿದ ನವ ದಂಪತಿ

ಗೋಣಿ ತುಮಕೂರು ಅಸ್ಪೃಶ್ಯತೆ ಆಚರಣೆ ಪ್ರಕರಣ: ತಹಶೀಲ್ದಾರ್ ಸಮ್ಮುಖದಲ್ಲಿ ದೇಗುಲ ಪ್ರವೇಶಿಸಿದ ನವ ದಂಪತಿ

- Advertisement -
- Advertisement -

ಕಳೆದ ವಾರ ಭಾರಿ ಚರ್ಚೆಗೆ ಗ್ರಾಸವಾಗಿದ್ದ ದಲಿತ ನವ ದಂಪತಿ ದೇಗುಲ  ಪ್ರವೇಶ ಹಾಗೂ ದಲಿತ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತುರುವೇಕೆರೆ ತಾಲೂಕು ಗೋಣಿ ತುಮಕೂರು ಗ್ರಾಮದಲ್ಲಿರುವ ಸವರ್ಣೀಯ ಮತ್ತು ದಲಿತ ಜನಾಂಗದ ನಡುವೆ ಇದ್ದ ಕಂದಕಕ್ಕೆ ಅಂತೂ ತೆರಬಿದ್ದಿದೆ. ತರುವೇಕೆರೆ ತಹಶೀಲ್ದಾರ್ ಎಂ ಎನ್  ಕುಂ ಇ ಅಹಮದ್ ಸಮ್ಮುಖದಲ್ಲಿ ನವ ದಂಪತಿ ದೇಗುಲ ಪ್ರವೇಶಿಸಿದ್ದಾರೆ.

ಹೊಸದಾಗಿ ವಿವಾಹವಾದ ನವಜೋಡಿಯ ತಮ್ಮೂರಿನ ಗ್ರಾಮ ದೇವತೆ ಶ್ರೀ ಆದಿಶಕ್ತಿ ಅರಶಮ್ಮ ದೇವಿಯ ದೇವಾಲಯ ಪ್ರವೇಶ ಮತ್ತು ಪೂಜೆಗೆ ಸಂಬಂಧಿಸಿದಂತೆ ಸವರ್ಣೀಯರಿಂದ ಆಗಿದ್ದ ದೌರ್ಜನ್ಯ ಪ್ರಕರಣದ ಹಿನ್ನೆಲೆಯಲ್ಲಿ ತಹಸಿಲ್ದಾರ್ ಎಂ ಎನ್  ಕುಂ ಇ ಅಹಮದ್ ರವರ ಜೊತೆಗೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ಪೊಲೀಸ್ ಇಲಾಖೆ ವತಿಯಿಂದ ಗೋಣಿ ತುಮಕೂರು ಗ್ರಾಮದಲ್ಲಿ  ಸಭೆ ಏರ್ಪಡಿಸಲಾಗಿತ್ತು.

ಗ್ರಾಮದಲ್ಲಿ ಉಂಟಾಗಿದ್ದ ಅಶಾಂತಿ ಹೋಗಲಾಡಿಸಲು ಎರಡೂ ಸಮುದಾಯದ ಮುಖಂಡರುಗಳನ್ನು ದೇವಾಲಯದ ಮುಂಭಾಗದಲ್ಲಿ ಸೇರಿಸಿ ಕಾನೂನು ಪಾಠ ಮಾಡಿದ ತಹಶೀಲ್ದಾರ್, ಜಾರಿಯಲ್ಲಿರುವ ದೌರ್ಜನ್ಯ ಪ್ರಕರಣಗಳ ವಿರುದ್ಧ ನಡೆಯುವ ಕಾಯಿದೆಗಳನ್ನ ವಿವರಿಸಿ ಹೇಳಿದರು.

