Homeಕರೋನಾ ತಲ್ಲಣಮೈದುಂಬಿ ಹರಿಯುವ ನದಿಗಳು, ಧುಮ್ಮಿಕ್ಕುತ್ತಿರುವ ಜಲಪಾತಗಳ ನಡುವೆ ಬಣಗುಡುತ್ತಿರುವ ಮಲೆನಾಡಿನ ಪ್ರವಾಸಿ ತಾಣಗಳು

ಮೈದುಂಬಿ ಹರಿಯುವ ನದಿಗಳು, ಧುಮ್ಮಿಕ್ಕುತ್ತಿರುವ ಜಲಪಾತಗಳ ನಡುವೆ ಬಣಗುಡುತ್ತಿರುವ ಮಲೆನಾಡಿನ ಪ್ರವಾಸಿ ತಾಣಗಳು

ಜೋಗ ಜಲಪಾತ, ಚಿಕ್ಕಮಗಳೂರಿನ ಬೆಟ್ಟಗಳ ಸಾಲು, ಕೊಡಗಿನ ಕಾಡು ಬೆಟ್ಟಗಳು ಎಲ್ಲೆಡೆ ಮಳೆಗಾಲದ ಜೂನ್, ಜುಲೈ ತಿಂಗಳಲ್ಲಿ ಪ್ರತಿ ವರ್ಷ ಪ್ರವಾಸಿಗರ ದಂಡು ನೆರೆದಿರುತ್ತಿತ್ತು.

- Advertisement -
- Advertisement -

ಬೆಳಗಾವಿಯಿಂದ ಕೊಡಗಿನ ತುದಿಯವರೆಗೆ ವಾರವಿಡಿ ಇನ್ನಿಲ್ಲದ ಮಳೆ. ಗುಡುಗು, ಸಿಡಿಲು, ಮಳೆ ಬಿಲ್ಲುಗಳ ಜೂಟಾಟ. ಘಟ್ಟದಲ್ಲಿ ಕಳೆದ ಒಂದು ವಾರದಿಂದ ಭಾರೀ ಮಳೆಯಾಗುತ್ತಿದೆ. ಮಳೆಯ ಆರ್ಭಟಕ್ಕೆ ನದಿಗಳು ತುಂಬಿಹರಿಯುತ್ತಿವೆ. ಅಣೆಕಟ್ಟೆಗಳಿಗೆ ಒಳ ಹರಿವು ಹೆಚ್ಚಿದೆ. ಕೃಷ್ಣಾ ಕಾವೇರಿ ಕೊಳ್ಳದ ನದಿಗಳೆಲ್ಲ ಕೆಂಪು ಸಮುದ್ರದಂತೆ ರಭಸದಿಂದ ಭೋರ್ಗರೆಯತೊಡಗಿವೆ. ಆದರೆ, ಕೊರೊನಾ ಸಾಂಕ್ರಾಮಿಕದಿಂದ ಮಲೆನಾಡಿನ ಪ್ರವಾಸಿ ತಾಣಗಳು ಪ್ರವಾಸಿಗರಿಲ್ಲದೆ ಬಣಗುಡುತ್ತಿವೆ.

ಹೌದು, ರಾಜ್ಯದೆಲ್ಲೆಡೆ ರೈತರ ಮೊಗದಲ್ಲಿ ಸಂತಸ ಅರಳಿದೆ. ಹಳ್ಳಿ ಹಳ್ಲಿಯಲ್ಲೂ ಜನರು ಗೊಬ್ಬರ, ಭತ್ತ, ಟ್ರಿಲ್ಲರ್, ನಾಟಿಗಳ ಅವಸರದ ಓಡಾಟದಲ್ಲಿ ಮುಳುಗಿದ್ದಾರೆ. ಜೂನ್ ತಿಂಗಳು ಬಂದರೆ ಎಲ್ಲರಿಗೂ ಆತಂಕ, ಸಂತಸ, ಚಿಂತೆ ಪ್ರಾರಂಭವಾಗಿ ಬಿಡುತ್ತದೆ. ಸಮಯಕ್ಕೆ ಸರಿಯಾಗಿ ಮಳೆ ಬಂದರೆ ಸರಿ, ಬರದಿದ್ದರೆ ಏನು ಎತ್ತ ಎಂಬ ನಿರಾಶೆ, ಅನಿಶ್ಚಿತತೆ. ಮುಂಗಾರು ಕೈಕೊಟ್ಟರೆ ವರ್ಷದ ಕೂಳಿನ ಕತೆ ಏನೆಂಬ ಚಿಂತೆ..   ಈ ವರ್ಷ ಜನರಲ್ಲಿ ಯಾವುದೇ ಆತಂಕಗಳಿಲ್ಲ. ಏಕೆಂದರೆ ಮುಂಗಾರು ಸರಿಯಾದ ಸಮಯಕ್ಕೆ ಬಂದಿದೆ, ವರುಣ ಆರ್ಭಟಿಸೊಡಗಿದ್ದಾನೆ. ರಾಜ್ಯದಲ್ಲಿ ಕೃಷಿ ಚಟುವಟಿಕೆಗಳು ಚುರುಕುಗೊಳ್ಳುತ್ತಿವೆ. ಎತ್ತು ಕೋಣಗಳನ್ನು ಗದ್ದೆಗೆ ಹೊಡೆದುಕೊಂಡು ಜನರು ಪದಗಳನ್ನು ಹಾಡುತ್ತಿದ್ದಾರೆ.

ಕೃಷಿಯ ಕತೆ ಹಾಗಾದರೆ ಮಳೆಗಾಲದಲ್ಲಿ ಮಲೆನಾಡಿನ ಚಿತ್ರವೇ ಬೇರೆ. ದಿನವಿಡೀ ಬಿಡುವಿರದೇ  ಸುರಿಯುವ ಜಡಿ ಮಳೆ. ಬೇಸಿಗೆಯ ಬಿರು ಬಿಸಿಲಿಗೆ  ಬತ್ತಿ ಬಸವಳಿದು ಒಣಗಿದ್ದ ಹಳ್ಳ ಕೊಳ್ಲಗಳೆಲ್ಲ ಮರು ಹುಟ್ಟು ಪಡೆದು ಧುಮ್ಮಿಕ್ಕುವ ಕಲರವ. ಪ್ರಕೃತಿ ಹಚ್ಚ ಹಸಿರಾಗಿ ನಳ ನಳಿಸುವ ಸಂಭೃಮ. ನಡುವೆ ಮಾರು ಮಾರಿಗೆ ಬೆಟ್ಟದಿಂದ ಧುಮ್ಮಿಕ್ಕುವ ಝರಿಗಳು. ರಭಸದಿಂದ ಭೋರ್ಗರೆಯುವ ಜಲಪಾತಗಳು. ಮಲೆನಾಡಿನ ಮಳೆಗಾಲವೇ ಹಾಗೆ..! ದೇಶದ ಮೂಲೆ ಮೂಲೆಯಿಂದ ಪ್ರವಾಸಿಗರನ್ನು ತನ್ನತ್ತ ಸೂಜಿಗಲ್ಲಿನಂತೆ ಸೆಳೆಯುತ್ತದೆ. ಜಿಟಿ ಜಿಟಿ ಮಳೆಯ ನಡುವೆ ಆ ಬೆಟ್ಟದಿಂದ ಈ ಗುಡ್ಡದಿಂದ ಇಳಿಯುವ ಜಲಧಾರೆಯ ರುದ್ರ ರಮಣೀಯ ದೃಶ್ಯಗಳನ್ನು ನೋಡಲು ಪ್ರವಾಸಿಗರ ದಂಡು ಮುಗಿ ಬೀಳುತ್ತದೆ. ಮಲೆನಾಡಿನ ಸುತ್ತ ಮುತ್ತಲಿನ ಪ್ರವಾಸಿ ತಾಣಗಳಲ್ಲಿ ಹೊಟೇಲು, ಲಾಡ್ಜು, ಟೀ, ತಿಂಡಿ ತಿನಿಸು ಮಾರುವವರು, ಬಾಡಿಗೆ ವಾಹನ ನಡೆಸುವವರು ಎಲ್ಲರ ಬದುಕು ಈ ಮಳೆಗಾಲದ ಮೇಲೆಯೇ ನಿಂತಿದೆ.