21ನೇ ಶತಮಾನದಲ್ಲಿದ್ದರೂ ಜಾತಿಯ ವಿಷ ಬೀಜ ಬೀಜ ಇನ್ನೂ ನಶಿಸಿ ಹೋಗಿಲ್ಲ. 12ನೇ ಶತಮಾನದಲ್ಲಿ ಜಗಜ್ಯೋತಿ ಬಸವೇಶ್ವರರೇ ಜಾತೀಯತೆ ವಿರುದ್ಧ ಅನುಭವ ಮಂಟಪವನ್ನು ನಿರ್ಮಿಸಿದ್ದರು ಎಂದು ತಹಶೀಲ್ದಾರ್ ಶರಣಪರಂಪರೆಯ ಜಾತ್ಯತೀತ ಪಾಠ ಮಾಡಿದರು.

:ಅರಸಮ್ಮ ದೇವಿ ದೇವಾಲಯವು ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ್ದು, ದೇವಾಲಯಕ್ಕೆ ಯಾವುದೇ ಮತ-ಪಂಥವಿಲ್ಲದಂತೆ ಪೂಜೆ ಹಾಗೂ ದರ್ಶನ ಮಾಡಬಹುದು. ಇದಕ್ಕೆ ಯಾರೂ ನಿರ್ಬಂಧ ಮಾಡುವಂತಿಲ್ಲ. ಗ್ರಾಮದಲ್ಲಿ ಶಾಂತಿ ಸುವ್ಯವಸ್ಥೆ ಅಡಗಿಡದಂತೆ ಎಲ್ಲರೂ ತಮ್ಮ ತಮ್ಮ ಜನಾಂಗೀಯ ದ್ವೇಷಗಳನ್ನು ತಾರತಮ್ಯಗಳನ್ನು ಮರೆತು ಧಾರ್ಮಿಕ ಅಸ್ತಿತ್ವವನ್ನು ಕಂಡುಕೊಳ್ಳಬೇಕು” ಎಂದು ತಹಶೀಲ್ದಾರ್ ಹೇಳಿದರು.

ಸೂಕ್ತ ಪೊಲೀಸ್ ಬಂದೋಬಸ್ತ್‌ನಲ್ಲಿ ನವಜೋಡಿ ಹಾಗೂ ಪೋಷಕರನ್ನು ಕರೆದುಕೊಂಡು ದೇವಸ್ಥಾನದ ಒಳಗೆ ಪ್ರವೇಶಿಸಿ ಪೂಜೆ ಸಲ್ಲಿಸುವಂತೆ ಹಾಗೂ ದರ್ಶನ ಪಡೆಯುವ ಅವಕಾಶವನ್ನು ಮಾಡಿಕೊಟ್ಟರು. ಇನ್ನು ಮುಂದೆ ಈ ತರಹದ ದೌರ್ಜನ್ಯ ಪ್ರಕರಣಗಳು ತಾಲೂಕಿನ ಯಾವ ಭಾಗದಲ್ಲೂ ನಡೆಯಬಾರದು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅನಂತರಾಜು, ಆರಕ್ಷಕ ಉಪನಿರೀಕ್ಷಕ ಟಿ ಮೂರ್ತಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಶಿವಲಿಂಗಯ್ಯ, ಲೋಕೋಪಯೋಗಿ ಇಲಾಖೆ ಸಹಾಯಕ ಇಂಜಿನಿಯರ್ ಕಣ್ಮಣಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸುರೇಶ್, ಕಂದಾಯ ನಿರೀಕ್ಷಕ ರಂಗಸ್ವಾಮಿ, ಕಸಬಾ ಹೋಬಳಿ ಕಂದಾಯ ನಿರೀಕ್ಷಕ ಜಗದೀಶ್, ರಾಜ್ಯ ಗುಪ್ತಚರ ಇಲಾಖೆಯ ರಾಜಕುಮಾರ್, ಅರ್ಚಕ ನಂಜೇಗೌಡ, ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿಗಳಾದ ಧನಂಜಯ, ಕಿರಣ್ ಕುಮಾರ್, ಗ್ರಾಮ ಆಡಳಿತ ಅಧಿಕಾರಿ ಮಲ್ಲಿಕ್, ಭೂತೇಶ್, ವಧುವಿನ ಅಣ್ಣ ಜಗದೀಶ್ ಮತ್ತು ಪೋಷಕರು ಸೇರಿದಂತೆ ಗ್ರಾಮಸ್ಥರುಗಳು ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...