ಇದನ್ನೂ ಓದಿ : ಪಶ್ಚಿಮ ಘಟ್ಟದಲ್ಲಿ ಮುಂದುವರೆದ ಮಳೆ : ಮುಳುಗಡೆ ಭೀತಿಯಲ್ಲಿ ಬೆಳಗಾವಿ ಜಿಲ್ಲೆಯ ಗ್ರಾಮಗಳು

ಸುಪ್ರಸಿದ್ದ ಜೋಗ ಜಲಪಾತ, ಚಿಕ್ಕಮಗಳೂರಿನ ಬೆಟ್ಟಗಳ ಸಾಲು, ಕೊಡಗಿನ ಕಾಡು ಬೆಟ್ಟಗಳು ಎಲ್ಲೆಡೆ ಮಳೆಗಾಲದ ಜೂನ್ ಜುಲೈ ತಿಂಗಳಲ್ಲಿ ಪ್ರತಿ ವರ್ಷ ಪ್ರವಾಸಿಗರ ಜನ ಜಾತ್ರೆ ನೆರೆಯುತ್ತಿತ್ತು. ಆದರೆ ಈ ವರ್ಷ ಕೊರೊನಾ ಕಾರಣದಿಂದ ಮಲೆನಾಡಿನ ಯಾವ ಪ್ರವಾಸಿ ತಾಣಗಳೂ ಸಾರ್ವಜನಿಕರ ಪ್ರವೇಶಕ್ಕೆ ತೆರೆದಿಲ್ಲ. ಎಲ್ಲೆಡೆ ಸಂಚಾರ ನಿರ್ಬಂಧವಿದೆ. ವಾರಾಂತ್ಯದ ರಜೆ ಕಳೆಯಲು ಬರುತ್ತಿದ್ದ ಐಟಿ ಉದ್ಯೋಗಿಗಳೂ ಈ ವರ್ಷ ಮನೆಯಿಂದಲೇ ಕೆಲಸ ಮಾಡುತ್ತಿದ್ದಾರೆ. ಇದರ ಪರಿಣಾಮ ಮಲೆನಾಡಿನ ಪ್ರವಾಸಿ ತಾಣಗಳು ಜನರಿಲ್ಲದೇ ಬಣಗುಡುವಂತಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಫಾಲ್ಸ್, ತೀರ್ಥಕೆರೆ ಫಾಲ್ಸ್, ಸಗೀರ್ ಫಾಲ್ಸ್‌, ಸಿರಿಮನೆ ಫಾಲ್ಸ್, ಕಲ್ಲತ್ತಿಗರಿ ಫಾಲ್ಸ್, ಶಂಕರ್ ಫಾಲ್ಸ್ ಸೇರಿದಂತೆ ಜಿಲ್ಲೆಯ ದಶದಿಕ್ಕುಗಳಲ್ಲೂ ಜಲಪಾತಗಳು ಮೈದುಂಬಿ ಧುಮುಕುತ್ತಿವೆ. ಚಿಕ್ಕಮಗಳೂರು-ಮಂಗಳೂರು ಮಾರ್ಗದ ಚಾರ್ಮಡಿ ಘಾಟಿಯ ಫಾಲ್ಸ್‌ಗಳು ನೋಡುಗರ ಕಣ್ಣು ಕೋರೈಸುವಂತೆ ಧುಮ್ಮಿಕ್ಕುತ್ತಿವೆ. ಯಾವಾಗಲೂ ಪ್ರವಾಸಿಗರಿಂದ ಗಿಜಿಗುಡುತ್ತಿದ್ದ ಶಿವಮೊಗ್ಗ-ಮಂಗಳೂರು ಸಂಪರ್ಕಿಸುವ ಚಾರ್ಮಾಡಿಯ ರಸ್ತೆ ಜನರಿಲ್ಲದೇ ಬಿಕೋ ಎನ್ನುತ್ತಿದೆ.

ಚಾರ್ಮಾಡಿ ಘಾಟ್‌ನಲ್ಲಿ ರಸ್ತೆ ಬದಿಯ ಜಲಪಾತ

ಉತ್ತರ ಕನ್ನಡ, ಶಿವಮೊಗ್ಗ, ಕೊಡಗಿನಲ್ಲೂ ಇದೇ ಕತೆ.  ಸಸ್ಯ ಸಂಪದ್ಭರಿತವಾದ ಉತ್ತರ ಕನ್ನಡ ಜಿಲ್ಲೆ ತನ್ನ ಕಾಡಿನ ಗರ್ಭದಲ್ಲಿ ನೂರಾರು ಪ್ರಾಕೃತಿಕ ಕೌತುಕವನ್ನು ಅಡಗಿಸಿಟ್ಟುಕೊಂಡಿದೆ. ಇಲ್ಲಿನ ಕಾಡು ಕಣಿವೆಗಳಲ್ಲಿ ಪ್ರತಿ ವರ್ಷವೂ ಒಂದೊಂದು ಹೊಸ ಜಲಪಾತ ಸಂಶೋಧನೆಯಾಗುತ್ತದೆ. ಜನಾಕರ್ಷಣೆಯ ತಾಣವಾಗಿ ಮಾರ್ಪಡುತ್ತಿದೆ. ಮಾಗೋಡ್ ಫಾಲ್ಸ್‌, ಉಂಚಳ್ಳಿ ಫಾಲ್ಸ್, ಶಿರ್ಲೆ ಫಾಲ್ಸ್, ಸಾತೊಡ್ಡಿ ಫಾಲ್ಸ್, ಶಿವಗಂಗಾ ಫಾಲ್ಸ್, ವಾಗಳ್ಳಿ ಫಾಲ್ಸ್ ಹೀಗೆ ಹಲವು ಫಾಲ್ಸ್‌ಗಳಿವೆ. ಪಕ್ಕದಲ್ಲಿ ಜೋಗ, ಕಾಳಿ ಅಘನಾಶಿನಿ, ಬೇಡ್ತಿ, ಶರಾವತಿಯ ಕಣಿವೆಯಲ್ಲಿ ಹೇಳ ಹೆಸರಿಲ್ಲದ ಮಳೆಗಾಲದಲ್ಲಿ ಮಾತ್ರ ಕಾಣುವ ಅಪರೂಪದ ಇನ್ನೆಷ್ಟೊ ಅದ್ಭುತ ಜಲಪಾತಗಳು. ಇವನ್ನೆಲ್ಲ ನೋಡಲು ಸದ್ಯ ಯಾವ ಪ್ರವಾಸಿಗರಿಗೂ ಅವಕಾಶವಿಲ್ಲ.

ಕೊರೊನಾ ಸಾಂಕ್ರಾಮಿಕ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಪ್ರವಾಸೋದ್ಯಮವನ್ನೇ ನೆಚ್ಚಿಕೊಂಡು ಬದುಕುತ್ತಿರುವ ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದ ಜನರ ಪರಿಸ್ಥಿತಿಯನ್ನು ಕೇಳುವವರೂ ಯಾರೂ ಇಲ್ಲ. ಭೋರ್ಗರೆಯುವ ಜಲಪಾತಗಳ ಮುಂದಿನ ಖಾಲಿತನದಲ್ಲಿ ಇವರೆಲ್ಲರ ಹಸಿವು ಸಂಕಟ ಮಡುಗಟ್ಟುತ್ತಿದೆ.

ವಿಶ್ವ ವಿಖ್ಯಾತ ಜೋಗ ಜಲಪಾತದ ಸುತ್ತಮುತ್ತ ಪ್ರವಾಸಿಗರನ್ನೇ ನಂಬಿ ಸರಿಸುಮಾರು 500 ಕುಟುಂಬಗಳು ಜೀವನ ನಡೆಸುತ್ತಿವೆ. ಜೀವನೋಪಾಯಕ್ಕಾಗಿ,  ಹೋಮ್‌ ಸ್ಟೇ, ಲಾಡ್ಜು, ಟೀ ಅಂಗಡಿ, ಹೊಟೇಲ್, ಜೀಪು ಕಾರು ಬಾಡಿಗೆ, ಫೊಟೋಗ್ರಫಿ, ಅಡ್ವೆಂಚರ್ ಟೂರಿಸ್ಟ್ ಗೈಡ್‌, ಟ್ರಕ್ಕಿಂಗ್‌ ಪಾರ್ಟನರ್‌ ಹೀಗೆ ಇಲ್ಲಿನ ಜನರು  ಬೆಂಗಳೂರಿನಿಂದ ಬರುವ ಪ್ರವಾಸಿಗರನ್ನೇ ನಂಬಿ ಕುಳಿತಿದ್ದಾರೆ.

ಮುಂಗಾರಿಗೆ ಜೀವಪಡೆದ ರೈಲು ಮಾರ್ಗದ ಪಕ್ಕದ ಸಾಲು ಸಾಲು ಜಲಪಾತಗಳು

ಈ ವರ್ಷ ಮುಂಗಾರು ಕೈಹಿಡಿದಿದೆ. ಆದರೆ ಕೊರೊನಾ ಕೈಕೊಟ್ಟಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ಫಾಲ್ಸ್, ಶಿವಮೊಗ್ಗದ ಆಗುಂಬೆ, ಕೊಡಚಾದ್ರಿ, ಸಕಲೇಶಪುರ, ಮಡಿಕೇರಿ, ವಿರಾಜಪೇಟೆ, ಸುಬ್ರಹ್ಮಣ್ಯದ ಸುತ್ತ ಮುತ್ತದ  ಜಲಪಾತಗಳು ಜನರನ್ನು ಕೈಬೀಸಿ ಕರೆಯುತ್ತಿವೆ. ಆದರೆ ಪ್ರವಾಸಿಗರು ಮಾತ್ರ ಎಲ್ಲಿಗೂ ಹೋಗುವಂತಿಲ್ಲ. ಒಟ್ಟಿನಲ್ಲಿ ಸಾಂಕ್ರಾಮಿಕದಿಂದಾಗಿ ಈ ವರ್ಷ ಮಲೆನಾಡಿನಲ್ಲಿ ಮುಂಗಾರಿನ ಕಲರವವಿಲ್ಲ. ಪ್ರತಿವರ್ಷದಂತೆ ಮುಂಗಾರು ಈ ವರ್ಷವೂ ಮಲೆನಾಡಿನ ಪ್ರಾಕೃತಿಕ ಸೌಂದರ್ಯಕ್ಕೆ ಮೆರಗು ನೀಡಿದೆ. ಶಿವಮೊಗ್ಗ, ಮಡಿಕೇರಿ, ಚಿಕ್ಕಮಗಳೂರು ನಗರಗಳು ಪ್ರವಾಸಿಗರಿಲ್ಲದೇ ನೀರವ ಮೌನದಲ್ಲಿ ಮುಳುಗಿವೆ.


ಇದನ್ನೂ ಓದಿ : ತಮಿಳುನಾಡಿನಲ್ಲಿ ಮಹಿಳೆಯರು, ಬ್ರಾಹ್ಮಣೇತರಿಗೆ ಅರ್ಚಕ ಹುದ್ದೆ, ರಾಜ್ಯದಲ್ಲಿಯೂ ಚರ್ಚೆ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...